Homeಕರ್ನಾಟಕಸಿದ್ದರಾಮಯ್ಯ ಅಗ್ಗದ ಯೋಜನೆ ಮೂಲಕ ಜನರ ತುಟಿಗೆ ತುಪ್ಪ ಸವರಿದ್ದಾರೆ: ಕುಮಾರಸ್ವಾಮಿ

ಸಿದ್ದರಾಮಯ್ಯ ಅಗ್ಗದ ಯೋಜನೆ ಮೂಲಕ ಜನರ ತುಟಿಗೆ ತುಪ್ಪ ಸವರಿದ್ದಾರೆ: ಕುಮಾರಸ್ವಾಮಿ

ಅನುಯಾಯಿಗಳು ಬಿಜೆಪಿಗೆ ಹಾರಲು ಮಸಲತ್ತು ನಡೆಸಿದವರು ಯಾರೆಂಬುದು 'ಸಿದ್ಧವನ'ದಲ್ಲಿ ಕುಳಿತಿದ್ದ 'ರಾಮ'ನಿಗೂ ಗೊತ್ತಿತ್ತು ಎಂದು ಸಿದ್ದರಾಮಯ್ಯ ಅವರನ್ನು ವ್ಯಂಗ್ಯವಾಡಿದ್ದಾರೆ.

- Advertisement -
- Advertisement -

ರಾಜ್ಯದಲ್ಲಿ ಉಪಚುನಾವಣೆಯ ಕಾವು ಹೆಚ್ಚಾಗುತ್ತಿದ್ದು, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ’’ಸಿದ್ದರಾಮಯ್ಯ ಅಗ್ಗದ ಯೋಜನೆಗಳ ಮೂಲಕ ಜನರ ತುಟಿಗೆ ತುಪ್ಪ ಸವರಿದ್ದಾರೆ’’ ಎಂದು ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಪಕ್ಷದ ಮೇಲೆ ಸರಣಿ ಟ್ವೀಟ್ ಮಾಡಿ ಮುಗಿಬಿದ್ದಿದ್ದಾರೆ.

’’ಅಧಿಕಾರದಲ್ಲಿದ್ದಾಗಲೇ ಮತ್ತೆ ಅಧಿಕಾರ ನೀಡದೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ರಾಜ್ಯದ ಜನತೆ ಅರ್ಧಚಂದ್ರ ಪ್ರಯೋಗ ಮಾಡಿದರು. ಈಗ ಉಪಚುನಾವಣೆಯಲ್ಲಿ ಕಾಂಗ್ರೆಸ್ ಕೈ ಹಿಡಿಯುತ್ತಾರೆ ಎಂಬ ಸಿದ್ದರಾಮಯ್ಯ ಅವರ ಹೇಳಿಕೆ ಕೇವಲ ಭ್ರಮೆ’’ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಉಪಚುನಾವಣೆ: ಆರ್‌.ಆರ್‌ ನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಡಿ.ಕೆ.ರವಿ ಪತ್ನಿ ಕುಸುಮಾ-ಸಿದ್ದರಾಮಯ್ಯ

’’ಜನ ಕಲ್ಯಾಣಕ್ಕೆ ದೂರದೃಷ್ಟಿಯ ಕಾರ್ಯಸಾಧ್ಯವಾದ ಯೋಜನೆಗಳನ್ನು ರೂಪಿಸುವಲ್ಲಿ ಎಡವಿದ್ದ ಸಿದ್ದರಾಮಯ್ಯ, ಅಗ್ಗದ ಯೋಜನೆಗಳ ಮೂಲಕ ಜನರ ತುಟಿಗೆ ತುಪ್ಪ ಸವರುವ ಆಡಳಿತಕ್ಕೆ ಕಳೆದ ಬಾರಿ ತಕ್ಕ ಶಾಸ್ತಿ ಮಾಡಿದ್ದರು. ಇವರ ದುರಾಡಳಿತವನ್ನು ಜನತೆ ಇನ್ನೂ ಮರೆತಿಲ್ಲ. ಉಪಚುನಾವಣೆಯಲ್ಲೂ ಕಾಂಗ್ರೆಸ್‌ಗೆ ಪಾಠ ಕಲಿಸಲಿದ್ದಾರೆ’’ ಎಂದು ಅವರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

’’ಯಾರನ್ನು ಯಾರು ಎಲ್ಲಿಗೆ ಕಳುಹಿಸಿದರು? ಸ್ವಾರ್ಥ ರಾಜಕಾರಣಕ್ಕಾಗಿ ಮೂಲ ಕಾಂಗ್ರೆಸ್ಸಿಗರ ಮೇಲೆ ಯಾರು ಸವಾರಿ ಮಾಡುತ್ತಿದ್ದಾರೆ? ಎಂಬುದನ್ನು ತಿಳಿಯದಷ್ಟು ಜನ ಪೆದ್ದರಲ್ಲ. ನಮ್ಮ ಮೂವರು ಶಾಸಕರು ಪಕ್ಷದಿಂದ ಹೊರಹೋಗಲು ನಡೆದ ಸಂಚಿನಲ್ಲಿ ಹಣ ಅಧಿಕಾರದ ಆಮಿಷ ಮಾತ್ರವಲ್ಲ. ಕೆಲವರ ‘ಕೈ’ವಾಡ ಕೂಡ ಕಾರಣ’’ ಎಂದಿರುವ ಕುಮಾರಸ್ವಾಮಿ ಆಪರೇಷನ್ ಕಮಲದಲ್ಲಿ ಕಾಂಗ್ರೆಸ್ ಕೈವಾಡ ಇದೆಯೆಂದು ಪರೋಕ್ಷವಾಗಿ ಆರೋಪಿದ್ದಾರೆ.

“ಕಾಂಗ್ರೆಸ್ ಪಕ್ಷದ ಹತ್ತಾರು ಮಂದಿ ಪೈಕಿ ‘ಎದೆ ಸೀಳಿದರೆ ಸಿದ್ದು ಕಾಣುತ್ತಾರೆ’ ಎಂಬ ಅನುಯಾಯಿಗಳು ಬಿಜೆಪಿಗೆ ಹಾರಲು ಮಸಲತ್ತು ನಡೆಸಿದವರು ಯಾರೆಂಬುದು ‘ಸಿದ್ಧವನ’ದಲ್ಲಿ ಕುಳಿತಿದ್ದ ‘ರಾಮ’ನಿಗೂ ಗೊತ್ತಿತ್ತು” ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಸಿಬಿಐ ಈಗ ಕೇಂದ್ರ ಬೆದರಿಕಾ ದಳವಾಗಿ ಮಾರ್ಪಟ್ಟಿದೆ: ಡಿಕೆ ಸಹೋದರರ ಮೇಲಿನ ಸಿಬಿಐ ದಾಳಿಗೆ ಕಾಂಗ್ರೆಸ್ ಖಂಡನೆ

“ಮೈತ್ರಿ ಸರ್ಕಾರ ತೆಗೆಯಲು ಅಳಲೇಕಾಯಿ ಪಂಡಿತನಂತೆ ಔಷಧ ಅರೆದ ವ್ಯಕ್ತಿಗೆ ನಮ್ಮ ಮೂವರು ಶಾಸಕರುದ್ದು ಓಡಿ ಹೋದರೋ? ನಾವೇ ಕತ್ತು ಹಿಡಿದು ನೂಕಿದವೋ? ಎಂದು ಗೊತ್ತಿಲ್ಲದ ಜಾಣ ಪೆದ್ದನಾಗಿದ್ದು ವಿಪರ್ಯಾಸ” ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಇದನ್ನೂ ಓದಿ: ಎರಡೂ ಕಡೆ ಪಕ್ಷಾಂತರಗಳು ಇನ್ನು ಮುಂದೆ ತುಂಬಾ ಹೆಚ್ಚಾಗಲಿವೆ: ಡಿ.ಕೆ ಶಿವಕುಮಾರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...