Homeಕರ್ನಾಟಕಸರ್ಕಾರ ಬೀಳಿಸುವ ಕಲೆ ದೇವೇಗೌಡರ ಕುಟುಂಬಕ್ಕೆ ಕರಗತವಾಗಿದೆ: ಸಿದ್ದರಾಮಯ್ಯ ತಿರುಗೇಟು

ಸರ್ಕಾರ ಬೀಳಿಸುವ ಕಲೆ ದೇವೇಗೌಡರ ಕುಟುಂಬಕ್ಕೆ ಕರಗತವಾಗಿದೆ: ಸಿದ್ದರಾಮಯ್ಯ ತಿರುಗೇಟು

- Advertisement -
- Advertisement -

ಸಮ್ಮಿಶ್ರ ಸರ್ಕಾರ ಬೀಳಲು ಸಿದ್ದರಾಮಯ್ಯನವರೇ ಕಾರಣ, ಅವರು ವಿರೋಧ ಪಕ್ಷದ ನಾಯಕರಾಗಲು ಹೀಗೆ ಮಾಡಿದ್ದರು ಎಂದು ಎರಡು ದಿನದ ಹಿಂದೆ ಮಾಜಿ ಪ್ರಧಾನಿ ದೇವೇಗೌಡರು ಮಾಡಿದ್ದ ಆರೋಪಕ್ಕೆ ತಿರುಗೇಟು ನೀಡಿರುವ ಮಾಜಿ ಸಿಎಂ ಸಿದ್ದರಾಮಯ್ಯ ದೇವೇಗೌಡರ ಕುಟುಂಬದ ವಿರುದ್ಧ ಹರಿಹಾಯ್ದಿದ್ದಾರೆ.

ಸಮ್ಮಿಶ್ರ ಸರ್ಕಾರ ಬೀಳಿಸುವ ನೀಚ ರಾಜಕಾರಣ ನಾನು ಯಾವತ್ತೂ ಮಾಡುವುದಿಲ್ಲ. ಅದೇನಿದ್ದರೂ ದೇವೇಗೌಡ ಮತ್ತು ಅವರ ಮಕ್ಕಳ ಹುಟ್ಟುಗುಣ.. ಮೈತ್ರಿ ಸರ್ಕಾರ ಬೀಳಲು ನಾನಲ್ಲ, ದೇವೇಗೌಡರ ಕುಟುಂಬವೇ ಕಾರಣ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ,

ಇಂದು ಅವರ ನಿವಾಸದಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಈ ರೀತಿ ಸರ್ಕಾರಗಳನ್ನು ಬೀಳಿಸುವ ಅವರ ಹುನ್ನಾರಕ್ಕೆ ದೊಡ್ಡ ಇತಿಹಾಸವಿದೆ. 2004ರಲ್ಲಿ ಧರ್ಮಸಿಂಗ್ ರವರಿಗೆ ಬೆಂಬಲ ಕೊಟ್ಟಿದ್ದರು. ನಂತರ ಕೆಡವಿಬಿಟ್ಟರು. ಬೊಮ್ಮಾಯಿ ಸರ್ಕಾರ ಬೀಳಿಸಿದವರು ಯಾರು? ಇದೇ ದೇವೇಗೌಡರಲ್ಲವೇ ಎಂದು ಪ್ರಶ್ನಿಸಿದ್ದಾರೆ.

ಸಮ್ಮಿಶ್ರ ಸರ್ಕಾರ ಪತನಕ್ಕೆ ಕುಮಾರಸ್ವಾಮಿ, ರೇವಣ್ಣ ಮತ್ತು ದೇವೇಗೌಡರು ಕಾರಣವೆಂದು ಎಲ್ಲರೂ ಹೇಳುತ್ತಾರೆ. ಇದು ನಾನು ಹೇಳುತ್ತಿಲ್ಲ. ಎಲ್ಲಾ ಶಾಸಕರ ವಿಶ್ವಾಸ ತೆಗೆದುಕೊಂಡು ಅವರ ಕ್ಷೇತ್ರಗಳಲ್ಲಿ ಅಭಿವೃದ್ದಿ ಕೆಲಸ ಮಾಡಿದ್ದರೆ ಯಾರು ಅತೃಪ್ತರು, ಅಸಮಾಧಾನಿತರು ಆಗುತ್ತಿರಲಿಲ್ಲ ಎಂದು ಹಲವು ಶಾಸಕರು ಹೇಳಿದ್ದಾರೆ. ಏಕಪಕ್ಷೀಯವಾದ ನಿರ್ಧಾರ ಮಾಡುವುದು, ಮಂತ್ರಿಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಹೋಗಿರುವುದೇ ಸರ್ಕಾರದ ಪತನಕ್ಕೆ ಕಾರಣ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ನಾನು ಸಂಪೂರ್ಣವಾಗಿ 5 ವರ್ಷ ಮುಖ್ಯಮಂತ್ರಿಯಾಗಿದ್ದಾಗ ಏಕೆ ಒಬ್ಬ ಶಾಸಕ ನನ್ನ ವಿರುದ್ಧ ಮಾತಾಡಲಿಲ್ಲ. ಯಾಕೆ ಯಾರು ಅಸಮಾನಧಾ ತೋರಿಸಲಿಲ್ಲ? ದೇವೇಗೌಡರ ಅವರ ತಪ್ಪು ಮುಚ್ಚಿಕೊಳ್ಳಲ್ಲಿಕ್ಕೆ ನನ್ನ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ ಎಂದು ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ದೇವೇಗೌಡರು ಯಾರನ್ನು ಬೆಳೆಸುವುದಿಲ್ಲ. ತನ್ನ ಮಕ್ಕಳು ಮತ್ತು ಕುಟುಂಬ ಮಾತ್ರ ಬೇಕು ಅವರಿಗೆ. ಅವರು ಸ್ವಜಾತೀಯವರನ್ನೇ ಬೆಳೆಸುವುದಿಲ್ಲ. ಇವರು ಯಾರನ್ನು ಬೆಳೆಸಿಲ್ಲ. ವೈ.ಕೆ ರಾಮಯ್ಯ, ನಾಗೇಗೌಡ ಚಂದ್ರೇಗೌಡ, ಗೋವಿಂದೇಗೌಡ, ಜೀವರಾಜ್ ಆಳ್ವ, ಭೈರೆಗೌಡ ಇವರದೆಲ್ಲಾ ಏನಾಯ್ತು? ಇವರನ್ನೆಲ್ಲ ಯಾರು ತುಳಿದವರು? ನಾನು ತುಳಿದನೆ? ಹೊಸಕೋಟೆಯ ಬಿ.ಎನ್ ಬಚ್ಚೆಗೌಡ ರನ್ನು ಕೇಳಿ ಅವರು ಜಾಸ್ತಿ ಹೇಳುತ್ತಾರೆ. ಇನ್ನೊಬ್ಬರ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಬಾರದು ಎಂದರು.

ನನಗೆ ಎಲ್ಲಾ ಜಾತಿಯವರು ಸ್ನೇಹಿತರಿದ್ದಾರೆ. ಎಲ್ಲಾ ಪಾರ್ಟಿಯಲ್ಲಿಯೂ ಸ್ನೇಹಿತರಿದ್ದಾರೆ.

ಅವರು ನಿಖಿಲ್ ಸೋಲಬೇಕದಾರೆ ಸಿದ್ದರಾಮಯ್ಯ ಕಾರಣ ಎಂದಿದ್ದಾರೆ. ಹಾಗಾದರೆ ಚಾಮರಾಜನಗರ, ಮೈಸೂರು, ಬೆಂಗಳೂರು ಉತ್ತರ, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರದಲ್ಲಿ ನಮ್ಮ ಅಭ್ಯರ್ಥಿಗಳು ಸೋಲಲು ಯಾರು ಕಾರಣ?

ಜಿ.ಟಿ ದೇವೇಗೌಡ ನೇರವಾಗಿ ಹೇಳಿದ, ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್ ನವರು ಕಾಂಗ್ರೆಸ್ ಗೆ ಹಾಕದೇ ಬಿಜೆಪಿಗೆ ಹಾಕಿಬಿಟ್ಟರು ಅಂತ ನೇರವಾಗಿ ಹೇಳಿದರು. ಅವರಿ ಯಾಕೆ ಕ್ರಮ ತೆಗೆದುಕೊಳ್ಳಲಿಲ್ಲ. ನಾವು ಕ್ರಮ ತೆಗೆದುಕೊಂಡಿದ್ದೇವೆ. ಮಂಡ್ಯದಲ್ಲಿ, ತುಮಕೂರು, ಕೋಲಾರದಲ್ಲಿ ನಮ್ಮ ಪಕ್ಷದ ಕಾರ್ಯಕರ್ತರ ವಿರುದ್ಧ ಕ್ರಮ ತೆಗೆದುಕೊಂಡಿದ್ದೇವೆ. ಇವರು ಏಕೆ ತೆಗೆದುಕೊಳ್ಳಲಿಲ್ಲ?

ಹಾಗಾದರೆ ಹಾಸನದಲ್ಲಿ ಇವರ ಇನ್ನೊಬ್ಬ ಮೊಮ್ಮಗ ಹೇಗೆ ಗೆದ್ದಿದ್ದಾನೆ. ನಮ್ಮ ಪಾರ್ಟಿ ಕೆಲಸ ಮಾಡಲಿಲ್ಲವೇ ಅಲ್ಲಿ? ಹೇಗೆ ಗೆದ್ದ?

ಇನ್ನೊಬ್ಬರ ಮೇಲೆ ಗೂಬೆ ಕೂರಿಸುವುದು, ಅಳುವುದು, ಜಾತಿ ತರುವುದು ಮಾಡುತ್ತಾರೆ. ಇವೆಲ್ಲ ಇವರ ಹಳೇ ಗಿಮಿಕ್ ಗಳು. ಹೊಸದೇನೂ ಇಲ್ಲ. ಹಾಗಾಗಿ ಸರ್ಕಾರ ಬೀಳಲು ನಾನು ಕಾರಣ ಎಂದು ಆರೋಪ ಮಾಡಿದ್ದಾರೆ.

ಅವರ ಆರೋಪಗಳೆಲ್ಲವೂ ಟೋಟಲ್ ಪೊಲಿಟಿಕಲಿ ಮೋಟಿವೇಟೆಡ್, ಬೇಸ್ ಲೆಸ್, ಅನ್ ಸ್ಕೂಪ್ ಲೆಸ್ , ಹಿ ವಾಂಟೆಂಡ್ ಟು ಟೇಕ್ ಪೊಲಿಟಿಕಲಿ ಅಡ್ವಾಂಟೇಜ್.. ಆದರೆ ಜನ ಬುದ್ದಿವಂತರಿದ್ದಾರೆ ಇದಕ್ಕೆ ಅವಕಾಶ ಕೊಡುವುದಿಲ್ಲ ಎಂದು ಕಿಡಿ ಕಾರಿದರು.

ಮೈತ್ರಿ ಮುಂದುವರಿಯಬೇಕಾ ಬೇಡವ ಎಂಬುದು ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಇಲ್ಲಿ ವಯಕ್ತಿಕ ಪ್ರಶ್ನೆ ಬರುವುದಿಲ್ಲ.

ಇವತ್ತು ಬಿಜೆಪಿ ಅಧಿಕಾರಕ್ಕೆ ಬಂದಿದ್ದರೆ ಅದಕ್ಕೆ ನೇರವಾಗಿ ದೇವೇಗೌಡ ಮತ್ತು ಕುಮಾರಸ್ವಾಮಿ ಕಾರಣ.. 2006ರಲ್ಲಿ ಕಾಂಗ್ರೆಸ್ ಬಿಟ್ಟು ರಾತ್ರೋರಾತ್ರಿ ಬಿಜೆಪಿ ಕ್ಯಾಂಪ್ ಗೆ ಸೇರಿಕೊಂಡವರು ಯಾರು? ದೇವೇಗೌಡರು ದೊಡ್ಡ ನಾಟಕ ಆಡುತ್ತಿದ್ದಾರೆ ಎಂದರು.

ಬಿಜೆಪಿಯವರ ಜೊತೆ ಸರ್ಕಾರ ಮಾಡಿದರೆ ನನ್ನ ಹೆಣದ ಮೇಲೆ ಮಾಡಬೇಕು ಅಂತ ದೇವೇಗೌಡರು ಹೇಳಿದ್ದರು. ಅವರು ದೊಡ್ಡ ಸುಳ್ಳು ಹೇಳುತ್ತಿದ್ದಾರೆ. ದೇವೇಗೌಡರ ಒಪ್ಪಿಗೆ ಇಲ್ಲದೇ ಅಂದು ಕುಮಾರಸ್ವಾಮಿ ಬಿಜೆಪಿ ಜೊತೆ ಸರ್ಕಾರ ಮಾಡಲು ಸಾಧ್ಯವಾಗುತ್ತಿರಲಿಲ್ಲ ಎಂದರು.

20 ತಿಂಗಳು ಯಡಿಯೂರಪ್ಪನವರಿಗೆ ಅಧಿಕಾರ ಕೊಟ್ಟಿದ್ದಾರೆ ಯಡಿಯೂರಪ್ಪ ಮುಖ್ಯಮಂತ್ರಿ ಆಗಿ ಹೊರಟು ಹೋಗುತ್ತಿದ್ದರು. 2008 ರಲ್ಲಿ bjp ಗೆಲ್ಲಲು, ಈಗ ಅಧಿಕಾರದಲ್ಲಿ ಅವರು ಕಾಲೂರಲು ದೇವೇಗೌಡರು ಮತ್ತು ಕುಮಾರಸ್ವಾಮಿ ಕಾರಣ. ವಚನ ಭ್ರಷ್ಟರು ಯಾರು? 20 ತಿಂಗಳ ಅಧಿಕಾರ ಕೊಡದೇ ಇವರು ಈ ಸ್ಥಿತಿ ತಂದಿದ್ದಾರೆ.

ನಾವು ರಾಜಕಾರಣ ಎಂದರೆ ಜನಸೇವೆ ಮಾಡಲು ಬಂದಿದ್ದೇನೆ. ಜನ ಅವಕಾಶ ಕೊಟ್ಟರೆ ಮಾಡಬೇಕು ಇಲ್ಲ ಅಂದ್ರೆ ಮನೆಲೀರಬೇಕು ಅಷ್ಟೇ. ನಾನು ಅಳುವುದಿಲ್ಲ. ಕಣ್ಣೀರು ಹಾಕೋದು ದೇವೇಗೌಡರ ಗಿಮಿಕ್. ನನ್ನ ಮೇಲೆ ದೇವೇಗೌಡರಿಗೆ ರಾಜಕೀಯ ದ್ವೇಷ ಇದೆ, ಸೇಡು ತೀರಿಸಿಕೊಳ್ಳಲು ಅವರು ಈ ರೀತಿ ಆರೋಪ ಮಾಡುತ್ತಿದ್ದಾರೆ. ನನ್ನನ್ನು ರಾಜಕೀಯವಾಗಿ ಮುಗಿಸಲು ಹೊಂಚು ಹಾಕುತ್ತಿದ್ದಾರೆ. ನಾನು ಮುಗಿದರೆ ಕಾಂಗ್ರೆಸ್ ಮುಗಿಸುವುದು ಸುಲಭ ಎಂಬುದು ಅವರ ಲೆಕ್ಕಾಚಾರ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಯುದ್ಧ ಮುಂದುವರಿಸಲು ಸಾಧ್ಯವಾಗದೆ ಅಮೆರಿಕ ಬಲವಂತವಾಗಿ ಕದನ ವಿರಾಮ ಘೋಷಿಸಿತು’: ಭಾರತದಲ್ಲಿ ಇರಾನ್ ಸುಪ್ರೀಂ ಲೀಡರ್ ಪ್ರತಿನಿಧಿ

ನವದೆಹಲಿ: ಸಂಘರ್ಷವನ್ನು ಮುುಂದುವರಿಸಲು ವಿಫಲವಾದ ನಂತರ ಅಮೆರಿಕವು ಇರಾನ್ ಜೊತೆ ಕದನ ವಿರಾಮ ಘೋಷಿಸಲು ಒತ್ತಾಯಿಸಲ್ಪಟ್ಟಿತು ಮತ್ತು ನಿರಂತರ ಹಗೆತನವು ವಾಷಿಂಗ್ಟನ್‌ಗೆ ಮತ್ತಷ್ಟು ಹಿನ್ನಡೆಗೆ ಕಾರಣವಾಗುತ್ತಿತ್ತು ಎಂದು ಇರಾನ್‌ನ ಸರ್ವೋಚ್ಚ ನಾಯಕನ ಭಾರತದಲ್ಲಿನ...

ಶಾರದಾ ಚಿಟ್ ಫಂಡ್ ಹಗರಣ: 13 ವರ್ಷಗಳ ನಂತರ ಪ್ರಮುಖ ಆರೋಪಿ ಸುದೀಪ್ತ ಸೇನ್ ಗೆ ಜಾಮೀನು ಮಂಜೂರು ಮಾಡಿದ ಕೊಲ್ಕತ್ತಾ ಹೈಕೋರ್ಟ್

ಕೊಲ್ಕತ್ತಾ ಹೈಕೋರ್ಟ್ ಬುಧವಾರ ಬಹುಕೋಟಿ ಶಾರದಾ ಚಿಟ್ ಫಂಡ್ ಹಗರಣದ ಪ್ರಮುಖ ಆರೋಪಿ ಸುದೀಪ್ತ ಸೇನ್ ಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದು, 13 ವರ್ಷಗಳ ನಂತರ ಜೈಲಿನಿಂದ ಬಿಡುಗಡೆಯಾಗಲು ದಾರಿ ಸುಗಮವಾಗಿದೆ. ಪಶ್ಚಿಮ...

ಇಂದೋರ್: ಪೊಲೀಸರಿಂದ ಹಣಕ್ಕಾಗಿ ಬೇಡಿಕೆ, ಹಲ್ಲೆ ಆರೋಪ; 25 ವರ್ಷದ ಟ್ಯಾಕ್ಸಿ ಚಾಲಕ ಆತ್ಮಹತ್ಯೆ: ಪೊಲೀಸ್ ಅಮಾನತು

ಇಂದೋರ್: ಪೊಲೀಸರ ಹಲ್ಲೆ ಮತ್ತು ಭ್ರಷ್ಟಾಚಾರವನ್ನು ಆರೋಪಿಸಿ ವೀಡಿಯೊ ರೆಕಾರ್ಡ್ ಮಾಡಿದ ನಂತರ 25 ವರ್ಷದ ಟ್ಯಾಕ್ಸಿ ಚಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದು, ಅಧಿಕಾರಿಗಳು ಸಬ್ ಇನ್ಸ್‌ಪೆಕ್ಟರ್‌ನನ್ನು ಅಮಾನತುಗೊಳಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ. ಅಭಿಷೇಕ್...

ಅಮೆರಿಕ ಕೋರ್ಟ್ ಮೆಟ್ಟಿಲೇರಿದ ಅದಾನಿ : ಎಸ್‌ಇಸಿ ವಂಚನೆ ಪ್ರಕರಣ ವಜಾಗೊಳಿಸುವಂತೆ ಮನವಿ

ಅದಾನಿ ಗ್ರೂಪ್‌ನ ಅಧ್ಯಕ್ಷ ಗೌತಮ್ ಅದಾನಿ ಮತ್ತು ಅವರ ಸೋದರಸಂಬಂಧಿ ಸಾಗರ್ ಅದಾನಿ ಅವರು ತಮ್ಮ ವಿರುದ್ಧದ ಭ್ರಷ್ಟಾಚಾರ ಮತ್ತು ವಂಚನೆ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಅಮೆರಿಕ ನ್ಯಾಯಾಲಯದ ಮೊರೆ ಹೋಗಿದ್ದಾರೆ ಎಂದು ವರದಿಯಾಗಿದೆ. ಅಮೆರಿಕದ ಸೆಕ್ಯುರಿಟೀಸ್ ಅಂಡ್ ಎಕ್ಸ್ಚೇಂಜ್...

ಜಮ್ಮು-ಕಾಶ್ಮೀರ: ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಆರೋಪ; ಇಬ್ಬರು ಸರ್ಕಾರಿ ನೌಕರರನ್ನು ವಜಾಗೊಳಿಸಿದ ಮನೋಜ್ ಸಿನ್ಹಾ

ಲಷ್ಕರ್-ಎ-ತೈಬಾ ಮತ್ತು ಹಿಜ್ಬುಲ್ ಮುಜಾಹಿದ್ದೀನ್ ಸೇರಿದಂತೆ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಬುಧವಾರ ಇಬ್ಬರು ಸರ್ಕಾರಿ ನೌಕರರನ್ನು ವಜಾಗೊಳಿಸಿದ್ದಾರೆ ಎಂದು...

ಭಾರಿ ಜನ ಬೆಂಬಲದ ನಡುವೆ ಭವಾನಿಪುರದಲ್ಲಿ ನಾಮಪತ್ರ ಸಲ್ಲಿಸಿದ ಮಮತಾ ಬ್ಯಾನರ್ಜಿ: ಶಕ್ತಿ ಪ್ರದರ್ಶನವಾಗಿ ಮಾರ್ಪಟ್ಟ ಮೆರವಣಿಗೆ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ತಮ್ಮ ಕಾಲಿಘಾಟ್ಕಾಲ್ ನಿವಾಸದಿಂದ ಹೊರಬಂದು ಭಬಾನಿಪುರ ವಿಧಾನಸಭಾ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಕಾಲ್ನಡಿಗೆಯಲ್ಲಿ ತೆರಳಿದರು, ಆ ಸಮಯದಲ್ಲಿ ಬೆಂಬಲಿಗರ ದೊಡ್ಡ ಗುಂಪೊಂದು ತೃಣಮೂಲ ಕಾಂಗ್ರೆಸ್...

‘ಜ್ಞಾನೇಶ್ ಕುಮಾರ್ ನಮಗೆ ‘ಗೆಟ್ ಲಾಸ್ಟ್’ ಅಂದ್ರು’ : ಮುಖ್ಯ ಚುನಾವಣಾ ಆಯುಕ್ತರೊಂದಿಗಿನ ಸಭೆ ಬಳಿಕ ಟಿಎಂಸಿ ನಾಯಕರಿಂದ ಆರೋಪ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರೊಂದಿಗೆ ತೃಣಮೂಲ ಕಾಂಗ್ರೆಸ್‌ನ (ಟಿಎಂಸಿ) ನಾಲ್ವರು ಸದಸ್ಯರ ನಿಯೋಗ ನಡೆಸಿದ ಸಭೆಯು ಬುಧವಾರ ಕಾವೇರಿದ ಚರ್ಚೆಗೆ ಸಾಕ್ಷಿಯಾಯಿತು. ಈ ವೇಳೆ ಚುನಾವಣಾ ಆಯುಕ್ತರು ನಮಗೆ...

ಅಸ್ಸಾಂ ಸಿಎಂ ಪತ್ನಿ ದೂರಿನ ಮೇರೆಗೆ ಪವನ್ ಖೇರಾ ವಿರುದ್ಧ ಮಾನನಷ್ಟ, ಕ್ರಿಮಿನಲ್ ಪಿತೂರಿ ಆರೋಪದಡಿ ಪ್ರಕರಣ ದಾಖಲು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ನೀಡಿದ ದೂರಿನ ಆಧಾರದ ಮೇಲೆ ಅಸ್ಸಾಂ ಪೊಲೀಸರು ಪವನ್ ಖೇರಾ ವಿರುದ್ಧ ಮಾನನಷ್ಟ, ನಕಲಿ ಮತ್ತು ಕ್ರಿಮಿನಲ್ ಪಿತೂರಿ ಸೇರಿದಂತೆ...

ಅಮೆರಿಕ-ಇರಾನ್ ಕದನ ವಿರಾಮಕ್ಕೆ ಪಾಕ್ ಮಧ್ಯಸ್ಥಿಕೆ, ಬೆತ್ತಲಾದ ವಿಶ್ವಗುರು : ಕಾಂಗ್ರೆಸ್

ಕೇಂದ್ರ ಸರ್ಕಾರದ ವಿರುದ್ಧ ಬುಧವಾರ ತೀವ್ರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್, ಅಮೆರಿಕ ಮತ್ತು ಇರಾನ್ ನಡುವಿನ ಕದನ ವಿರಾಮಕ್ಕೆ ಪಾಕಿಸ್ತಾನ ಮಧ್ಯಸ್ಥಿಕೆ ವಹಿಸಿರುವುದನ್ನು ಪ್ರಧಾನಿ ನರೇಂದ್ರ ಮೋದಿಯವರ 'ಅತ್ಯಂತ ವೈಯಕ್ತಿಕ ರಾಜತಾಂತ್ರಿಕತೆಗೆ' ಉಂಟಾದ...

ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಸಾಂ ಸಿಎಂ ನಿಂದನೀಯ ಪದ ಬಳಕೆ; ‘ಸಂಪೂರ್ಣ ನಾಚಿಕೆಗೇಡಿನ ಸಂಗತಿ’ ಎಂದ ಪ್ರಿಯಾಂಕಾ ಗಾಂಧಿ 

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು "ಅವಾಚ್ಯ" ಭಾಷೆ ಬಳಸಿರುವುದು "ಸಂಪೂರ್ಣವಾಗಿ ನಾಚಿಕೆಗೇಡಿನ" ಸಂಗತಿ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ...