Homeಮುಖಪುಟಪ್ರಧಾನಿ ಎದುರು ತುಟಿ ಬಿಚ್ಚಲಾಗದ ಮುಖ್ಯಮಂತ್ರಿಯನ್ನು ಹುಲಿ-ಸಿಂಹಕ್ಕೆ ಹೋಲಿಸಲಾಗುತ್ತಾ?: ನಾಯಿಮರಿ ಹೇಳಿಕೆಗೆ ಸಿದ್ದರಾಮಯ್ಯ ಸ್ಪಷ್ಟನೆ

ಪ್ರಧಾನಿ ಎದುರು ತುಟಿ ಬಿಚ್ಚಲಾಗದ ಮುಖ್ಯಮಂತ್ರಿಯನ್ನು ಹುಲಿ-ಸಿಂಹಕ್ಕೆ ಹೋಲಿಸಲಾಗುತ್ತಾ?: ನಾಯಿಮರಿ ಹೇಳಿಕೆಗೆ ಸಿದ್ದರಾಮಯ್ಯ ಸ್ಪಷ್ಟನೆ

ಯಡಿಯೂರಪ್ಪನವರನ್ನು ರಾಜಾ ಹುಲಿ ಎಂದು ಬಣ್ಣಿಸುತ್ತಾರೆ. ನನ್ನನ್ನು ಟಗರು ಎಂದು ಹಾಡುತ್ತಾರೆ. ನಾವೇನು ಕೋಪ ಮಾಡಿಕೊಂಡಿದ್ದೇವೆಯೇ?

- Advertisement -
- Advertisement -

ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ನಾಯಿಮರಿಗೆ ಹೋಲಿಸಿ ಮಾತನಾಡಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯನವರು ಸ್ಪಷ್ಟನೆ ನೀಡಿದ್ದಾರೆ. ಹಳ್ಳಿ ಭಾಷೆಯಲ್ಲಿ ನಾಯಿ ಮರಿ ಎಂದಿದ್ದೇ ಹೊರತು ಮುಖ್ಯಮಂತ್ರಿಗಳನ್ನು ವ್ಯಕ್ತಿಗತವಾಗಿ ನಿಂದಿಸುವ ದುರುದ್ದೇಶ ಖಂಡಿತ ಇರಲಿಲ್ಲ, ಅದನ್ನು ಅನವಶ್ಯಕವಾಗಿ ವಿವಾದ ಮಾಡಲಾಗಿದೆ ಎಂದಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, “ಬಸವರಾಜ ಬೊಮ್ಮಾಯಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರೆದುರು ಮಾತನಾಡುವ ಧೈರ್ಯ ಇಲ್ಲ, ಬೇರೆಯವರ ಧಮ್, ತಾಕತ್ ಪ್ರಶ್ನಿಸುವ ಬೊಮ್ಮಾಯಿಯೇ ಸ್ವತಃ ಮೋದಿಯವರನ್ನು ಕಂಡ್ರೆ ಹೆದರುತ್ತಾರೆ ಎಂಬರ್ಥದಲ್ಲಿ ಮಾತನಾಡಿದ್ದೆ. ಅದನ್ನು ಅನವಶ್ಯಕವಾಗಿ ವಿವಾದ ಮಾಡಲಾಗಿದೆ” ಎಂದಿದ್ದಾರೆ.

ಪುಕ್ಕಲು ಸ್ವಭಾವದವರು, ಧೈರ್ಯ ಇಲ್ಲದವರು ಎನ್ನುವ ಅರ್ಥದಲ್ಲಿ ಹಳ್ಳಿ ಭಾಷೆಯಲ್ಲಿ ನಾಯಿ ಮರಿ ಎಂದಿದ್ದೇ ಹೊರತು ಮುಖ್ಯಮಂತ್ರಿಗಳನ್ನು ವ್ಯಕ್ತಿಗತವಾಗಿ ನಿಂದಿಸುವ ದುರುದ್ದೇಶ ಖಂಡಿತ ಇರಲಿಲ್ಲ. ಪ್ರಾಣಿ-ಪಕ್ಷಿ-ಹೂ-ಹಣ್ಣುಗಳನ್ನು ಅವುಗಳ ಸ್ವಭಾವಗಳ ಸಾಮ್ಯತೆಗೆ ಅನುಗುಣವಾಗಿ ಮನುಷ್ಯರಿಗೆ ಹೋಲಿಸುವುದು ಜನಪದ ಸಂಸ್ಕೃತಿ. ಯಾವ ಪ್ರಾಣಿ-ಪಕ್ಷಿಯೂ ಕೀಳೂ ಅಲ್ಲ, ಮೇಲು ಅಲ್ಲ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಹುಲಿ ಮನುಷ್ಯರನ್ನು ಕೊಂದು ತಿನ್ನುವ ಪ್ರಾಣಿ. ಬಿಜೆಪಿಯವರೇ ಯಡಿಯೂರಪ್ಪನವರನ್ನು ರಾಜಾ ಹುಲಿ ಎಂದು ಬಣ್ಣಿಸುತ್ತಾರೆ. ಅದನ್ನೂ ಅವಮಾನ ಎಂದು ತಿಳಿದುಕೊಳ್ಳಬಹುದಲ್ಲಾ? ಟಿವಿ ಚಾನೆಲ್‌ನವರು ಪ್ರತಿದಿನ ನನ್ನನ್ನು ‘ಟಗರು’ ‘ಟಗರು’ ಎಂದು ಹಾಡು ಕಟ್ಟಿ ತೋರಿಸುತ್ತಾರೆ. ಟಗರು ಗುಮ್ಮುತ್ತೆ, ನಾನು ಯಾರಿಗೆ ಗುಮ್ಮಿದ್ದೇನೆ? ನಾನೂ ಅವಮಾನ ಮಾಡಿದ್ದಾರೆ ಎಂದು ಕೋಪಮಾಡಿಕೊಳ್ಳಬಹುದಲ್ಲಾ? ಎಂದು ಪ್ರಶ್ನಿಸಿದ್ದಾರೆ.

ಸಾವಿರಾರು ಮಂದಿ ಹತ್ಯೆಗೀಡಾದ ಗುಜರಾತ್ ಗಲಭೆ ಬಗ್ಗೆ ಪತ್ರಕರ್ತರು ಪ್ರಶ್ನಿಸಿದಾಗ “ಕಾರಿಗೆ ಅಡ್ಡಬಂದು ನಾಯಿಮರಿ ಸತ್ತರೆ ಏನು ಮಾಡೋಣ” ಎಂದು ಆಗಿನ ಗುಜರಾತ್ ಮುಖ್ಯಮಂತ್ರಿ ನರೇಂದ್ರಮೋದಿ ಹೇಳಿದ್ದರು. ಇದೂ ವಿವಾದವಾಗಿತ್ತಲ್ಲವೇ? ಎಂದಿದ್ದಾರೆ.

ನಾಯಿ ಸ್ವಾಮಿ ನಿಷ್ಠೆಗೆ ಹೆಸರಾದರೆ, ನಾಯಿ‌ಮರಿ ಪುಕ್ಕಲು ಸ್ವಭಾವಕ್ಕೆ ಕುಖ್ಯಾತಿ‌ಪಡೆದಿದೆ. ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ದ ಪ್ರಧಾನಿ ಎದುರು ತುಟಿ ಬಿಚ್ಚಲಾಗದ ಮುಖ್ಯಮಂತ್ರಿಯನ್ನು ಹುಲಿ-ಸಿಂಹಕ್ಕೆ ಹೋಲಿಸಲಾಗುತ್ತಾ? ನಾಯಿ ಮರಿ, ಬೆಕ್ಕಿನ ಮರಿಗಳಿಗೆ ಹೋಲಿಸಬೇಕಲ್ಲಾ ಎಂದು ಸಿದ್ದರಾಮಯ್ಯ ಮತ್ತೆ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ನಮಗೆ ನಾಡಿನ ಹಿತ ಮುಖ್ಯ. 15ನೇ ಹಣಕಾಸು ಆಯೋಗ ಕರ್ನಾಟಕಕ್ಕೆ ಶಿಫಾರಸು ಮಾಡಿದ್ದ 5,495 ಕೋಟಿ ವಿಶೇಷ ಅನುದಾನವನ್ನು ನೀಡಲು ನಿರ್ಮಲಾ ಸೀತಾರಾಮನ್ ಅವರು ನಿರಾಕರಿಸಿದರು, ಅವರೊಂದಿಗೆ ಮಾತನಾಡಿ ಈ ಅನುದಾನ ತರಲು ಬೊಮ್ಮಾಯಿ ಅವರಿಂದ ಸಾಧ್ಯವಾಗಿಲ್ಲ. ಇದರಿಂದ ನಷ್ಟವಾಗಿದ್ದು ರಾಜ್ಯಕ್ಕಲ್ಲವೇ? ರಾಜ್ಯಕ್ಕೆ ಸಿಗಬೇಕಾದ ಅನುದಾನ ಸರಿಯಾದ ಪ್ರಮಾಣದಲ್ಲಿ ಸಿಕ್ಕಿಲ್ಲ, ಪೂರ್ಣಪ್ರಮಾಣದ ಜಿಎಸ್‌ಟಿ ಪರಿಹಾರ ಬಂದಿಲ್ಲ, ಬರ, ನೆರೆ ಪರಿಹಾರದ ಹಣ ಬಂದಿಲ್ಲ. ರಾಜ್ಯದ ಮುಖ್ಯಮಂತ್ರಿ ಸ್ಥಾನದಲ್ಲಿರೋರು ಇದನ್ನೆಲ್ಲ ಗಟ್ಟಿ ಧ್ವನಿಯಲ್ಲಿ ಕೇಳದೆ ಹೆದರಿ ಸುಮ್ಮನಿದ್ರೆ ನಾಡಿಗೆ ಅನ್ಯಾಯವಾಗಲ್ವ? ಎಂದು ಪ್ರಶ್ನಿಸಿದ್ದಾರೆ.

ಬಸವರಾಜ ಬೊಮ್ಮಾಯಿ ಅವರು ನಮ್ಮ ಒಡನಾಟದವರು, ಅವರೇನು ಬೇಸರ ಮಾಡಿಕೊಂಡಿರಲಾರರು. ಸುತ್ತಲಿನ ವಂದಿ-ಮಾಗದರು ಅವರನ್ನು ಓಲೈಸಲಿಕ್ಕಾಗಿ ಖಂಡಿಸಿ, ಮಂಡಿಸಿ ವಿವಾದ ಮಾಡುತ್ತಿದ್ದಾರೆ. ಇಂತಹವರ ಬಗ್ಗೆ ಬೊಮ್ಮಾಯಿಯವರು ಜಾಗರೂಕರಾಗಿರುವುದು ಒಳ್ಳೆಯದು ಎಂದು ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.

ಹೇಳಿಕೆ ಅವರ ವ್ಯಕ್ತಿತ್ವಕ್ಕೆ ತೋರಿಸುತ್ತದೆ

ತಮ್ಮ ವಿರುದ್ಧ ಸಿದ್ದರಾಮಯ್ಯ ನಾಯಿ ಮರಿ ಪದ ಬಳಕೆ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿಎಂ ಬೊಮ್ಮಾಯಿಯವರು, “ಆ ಹೇಳಿಕೆ ಸಿದ್ದರಾಮಯ್ಯ ಅವರ ವ್ಯಕ್ತಿತ್ವ ತೋರಿಸುತ್ತದೆ. ನಾಯಿ ನಿಯತ್ತಿನ ಪ್ರಾಣಿ. ಜನರಿಗೆ ನಿಯತ್ತಾಗಿ ಕೆಲಸ ಮಾಡುತ್ತಿರುವೆ. ನಿಯತ್ತನ್ನ ಜನರ ಪರವಾಗಿ ಉಳಿಸಿಕೊಂಡು ಹೋಗುವೆ. ಸಿದ್ದರಾಮಯ್ಯನವರಿಗೆ ಚುನಾವಣೆಯಲ್ಲಿ ಜನರೇ ತಕ್ಕ ಉತ್ತರ ನೀಡುತ್ತಾರೆ” ಎಂದಿದ್ದಾರೆ.

“ಮೋದಿಯವರು ಪ್ರಧಾನಿಯಾದ ನಂತರ ರಾಜ್ಯಕ್ಕೆ ವಿಶೇಷವಾದ ಕೊಡುಗೆಗಳನ್ನು ನೀಡಿದ್ದಾರೆ. ಮೋದಿಯವರು ರಾಜ್ಯಕ್ಕೆ 6 ಸಾವಿರ ಕಿ.ಮೀ ಹೆದ್ದಾರಿ ಕೊಡಿಗೆ ನೀಡಿದ್ದಾರೆ. ಸ್ವತಂತ್ರ ಬಂದ ನಂತರ ಒಂದು ರಾಜ್ಯಕ್ಕೆ ಇಷ್ಟು ದೊಡ್ಡ ಬಂದಿರುವುದು ಒಂದು ದಾಖಲೆ. ಬೆಂಗಳೂರು ಮೈಸೂರು ಹೆದ್ದಾರಿ ಯೋಜನೆ, ಮಂಗಳೂರು ಕಾರವಾರ ಬಂದರು, ಕಳಸಾ ಬಂಡೂರಿ ಯೋಜನೆಗೆ ಅನುಮೋದನೆ ನೀಡಿದ್ದಾರೆ. ಬರುವ ದಿನಗಳಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆ, ರಾಷ್ಟ್ರೀಯ ಯೋಜನೆಯಾಗಿ ಘೋಷಿಸಿ ಅನುದಾನ ನೀಡಲಿದ್ದಾರೆ. ಎಲ್ಲಾ ಮಹಾನಗರಗಳಿಗೆ ಸ್ಮಾರ್ಟ್ ಸಿಟಿ ಯೋಜನೆ ನೀಡಿದ್ದಾರೆ. ಸಿದ್ದರಾಮಯ್ಯನವರ ಕಾಲದಲ್ಲಿ ಇರಲಿಲ್ಲ. ಇಂಥ ಮಹತ್ವದ ಯೋಜನೆಗಳನ್ನು ಪ್ರಧಾನಿ ಮೋದಿಯವರು ನೀಡಿದ್ದಾರೆ. ಮೋದಿ ಕೊಡುವ ಕಾಮಧೇನು
ಸಿದ್ದರಾಮಯ್ಯನವರಿಗೆ ಅದರ ಬಗ್ಗೆ ಜ್ಞಾನ ಇಲ್ಲ” ಎಂದು ಬೊಮ್ಮಾಯಿ ಕಿಡಿ ಕಾರಿದ್ದಾರೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಯಾವ ಯಾವ ಕೆಟಗರಿಯಲ್ಲಿ ಎಷ್ಟೆಷ್ಟು ಜಾತಿಗಳಿವೆ? ಮೀಸಲಾತಿಯ ಪಾಲೆಷ್ಟಿದೆ? – ಪೂರ್ಣ ವಿವರ ಇಲ್ಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...