Homeಕರ್ನಾಟಕಸರ್ಕಾರ ಬೀಳಿಸುವ ಕಲೆ ದೇವೇಗೌಡರ ಕುಟುಂಬಕ್ಕೆ ಕರಗತವಾಗಿದೆ: ಸಿದ್ದರಾಮಯ್ಯ ತಿರುಗೇಟು

ಸರ್ಕಾರ ಬೀಳಿಸುವ ಕಲೆ ದೇವೇಗೌಡರ ಕುಟುಂಬಕ್ಕೆ ಕರಗತವಾಗಿದೆ: ಸಿದ್ದರಾಮಯ್ಯ ತಿರುಗೇಟು

- Advertisement -
- Advertisement -

ಸಮ್ಮಿಶ್ರ ಸರ್ಕಾರ ಬೀಳಲು ಸಿದ್ದರಾಮಯ್ಯನವರೇ ಕಾರಣ, ಅವರು ವಿರೋಧ ಪಕ್ಷದ ನಾಯಕರಾಗಲು ಹೀಗೆ ಮಾಡಿದ್ದರು ಎಂದು ಎರಡು ದಿನದ ಹಿಂದೆ ಮಾಜಿ ಪ್ರಧಾನಿ ದೇವೇಗೌಡರು ಮಾಡಿದ್ದ ಆರೋಪಕ್ಕೆ ತಿರುಗೇಟು ನೀಡಿರುವ ಮಾಜಿ ಸಿಎಂ ಸಿದ್ದರಾಮಯ್ಯ ದೇವೇಗೌಡರ ಕುಟುಂಬದ ವಿರುದ್ಧ ಹರಿಹಾಯ್ದಿದ್ದಾರೆ.

ಸಮ್ಮಿಶ್ರ ಸರ್ಕಾರ ಬೀಳಿಸುವ ನೀಚ ರಾಜಕಾರಣ ನಾನು ಯಾವತ್ತೂ ಮಾಡುವುದಿಲ್ಲ. ಅದೇನಿದ್ದರೂ ದೇವೇಗೌಡ ಮತ್ತು ಅವರ ಮಕ್ಕಳ ಹುಟ್ಟುಗುಣ.. ಮೈತ್ರಿ ಸರ್ಕಾರ ಬೀಳಲು ನಾನಲ್ಲ, ದೇವೇಗೌಡರ ಕುಟುಂಬವೇ ಕಾರಣ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ,

ಇಂದು ಅವರ ನಿವಾಸದಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಈ ರೀತಿ ಸರ್ಕಾರಗಳನ್ನು ಬೀಳಿಸುವ ಅವರ ಹುನ್ನಾರಕ್ಕೆ ದೊಡ್ಡ ಇತಿಹಾಸವಿದೆ. 2004ರಲ್ಲಿ ಧರ್ಮಸಿಂಗ್ ರವರಿಗೆ ಬೆಂಬಲ ಕೊಟ್ಟಿದ್ದರು. ನಂತರ ಕೆಡವಿಬಿಟ್ಟರು. ಬೊಮ್ಮಾಯಿ ಸರ್ಕಾರ ಬೀಳಿಸಿದವರು ಯಾರು? ಇದೇ ದೇವೇಗೌಡರಲ್ಲವೇ ಎಂದು ಪ್ರಶ್ನಿಸಿದ್ದಾರೆ.

ಸಮ್ಮಿಶ್ರ ಸರ್ಕಾರ ಪತನಕ್ಕೆ ಕುಮಾರಸ್ವಾಮಿ, ರೇವಣ್ಣ ಮತ್ತು ದೇವೇಗೌಡರು ಕಾರಣವೆಂದು ಎಲ್ಲರೂ ಹೇಳುತ್ತಾರೆ. ಇದು ನಾನು ಹೇಳುತ್ತಿಲ್ಲ. ಎಲ್ಲಾ ಶಾಸಕರ ವಿಶ್ವಾಸ ತೆಗೆದುಕೊಂಡು ಅವರ ಕ್ಷೇತ್ರಗಳಲ್ಲಿ ಅಭಿವೃದ್ದಿ ಕೆಲಸ ಮಾಡಿದ್ದರೆ ಯಾರು ಅತೃಪ್ತರು, ಅಸಮಾಧಾನಿತರು ಆಗುತ್ತಿರಲಿಲ್ಲ ಎಂದು ಹಲವು ಶಾಸಕರು ಹೇಳಿದ್ದಾರೆ. ಏಕಪಕ್ಷೀಯವಾದ ನಿರ್ಧಾರ ಮಾಡುವುದು, ಮಂತ್ರಿಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಹೋಗಿರುವುದೇ ಸರ್ಕಾರದ ಪತನಕ್ಕೆ ಕಾರಣ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ನಾನು ಸಂಪೂರ್ಣವಾಗಿ 5 ವರ್ಷ ಮುಖ್ಯಮಂತ್ರಿಯಾಗಿದ್ದಾಗ ಏಕೆ ಒಬ್ಬ ಶಾಸಕ ನನ್ನ ವಿರುದ್ಧ ಮಾತಾಡಲಿಲ್ಲ. ಯಾಕೆ ಯಾರು ಅಸಮಾನಧಾ ತೋರಿಸಲಿಲ್ಲ? ದೇವೇಗೌಡರ ಅವರ ತಪ್ಪು ಮುಚ್ಚಿಕೊಳ್ಳಲ್ಲಿಕ್ಕೆ ನನ್ನ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ ಎಂದು ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ದೇವೇಗೌಡರು ಯಾರನ್ನು ಬೆಳೆಸುವುದಿಲ್ಲ. ತನ್ನ ಮಕ್ಕಳು ಮತ್ತು ಕುಟುಂಬ ಮಾತ್ರ ಬೇಕು ಅವರಿಗೆ. ಅವರು ಸ್ವಜಾತೀಯವರನ್ನೇ ಬೆಳೆಸುವುದಿಲ್ಲ. ಇವರು ಯಾರನ್ನು ಬೆಳೆಸಿಲ್ಲ. ವೈ.ಕೆ ರಾಮಯ್ಯ, ನಾಗೇಗೌಡ ಚಂದ್ರೇಗೌಡ, ಗೋವಿಂದೇಗೌಡ, ಜೀವರಾಜ್ ಆಳ್ವ, ಭೈರೆಗೌಡ ಇವರದೆಲ್ಲಾ ಏನಾಯ್ತು? ಇವರನ್ನೆಲ್ಲ ಯಾರು ತುಳಿದವರು? ನಾನು ತುಳಿದನೆ? ಹೊಸಕೋಟೆಯ ಬಿ.ಎನ್ ಬಚ್ಚೆಗೌಡ ರನ್ನು ಕೇಳಿ ಅವರು ಜಾಸ್ತಿ ಹೇಳುತ್ತಾರೆ. ಇನ್ನೊಬ್ಬರ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಬಾರದು ಎಂದರು.

ನನಗೆ ಎಲ್ಲಾ ಜಾತಿಯವರು ಸ್ನೇಹಿತರಿದ್ದಾರೆ. ಎಲ್ಲಾ ಪಾರ್ಟಿಯಲ್ಲಿಯೂ ಸ್ನೇಹಿತರಿದ್ದಾರೆ.

ಅವರು ನಿಖಿಲ್ ಸೋಲಬೇಕದಾರೆ ಸಿದ್ದರಾಮಯ್ಯ ಕಾರಣ ಎಂದಿದ್ದಾರೆ. ಹಾಗಾದರೆ ಚಾಮರಾಜನಗರ, ಮೈಸೂರು, ಬೆಂಗಳೂರು ಉತ್ತರ, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರದಲ್ಲಿ ನಮ್ಮ ಅಭ್ಯರ್ಥಿಗಳು ಸೋಲಲು ಯಾರು ಕಾರಣ?

ಜಿ.ಟಿ ದೇವೇಗೌಡ ನೇರವಾಗಿ ಹೇಳಿದ, ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್ ನವರು ಕಾಂಗ್ರೆಸ್ ಗೆ ಹಾಕದೇ ಬಿಜೆಪಿಗೆ ಹಾಕಿಬಿಟ್ಟರು ಅಂತ ನೇರವಾಗಿ ಹೇಳಿದರು. ಅವರಿ ಯಾಕೆ ಕ್ರಮ ತೆಗೆದುಕೊಳ್ಳಲಿಲ್ಲ. ನಾವು ಕ್ರಮ ತೆಗೆದುಕೊಂಡಿದ್ದೇವೆ. ಮಂಡ್ಯದಲ್ಲಿ, ತುಮಕೂರು, ಕೋಲಾರದಲ್ಲಿ ನಮ್ಮ ಪಕ್ಷದ ಕಾರ್ಯಕರ್ತರ ವಿರುದ್ಧ ಕ್ರಮ ತೆಗೆದುಕೊಂಡಿದ್ದೇವೆ. ಇವರು ಏಕೆ ತೆಗೆದುಕೊಳ್ಳಲಿಲ್ಲ?

ಹಾಗಾದರೆ ಹಾಸನದಲ್ಲಿ ಇವರ ಇನ್ನೊಬ್ಬ ಮೊಮ್ಮಗ ಹೇಗೆ ಗೆದ್ದಿದ್ದಾನೆ. ನಮ್ಮ ಪಾರ್ಟಿ ಕೆಲಸ ಮಾಡಲಿಲ್ಲವೇ ಅಲ್ಲಿ? ಹೇಗೆ ಗೆದ್ದ?

ಇನ್ನೊಬ್ಬರ ಮೇಲೆ ಗೂಬೆ ಕೂರಿಸುವುದು, ಅಳುವುದು, ಜಾತಿ ತರುವುದು ಮಾಡುತ್ತಾರೆ. ಇವೆಲ್ಲ ಇವರ ಹಳೇ ಗಿಮಿಕ್ ಗಳು. ಹೊಸದೇನೂ ಇಲ್ಲ. ಹಾಗಾಗಿ ಸರ್ಕಾರ ಬೀಳಲು ನಾನು ಕಾರಣ ಎಂದು ಆರೋಪ ಮಾಡಿದ್ದಾರೆ.

ಅವರ ಆರೋಪಗಳೆಲ್ಲವೂ ಟೋಟಲ್ ಪೊಲಿಟಿಕಲಿ ಮೋಟಿವೇಟೆಡ್, ಬೇಸ್ ಲೆಸ್, ಅನ್ ಸ್ಕೂಪ್ ಲೆಸ್ , ಹಿ ವಾಂಟೆಂಡ್ ಟು ಟೇಕ್ ಪೊಲಿಟಿಕಲಿ ಅಡ್ವಾಂಟೇಜ್.. ಆದರೆ ಜನ ಬುದ್ದಿವಂತರಿದ್ದಾರೆ ಇದಕ್ಕೆ ಅವಕಾಶ ಕೊಡುವುದಿಲ್ಲ ಎಂದು ಕಿಡಿ ಕಾರಿದರು.

ಮೈತ್ರಿ ಮುಂದುವರಿಯಬೇಕಾ ಬೇಡವ ಎಂಬುದು ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಇಲ್ಲಿ ವಯಕ್ತಿಕ ಪ್ರಶ್ನೆ ಬರುವುದಿಲ್ಲ.

ಇವತ್ತು ಬಿಜೆಪಿ ಅಧಿಕಾರಕ್ಕೆ ಬಂದಿದ್ದರೆ ಅದಕ್ಕೆ ನೇರವಾಗಿ ದೇವೇಗೌಡ ಮತ್ತು ಕುಮಾರಸ್ವಾಮಿ ಕಾರಣ.. 2006ರಲ್ಲಿ ಕಾಂಗ್ರೆಸ್ ಬಿಟ್ಟು ರಾತ್ರೋರಾತ್ರಿ ಬಿಜೆಪಿ ಕ್ಯಾಂಪ್ ಗೆ ಸೇರಿಕೊಂಡವರು ಯಾರು? ದೇವೇಗೌಡರು ದೊಡ್ಡ ನಾಟಕ ಆಡುತ್ತಿದ್ದಾರೆ ಎಂದರು.

ಬಿಜೆಪಿಯವರ ಜೊತೆ ಸರ್ಕಾರ ಮಾಡಿದರೆ ನನ್ನ ಹೆಣದ ಮೇಲೆ ಮಾಡಬೇಕು ಅಂತ ದೇವೇಗೌಡರು ಹೇಳಿದ್ದರು. ಅವರು ದೊಡ್ಡ ಸುಳ್ಳು ಹೇಳುತ್ತಿದ್ದಾರೆ. ದೇವೇಗೌಡರ ಒಪ್ಪಿಗೆ ಇಲ್ಲದೇ ಅಂದು ಕುಮಾರಸ್ವಾಮಿ ಬಿಜೆಪಿ ಜೊತೆ ಸರ್ಕಾರ ಮಾಡಲು ಸಾಧ್ಯವಾಗುತ್ತಿರಲಿಲ್ಲ ಎಂದರು.

20 ತಿಂಗಳು ಯಡಿಯೂರಪ್ಪನವರಿಗೆ ಅಧಿಕಾರ ಕೊಟ್ಟಿದ್ದಾರೆ ಯಡಿಯೂರಪ್ಪ ಮುಖ್ಯಮಂತ್ರಿ ಆಗಿ ಹೊರಟು ಹೋಗುತ್ತಿದ್ದರು. 2008 ರಲ್ಲಿ bjp ಗೆಲ್ಲಲು, ಈಗ ಅಧಿಕಾರದಲ್ಲಿ ಅವರು ಕಾಲೂರಲು ದೇವೇಗೌಡರು ಮತ್ತು ಕುಮಾರಸ್ವಾಮಿ ಕಾರಣ. ವಚನ ಭ್ರಷ್ಟರು ಯಾರು? 20 ತಿಂಗಳ ಅಧಿಕಾರ ಕೊಡದೇ ಇವರು ಈ ಸ್ಥಿತಿ ತಂದಿದ್ದಾರೆ.

ನಾವು ರಾಜಕಾರಣ ಎಂದರೆ ಜನಸೇವೆ ಮಾಡಲು ಬಂದಿದ್ದೇನೆ. ಜನ ಅವಕಾಶ ಕೊಟ್ಟರೆ ಮಾಡಬೇಕು ಇಲ್ಲ ಅಂದ್ರೆ ಮನೆಲೀರಬೇಕು ಅಷ್ಟೇ. ನಾನು ಅಳುವುದಿಲ್ಲ. ಕಣ್ಣೀರು ಹಾಕೋದು ದೇವೇಗೌಡರ ಗಿಮಿಕ್. ನನ್ನ ಮೇಲೆ ದೇವೇಗೌಡರಿಗೆ ರಾಜಕೀಯ ದ್ವೇಷ ಇದೆ, ಸೇಡು ತೀರಿಸಿಕೊಳ್ಳಲು ಅವರು ಈ ರೀತಿ ಆರೋಪ ಮಾಡುತ್ತಿದ್ದಾರೆ. ನನ್ನನ್ನು ರಾಜಕೀಯವಾಗಿ ಮುಗಿಸಲು ಹೊಂಚು ಹಾಕುತ್ತಿದ್ದಾರೆ. ನಾನು ಮುಗಿದರೆ ಕಾಂಗ್ರೆಸ್ ಮುಗಿಸುವುದು ಸುಲಭ ಎಂಬುದು ಅವರ ಲೆಕ್ಕಾಚಾರ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...