Homeಮುಖಪುಟಪ್ರಧಾನಿ ಎದುರು ತುಟಿ ಬಿಚ್ಚಲಾಗದ ಮುಖ್ಯಮಂತ್ರಿಯನ್ನು ಹುಲಿ-ಸಿಂಹಕ್ಕೆ ಹೋಲಿಸಲಾಗುತ್ತಾ?: ನಾಯಿಮರಿ ಹೇಳಿಕೆಗೆ ಸಿದ್ದರಾಮಯ್ಯ ಸ್ಪಷ್ಟನೆ

ಪ್ರಧಾನಿ ಎದುರು ತುಟಿ ಬಿಚ್ಚಲಾಗದ ಮುಖ್ಯಮಂತ್ರಿಯನ್ನು ಹುಲಿ-ಸಿಂಹಕ್ಕೆ ಹೋಲಿಸಲಾಗುತ್ತಾ?: ನಾಯಿಮರಿ ಹೇಳಿಕೆಗೆ ಸಿದ್ದರಾಮಯ್ಯ ಸ್ಪಷ್ಟನೆ

ಯಡಿಯೂರಪ್ಪನವರನ್ನು ರಾಜಾ ಹುಲಿ ಎಂದು ಬಣ್ಣಿಸುತ್ತಾರೆ. ನನ್ನನ್ನು ಟಗರು ಎಂದು ಹಾಡುತ್ತಾರೆ. ನಾವೇನು ಕೋಪ ಮಾಡಿಕೊಂಡಿದ್ದೇವೆಯೇ?

- Advertisement -
- Advertisement -

ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ನಾಯಿಮರಿಗೆ ಹೋಲಿಸಿ ಮಾತನಾಡಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯನವರು ಸ್ಪಷ್ಟನೆ ನೀಡಿದ್ದಾರೆ. ಹಳ್ಳಿ ಭಾಷೆಯಲ್ಲಿ ನಾಯಿ ಮರಿ ಎಂದಿದ್ದೇ ಹೊರತು ಮುಖ್ಯಮಂತ್ರಿಗಳನ್ನು ವ್ಯಕ್ತಿಗತವಾಗಿ ನಿಂದಿಸುವ ದುರುದ್ದೇಶ ಖಂಡಿತ ಇರಲಿಲ್ಲ, ಅದನ್ನು ಅನವಶ್ಯಕವಾಗಿ ವಿವಾದ ಮಾಡಲಾಗಿದೆ ಎಂದಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, “ಬಸವರಾಜ ಬೊಮ್ಮಾಯಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರೆದುರು ಮಾತನಾಡುವ ಧೈರ್ಯ ಇಲ್ಲ, ಬೇರೆಯವರ ಧಮ್, ತಾಕತ್ ಪ್ರಶ್ನಿಸುವ ಬೊಮ್ಮಾಯಿಯೇ ಸ್ವತಃ ಮೋದಿಯವರನ್ನು ಕಂಡ್ರೆ ಹೆದರುತ್ತಾರೆ ಎಂಬರ್ಥದಲ್ಲಿ ಮಾತನಾಡಿದ್ದೆ. ಅದನ್ನು ಅನವಶ್ಯಕವಾಗಿ ವಿವಾದ ಮಾಡಲಾಗಿದೆ” ಎಂದಿದ್ದಾರೆ.

ಪುಕ್ಕಲು ಸ್ವಭಾವದವರು, ಧೈರ್ಯ ಇಲ್ಲದವರು ಎನ್ನುವ ಅರ್ಥದಲ್ಲಿ ಹಳ್ಳಿ ಭಾಷೆಯಲ್ಲಿ ನಾಯಿ ಮರಿ ಎಂದಿದ್ದೇ ಹೊರತು ಮುಖ್ಯಮಂತ್ರಿಗಳನ್ನು ವ್ಯಕ್ತಿಗತವಾಗಿ ನಿಂದಿಸುವ ದುರುದ್ದೇಶ ಖಂಡಿತ ಇರಲಿಲ್ಲ. ಪ್ರಾಣಿ-ಪಕ್ಷಿ-ಹೂ-ಹಣ್ಣುಗಳನ್ನು ಅವುಗಳ ಸ್ವಭಾವಗಳ ಸಾಮ್ಯತೆಗೆ ಅನುಗುಣವಾಗಿ ಮನುಷ್ಯರಿಗೆ ಹೋಲಿಸುವುದು ಜನಪದ ಸಂಸ್ಕೃತಿ. ಯಾವ ಪ್ರಾಣಿ-ಪಕ್ಷಿಯೂ ಕೀಳೂ ಅಲ್ಲ, ಮೇಲು ಅಲ್ಲ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಹುಲಿ ಮನುಷ್ಯರನ್ನು ಕೊಂದು ತಿನ್ನುವ ಪ್ರಾಣಿ. ಬಿಜೆಪಿಯವರೇ ಯಡಿಯೂರಪ್ಪನವರನ್ನು ರಾಜಾ ಹುಲಿ ಎಂದು ಬಣ್ಣಿಸುತ್ತಾರೆ. ಅದನ್ನೂ ಅವಮಾನ ಎಂದು ತಿಳಿದುಕೊಳ್ಳಬಹುದಲ್ಲಾ? ಟಿವಿ ಚಾನೆಲ್‌ನವರು ಪ್ರತಿದಿನ ನನ್ನನ್ನು ‘ಟಗರು’ ‘ಟಗರು’ ಎಂದು ಹಾಡು ಕಟ್ಟಿ ತೋರಿಸುತ್ತಾರೆ. ಟಗರು ಗುಮ್ಮುತ್ತೆ, ನಾನು ಯಾರಿಗೆ ಗುಮ್ಮಿದ್ದೇನೆ? ನಾನೂ ಅವಮಾನ ಮಾಡಿದ್ದಾರೆ ಎಂದು ಕೋಪಮಾಡಿಕೊಳ್ಳಬಹುದಲ್ಲಾ? ಎಂದು ಪ್ರಶ್ನಿಸಿದ್ದಾರೆ.

ಸಾವಿರಾರು ಮಂದಿ ಹತ್ಯೆಗೀಡಾದ ಗುಜರಾತ್ ಗಲಭೆ ಬಗ್ಗೆ ಪತ್ರಕರ್ತರು ಪ್ರಶ್ನಿಸಿದಾಗ “ಕಾರಿಗೆ ಅಡ್ಡಬಂದು ನಾಯಿಮರಿ ಸತ್ತರೆ ಏನು ಮಾಡೋಣ” ಎಂದು ಆಗಿನ ಗುಜರಾತ್ ಮುಖ್ಯಮಂತ್ರಿ ನರೇಂದ್ರಮೋದಿ ಹೇಳಿದ್ದರು. ಇದೂ ವಿವಾದವಾಗಿತ್ತಲ್ಲವೇ? ಎಂದಿದ್ದಾರೆ.

ನಾಯಿ ಸ್ವಾಮಿ ನಿಷ್ಠೆಗೆ ಹೆಸರಾದರೆ, ನಾಯಿ‌ಮರಿ ಪುಕ್ಕಲು ಸ್ವಭಾವಕ್ಕೆ ಕುಖ್ಯಾತಿ‌ಪಡೆದಿದೆ. ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ದ ಪ್ರಧಾನಿ ಎದುರು ತುಟಿ ಬಿಚ್ಚಲಾಗದ ಮುಖ್ಯಮಂತ್ರಿಯನ್ನು ಹುಲಿ-ಸಿಂಹಕ್ಕೆ ಹೋಲಿಸಲಾಗುತ್ತಾ? ನಾಯಿ ಮರಿ, ಬೆಕ್ಕಿನ ಮರಿಗಳಿಗೆ ಹೋಲಿಸಬೇಕಲ್ಲಾ ಎಂದು ಸಿದ್ದರಾಮಯ್ಯ ಮತ್ತೆ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ನಮಗೆ ನಾಡಿನ ಹಿತ ಮುಖ್ಯ. 15ನೇ ಹಣಕಾಸು ಆಯೋಗ ಕರ್ನಾಟಕಕ್ಕೆ ಶಿಫಾರಸು ಮಾಡಿದ್ದ 5,495 ಕೋಟಿ ವಿಶೇಷ ಅನುದಾನವನ್ನು ನೀಡಲು ನಿರ್ಮಲಾ ಸೀತಾರಾಮನ್ ಅವರು ನಿರಾಕರಿಸಿದರು, ಅವರೊಂದಿಗೆ ಮಾತನಾಡಿ ಈ ಅನುದಾನ ತರಲು ಬೊಮ್ಮಾಯಿ ಅವರಿಂದ ಸಾಧ್ಯವಾಗಿಲ್ಲ. ಇದರಿಂದ ನಷ್ಟವಾಗಿದ್ದು ರಾಜ್ಯಕ್ಕಲ್ಲವೇ? ರಾಜ್ಯಕ್ಕೆ ಸಿಗಬೇಕಾದ ಅನುದಾನ ಸರಿಯಾದ ಪ್ರಮಾಣದಲ್ಲಿ ಸಿಕ್ಕಿಲ್ಲ, ಪೂರ್ಣಪ್ರಮಾಣದ ಜಿಎಸ್‌ಟಿ ಪರಿಹಾರ ಬಂದಿಲ್ಲ, ಬರ, ನೆರೆ ಪರಿಹಾರದ ಹಣ ಬಂದಿಲ್ಲ. ರಾಜ್ಯದ ಮುಖ್ಯಮಂತ್ರಿ ಸ್ಥಾನದಲ್ಲಿರೋರು ಇದನ್ನೆಲ್ಲ ಗಟ್ಟಿ ಧ್ವನಿಯಲ್ಲಿ ಕೇಳದೆ ಹೆದರಿ ಸುಮ್ಮನಿದ್ರೆ ನಾಡಿಗೆ ಅನ್ಯಾಯವಾಗಲ್ವ? ಎಂದು ಪ್ರಶ್ನಿಸಿದ್ದಾರೆ.

ಬಸವರಾಜ ಬೊಮ್ಮಾಯಿ ಅವರು ನಮ್ಮ ಒಡನಾಟದವರು, ಅವರೇನು ಬೇಸರ ಮಾಡಿಕೊಂಡಿರಲಾರರು. ಸುತ್ತಲಿನ ವಂದಿ-ಮಾಗದರು ಅವರನ್ನು ಓಲೈಸಲಿಕ್ಕಾಗಿ ಖಂಡಿಸಿ, ಮಂಡಿಸಿ ವಿವಾದ ಮಾಡುತ್ತಿದ್ದಾರೆ. ಇಂತಹವರ ಬಗ್ಗೆ ಬೊಮ್ಮಾಯಿಯವರು ಜಾಗರೂಕರಾಗಿರುವುದು ಒಳ್ಳೆಯದು ಎಂದು ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.

ಹೇಳಿಕೆ ಅವರ ವ್ಯಕ್ತಿತ್ವಕ್ಕೆ ತೋರಿಸುತ್ತದೆ

ತಮ್ಮ ವಿರುದ್ಧ ಸಿದ್ದರಾಮಯ್ಯ ನಾಯಿ ಮರಿ ಪದ ಬಳಕೆ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿಎಂ ಬೊಮ್ಮಾಯಿಯವರು, “ಆ ಹೇಳಿಕೆ ಸಿದ್ದರಾಮಯ್ಯ ಅವರ ವ್ಯಕ್ತಿತ್ವ ತೋರಿಸುತ್ತದೆ. ನಾಯಿ ನಿಯತ್ತಿನ ಪ್ರಾಣಿ. ಜನರಿಗೆ ನಿಯತ್ತಾಗಿ ಕೆಲಸ ಮಾಡುತ್ತಿರುವೆ. ನಿಯತ್ತನ್ನ ಜನರ ಪರವಾಗಿ ಉಳಿಸಿಕೊಂಡು ಹೋಗುವೆ. ಸಿದ್ದರಾಮಯ್ಯನವರಿಗೆ ಚುನಾವಣೆಯಲ್ಲಿ ಜನರೇ ತಕ್ಕ ಉತ್ತರ ನೀಡುತ್ತಾರೆ” ಎಂದಿದ್ದಾರೆ.

“ಮೋದಿಯವರು ಪ್ರಧಾನಿಯಾದ ನಂತರ ರಾಜ್ಯಕ್ಕೆ ವಿಶೇಷವಾದ ಕೊಡುಗೆಗಳನ್ನು ನೀಡಿದ್ದಾರೆ. ಮೋದಿಯವರು ರಾಜ್ಯಕ್ಕೆ 6 ಸಾವಿರ ಕಿ.ಮೀ ಹೆದ್ದಾರಿ ಕೊಡಿಗೆ ನೀಡಿದ್ದಾರೆ. ಸ್ವತಂತ್ರ ಬಂದ ನಂತರ ಒಂದು ರಾಜ್ಯಕ್ಕೆ ಇಷ್ಟು ದೊಡ್ಡ ಬಂದಿರುವುದು ಒಂದು ದಾಖಲೆ. ಬೆಂಗಳೂರು ಮೈಸೂರು ಹೆದ್ದಾರಿ ಯೋಜನೆ, ಮಂಗಳೂರು ಕಾರವಾರ ಬಂದರು, ಕಳಸಾ ಬಂಡೂರಿ ಯೋಜನೆಗೆ ಅನುಮೋದನೆ ನೀಡಿದ್ದಾರೆ. ಬರುವ ದಿನಗಳಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆ, ರಾಷ್ಟ್ರೀಯ ಯೋಜನೆಯಾಗಿ ಘೋಷಿಸಿ ಅನುದಾನ ನೀಡಲಿದ್ದಾರೆ. ಎಲ್ಲಾ ಮಹಾನಗರಗಳಿಗೆ ಸ್ಮಾರ್ಟ್ ಸಿಟಿ ಯೋಜನೆ ನೀಡಿದ್ದಾರೆ. ಸಿದ್ದರಾಮಯ್ಯನವರ ಕಾಲದಲ್ಲಿ ಇರಲಿಲ್ಲ. ಇಂಥ ಮಹತ್ವದ ಯೋಜನೆಗಳನ್ನು ಪ್ರಧಾನಿ ಮೋದಿಯವರು ನೀಡಿದ್ದಾರೆ. ಮೋದಿ ಕೊಡುವ ಕಾಮಧೇನು
ಸಿದ್ದರಾಮಯ್ಯನವರಿಗೆ ಅದರ ಬಗ್ಗೆ ಜ್ಞಾನ ಇಲ್ಲ” ಎಂದು ಬೊಮ್ಮಾಯಿ ಕಿಡಿ ಕಾರಿದ್ದಾರೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಯಾವ ಯಾವ ಕೆಟಗರಿಯಲ್ಲಿ ಎಷ್ಟೆಷ್ಟು ಜಾತಿಗಳಿವೆ? ಮೀಸಲಾತಿಯ ಪಾಲೆಷ್ಟಿದೆ? – ಪೂರ್ಣ ವಿವರ ಇಲ್ಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...