Homeಮುಖಪುಟಪ್ರಧಾನಿ ಎದುರು ತುಟಿ ಬಿಚ್ಚಲಾಗದ ಮುಖ್ಯಮಂತ್ರಿಯನ್ನು ಹುಲಿ-ಸಿಂಹಕ್ಕೆ ಹೋಲಿಸಲಾಗುತ್ತಾ?: ನಾಯಿಮರಿ ಹೇಳಿಕೆಗೆ ಸಿದ್ದರಾಮಯ್ಯ ಸ್ಪಷ್ಟನೆ

ಪ್ರಧಾನಿ ಎದುರು ತುಟಿ ಬಿಚ್ಚಲಾಗದ ಮುಖ್ಯಮಂತ್ರಿಯನ್ನು ಹುಲಿ-ಸಿಂಹಕ್ಕೆ ಹೋಲಿಸಲಾಗುತ್ತಾ?: ನಾಯಿಮರಿ ಹೇಳಿಕೆಗೆ ಸಿದ್ದರಾಮಯ್ಯ ಸ್ಪಷ್ಟನೆ

ಯಡಿಯೂರಪ್ಪನವರನ್ನು ರಾಜಾ ಹುಲಿ ಎಂದು ಬಣ್ಣಿಸುತ್ತಾರೆ. ನನ್ನನ್ನು ಟಗರು ಎಂದು ಹಾಡುತ್ತಾರೆ. ನಾವೇನು ಕೋಪ ಮಾಡಿಕೊಂಡಿದ್ದೇವೆಯೇ?

- Advertisement -
- Advertisement -

ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ನಾಯಿಮರಿಗೆ ಹೋಲಿಸಿ ಮಾತನಾಡಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯನವರು ಸ್ಪಷ್ಟನೆ ನೀಡಿದ್ದಾರೆ. ಹಳ್ಳಿ ಭಾಷೆಯಲ್ಲಿ ನಾಯಿ ಮರಿ ಎಂದಿದ್ದೇ ಹೊರತು ಮುಖ್ಯಮಂತ್ರಿಗಳನ್ನು ವ್ಯಕ್ತಿಗತವಾಗಿ ನಿಂದಿಸುವ ದುರುದ್ದೇಶ ಖಂಡಿತ ಇರಲಿಲ್ಲ, ಅದನ್ನು ಅನವಶ್ಯಕವಾಗಿ ವಿವಾದ ಮಾಡಲಾಗಿದೆ ಎಂದಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, “ಬಸವರಾಜ ಬೊಮ್ಮಾಯಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರೆದುರು ಮಾತನಾಡುವ ಧೈರ್ಯ ಇಲ್ಲ, ಬೇರೆಯವರ ಧಮ್, ತಾಕತ್ ಪ್ರಶ್ನಿಸುವ ಬೊಮ್ಮಾಯಿಯೇ ಸ್ವತಃ ಮೋದಿಯವರನ್ನು ಕಂಡ್ರೆ ಹೆದರುತ್ತಾರೆ ಎಂಬರ್ಥದಲ್ಲಿ ಮಾತನಾಡಿದ್ದೆ. ಅದನ್ನು ಅನವಶ್ಯಕವಾಗಿ ವಿವಾದ ಮಾಡಲಾಗಿದೆ” ಎಂದಿದ್ದಾರೆ.

ಪುಕ್ಕಲು ಸ್ವಭಾವದವರು, ಧೈರ್ಯ ಇಲ್ಲದವರು ಎನ್ನುವ ಅರ್ಥದಲ್ಲಿ ಹಳ್ಳಿ ಭಾಷೆಯಲ್ಲಿ ನಾಯಿ ಮರಿ ಎಂದಿದ್ದೇ ಹೊರತು ಮುಖ್ಯಮಂತ್ರಿಗಳನ್ನು ವ್ಯಕ್ತಿಗತವಾಗಿ ನಿಂದಿಸುವ ದುರುದ್ದೇಶ ಖಂಡಿತ ಇರಲಿಲ್ಲ. ಪ್ರಾಣಿ-ಪಕ್ಷಿ-ಹೂ-ಹಣ್ಣುಗಳನ್ನು ಅವುಗಳ ಸ್ವಭಾವಗಳ ಸಾಮ್ಯತೆಗೆ ಅನುಗುಣವಾಗಿ ಮನುಷ್ಯರಿಗೆ ಹೋಲಿಸುವುದು ಜನಪದ ಸಂಸ್ಕೃತಿ. ಯಾವ ಪ್ರಾಣಿ-ಪಕ್ಷಿಯೂ ಕೀಳೂ ಅಲ್ಲ, ಮೇಲು ಅಲ್ಲ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಹುಲಿ ಮನುಷ್ಯರನ್ನು ಕೊಂದು ತಿನ್ನುವ ಪ್ರಾಣಿ. ಬಿಜೆಪಿಯವರೇ ಯಡಿಯೂರಪ್ಪನವರನ್ನು ರಾಜಾ ಹುಲಿ ಎಂದು ಬಣ್ಣಿಸುತ್ತಾರೆ. ಅದನ್ನೂ ಅವಮಾನ ಎಂದು ತಿಳಿದುಕೊಳ್ಳಬಹುದಲ್ಲಾ? ಟಿವಿ ಚಾನೆಲ್‌ನವರು ಪ್ರತಿದಿನ ನನ್ನನ್ನು ‘ಟಗರು’ ‘ಟಗರು’ ಎಂದು ಹಾಡು ಕಟ್ಟಿ ತೋರಿಸುತ್ತಾರೆ. ಟಗರು ಗುಮ್ಮುತ್ತೆ, ನಾನು ಯಾರಿಗೆ ಗುಮ್ಮಿದ್ದೇನೆ? ನಾನೂ ಅವಮಾನ ಮಾಡಿದ್ದಾರೆ ಎಂದು ಕೋಪಮಾಡಿಕೊಳ್ಳಬಹುದಲ್ಲಾ? ಎಂದು ಪ್ರಶ್ನಿಸಿದ್ದಾರೆ.

ಸಾವಿರಾರು ಮಂದಿ ಹತ್ಯೆಗೀಡಾದ ಗುಜರಾತ್ ಗಲಭೆ ಬಗ್ಗೆ ಪತ್ರಕರ್ತರು ಪ್ರಶ್ನಿಸಿದಾಗ “ಕಾರಿಗೆ ಅಡ್ಡಬಂದು ನಾಯಿಮರಿ ಸತ್ತರೆ ಏನು ಮಾಡೋಣ” ಎಂದು ಆಗಿನ ಗುಜರಾತ್ ಮುಖ್ಯಮಂತ್ರಿ ನರೇಂದ್ರಮೋದಿ ಹೇಳಿದ್ದರು. ಇದೂ ವಿವಾದವಾಗಿತ್ತಲ್ಲವೇ? ಎಂದಿದ್ದಾರೆ.

ನಾಯಿ ಸ್ವಾಮಿ ನಿಷ್ಠೆಗೆ ಹೆಸರಾದರೆ, ನಾಯಿ‌ಮರಿ ಪುಕ್ಕಲು ಸ್ವಭಾವಕ್ಕೆ ಕುಖ್ಯಾತಿ‌ಪಡೆದಿದೆ. ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ದ ಪ್ರಧಾನಿ ಎದುರು ತುಟಿ ಬಿಚ್ಚಲಾಗದ ಮುಖ್ಯಮಂತ್ರಿಯನ್ನು ಹುಲಿ-ಸಿಂಹಕ್ಕೆ ಹೋಲಿಸಲಾಗುತ್ತಾ? ನಾಯಿ ಮರಿ, ಬೆಕ್ಕಿನ ಮರಿಗಳಿಗೆ ಹೋಲಿಸಬೇಕಲ್ಲಾ ಎಂದು ಸಿದ್ದರಾಮಯ್ಯ ಮತ್ತೆ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ನಮಗೆ ನಾಡಿನ ಹಿತ ಮುಖ್ಯ. 15ನೇ ಹಣಕಾಸು ಆಯೋಗ ಕರ್ನಾಟಕಕ್ಕೆ ಶಿಫಾರಸು ಮಾಡಿದ್ದ 5,495 ಕೋಟಿ ವಿಶೇಷ ಅನುದಾನವನ್ನು ನೀಡಲು ನಿರ್ಮಲಾ ಸೀತಾರಾಮನ್ ಅವರು ನಿರಾಕರಿಸಿದರು, ಅವರೊಂದಿಗೆ ಮಾತನಾಡಿ ಈ ಅನುದಾನ ತರಲು ಬೊಮ್ಮಾಯಿ ಅವರಿಂದ ಸಾಧ್ಯವಾಗಿಲ್ಲ. ಇದರಿಂದ ನಷ್ಟವಾಗಿದ್ದು ರಾಜ್ಯಕ್ಕಲ್ಲವೇ? ರಾಜ್ಯಕ್ಕೆ ಸಿಗಬೇಕಾದ ಅನುದಾನ ಸರಿಯಾದ ಪ್ರಮಾಣದಲ್ಲಿ ಸಿಕ್ಕಿಲ್ಲ, ಪೂರ್ಣಪ್ರಮಾಣದ ಜಿಎಸ್‌ಟಿ ಪರಿಹಾರ ಬಂದಿಲ್ಲ, ಬರ, ನೆರೆ ಪರಿಹಾರದ ಹಣ ಬಂದಿಲ್ಲ. ರಾಜ್ಯದ ಮುಖ್ಯಮಂತ್ರಿ ಸ್ಥಾನದಲ್ಲಿರೋರು ಇದನ್ನೆಲ್ಲ ಗಟ್ಟಿ ಧ್ವನಿಯಲ್ಲಿ ಕೇಳದೆ ಹೆದರಿ ಸುಮ್ಮನಿದ್ರೆ ನಾಡಿಗೆ ಅನ್ಯಾಯವಾಗಲ್ವ? ಎಂದು ಪ್ರಶ್ನಿಸಿದ್ದಾರೆ.

ಬಸವರಾಜ ಬೊಮ್ಮಾಯಿ ಅವರು ನಮ್ಮ ಒಡನಾಟದವರು, ಅವರೇನು ಬೇಸರ ಮಾಡಿಕೊಂಡಿರಲಾರರು. ಸುತ್ತಲಿನ ವಂದಿ-ಮಾಗದರು ಅವರನ್ನು ಓಲೈಸಲಿಕ್ಕಾಗಿ ಖಂಡಿಸಿ, ಮಂಡಿಸಿ ವಿವಾದ ಮಾಡುತ್ತಿದ್ದಾರೆ. ಇಂತಹವರ ಬಗ್ಗೆ ಬೊಮ್ಮಾಯಿಯವರು ಜಾಗರೂಕರಾಗಿರುವುದು ಒಳ್ಳೆಯದು ಎಂದು ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.

ಹೇಳಿಕೆ ಅವರ ವ್ಯಕ್ತಿತ್ವಕ್ಕೆ ತೋರಿಸುತ್ತದೆ

ತಮ್ಮ ವಿರುದ್ಧ ಸಿದ್ದರಾಮಯ್ಯ ನಾಯಿ ಮರಿ ಪದ ಬಳಕೆ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿಎಂ ಬೊಮ್ಮಾಯಿಯವರು, “ಆ ಹೇಳಿಕೆ ಸಿದ್ದರಾಮಯ್ಯ ಅವರ ವ್ಯಕ್ತಿತ್ವ ತೋರಿಸುತ್ತದೆ. ನಾಯಿ ನಿಯತ್ತಿನ ಪ್ರಾಣಿ. ಜನರಿಗೆ ನಿಯತ್ತಾಗಿ ಕೆಲಸ ಮಾಡುತ್ತಿರುವೆ. ನಿಯತ್ತನ್ನ ಜನರ ಪರವಾಗಿ ಉಳಿಸಿಕೊಂಡು ಹೋಗುವೆ. ಸಿದ್ದರಾಮಯ್ಯನವರಿಗೆ ಚುನಾವಣೆಯಲ್ಲಿ ಜನರೇ ತಕ್ಕ ಉತ್ತರ ನೀಡುತ್ತಾರೆ” ಎಂದಿದ್ದಾರೆ.

“ಮೋದಿಯವರು ಪ್ರಧಾನಿಯಾದ ನಂತರ ರಾಜ್ಯಕ್ಕೆ ವಿಶೇಷವಾದ ಕೊಡುಗೆಗಳನ್ನು ನೀಡಿದ್ದಾರೆ. ಮೋದಿಯವರು ರಾಜ್ಯಕ್ಕೆ 6 ಸಾವಿರ ಕಿ.ಮೀ ಹೆದ್ದಾರಿ ಕೊಡಿಗೆ ನೀಡಿದ್ದಾರೆ. ಸ್ವತಂತ್ರ ಬಂದ ನಂತರ ಒಂದು ರಾಜ್ಯಕ್ಕೆ ಇಷ್ಟು ದೊಡ್ಡ ಬಂದಿರುವುದು ಒಂದು ದಾಖಲೆ. ಬೆಂಗಳೂರು ಮೈಸೂರು ಹೆದ್ದಾರಿ ಯೋಜನೆ, ಮಂಗಳೂರು ಕಾರವಾರ ಬಂದರು, ಕಳಸಾ ಬಂಡೂರಿ ಯೋಜನೆಗೆ ಅನುಮೋದನೆ ನೀಡಿದ್ದಾರೆ. ಬರುವ ದಿನಗಳಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆ, ರಾಷ್ಟ್ರೀಯ ಯೋಜನೆಯಾಗಿ ಘೋಷಿಸಿ ಅನುದಾನ ನೀಡಲಿದ್ದಾರೆ. ಎಲ್ಲಾ ಮಹಾನಗರಗಳಿಗೆ ಸ್ಮಾರ್ಟ್ ಸಿಟಿ ಯೋಜನೆ ನೀಡಿದ್ದಾರೆ. ಸಿದ್ದರಾಮಯ್ಯನವರ ಕಾಲದಲ್ಲಿ ಇರಲಿಲ್ಲ. ಇಂಥ ಮಹತ್ವದ ಯೋಜನೆಗಳನ್ನು ಪ್ರಧಾನಿ ಮೋದಿಯವರು ನೀಡಿದ್ದಾರೆ. ಮೋದಿ ಕೊಡುವ ಕಾಮಧೇನು
ಸಿದ್ದರಾಮಯ್ಯನವರಿಗೆ ಅದರ ಬಗ್ಗೆ ಜ್ಞಾನ ಇಲ್ಲ” ಎಂದು ಬೊಮ್ಮಾಯಿ ಕಿಡಿ ಕಾರಿದ್ದಾರೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಯಾವ ಯಾವ ಕೆಟಗರಿಯಲ್ಲಿ ಎಷ್ಟೆಷ್ಟು ಜಾತಿಗಳಿವೆ? ಮೀಸಲಾತಿಯ ಪಾಲೆಷ್ಟಿದೆ? – ಪೂರ್ಣ ವಿವರ ಇಲ್ಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣ : ಶಾರ್ಜೀಲ್ ಇಮಾಮ್‌ಗೆ 10 ದಿನಗಳ ಮಧ್ಯಂತರ ಜಾಮೀನು

ದೆಹಲಿ ಗಲಭೆ ಪ್ರಕರಣದಲ್ಲಿ ಬಂಧಿತರಾಗಿರುವ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಸಂಶೋಧನಾ ವಿದ್ಯಾರ್ಥಿ ಶಾರ್ಜೀಲ್ ಇಮಾಮ್ ಅವರಿಗೆ ನ್ಯಾಯಾಲಯ ಸೋಮವಾರ (ಮಾ.9) 10 ದಿನಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ತನ್ನ ಸಹೋದರನ...

‘ಬಲಾಢ್ಯರ ಓಲೈಕೆಗಾಗಿ ಸಾಮಾಜಿಕ ನ್ಯಾಯದ ಸಮಾಧಿ..’; ಬಜೆಟ್‌ನಲ್ಲಿ ಅಲೆಮಾರಿ ಸಮುದಾಯಗಳಿಗೆ ಅನ್ಯಾಯ

'ಬಲಾಢ್ಯರ ಓಲೈಕೆಗಾಗಿ ಸಾಮಾಜಿಕ ನ್ಯಾಯದ ಸಮಾಧಿ ಮಾಡಲಾಗಿದೆ; ಬಜೆಟ್‌ನಲ್ಲಿ ಅಲೆಮಾರಿ ಸಮುದಾಯಗಳಿಗೆ ಅನ್ಯಾಯ ಮಾಡಲಾಗಿದೆ ಎಂದು 'ಕರ್ನಾಟಕ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾಒಕ್ಕೂಟ' ಸಿದ್ದರಾಮಯ್ಯ ಅವರ ಬಜೆಟ್‌ ಕುರಿತು ಅಸಮಾಧಾನ ಹೊರಹಾಕಿದೆ. ಈ ಕುರಿತು...

ಒಳಮೀಸಲಾತಿ ಇಲ್ಲದೇ ಉದ್ಯೋಗ ಭರ್ತಿಗೆ ವಿರೋಧ; ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ

ಒಳಮೀಸಲಾತಿ ಇಲ್ಲದೇ 56 ಸಾವಿರ ಉದ್ಯೋಗ ಭರ್ತಿಗೆ ಮುಂದಾಗಿರುವ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಒಳಮೀಸಲಾತಿ ಹೋರಾಟಗಾರರು ವಿರೋಧ ವ್ಯಕ್ತಪಡಿಸಿದ್ದು, ಇದೇ ತಿಂಗಳ 12 ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆಗೆ ಕರೆ ಕೊಟ್ಟಿದ್ದಾರೆ. ಈ...

ನಾಸಿರ್–ಜುನೈದ್ ಕೊಲೆ ಪ್ರಕರಣ: ಜಾಮೀನಿನ ಮೇಲೆ ಹೊರಬಂದ ಹಿಂದುತ್ವ ಕಾರ್ಯಕರ್ತ ಮೋನು ಮಾನೇಸರ್ ಗೆ ಗುರುಗ್ರಾಮದಲ್ಲಿ ಭವ್ಯ ಸ್ವಾಗತ 

2023 ರಲ್ಲಿ ಹರಿಯಾಣದಲ್ಲಿ ಗೋರಕ್ಷಣೆ ಹೆಸರಿನಲ್ಲಿ ಇಬ್ಬರು ಮುಸ್ಲಿಂ ಪುರುಷರ ಹತ್ಯೆ ಪ್ರಕರಣದ ಆರೋಪಿಯಾಗಿರುವ ಹಿಂದುತ್ವ ಕಾರ್ಯಕರ್ತ ಮೋನು ಮಾನೇಸರ್ ಅವರಿಗೆ ರಾಜಸ್ಥಾನ ಹೈಕೋರ್ಟ್ ಜಾಮೀನು ನೀಡಿದ ನಂತರ ಶನಿವಾರ ಸಂಜೆ ಭರತ್‌ಪುರ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ನಾಯಕರನ್ನು ಗುರಿಯಾಗಿಸುವ ಇಸ್ರೇಲ್ ಬೆದರಿಕೆಗೆ ಚೀನಾ ವಿರೋಧ

ಇರಾನ್‌ನಲ್ಲಿ ಸರ್ವೋಚ್ಛ ನಾಯಕರಾಗಿ ಯಾರೇ ಆಯ್ಕೆಯಾದರು ಅವರು ನಮ್ಮ ಮುಂದಿನ ಗುರಿಯಾಗಿರುತ್ತಾರೆ ಎಂದು ಬೆದರಿಕೆ ಹಾಕಿದ್ದ ಇಸ್ರೇಲ್ ನಡೆಯನ್ನು ಚೀನಾ ಖಂಡಿಸಿದೆ. ಸದ್ಯ ಸರ್ವೋಚ್ಛ ನಾಯಕರಾಗಿ ನೇಮಕವಾಗಿರುವ ಅಲಿ ಖಮೇನಿ ಅವರ ಪುತ್ರ...

ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಚರ್ಚೆಗೆ ಒತ್ತಾಯ : ಸಂಸತ್ ಆವರಣದಲ್ಲಿ ವಿಪಕ್ಷ ಸಂಸದರಿಂದ ಪ್ರತಿಭಟನೆ

ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಚರ್ಚೆಗೆ ಒತ್ತಾಯಿಸಿ ಮತ್ತು ಅದಕ್ಕೆ ಸಂಬಂಧಿಸಿದ ನಿರ್ಣಾಯಕ ವಿಷಯಗಳ ಬಗ್ಗೆ ಸರ್ಕಾರ ಮೌನ ವಹಿಸಿರುವುದನ್ನು ಖಂಡಿಸಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಿಪಕ್ಷ ನಾಯಕ ರಾಹುಲ್...

ಇರಾನಿನ ತೈಲ ಸಂಗ್ರಹಾಗಾರಗಳ ಮೇಲೆ ಇಸ್ರೇಲ್ ದಾಳಿ; ಅಮೆರಿಕಾ ಅಸಮಾಧಾನಗೊಂಡಿರುವುದಾಗಿ ವರದಿ

ವಾಷಿಂಗ್ಟನ್, ಡಿಸಿ: ಇರಾನಿನ ಇಂಧನ ಮೂಲಸೌಕರ್ಯವನ್ನು ಗುರಿಯಾಗಿಸಿಕೊಂಡು ಇಸ್ರೇಲ್ ನಡೆಸಿದ ದೊಡ್ಡ ಪ್ರಮಾಣದ ವೈಮಾನಿಕ ದಾಳಿಯ ಬಗ್ಗೆ ಅಮೆರಿಕ ಮತ್ತು ಇಸ್ರೇಲ್ ನಡುವೆ ಭಿನ್ನಾಭಿಪ್ರಾಯ ಹೊರಹೊಮ್ಮಿದೆ ಎಂದು ವರದಿಯಾಗಿದೆ. ಅಮೆರಿಕದ ಅಧಿಕಾರಿಗಳು ಕಾರ್ಯಾಚರಣೆಯ...

ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಚರ್ಚೆಗೆ ಪ್ರತಿಪಕ್ಷಗಳು ಪಟ್ಟು : ಲೋಕಸಭೆ ಕಲಾಪ ಮುಂದೂಡಿಕೆ

ಲೋಕಸಭೆಯ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಸೋಮವಾರ (ಮಾ.9) ಭಾರೀ ಗದ್ದಲದೊಂದಿಗೆ ಆರಂಭಗೊಂಡಿತು. ಪಶ್ಚಿಮ ಏಷ್ಯಾದ ಪರಿಸ್ಥಿತಿಯ ಕುರಿತು ಚರ್ಚಿಸಲು ಆಗ್ರಹಿಸಿ ಪ್ರತಿಪಕ್ಷಗಳು ತೀವ್ರ ಪ್ರತಿಭಟನೆ ನಡೆಸಿದ ಹಿನ್ನೆಲೆ, ಸ್ಪೀಕರ್...

Parliament Budget Session | ಇಂಧನ ಭದ್ರತೆ ಕುರಿತು ಮಲ್ಲಿಕಾರ್ಜುನ ಖರ್ಗೆ ಪ್ರಸ್ತಾಪ : ರಾಜ್ಯಸಭೆಯಲ್ಲಿ ಗದ್ದಲ

ಸಂಸತ್ತಿನ 2026-27ನೇ ಸಾಲಿನ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಸೋಮವಾರದಿಂದ (ಮಾ.9) ಪ್ರಾರಂಭಗೊಂಡಿವೆ. ಮೊದಲ ದಿನ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜು ಖರ್ಗೆ ಅವರು...

ಯುದ್ಧದ ನಡುವೆಯೇ ಇರಾನ್‌ನ ನೂತನ ಸರ್ವೋಚ್ಚ ನಾಯಕನಾಗಿ ಖಮೇನಿ ಪುತ್ರ ಮೊಜ್ತಬಾ ನೇಮಕ

ಇರಾನ್‌ನ ತಜ್ಞರ ಸಭೆಯು ಮೊಜ್ತಾಬಾ ಖಮೇನಿ ಅವರನ್ನು ಅವರ ತಂದೆ ಅಯತೊಲ್ಲಾ ಅಲಿ ಖಮೇನಿ ಅವರ ಸ್ಥಾನಕ್ಕೆ ದೇಶದ ಹೊಸ ಸರ್ವೋಚ್ಚ ನಾಯಕನನ್ನಾಗಿ ಘೋಷಿಸಿದೆ ಎಂದು ರಾಜ್ಯ ಮಾಧ್ಯಮ ಭಾನುವಾರ ವರದಿ ಮಾಡಿದೆ. "ತಜ್ಞರ...