Homeಮುಖಪುಟಪ್ರಧಾನಿ ಎದುರು ತುಟಿ ಬಿಚ್ಚಲಾಗದ ಮುಖ್ಯಮಂತ್ರಿಯನ್ನು ಹುಲಿ-ಸಿಂಹಕ್ಕೆ ಹೋಲಿಸಲಾಗುತ್ತಾ?: ನಾಯಿಮರಿ ಹೇಳಿಕೆಗೆ ಸಿದ್ದರಾಮಯ್ಯ ಸ್ಪಷ್ಟನೆ

ಪ್ರಧಾನಿ ಎದುರು ತುಟಿ ಬಿಚ್ಚಲಾಗದ ಮುಖ್ಯಮಂತ್ರಿಯನ್ನು ಹುಲಿ-ಸಿಂಹಕ್ಕೆ ಹೋಲಿಸಲಾಗುತ್ತಾ?: ನಾಯಿಮರಿ ಹೇಳಿಕೆಗೆ ಸಿದ್ದರಾಮಯ್ಯ ಸ್ಪಷ್ಟನೆ

ಯಡಿಯೂರಪ್ಪನವರನ್ನು ರಾಜಾ ಹುಲಿ ಎಂದು ಬಣ್ಣಿಸುತ್ತಾರೆ. ನನ್ನನ್ನು ಟಗರು ಎಂದು ಹಾಡುತ್ತಾರೆ. ನಾವೇನು ಕೋಪ ಮಾಡಿಕೊಂಡಿದ್ದೇವೆಯೇ?

- Advertisement -
- Advertisement -

ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ನಾಯಿಮರಿಗೆ ಹೋಲಿಸಿ ಮಾತನಾಡಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯನವರು ಸ್ಪಷ್ಟನೆ ನೀಡಿದ್ದಾರೆ. ಹಳ್ಳಿ ಭಾಷೆಯಲ್ಲಿ ನಾಯಿ ಮರಿ ಎಂದಿದ್ದೇ ಹೊರತು ಮುಖ್ಯಮಂತ್ರಿಗಳನ್ನು ವ್ಯಕ್ತಿಗತವಾಗಿ ನಿಂದಿಸುವ ದುರುದ್ದೇಶ ಖಂಡಿತ ಇರಲಿಲ್ಲ, ಅದನ್ನು ಅನವಶ್ಯಕವಾಗಿ ವಿವಾದ ಮಾಡಲಾಗಿದೆ ಎಂದಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, “ಬಸವರಾಜ ಬೊಮ್ಮಾಯಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರೆದುರು ಮಾತನಾಡುವ ಧೈರ್ಯ ಇಲ್ಲ, ಬೇರೆಯವರ ಧಮ್, ತಾಕತ್ ಪ್ರಶ್ನಿಸುವ ಬೊಮ್ಮಾಯಿಯೇ ಸ್ವತಃ ಮೋದಿಯವರನ್ನು ಕಂಡ್ರೆ ಹೆದರುತ್ತಾರೆ ಎಂಬರ್ಥದಲ್ಲಿ ಮಾತನಾಡಿದ್ದೆ. ಅದನ್ನು ಅನವಶ್ಯಕವಾಗಿ ವಿವಾದ ಮಾಡಲಾಗಿದೆ” ಎಂದಿದ್ದಾರೆ.

ಪುಕ್ಕಲು ಸ್ವಭಾವದವರು, ಧೈರ್ಯ ಇಲ್ಲದವರು ಎನ್ನುವ ಅರ್ಥದಲ್ಲಿ ಹಳ್ಳಿ ಭಾಷೆಯಲ್ಲಿ ನಾಯಿ ಮರಿ ಎಂದಿದ್ದೇ ಹೊರತು ಮುಖ್ಯಮಂತ್ರಿಗಳನ್ನು ವ್ಯಕ್ತಿಗತವಾಗಿ ನಿಂದಿಸುವ ದುರುದ್ದೇಶ ಖಂಡಿತ ಇರಲಿಲ್ಲ. ಪ್ರಾಣಿ-ಪಕ್ಷಿ-ಹೂ-ಹಣ್ಣುಗಳನ್ನು ಅವುಗಳ ಸ್ವಭಾವಗಳ ಸಾಮ್ಯತೆಗೆ ಅನುಗುಣವಾಗಿ ಮನುಷ್ಯರಿಗೆ ಹೋಲಿಸುವುದು ಜನಪದ ಸಂಸ್ಕೃತಿ. ಯಾವ ಪ್ರಾಣಿ-ಪಕ್ಷಿಯೂ ಕೀಳೂ ಅಲ್ಲ, ಮೇಲು ಅಲ್ಲ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಹುಲಿ ಮನುಷ್ಯರನ್ನು ಕೊಂದು ತಿನ್ನುವ ಪ್ರಾಣಿ. ಬಿಜೆಪಿಯವರೇ ಯಡಿಯೂರಪ್ಪನವರನ್ನು ರಾಜಾ ಹುಲಿ ಎಂದು ಬಣ್ಣಿಸುತ್ತಾರೆ. ಅದನ್ನೂ ಅವಮಾನ ಎಂದು ತಿಳಿದುಕೊಳ್ಳಬಹುದಲ್ಲಾ? ಟಿವಿ ಚಾನೆಲ್‌ನವರು ಪ್ರತಿದಿನ ನನ್ನನ್ನು ‘ಟಗರು’ ‘ಟಗರು’ ಎಂದು ಹಾಡು ಕಟ್ಟಿ ತೋರಿಸುತ್ತಾರೆ. ಟಗರು ಗುಮ್ಮುತ್ತೆ, ನಾನು ಯಾರಿಗೆ ಗುಮ್ಮಿದ್ದೇನೆ? ನಾನೂ ಅವಮಾನ ಮಾಡಿದ್ದಾರೆ ಎಂದು ಕೋಪಮಾಡಿಕೊಳ್ಳಬಹುದಲ್ಲಾ? ಎಂದು ಪ್ರಶ್ನಿಸಿದ್ದಾರೆ.

ಸಾವಿರಾರು ಮಂದಿ ಹತ್ಯೆಗೀಡಾದ ಗುಜರಾತ್ ಗಲಭೆ ಬಗ್ಗೆ ಪತ್ರಕರ್ತರು ಪ್ರಶ್ನಿಸಿದಾಗ “ಕಾರಿಗೆ ಅಡ್ಡಬಂದು ನಾಯಿಮರಿ ಸತ್ತರೆ ಏನು ಮಾಡೋಣ” ಎಂದು ಆಗಿನ ಗುಜರಾತ್ ಮುಖ್ಯಮಂತ್ರಿ ನರೇಂದ್ರಮೋದಿ ಹೇಳಿದ್ದರು. ಇದೂ ವಿವಾದವಾಗಿತ್ತಲ್ಲವೇ? ಎಂದಿದ್ದಾರೆ.

ನಾಯಿ ಸ್ವಾಮಿ ನಿಷ್ಠೆಗೆ ಹೆಸರಾದರೆ, ನಾಯಿ‌ಮರಿ ಪುಕ್ಕಲು ಸ್ವಭಾವಕ್ಕೆ ಕುಖ್ಯಾತಿ‌ಪಡೆದಿದೆ. ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ದ ಪ್ರಧಾನಿ ಎದುರು ತುಟಿ ಬಿಚ್ಚಲಾಗದ ಮುಖ್ಯಮಂತ್ರಿಯನ್ನು ಹುಲಿ-ಸಿಂಹಕ್ಕೆ ಹೋಲಿಸಲಾಗುತ್ತಾ? ನಾಯಿ ಮರಿ, ಬೆಕ್ಕಿನ ಮರಿಗಳಿಗೆ ಹೋಲಿಸಬೇಕಲ್ಲಾ ಎಂದು ಸಿದ್ದರಾಮಯ್ಯ ಮತ್ತೆ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ನಮಗೆ ನಾಡಿನ ಹಿತ ಮುಖ್ಯ. 15ನೇ ಹಣಕಾಸು ಆಯೋಗ ಕರ್ನಾಟಕಕ್ಕೆ ಶಿಫಾರಸು ಮಾಡಿದ್ದ 5,495 ಕೋಟಿ ವಿಶೇಷ ಅನುದಾನವನ್ನು ನೀಡಲು ನಿರ್ಮಲಾ ಸೀತಾರಾಮನ್ ಅವರು ನಿರಾಕರಿಸಿದರು, ಅವರೊಂದಿಗೆ ಮಾತನಾಡಿ ಈ ಅನುದಾನ ತರಲು ಬೊಮ್ಮಾಯಿ ಅವರಿಂದ ಸಾಧ್ಯವಾಗಿಲ್ಲ. ಇದರಿಂದ ನಷ್ಟವಾಗಿದ್ದು ರಾಜ್ಯಕ್ಕಲ್ಲವೇ? ರಾಜ್ಯಕ್ಕೆ ಸಿಗಬೇಕಾದ ಅನುದಾನ ಸರಿಯಾದ ಪ್ರಮಾಣದಲ್ಲಿ ಸಿಕ್ಕಿಲ್ಲ, ಪೂರ್ಣಪ್ರಮಾಣದ ಜಿಎಸ್‌ಟಿ ಪರಿಹಾರ ಬಂದಿಲ್ಲ, ಬರ, ನೆರೆ ಪರಿಹಾರದ ಹಣ ಬಂದಿಲ್ಲ. ರಾಜ್ಯದ ಮುಖ್ಯಮಂತ್ರಿ ಸ್ಥಾನದಲ್ಲಿರೋರು ಇದನ್ನೆಲ್ಲ ಗಟ್ಟಿ ಧ್ವನಿಯಲ್ಲಿ ಕೇಳದೆ ಹೆದರಿ ಸುಮ್ಮನಿದ್ರೆ ನಾಡಿಗೆ ಅನ್ಯಾಯವಾಗಲ್ವ? ಎಂದು ಪ್ರಶ್ನಿಸಿದ್ದಾರೆ.

ಬಸವರಾಜ ಬೊಮ್ಮಾಯಿ ಅವರು ನಮ್ಮ ಒಡನಾಟದವರು, ಅವರೇನು ಬೇಸರ ಮಾಡಿಕೊಂಡಿರಲಾರರು. ಸುತ್ತಲಿನ ವಂದಿ-ಮಾಗದರು ಅವರನ್ನು ಓಲೈಸಲಿಕ್ಕಾಗಿ ಖಂಡಿಸಿ, ಮಂಡಿಸಿ ವಿವಾದ ಮಾಡುತ್ತಿದ್ದಾರೆ. ಇಂತಹವರ ಬಗ್ಗೆ ಬೊಮ್ಮಾಯಿಯವರು ಜಾಗರೂಕರಾಗಿರುವುದು ಒಳ್ಳೆಯದು ಎಂದು ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.

ಹೇಳಿಕೆ ಅವರ ವ್ಯಕ್ತಿತ್ವಕ್ಕೆ ತೋರಿಸುತ್ತದೆ

ತಮ್ಮ ವಿರುದ್ಧ ಸಿದ್ದರಾಮಯ್ಯ ನಾಯಿ ಮರಿ ಪದ ಬಳಕೆ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿಎಂ ಬೊಮ್ಮಾಯಿಯವರು, “ಆ ಹೇಳಿಕೆ ಸಿದ್ದರಾಮಯ್ಯ ಅವರ ವ್ಯಕ್ತಿತ್ವ ತೋರಿಸುತ್ತದೆ. ನಾಯಿ ನಿಯತ್ತಿನ ಪ್ರಾಣಿ. ಜನರಿಗೆ ನಿಯತ್ತಾಗಿ ಕೆಲಸ ಮಾಡುತ್ತಿರುವೆ. ನಿಯತ್ತನ್ನ ಜನರ ಪರವಾಗಿ ಉಳಿಸಿಕೊಂಡು ಹೋಗುವೆ. ಸಿದ್ದರಾಮಯ್ಯನವರಿಗೆ ಚುನಾವಣೆಯಲ್ಲಿ ಜನರೇ ತಕ್ಕ ಉತ್ತರ ನೀಡುತ್ತಾರೆ” ಎಂದಿದ್ದಾರೆ.

“ಮೋದಿಯವರು ಪ್ರಧಾನಿಯಾದ ನಂತರ ರಾಜ್ಯಕ್ಕೆ ವಿಶೇಷವಾದ ಕೊಡುಗೆಗಳನ್ನು ನೀಡಿದ್ದಾರೆ. ಮೋದಿಯವರು ರಾಜ್ಯಕ್ಕೆ 6 ಸಾವಿರ ಕಿ.ಮೀ ಹೆದ್ದಾರಿ ಕೊಡಿಗೆ ನೀಡಿದ್ದಾರೆ. ಸ್ವತಂತ್ರ ಬಂದ ನಂತರ ಒಂದು ರಾಜ್ಯಕ್ಕೆ ಇಷ್ಟು ದೊಡ್ಡ ಬಂದಿರುವುದು ಒಂದು ದಾಖಲೆ. ಬೆಂಗಳೂರು ಮೈಸೂರು ಹೆದ್ದಾರಿ ಯೋಜನೆ, ಮಂಗಳೂರು ಕಾರವಾರ ಬಂದರು, ಕಳಸಾ ಬಂಡೂರಿ ಯೋಜನೆಗೆ ಅನುಮೋದನೆ ನೀಡಿದ್ದಾರೆ. ಬರುವ ದಿನಗಳಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆ, ರಾಷ್ಟ್ರೀಯ ಯೋಜನೆಯಾಗಿ ಘೋಷಿಸಿ ಅನುದಾನ ನೀಡಲಿದ್ದಾರೆ. ಎಲ್ಲಾ ಮಹಾನಗರಗಳಿಗೆ ಸ್ಮಾರ್ಟ್ ಸಿಟಿ ಯೋಜನೆ ನೀಡಿದ್ದಾರೆ. ಸಿದ್ದರಾಮಯ್ಯನವರ ಕಾಲದಲ್ಲಿ ಇರಲಿಲ್ಲ. ಇಂಥ ಮಹತ್ವದ ಯೋಜನೆಗಳನ್ನು ಪ್ರಧಾನಿ ಮೋದಿಯವರು ನೀಡಿದ್ದಾರೆ. ಮೋದಿ ಕೊಡುವ ಕಾಮಧೇನು
ಸಿದ್ದರಾಮಯ್ಯನವರಿಗೆ ಅದರ ಬಗ್ಗೆ ಜ್ಞಾನ ಇಲ್ಲ” ಎಂದು ಬೊಮ್ಮಾಯಿ ಕಿಡಿ ಕಾರಿದ್ದಾರೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಯಾವ ಯಾವ ಕೆಟಗರಿಯಲ್ಲಿ ಎಷ್ಟೆಷ್ಟು ಜಾತಿಗಳಿವೆ? ಮೀಸಲಾತಿಯ ಪಾಲೆಷ್ಟಿದೆ? – ಪೂರ್ಣ ವಿವರ ಇಲ್ಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...