Homeಮುಖಪುಟಪ್ರಧಾನಿ ಎದುರು ತುಟಿ ಬಿಚ್ಚಲಾಗದ ಮುಖ್ಯಮಂತ್ರಿಯನ್ನು ಹುಲಿ-ಸಿಂಹಕ್ಕೆ ಹೋಲಿಸಲಾಗುತ್ತಾ?: ನಾಯಿಮರಿ ಹೇಳಿಕೆಗೆ ಸಿದ್ದರಾಮಯ್ಯ ಸ್ಪಷ್ಟನೆ

ಪ್ರಧಾನಿ ಎದುರು ತುಟಿ ಬಿಚ್ಚಲಾಗದ ಮುಖ್ಯಮಂತ್ರಿಯನ್ನು ಹುಲಿ-ಸಿಂಹಕ್ಕೆ ಹೋಲಿಸಲಾಗುತ್ತಾ?: ನಾಯಿಮರಿ ಹೇಳಿಕೆಗೆ ಸಿದ್ದರಾಮಯ್ಯ ಸ್ಪಷ್ಟನೆ

ಯಡಿಯೂರಪ್ಪನವರನ್ನು ರಾಜಾ ಹುಲಿ ಎಂದು ಬಣ್ಣಿಸುತ್ತಾರೆ. ನನ್ನನ್ನು ಟಗರು ಎಂದು ಹಾಡುತ್ತಾರೆ. ನಾವೇನು ಕೋಪ ಮಾಡಿಕೊಂಡಿದ್ದೇವೆಯೇ?

- Advertisement -
- Advertisement -

ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ನಾಯಿಮರಿಗೆ ಹೋಲಿಸಿ ಮಾತನಾಡಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯನವರು ಸ್ಪಷ್ಟನೆ ನೀಡಿದ್ದಾರೆ. ಹಳ್ಳಿ ಭಾಷೆಯಲ್ಲಿ ನಾಯಿ ಮರಿ ಎಂದಿದ್ದೇ ಹೊರತು ಮುಖ್ಯಮಂತ್ರಿಗಳನ್ನು ವ್ಯಕ್ತಿಗತವಾಗಿ ನಿಂದಿಸುವ ದುರುದ್ದೇಶ ಖಂಡಿತ ಇರಲಿಲ್ಲ, ಅದನ್ನು ಅನವಶ್ಯಕವಾಗಿ ವಿವಾದ ಮಾಡಲಾಗಿದೆ ಎಂದಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, “ಬಸವರಾಜ ಬೊಮ್ಮಾಯಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರೆದುರು ಮಾತನಾಡುವ ಧೈರ್ಯ ಇಲ್ಲ, ಬೇರೆಯವರ ಧಮ್, ತಾಕತ್ ಪ್ರಶ್ನಿಸುವ ಬೊಮ್ಮಾಯಿಯೇ ಸ್ವತಃ ಮೋದಿಯವರನ್ನು ಕಂಡ್ರೆ ಹೆದರುತ್ತಾರೆ ಎಂಬರ್ಥದಲ್ಲಿ ಮಾತನಾಡಿದ್ದೆ. ಅದನ್ನು ಅನವಶ್ಯಕವಾಗಿ ವಿವಾದ ಮಾಡಲಾಗಿದೆ” ಎಂದಿದ್ದಾರೆ.

ಪುಕ್ಕಲು ಸ್ವಭಾವದವರು, ಧೈರ್ಯ ಇಲ್ಲದವರು ಎನ್ನುವ ಅರ್ಥದಲ್ಲಿ ಹಳ್ಳಿ ಭಾಷೆಯಲ್ಲಿ ನಾಯಿ ಮರಿ ಎಂದಿದ್ದೇ ಹೊರತು ಮುಖ್ಯಮಂತ್ರಿಗಳನ್ನು ವ್ಯಕ್ತಿಗತವಾಗಿ ನಿಂದಿಸುವ ದುರುದ್ದೇಶ ಖಂಡಿತ ಇರಲಿಲ್ಲ. ಪ್ರಾಣಿ-ಪಕ್ಷಿ-ಹೂ-ಹಣ್ಣುಗಳನ್ನು ಅವುಗಳ ಸ್ವಭಾವಗಳ ಸಾಮ್ಯತೆಗೆ ಅನುಗುಣವಾಗಿ ಮನುಷ್ಯರಿಗೆ ಹೋಲಿಸುವುದು ಜನಪದ ಸಂಸ್ಕೃತಿ. ಯಾವ ಪ್ರಾಣಿ-ಪಕ್ಷಿಯೂ ಕೀಳೂ ಅಲ್ಲ, ಮೇಲು ಅಲ್ಲ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಹುಲಿ ಮನುಷ್ಯರನ್ನು ಕೊಂದು ತಿನ್ನುವ ಪ್ರಾಣಿ. ಬಿಜೆಪಿಯವರೇ ಯಡಿಯೂರಪ್ಪನವರನ್ನು ರಾಜಾ ಹುಲಿ ಎಂದು ಬಣ್ಣಿಸುತ್ತಾರೆ. ಅದನ್ನೂ ಅವಮಾನ ಎಂದು ತಿಳಿದುಕೊಳ್ಳಬಹುದಲ್ಲಾ? ಟಿವಿ ಚಾನೆಲ್‌ನವರು ಪ್ರತಿದಿನ ನನ್ನನ್ನು ‘ಟಗರು’ ‘ಟಗರು’ ಎಂದು ಹಾಡು ಕಟ್ಟಿ ತೋರಿಸುತ್ತಾರೆ. ಟಗರು ಗುಮ್ಮುತ್ತೆ, ನಾನು ಯಾರಿಗೆ ಗುಮ್ಮಿದ್ದೇನೆ? ನಾನೂ ಅವಮಾನ ಮಾಡಿದ್ದಾರೆ ಎಂದು ಕೋಪಮಾಡಿಕೊಳ್ಳಬಹುದಲ್ಲಾ? ಎಂದು ಪ್ರಶ್ನಿಸಿದ್ದಾರೆ.

ಸಾವಿರಾರು ಮಂದಿ ಹತ್ಯೆಗೀಡಾದ ಗುಜರಾತ್ ಗಲಭೆ ಬಗ್ಗೆ ಪತ್ರಕರ್ತರು ಪ್ರಶ್ನಿಸಿದಾಗ “ಕಾರಿಗೆ ಅಡ್ಡಬಂದು ನಾಯಿಮರಿ ಸತ್ತರೆ ಏನು ಮಾಡೋಣ” ಎಂದು ಆಗಿನ ಗುಜರಾತ್ ಮುಖ್ಯಮಂತ್ರಿ ನರೇಂದ್ರಮೋದಿ ಹೇಳಿದ್ದರು. ಇದೂ ವಿವಾದವಾಗಿತ್ತಲ್ಲವೇ? ಎಂದಿದ್ದಾರೆ.

ನಾಯಿ ಸ್ವಾಮಿ ನಿಷ್ಠೆಗೆ ಹೆಸರಾದರೆ, ನಾಯಿ‌ಮರಿ ಪುಕ್ಕಲು ಸ್ವಭಾವಕ್ಕೆ ಕುಖ್ಯಾತಿ‌ಪಡೆದಿದೆ. ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ದ ಪ್ರಧಾನಿ ಎದುರು ತುಟಿ ಬಿಚ್ಚಲಾಗದ ಮುಖ್ಯಮಂತ್ರಿಯನ್ನು ಹುಲಿ-ಸಿಂಹಕ್ಕೆ ಹೋಲಿಸಲಾಗುತ್ತಾ? ನಾಯಿ ಮರಿ, ಬೆಕ್ಕಿನ ಮರಿಗಳಿಗೆ ಹೋಲಿಸಬೇಕಲ್ಲಾ ಎಂದು ಸಿದ್ದರಾಮಯ್ಯ ಮತ್ತೆ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ನಮಗೆ ನಾಡಿನ ಹಿತ ಮುಖ್ಯ. 15ನೇ ಹಣಕಾಸು ಆಯೋಗ ಕರ್ನಾಟಕಕ್ಕೆ ಶಿಫಾರಸು ಮಾಡಿದ್ದ 5,495 ಕೋಟಿ ವಿಶೇಷ ಅನುದಾನವನ್ನು ನೀಡಲು ನಿರ್ಮಲಾ ಸೀತಾರಾಮನ್ ಅವರು ನಿರಾಕರಿಸಿದರು, ಅವರೊಂದಿಗೆ ಮಾತನಾಡಿ ಈ ಅನುದಾನ ತರಲು ಬೊಮ್ಮಾಯಿ ಅವರಿಂದ ಸಾಧ್ಯವಾಗಿಲ್ಲ. ಇದರಿಂದ ನಷ್ಟವಾಗಿದ್ದು ರಾಜ್ಯಕ್ಕಲ್ಲವೇ? ರಾಜ್ಯಕ್ಕೆ ಸಿಗಬೇಕಾದ ಅನುದಾನ ಸರಿಯಾದ ಪ್ರಮಾಣದಲ್ಲಿ ಸಿಕ್ಕಿಲ್ಲ, ಪೂರ್ಣಪ್ರಮಾಣದ ಜಿಎಸ್‌ಟಿ ಪರಿಹಾರ ಬಂದಿಲ್ಲ, ಬರ, ನೆರೆ ಪರಿಹಾರದ ಹಣ ಬಂದಿಲ್ಲ. ರಾಜ್ಯದ ಮುಖ್ಯಮಂತ್ರಿ ಸ್ಥಾನದಲ್ಲಿರೋರು ಇದನ್ನೆಲ್ಲ ಗಟ್ಟಿ ಧ್ವನಿಯಲ್ಲಿ ಕೇಳದೆ ಹೆದರಿ ಸುಮ್ಮನಿದ್ರೆ ನಾಡಿಗೆ ಅನ್ಯಾಯವಾಗಲ್ವ? ಎಂದು ಪ್ರಶ್ನಿಸಿದ್ದಾರೆ.

ಬಸವರಾಜ ಬೊಮ್ಮಾಯಿ ಅವರು ನಮ್ಮ ಒಡನಾಟದವರು, ಅವರೇನು ಬೇಸರ ಮಾಡಿಕೊಂಡಿರಲಾರರು. ಸುತ್ತಲಿನ ವಂದಿ-ಮಾಗದರು ಅವರನ್ನು ಓಲೈಸಲಿಕ್ಕಾಗಿ ಖಂಡಿಸಿ, ಮಂಡಿಸಿ ವಿವಾದ ಮಾಡುತ್ತಿದ್ದಾರೆ. ಇಂತಹವರ ಬಗ್ಗೆ ಬೊಮ್ಮಾಯಿಯವರು ಜಾಗರೂಕರಾಗಿರುವುದು ಒಳ್ಳೆಯದು ಎಂದು ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.

ಹೇಳಿಕೆ ಅವರ ವ್ಯಕ್ತಿತ್ವಕ್ಕೆ ತೋರಿಸುತ್ತದೆ

ತಮ್ಮ ವಿರುದ್ಧ ಸಿದ್ದರಾಮಯ್ಯ ನಾಯಿ ಮರಿ ಪದ ಬಳಕೆ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿಎಂ ಬೊಮ್ಮಾಯಿಯವರು, “ಆ ಹೇಳಿಕೆ ಸಿದ್ದರಾಮಯ್ಯ ಅವರ ವ್ಯಕ್ತಿತ್ವ ತೋರಿಸುತ್ತದೆ. ನಾಯಿ ನಿಯತ್ತಿನ ಪ್ರಾಣಿ. ಜನರಿಗೆ ನಿಯತ್ತಾಗಿ ಕೆಲಸ ಮಾಡುತ್ತಿರುವೆ. ನಿಯತ್ತನ್ನ ಜನರ ಪರವಾಗಿ ಉಳಿಸಿಕೊಂಡು ಹೋಗುವೆ. ಸಿದ್ದರಾಮಯ್ಯನವರಿಗೆ ಚುನಾವಣೆಯಲ್ಲಿ ಜನರೇ ತಕ್ಕ ಉತ್ತರ ನೀಡುತ್ತಾರೆ” ಎಂದಿದ್ದಾರೆ.

“ಮೋದಿಯವರು ಪ್ರಧಾನಿಯಾದ ನಂತರ ರಾಜ್ಯಕ್ಕೆ ವಿಶೇಷವಾದ ಕೊಡುಗೆಗಳನ್ನು ನೀಡಿದ್ದಾರೆ. ಮೋದಿಯವರು ರಾಜ್ಯಕ್ಕೆ 6 ಸಾವಿರ ಕಿ.ಮೀ ಹೆದ್ದಾರಿ ಕೊಡಿಗೆ ನೀಡಿದ್ದಾರೆ. ಸ್ವತಂತ್ರ ಬಂದ ನಂತರ ಒಂದು ರಾಜ್ಯಕ್ಕೆ ಇಷ್ಟು ದೊಡ್ಡ ಬಂದಿರುವುದು ಒಂದು ದಾಖಲೆ. ಬೆಂಗಳೂರು ಮೈಸೂರು ಹೆದ್ದಾರಿ ಯೋಜನೆ, ಮಂಗಳೂರು ಕಾರವಾರ ಬಂದರು, ಕಳಸಾ ಬಂಡೂರಿ ಯೋಜನೆಗೆ ಅನುಮೋದನೆ ನೀಡಿದ್ದಾರೆ. ಬರುವ ದಿನಗಳಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆ, ರಾಷ್ಟ್ರೀಯ ಯೋಜನೆಯಾಗಿ ಘೋಷಿಸಿ ಅನುದಾನ ನೀಡಲಿದ್ದಾರೆ. ಎಲ್ಲಾ ಮಹಾನಗರಗಳಿಗೆ ಸ್ಮಾರ್ಟ್ ಸಿಟಿ ಯೋಜನೆ ನೀಡಿದ್ದಾರೆ. ಸಿದ್ದರಾಮಯ್ಯನವರ ಕಾಲದಲ್ಲಿ ಇರಲಿಲ್ಲ. ಇಂಥ ಮಹತ್ವದ ಯೋಜನೆಗಳನ್ನು ಪ್ರಧಾನಿ ಮೋದಿಯವರು ನೀಡಿದ್ದಾರೆ. ಮೋದಿ ಕೊಡುವ ಕಾಮಧೇನು
ಸಿದ್ದರಾಮಯ್ಯನವರಿಗೆ ಅದರ ಬಗ್ಗೆ ಜ್ಞಾನ ಇಲ್ಲ” ಎಂದು ಬೊಮ್ಮಾಯಿ ಕಿಡಿ ಕಾರಿದ್ದಾರೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಯಾವ ಯಾವ ಕೆಟಗರಿಯಲ್ಲಿ ಎಷ್ಟೆಷ್ಟು ಜಾತಿಗಳಿವೆ? ಮೀಸಲಾತಿಯ ಪಾಲೆಷ್ಟಿದೆ? – ಪೂರ್ಣ ವಿವರ ಇಲ್ಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...