Homeಕರ್ನಾಟಕಸರ್ಕಾರ ಬೀಳಿಸುವ ಕಲೆ ದೇವೇಗೌಡರ ಕುಟುಂಬಕ್ಕೆ ಕರಗತವಾಗಿದೆ: ಸಿದ್ದರಾಮಯ್ಯ ತಿರುಗೇಟು

ಸರ್ಕಾರ ಬೀಳಿಸುವ ಕಲೆ ದೇವೇಗೌಡರ ಕುಟುಂಬಕ್ಕೆ ಕರಗತವಾಗಿದೆ: ಸಿದ್ದರಾಮಯ್ಯ ತಿರುಗೇಟು

- Advertisement -
- Advertisement -

ಸಮ್ಮಿಶ್ರ ಸರ್ಕಾರ ಬೀಳಲು ಸಿದ್ದರಾಮಯ್ಯನವರೇ ಕಾರಣ, ಅವರು ವಿರೋಧ ಪಕ್ಷದ ನಾಯಕರಾಗಲು ಹೀಗೆ ಮಾಡಿದ್ದರು ಎಂದು ಎರಡು ದಿನದ ಹಿಂದೆ ಮಾಜಿ ಪ್ರಧಾನಿ ದೇವೇಗೌಡರು ಮಾಡಿದ್ದ ಆರೋಪಕ್ಕೆ ತಿರುಗೇಟು ನೀಡಿರುವ ಮಾಜಿ ಸಿಎಂ ಸಿದ್ದರಾಮಯ್ಯ ದೇವೇಗೌಡರ ಕುಟುಂಬದ ವಿರುದ್ಧ ಹರಿಹಾಯ್ದಿದ್ದಾರೆ.

ಸಮ್ಮಿಶ್ರ ಸರ್ಕಾರ ಬೀಳಿಸುವ ನೀಚ ರಾಜಕಾರಣ ನಾನು ಯಾವತ್ತೂ ಮಾಡುವುದಿಲ್ಲ. ಅದೇನಿದ್ದರೂ ದೇವೇಗೌಡ ಮತ್ತು ಅವರ ಮಕ್ಕಳ ಹುಟ್ಟುಗುಣ.. ಮೈತ್ರಿ ಸರ್ಕಾರ ಬೀಳಲು ನಾನಲ್ಲ, ದೇವೇಗೌಡರ ಕುಟುಂಬವೇ ಕಾರಣ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ,

ಇಂದು ಅವರ ನಿವಾಸದಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಈ ರೀತಿ ಸರ್ಕಾರಗಳನ್ನು ಬೀಳಿಸುವ ಅವರ ಹುನ್ನಾರಕ್ಕೆ ದೊಡ್ಡ ಇತಿಹಾಸವಿದೆ. 2004ರಲ್ಲಿ ಧರ್ಮಸಿಂಗ್ ರವರಿಗೆ ಬೆಂಬಲ ಕೊಟ್ಟಿದ್ದರು. ನಂತರ ಕೆಡವಿಬಿಟ್ಟರು. ಬೊಮ್ಮಾಯಿ ಸರ್ಕಾರ ಬೀಳಿಸಿದವರು ಯಾರು? ಇದೇ ದೇವೇಗೌಡರಲ್ಲವೇ ಎಂದು ಪ್ರಶ್ನಿಸಿದ್ದಾರೆ.

ಸಮ್ಮಿಶ್ರ ಸರ್ಕಾರ ಪತನಕ್ಕೆ ಕುಮಾರಸ್ವಾಮಿ, ರೇವಣ್ಣ ಮತ್ತು ದೇವೇಗೌಡರು ಕಾರಣವೆಂದು ಎಲ್ಲರೂ ಹೇಳುತ್ತಾರೆ. ಇದು ನಾನು ಹೇಳುತ್ತಿಲ್ಲ. ಎಲ್ಲಾ ಶಾಸಕರ ವಿಶ್ವಾಸ ತೆಗೆದುಕೊಂಡು ಅವರ ಕ್ಷೇತ್ರಗಳಲ್ಲಿ ಅಭಿವೃದ್ದಿ ಕೆಲಸ ಮಾಡಿದ್ದರೆ ಯಾರು ಅತೃಪ್ತರು, ಅಸಮಾಧಾನಿತರು ಆಗುತ್ತಿರಲಿಲ್ಲ ಎಂದು ಹಲವು ಶಾಸಕರು ಹೇಳಿದ್ದಾರೆ. ಏಕಪಕ್ಷೀಯವಾದ ನಿರ್ಧಾರ ಮಾಡುವುದು, ಮಂತ್ರಿಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಹೋಗಿರುವುದೇ ಸರ್ಕಾರದ ಪತನಕ್ಕೆ ಕಾರಣ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ನಾನು ಸಂಪೂರ್ಣವಾಗಿ 5 ವರ್ಷ ಮುಖ್ಯಮಂತ್ರಿಯಾಗಿದ್ದಾಗ ಏಕೆ ಒಬ್ಬ ಶಾಸಕ ನನ್ನ ವಿರುದ್ಧ ಮಾತಾಡಲಿಲ್ಲ. ಯಾಕೆ ಯಾರು ಅಸಮಾನಧಾ ತೋರಿಸಲಿಲ್ಲ? ದೇವೇಗೌಡರ ಅವರ ತಪ್ಪು ಮುಚ್ಚಿಕೊಳ್ಳಲ್ಲಿಕ್ಕೆ ನನ್ನ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ ಎಂದು ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ದೇವೇಗೌಡರು ಯಾರನ್ನು ಬೆಳೆಸುವುದಿಲ್ಲ. ತನ್ನ ಮಕ್ಕಳು ಮತ್ತು ಕುಟುಂಬ ಮಾತ್ರ ಬೇಕು ಅವರಿಗೆ. ಅವರು ಸ್ವಜಾತೀಯವರನ್ನೇ ಬೆಳೆಸುವುದಿಲ್ಲ. ಇವರು ಯಾರನ್ನು ಬೆಳೆಸಿಲ್ಲ. ವೈ.ಕೆ ರಾಮಯ್ಯ, ನಾಗೇಗೌಡ ಚಂದ್ರೇಗೌಡ, ಗೋವಿಂದೇಗೌಡ, ಜೀವರಾಜ್ ಆಳ್ವ, ಭೈರೆಗೌಡ ಇವರದೆಲ್ಲಾ ಏನಾಯ್ತು? ಇವರನ್ನೆಲ್ಲ ಯಾರು ತುಳಿದವರು? ನಾನು ತುಳಿದನೆ? ಹೊಸಕೋಟೆಯ ಬಿ.ಎನ್ ಬಚ್ಚೆಗೌಡ ರನ್ನು ಕೇಳಿ ಅವರು ಜಾಸ್ತಿ ಹೇಳುತ್ತಾರೆ. ಇನ್ನೊಬ್ಬರ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಬಾರದು ಎಂದರು.

ನನಗೆ ಎಲ್ಲಾ ಜಾತಿಯವರು ಸ್ನೇಹಿತರಿದ್ದಾರೆ. ಎಲ್ಲಾ ಪಾರ್ಟಿಯಲ್ಲಿಯೂ ಸ್ನೇಹಿತರಿದ್ದಾರೆ.

ಅವರು ನಿಖಿಲ್ ಸೋಲಬೇಕದಾರೆ ಸಿದ್ದರಾಮಯ್ಯ ಕಾರಣ ಎಂದಿದ್ದಾರೆ. ಹಾಗಾದರೆ ಚಾಮರಾಜನಗರ, ಮೈಸೂರು, ಬೆಂಗಳೂರು ಉತ್ತರ, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರದಲ್ಲಿ ನಮ್ಮ ಅಭ್ಯರ್ಥಿಗಳು ಸೋಲಲು ಯಾರು ಕಾರಣ?

ಜಿ.ಟಿ ದೇವೇಗೌಡ ನೇರವಾಗಿ ಹೇಳಿದ, ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್ ನವರು ಕಾಂಗ್ರೆಸ್ ಗೆ ಹಾಕದೇ ಬಿಜೆಪಿಗೆ ಹಾಕಿಬಿಟ್ಟರು ಅಂತ ನೇರವಾಗಿ ಹೇಳಿದರು. ಅವರಿ ಯಾಕೆ ಕ್ರಮ ತೆಗೆದುಕೊಳ್ಳಲಿಲ್ಲ. ನಾವು ಕ್ರಮ ತೆಗೆದುಕೊಂಡಿದ್ದೇವೆ. ಮಂಡ್ಯದಲ್ಲಿ, ತುಮಕೂರು, ಕೋಲಾರದಲ್ಲಿ ನಮ್ಮ ಪಕ್ಷದ ಕಾರ್ಯಕರ್ತರ ವಿರುದ್ಧ ಕ್ರಮ ತೆಗೆದುಕೊಂಡಿದ್ದೇವೆ. ಇವರು ಏಕೆ ತೆಗೆದುಕೊಳ್ಳಲಿಲ್ಲ?

ಹಾಗಾದರೆ ಹಾಸನದಲ್ಲಿ ಇವರ ಇನ್ನೊಬ್ಬ ಮೊಮ್ಮಗ ಹೇಗೆ ಗೆದ್ದಿದ್ದಾನೆ. ನಮ್ಮ ಪಾರ್ಟಿ ಕೆಲಸ ಮಾಡಲಿಲ್ಲವೇ ಅಲ್ಲಿ? ಹೇಗೆ ಗೆದ್ದ?

ಇನ್ನೊಬ್ಬರ ಮೇಲೆ ಗೂಬೆ ಕೂರಿಸುವುದು, ಅಳುವುದು, ಜಾತಿ ತರುವುದು ಮಾಡುತ್ತಾರೆ. ಇವೆಲ್ಲ ಇವರ ಹಳೇ ಗಿಮಿಕ್ ಗಳು. ಹೊಸದೇನೂ ಇಲ್ಲ. ಹಾಗಾಗಿ ಸರ್ಕಾರ ಬೀಳಲು ನಾನು ಕಾರಣ ಎಂದು ಆರೋಪ ಮಾಡಿದ್ದಾರೆ.

ಅವರ ಆರೋಪಗಳೆಲ್ಲವೂ ಟೋಟಲ್ ಪೊಲಿಟಿಕಲಿ ಮೋಟಿವೇಟೆಡ್, ಬೇಸ್ ಲೆಸ್, ಅನ್ ಸ್ಕೂಪ್ ಲೆಸ್ , ಹಿ ವಾಂಟೆಂಡ್ ಟು ಟೇಕ್ ಪೊಲಿಟಿಕಲಿ ಅಡ್ವಾಂಟೇಜ್.. ಆದರೆ ಜನ ಬುದ್ದಿವಂತರಿದ್ದಾರೆ ಇದಕ್ಕೆ ಅವಕಾಶ ಕೊಡುವುದಿಲ್ಲ ಎಂದು ಕಿಡಿ ಕಾರಿದರು.

ಮೈತ್ರಿ ಮುಂದುವರಿಯಬೇಕಾ ಬೇಡವ ಎಂಬುದು ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಇಲ್ಲಿ ವಯಕ್ತಿಕ ಪ್ರಶ್ನೆ ಬರುವುದಿಲ್ಲ.

ಇವತ್ತು ಬಿಜೆಪಿ ಅಧಿಕಾರಕ್ಕೆ ಬಂದಿದ್ದರೆ ಅದಕ್ಕೆ ನೇರವಾಗಿ ದೇವೇಗೌಡ ಮತ್ತು ಕುಮಾರಸ್ವಾಮಿ ಕಾರಣ.. 2006ರಲ್ಲಿ ಕಾಂಗ್ರೆಸ್ ಬಿಟ್ಟು ರಾತ್ರೋರಾತ್ರಿ ಬಿಜೆಪಿ ಕ್ಯಾಂಪ್ ಗೆ ಸೇರಿಕೊಂಡವರು ಯಾರು? ದೇವೇಗೌಡರು ದೊಡ್ಡ ನಾಟಕ ಆಡುತ್ತಿದ್ದಾರೆ ಎಂದರು.

ಬಿಜೆಪಿಯವರ ಜೊತೆ ಸರ್ಕಾರ ಮಾಡಿದರೆ ನನ್ನ ಹೆಣದ ಮೇಲೆ ಮಾಡಬೇಕು ಅಂತ ದೇವೇಗೌಡರು ಹೇಳಿದ್ದರು. ಅವರು ದೊಡ್ಡ ಸುಳ್ಳು ಹೇಳುತ್ತಿದ್ದಾರೆ. ದೇವೇಗೌಡರ ಒಪ್ಪಿಗೆ ಇಲ್ಲದೇ ಅಂದು ಕುಮಾರಸ್ವಾಮಿ ಬಿಜೆಪಿ ಜೊತೆ ಸರ್ಕಾರ ಮಾಡಲು ಸಾಧ್ಯವಾಗುತ್ತಿರಲಿಲ್ಲ ಎಂದರು.

20 ತಿಂಗಳು ಯಡಿಯೂರಪ್ಪನವರಿಗೆ ಅಧಿಕಾರ ಕೊಟ್ಟಿದ್ದಾರೆ ಯಡಿಯೂರಪ್ಪ ಮುಖ್ಯಮಂತ್ರಿ ಆಗಿ ಹೊರಟು ಹೋಗುತ್ತಿದ್ದರು. 2008 ರಲ್ಲಿ bjp ಗೆಲ್ಲಲು, ಈಗ ಅಧಿಕಾರದಲ್ಲಿ ಅವರು ಕಾಲೂರಲು ದೇವೇಗೌಡರು ಮತ್ತು ಕುಮಾರಸ್ವಾಮಿ ಕಾರಣ. ವಚನ ಭ್ರಷ್ಟರು ಯಾರು? 20 ತಿಂಗಳ ಅಧಿಕಾರ ಕೊಡದೇ ಇವರು ಈ ಸ್ಥಿತಿ ತಂದಿದ್ದಾರೆ.

ನಾವು ರಾಜಕಾರಣ ಎಂದರೆ ಜನಸೇವೆ ಮಾಡಲು ಬಂದಿದ್ದೇನೆ. ಜನ ಅವಕಾಶ ಕೊಟ್ಟರೆ ಮಾಡಬೇಕು ಇಲ್ಲ ಅಂದ್ರೆ ಮನೆಲೀರಬೇಕು ಅಷ್ಟೇ. ನಾನು ಅಳುವುದಿಲ್ಲ. ಕಣ್ಣೀರು ಹಾಕೋದು ದೇವೇಗೌಡರ ಗಿಮಿಕ್. ನನ್ನ ಮೇಲೆ ದೇವೇಗೌಡರಿಗೆ ರಾಜಕೀಯ ದ್ವೇಷ ಇದೆ, ಸೇಡು ತೀರಿಸಿಕೊಳ್ಳಲು ಅವರು ಈ ರೀತಿ ಆರೋಪ ಮಾಡುತ್ತಿದ್ದಾರೆ. ನನ್ನನ್ನು ರಾಜಕೀಯವಾಗಿ ಮುಗಿಸಲು ಹೊಂಚು ಹಾಕುತ್ತಿದ್ದಾರೆ. ನಾನು ಮುಗಿದರೆ ಕಾಂಗ್ರೆಸ್ ಮುಗಿಸುವುದು ಸುಲಭ ಎಂಬುದು ಅವರ ಲೆಕ್ಕಾಚಾರ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...