Homeಕರ್ನಾಟಕಸರ್ಕಾರ ಬೀಳಿಸುವ ಕಲೆ ದೇವೇಗೌಡರ ಕುಟುಂಬಕ್ಕೆ ಕರಗತವಾಗಿದೆ: ಸಿದ್ದರಾಮಯ್ಯ ತಿರುಗೇಟು

ಸರ್ಕಾರ ಬೀಳಿಸುವ ಕಲೆ ದೇವೇಗೌಡರ ಕುಟುಂಬಕ್ಕೆ ಕರಗತವಾಗಿದೆ: ಸಿದ್ದರಾಮಯ್ಯ ತಿರುಗೇಟು

- Advertisement -
- Advertisement -

ಸಮ್ಮಿಶ್ರ ಸರ್ಕಾರ ಬೀಳಲು ಸಿದ್ದರಾಮಯ್ಯನವರೇ ಕಾರಣ, ಅವರು ವಿರೋಧ ಪಕ್ಷದ ನಾಯಕರಾಗಲು ಹೀಗೆ ಮಾಡಿದ್ದರು ಎಂದು ಎರಡು ದಿನದ ಹಿಂದೆ ಮಾಜಿ ಪ್ರಧಾನಿ ದೇವೇಗೌಡರು ಮಾಡಿದ್ದ ಆರೋಪಕ್ಕೆ ತಿರುಗೇಟು ನೀಡಿರುವ ಮಾಜಿ ಸಿಎಂ ಸಿದ್ದರಾಮಯ್ಯ ದೇವೇಗೌಡರ ಕುಟುಂಬದ ವಿರುದ್ಧ ಹರಿಹಾಯ್ದಿದ್ದಾರೆ.

ಸಮ್ಮಿಶ್ರ ಸರ್ಕಾರ ಬೀಳಿಸುವ ನೀಚ ರಾಜಕಾರಣ ನಾನು ಯಾವತ್ತೂ ಮಾಡುವುದಿಲ್ಲ. ಅದೇನಿದ್ದರೂ ದೇವೇಗೌಡ ಮತ್ತು ಅವರ ಮಕ್ಕಳ ಹುಟ್ಟುಗುಣ.. ಮೈತ್ರಿ ಸರ್ಕಾರ ಬೀಳಲು ನಾನಲ್ಲ, ದೇವೇಗೌಡರ ಕುಟುಂಬವೇ ಕಾರಣ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ,

ಇಂದು ಅವರ ನಿವಾಸದಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಈ ರೀತಿ ಸರ್ಕಾರಗಳನ್ನು ಬೀಳಿಸುವ ಅವರ ಹುನ್ನಾರಕ್ಕೆ ದೊಡ್ಡ ಇತಿಹಾಸವಿದೆ. 2004ರಲ್ಲಿ ಧರ್ಮಸಿಂಗ್ ರವರಿಗೆ ಬೆಂಬಲ ಕೊಟ್ಟಿದ್ದರು. ನಂತರ ಕೆಡವಿಬಿಟ್ಟರು. ಬೊಮ್ಮಾಯಿ ಸರ್ಕಾರ ಬೀಳಿಸಿದವರು ಯಾರು? ಇದೇ ದೇವೇಗೌಡರಲ್ಲವೇ ಎಂದು ಪ್ರಶ್ನಿಸಿದ್ದಾರೆ.

ಸಮ್ಮಿಶ್ರ ಸರ್ಕಾರ ಪತನಕ್ಕೆ ಕುಮಾರಸ್ವಾಮಿ, ರೇವಣ್ಣ ಮತ್ತು ದೇವೇಗೌಡರು ಕಾರಣವೆಂದು ಎಲ್ಲರೂ ಹೇಳುತ್ತಾರೆ. ಇದು ನಾನು ಹೇಳುತ್ತಿಲ್ಲ. ಎಲ್ಲಾ ಶಾಸಕರ ವಿಶ್ವಾಸ ತೆಗೆದುಕೊಂಡು ಅವರ ಕ್ಷೇತ್ರಗಳಲ್ಲಿ ಅಭಿವೃದ್ದಿ ಕೆಲಸ ಮಾಡಿದ್ದರೆ ಯಾರು ಅತೃಪ್ತರು, ಅಸಮಾಧಾನಿತರು ಆಗುತ್ತಿರಲಿಲ್ಲ ಎಂದು ಹಲವು ಶಾಸಕರು ಹೇಳಿದ್ದಾರೆ. ಏಕಪಕ್ಷೀಯವಾದ ನಿರ್ಧಾರ ಮಾಡುವುದು, ಮಂತ್ರಿಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಹೋಗಿರುವುದೇ ಸರ್ಕಾರದ ಪತನಕ್ಕೆ ಕಾರಣ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ನಾನು ಸಂಪೂರ್ಣವಾಗಿ 5 ವರ್ಷ ಮುಖ್ಯಮಂತ್ರಿಯಾಗಿದ್ದಾಗ ಏಕೆ ಒಬ್ಬ ಶಾಸಕ ನನ್ನ ವಿರುದ್ಧ ಮಾತಾಡಲಿಲ್ಲ. ಯಾಕೆ ಯಾರು ಅಸಮಾನಧಾ ತೋರಿಸಲಿಲ್ಲ? ದೇವೇಗೌಡರ ಅವರ ತಪ್ಪು ಮುಚ್ಚಿಕೊಳ್ಳಲ್ಲಿಕ್ಕೆ ನನ್ನ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ ಎಂದು ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ದೇವೇಗೌಡರು ಯಾರನ್ನು ಬೆಳೆಸುವುದಿಲ್ಲ. ತನ್ನ ಮಕ್ಕಳು ಮತ್ತು ಕುಟುಂಬ ಮಾತ್ರ ಬೇಕು ಅವರಿಗೆ. ಅವರು ಸ್ವಜಾತೀಯವರನ್ನೇ ಬೆಳೆಸುವುದಿಲ್ಲ. ಇವರು ಯಾರನ್ನು ಬೆಳೆಸಿಲ್ಲ. ವೈ.ಕೆ ರಾಮಯ್ಯ, ನಾಗೇಗೌಡ ಚಂದ್ರೇಗೌಡ, ಗೋವಿಂದೇಗೌಡ, ಜೀವರಾಜ್ ಆಳ್ವ, ಭೈರೆಗೌಡ ಇವರದೆಲ್ಲಾ ಏನಾಯ್ತು? ಇವರನ್ನೆಲ್ಲ ಯಾರು ತುಳಿದವರು? ನಾನು ತುಳಿದನೆ? ಹೊಸಕೋಟೆಯ ಬಿ.ಎನ್ ಬಚ್ಚೆಗೌಡ ರನ್ನು ಕೇಳಿ ಅವರು ಜಾಸ್ತಿ ಹೇಳುತ್ತಾರೆ. ಇನ್ನೊಬ್ಬರ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಬಾರದು ಎಂದರು.

ನನಗೆ ಎಲ್ಲಾ ಜಾತಿಯವರು ಸ್ನೇಹಿತರಿದ್ದಾರೆ. ಎಲ್ಲಾ ಪಾರ್ಟಿಯಲ್ಲಿಯೂ ಸ್ನೇಹಿತರಿದ್ದಾರೆ.

ಅವರು ನಿಖಿಲ್ ಸೋಲಬೇಕದಾರೆ ಸಿದ್ದರಾಮಯ್ಯ ಕಾರಣ ಎಂದಿದ್ದಾರೆ. ಹಾಗಾದರೆ ಚಾಮರಾಜನಗರ, ಮೈಸೂರು, ಬೆಂಗಳೂರು ಉತ್ತರ, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರದಲ್ಲಿ ನಮ್ಮ ಅಭ್ಯರ್ಥಿಗಳು ಸೋಲಲು ಯಾರು ಕಾರಣ?

ಜಿ.ಟಿ ದೇವೇಗೌಡ ನೇರವಾಗಿ ಹೇಳಿದ, ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್ ನವರು ಕಾಂಗ್ರೆಸ್ ಗೆ ಹಾಕದೇ ಬಿಜೆಪಿಗೆ ಹಾಕಿಬಿಟ್ಟರು ಅಂತ ನೇರವಾಗಿ ಹೇಳಿದರು. ಅವರಿ ಯಾಕೆ ಕ್ರಮ ತೆಗೆದುಕೊಳ್ಳಲಿಲ್ಲ. ನಾವು ಕ್ರಮ ತೆಗೆದುಕೊಂಡಿದ್ದೇವೆ. ಮಂಡ್ಯದಲ್ಲಿ, ತುಮಕೂರು, ಕೋಲಾರದಲ್ಲಿ ನಮ್ಮ ಪಕ್ಷದ ಕಾರ್ಯಕರ್ತರ ವಿರುದ್ಧ ಕ್ರಮ ತೆಗೆದುಕೊಂಡಿದ್ದೇವೆ. ಇವರು ಏಕೆ ತೆಗೆದುಕೊಳ್ಳಲಿಲ್ಲ?

ಹಾಗಾದರೆ ಹಾಸನದಲ್ಲಿ ಇವರ ಇನ್ನೊಬ್ಬ ಮೊಮ್ಮಗ ಹೇಗೆ ಗೆದ್ದಿದ್ದಾನೆ. ನಮ್ಮ ಪಾರ್ಟಿ ಕೆಲಸ ಮಾಡಲಿಲ್ಲವೇ ಅಲ್ಲಿ? ಹೇಗೆ ಗೆದ್ದ?

ಇನ್ನೊಬ್ಬರ ಮೇಲೆ ಗೂಬೆ ಕೂರಿಸುವುದು, ಅಳುವುದು, ಜಾತಿ ತರುವುದು ಮಾಡುತ್ತಾರೆ. ಇವೆಲ್ಲ ಇವರ ಹಳೇ ಗಿಮಿಕ್ ಗಳು. ಹೊಸದೇನೂ ಇಲ್ಲ. ಹಾಗಾಗಿ ಸರ್ಕಾರ ಬೀಳಲು ನಾನು ಕಾರಣ ಎಂದು ಆರೋಪ ಮಾಡಿದ್ದಾರೆ.

ಅವರ ಆರೋಪಗಳೆಲ್ಲವೂ ಟೋಟಲ್ ಪೊಲಿಟಿಕಲಿ ಮೋಟಿವೇಟೆಡ್, ಬೇಸ್ ಲೆಸ್, ಅನ್ ಸ್ಕೂಪ್ ಲೆಸ್ , ಹಿ ವಾಂಟೆಂಡ್ ಟು ಟೇಕ್ ಪೊಲಿಟಿಕಲಿ ಅಡ್ವಾಂಟೇಜ್.. ಆದರೆ ಜನ ಬುದ್ದಿವಂತರಿದ್ದಾರೆ ಇದಕ್ಕೆ ಅವಕಾಶ ಕೊಡುವುದಿಲ್ಲ ಎಂದು ಕಿಡಿ ಕಾರಿದರು.

ಮೈತ್ರಿ ಮುಂದುವರಿಯಬೇಕಾ ಬೇಡವ ಎಂಬುದು ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಇಲ್ಲಿ ವಯಕ್ತಿಕ ಪ್ರಶ್ನೆ ಬರುವುದಿಲ್ಲ.

ಇವತ್ತು ಬಿಜೆಪಿ ಅಧಿಕಾರಕ್ಕೆ ಬಂದಿದ್ದರೆ ಅದಕ್ಕೆ ನೇರವಾಗಿ ದೇವೇಗೌಡ ಮತ್ತು ಕುಮಾರಸ್ವಾಮಿ ಕಾರಣ.. 2006ರಲ್ಲಿ ಕಾಂಗ್ರೆಸ್ ಬಿಟ್ಟು ರಾತ್ರೋರಾತ್ರಿ ಬಿಜೆಪಿ ಕ್ಯಾಂಪ್ ಗೆ ಸೇರಿಕೊಂಡವರು ಯಾರು? ದೇವೇಗೌಡರು ದೊಡ್ಡ ನಾಟಕ ಆಡುತ್ತಿದ್ದಾರೆ ಎಂದರು.

ಬಿಜೆಪಿಯವರ ಜೊತೆ ಸರ್ಕಾರ ಮಾಡಿದರೆ ನನ್ನ ಹೆಣದ ಮೇಲೆ ಮಾಡಬೇಕು ಅಂತ ದೇವೇಗೌಡರು ಹೇಳಿದ್ದರು. ಅವರು ದೊಡ್ಡ ಸುಳ್ಳು ಹೇಳುತ್ತಿದ್ದಾರೆ. ದೇವೇಗೌಡರ ಒಪ್ಪಿಗೆ ಇಲ್ಲದೇ ಅಂದು ಕುಮಾರಸ್ವಾಮಿ ಬಿಜೆಪಿ ಜೊತೆ ಸರ್ಕಾರ ಮಾಡಲು ಸಾಧ್ಯವಾಗುತ್ತಿರಲಿಲ್ಲ ಎಂದರು.

20 ತಿಂಗಳು ಯಡಿಯೂರಪ್ಪನವರಿಗೆ ಅಧಿಕಾರ ಕೊಟ್ಟಿದ್ದಾರೆ ಯಡಿಯೂರಪ್ಪ ಮುಖ್ಯಮಂತ್ರಿ ಆಗಿ ಹೊರಟು ಹೋಗುತ್ತಿದ್ದರು. 2008 ರಲ್ಲಿ bjp ಗೆಲ್ಲಲು, ಈಗ ಅಧಿಕಾರದಲ್ಲಿ ಅವರು ಕಾಲೂರಲು ದೇವೇಗೌಡರು ಮತ್ತು ಕುಮಾರಸ್ವಾಮಿ ಕಾರಣ. ವಚನ ಭ್ರಷ್ಟರು ಯಾರು? 20 ತಿಂಗಳ ಅಧಿಕಾರ ಕೊಡದೇ ಇವರು ಈ ಸ್ಥಿತಿ ತಂದಿದ್ದಾರೆ.

ನಾವು ರಾಜಕಾರಣ ಎಂದರೆ ಜನಸೇವೆ ಮಾಡಲು ಬಂದಿದ್ದೇನೆ. ಜನ ಅವಕಾಶ ಕೊಟ್ಟರೆ ಮಾಡಬೇಕು ಇಲ್ಲ ಅಂದ್ರೆ ಮನೆಲೀರಬೇಕು ಅಷ್ಟೇ. ನಾನು ಅಳುವುದಿಲ್ಲ. ಕಣ್ಣೀರು ಹಾಕೋದು ದೇವೇಗೌಡರ ಗಿಮಿಕ್. ನನ್ನ ಮೇಲೆ ದೇವೇಗೌಡರಿಗೆ ರಾಜಕೀಯ ದ್ವೇಷ ಇದೆ, ಸೇಡು ತೀರಿಸಿಕೊಳ್ಳಲು ಅವರು ಈ ರೀತಿ ಆರೋಪ ಮಾಡುತ್ತಿದ್ದಾರೆ. ನನ್ನನ್ನು ರಾಜಕೀಯವಾಗಿ ಮುಗಿಸಲು ಹೊಂಚು ಹಾಕುತ್ತಿದ್ದಾರೆ. ನಾನು ಮುಗಿದರೆ ಕಾಂಗ್ರೆಸ್ ಮುಗಿಸುವುದು ಸುಲಭ ಎಂಬುದು ಅವರ ಲೆಕ್ಕಾಚಾರ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...

NICE ನಲ್ಲಿ ಯೋಜನೆಯಲ್ಲಿ ‘ನೈಸ್’ ಎನ್ನುವಂತಹದ್ದು ಏನೂ ಇಲ್ಲ: ರಾಜ್ಯದ ಅತಿದೊಡ್ಡ ಹಗರಣ ಎಂದ ಹೈಕೋರ್ಟ್

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ಬಿಎಂಐಸಿಪಿ) ಅಥವಾ 'ನೈಸ್' ಯೋಜನೆ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್...

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...