Homeಕರ್ನಾಟಕಸರ್ಕಾರ ಬೀಳಿಸುವ ಕಲೆ ದೇವೇಗೌಡರ ಕುಟುಂಬಕ್ಕೆ ಕರಗತವಾಗಿದೆ: ಸಿದ್ದರಾಮಯ್ಯ ತಿರುಗೇಟು

ಸರ್ಕಾರ ಬೀಳಿಸುವ ಕಲೆ ದೇವೇಗೌಡರ ಕುಟುಂಬಕ್ಕೆ ಕರಗತವಾಗಿದೆ: ಸಿದ್ದರಾಮಯ್ಯ ತಿರುಗೇಟು

- Advertisement -
- Advertisement -

ಸಮ್ಮಿಶ್ರ ಸರ್ಕಾರ ಬೀಳಲು ಸಿದ್ದರಾಮಯ್ಯನವರೇ ಕಾರಣ, ಅವರು ವಿರೋಧ ಪಕ್ಷದ ನಾಯಕರಾಗಲು ಹೀಗೆ ಮಾಡಿದ್ದರು ಎಂದು ಎರಡು ದಿನದ ಹಿಂದೆ ಮಾಜಿ ಪ್ರಧಾನಿ ದೇವೇಗೌಡರು ಮಾಡಿದ್ದ ಆರೋಪಕ್ಕೆ ತಿರುಗೇಟು ನೀಡಿರುವ ಮಾಜಿ ಸಿಎಂ ಸಿದ್ದರಾಮಯ್ಯ ದೇವೇಗೌಡರ ಕುಟುಂಬದ ವಿರುದ್ಧ ಹರಿಹಾಯ್ದಿದ್ದಾರೆ.

ಸಮ್ಮಿಶ್ರ ಸರ್ಕಾರ ಬೀಳಿಸುವ ನೀಚ ರಾಜಕಾರಣ ನಾನು ಯಾವತ್ತೂ ಮಾಡುವುದಿಲ್ಲ. ಅದೇನಿದ್ದರೂ ದೇವೇಗೌಡ ಮತ್ತು ಅವರ ಮಕ್ಕಳ ಹುಟ್ಟುಗುಣ.. ಮೈತ್ರಿ ಸರ್ಕಾರ ಬೀಳಲು ನಾನಲ್ಲ, ದೇವೇಗೌಡರ ಕುಟುಂಬವೇ ಕಾರಣ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ,

ಇಂದು ಅವರ ನಿವಾಸದಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಈ ರೀತಿ ಸರ್ಕಾರಗಳನ್ನು ಬೀಳಿಸುವ ಅವರ ಹುನ್ನಾರಕ್ಕೆ ದೊಡ್ಡ ಇತಿಹಾಸವಿದೆ. 2004ರಲ್ಲಿ ಧರ್ಮಸಿಂಗ್ ರವರಿಗೆ ಬೆಂಬಲ ಕೊಟ್ಟಿದ್ದರು. ನಂತರ ಕೆಡವಿಬಿಟ್ಟರು. ಬೊಮ್ಮಾಯಿ ಸರ್ಕಾರ ಬೀಳಿಸಿದವರು ಯಾರು? ಇದೇ ದೇವೇಗೌಡರಲ್ಲವೇ ಎಂದು ಪ್ರಶ್ನಿಸಿದ್ದಾರೆ.

ಸಮ್ಮಿಶ್ರ ಸರ್ಕಾರ ಪತನಕ್ಕೆ ಕುಮಾರಸ್ವಾಮಿ, ರೇವಣ್ಣ ಮತ್ತು ದೇವೇಗೌಡರು ಕಾರಣವೆಂದು ಎಲ್ಲರೂ ಹೇಳುತ್ತಾರೆ. ಇದು ನಾನು ಹೇಳುತ್ತಿಲ್ಲ. ಎಲ್ಲಾ ಶಾಸಕರ ವಿಶ್ವಾಸ ತೆಗೆದುಕೊಂಡು ಅವರ ಕ್ಷೇತ್ರಗಳಲ್ಲಿ ಅಭಿವೃದ್ದಿ ಕೆಲಸ ಮಾಡಿದ್ದರೆ ಯಾರು ಅತೃಪ್ತರು, ಅಸಮಾಧಾನಿತರು ಆಗುತ್ತಿರಲಿಲ್ಲ ಎಂದು ಹಲವು ಶಾಸಕರು ಹೇಳಿದ್ದಾರೆ. ಏಕಪಕ್ಷೀಯವಾದ ನಿರ್ಧಾರ ಮಾಡುವುದು, ಮಂತ್ರಿಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಹೋಗಿರುವುದೇ ಸರ್ಕಾರದ ಪತನಕ್ಕೆ ಕಾರಣ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ನಾನು ಸಂಪೂರ್ಣವಾಗಿ 5 ವರ್ಷ ಮುಖ್ಯಮಂತ್ರಿಯಾಗಿದ್ದಾಗ ಏಕೆ ಒಬ್ಬ ಶಾಸಕ ನನ್ನ ವಿರುದ್ಧ ಮಾತಾಡಲಿಲ್ಲ. ಯಾಕೆ ಯಾರು ಅಸಮಾನಧಾ ತೋರಿಸಲಿಲ್ಲ? ದೇವೇಗೌಡರ ಅವರ ತಪ್ಪು ಮುಚ್ಚಿಕೊಳ್ಳಲ್ಲಿಕ್ಕೆ ನನ್ನ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ ಎಂದು ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ದೇವೇಗೌಡರು ಯಾರನ್ನು ಬೆಳೆಸುವುದಿಲ್ಲ. ತನ್ನ ಮಕ್ಕಳು ಮತ್ತು ಕುಟುಂಬ ಮಾತ್ರ ಬೇಕು ಅವರಿಗೆ. ಅವರು ಸ್ವಜಾತೀಯವರನ್ನೇ ಬೆಳೆಸುವುದಿಲ್ಲ. ಇವರು ಯಾರನ್ನು ಬೆಳೆಸಿಲ್ಲ. ವೈ.ಕೆ ರಾಮಯ್ಯ, ನಾಗೇಗೌಡ ಚಂದ್ರೇಗೌಡ, ಗೋವಿಂದೇಗೌಡ, ಜೀವರಾಜ್ ಆಳ್ವ, ಭೈರೆಗೌಡ ಇವರದೆಲ್ಲಾ ಏನಾಯ್ತು? ಇವರನ್ನೆಲ್ಲ ಯಾರು ತುಳಿದವರು? ನಾನು ತುಳಿದನೆ? ಹೊಸಕೋಟೆಯ ಬಿ.ಎನ್ ಬಚ್ಚೆಗೌಡ ರನ್ನು ಕೇಳಿ ಅವರು ಜಾಸ್ತಿ ಹೇಳುತ್ತಾರೆ. ಇನ್ನೊಬ್ಬರ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಬಾರದು ಎಂದರು.

ನನಗೆ ಎಲ್ಲಾ ಜಾತಿಯವರು ಸ್ನೇಹಿತರಿದ್ದಾರೆ. ಎಲ್ಲಾ ಪಾರ್ಟಿಯಲ್ಲಿಯೂ ಸ್ನೇಹಿತರಿದ್ದಾರೆ.

ಅವರು ನಿಖಿಲ್ ಸೋಲಬೇಕದಾರೆ ಸಿದ್ದರಾಮಯ್ಯ ಕಾರಣ ಎಂದಿದ್ದಾರೆ. ಹಾಗಾದರೆ ಚಾಮರಾಜನಗರ, ಮೈಸೂರು, ಬೆಂಗಳೂರು ಉತ್ತರ, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರದಲ್ಲಿ ನಮ್ಮ ಅಭ್ಯರ್ಥಿಗಳು ಸೋಲಲು ಯಾರು ಕಾರಣ?

ಜಿ.ಟಿ ದೇವೇಗೌಡ ನೇರವಾಗಿ ಹೇಳಿದ, ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್ ನವರು ಕಾಂಗ್ರೆಸ್ ಗೆ ಹಾಕದೇ ಬಿಜೆಪಿಗೆ ಹಾಕಿಬಿಟ್ಟರು ಅಂತ ನೇರವಾಗಿ ಹೇಳಿದರು. ಅವರಿ ಯಾಕೆ ಕ್ರಮ ತೆಗೆದುಕೊಳ್ಳಲಿಲ್ಲ. ನಾವು ಕ್ರಮ ತೆಗೆದುಕೊಂಡಿದ್ದೇವೆ. ಮಂಡ್ಯದಲ್ಲಿ, ತುಮಕೂರು, ಕೋಲಾರದಲ್ಲಿ ನಮ್ಮ ಪಕ್ಷದ ಕಾರ್ಯಕರ್ತರ ವಿರುದ್ಧ ಕ್ರಮ ತೆಗೆದುಕೊಂಡಿದ್ದೇವೆ. ಇವರು ಏಕೆ ತೆಗೆದುಕೊಳ್ಳಲಿಲ್ಲ?

ಹಾಗಾದರೆ ಹಾಸನದಲ್ಲಿ ಇವರ ಇನ್ನೊಬ್ಬ ಮೊಮ್ಮಗ ಹೇಗೆ ಗೆದ್ದಿದ್ದಾನೆ. ನಮ್ಮ ಪಾರ್ಟಿ ಕೆಲಸ ಮಾಡಲಿಲ್ಲವೇ ಅಲ್ಲಿ? ಹೇಗೆ ಗೆದ್ದ?

ಇನ್ನೊಬ್ಬರ ಮೇಲೆ ಗೂಬೆ ಕೂರಿಸುವುದು, ಅಳುವುದು, ಜಾತಿ ತರುವುದು ಮಾಡುತ್ತಾರೆ. ಇವೆಲ್ಲ ಇವರ ಹಳೇ ಗಿಮಿಕ್ ಗಳು. ಹೊಸದೇನೂ ಇಲ್ಲ. ಹಾಗಾಗಿ ಸರ್ಕಾರ ಬೀಳಲು ನಾನು ಕಾರಣ ಎಂದು ಆರೋಪ ಮಾಡಿದ್ದಾರೆ.

ಅವರ ಆರೋಪಗಳೆಲ್ಲವೂ ಟೋಟಲ್ ಪೊಲಿಟಿಕಲಿ ಮೋಟಿವೇಟೆಡ್, ಬೇಸ್ ಲೆಸ್, ಅನ್ ಸ್ಕೂಪ್ ಲೆಸ್ , ಹಿ ವಾಂಟೆಂಡ್ ಟು ಟೇಕ್ ಪೊಲಿಟಿಕಲಿ ಅಡ್ವಾಂಟೇಜ್.. ಆದರೆ ಜನ ಬುದ್ದಿವಂತರಿದ್ದಾರೆ ಇದಕ್ಕೆ ಅವಕಾಶ ಕೊಡುವುದಿಲ್ಲ ಎಂದು ಕಿಡಿ ಕಾರಿದರು.

ಮೈತ್ರಿ ಮುಂದುವರಿಯಬೇಕಾ ಬೇಡವ ಎಂಬುದು ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಇಲ್ಲಿ ವಯಕ್ತಿಕ ಪ್ರಶ್ನೆ ಬರುವುದಿಲ್ಲ.

ಇವತ್ತು ಬಿಜೆಪಿ ಅಧಿಕಾರಕ್ಕೆ ಬಂದಿದ್ದರೆ ಅದಕ್ಕೆ ನೇರವಾಗಿ ದೇವೇಗೌಡ ಮತ್ತು ಕುಮಾರಸ್ವಾಮಿ ಕಾರಣ.. 2006ರಲ್ಲಿ ಕಾಂಗ್ರೆಸ್ ಬಿಟ್ಟು ರಾತ್ರೋರಾತ್ರಿ ಬಿಜೆಪಿ ಕ್ಯಾಂಪ್ ಗೆ ಸೇರಿಕೊಂಡವರು ಯಾರು? ದೇವೇಗೌಡರು ದೊಡ್ಡ ನಾಟಕ ಆಡುತ್ತಿದ್ದಾರೆ ಎಂದರು.

ಬಿಜೆಪಿಯವರ ಜೊತೆ ಸರ್ಕಾರ ಮಾಡಿದರೆ ನನ್ನ ಹೆಣದ ಮೇಲೆ ಮಾಡಬೇಕು ಅಂತ ದೇವೇಗೌಡರು ಹೇಳಿದ್ದರು. ಅವರು ದೊಡ್ಡ ಸುಳ್ಳು ಹೇಳುತ್ತಿದ್ದಾರೆ. ದೇವೇಗೌಡರ ಒಪ್ಪಿಗೆ ಇಲ್ಲದೇ ಅಂದು ಕುಮಾರಸ್ವಾಮಿ ಬಿಜೆಪಿ ಜೊತೆ ಸರ್ಕಾರ ಮಾಡಲು ಸಾಧ್ಯವಾಗುತ್ತಿರಲಿಲ್ಲ ಎಂದರು.

20 ತಿಂಗಳು ಯಡಿಯೂರಪ್ಪನವರಿಗೆ ಅಧಿಕಾರ ಕೊಟ್ಟಿದ್ದಾರೆ ಯಡಿಯೂರಪ್ಪ ಮುಖ್ಯಮಂತ್ರಿ ಆಗಿ ಹೊರಟು ಹೋಗುತ್ತಿದ್ದರು. 2008 ರಲ್ಲಿ bjp ಗೆಲ್ಲಲು, ಈಗ ಅಧಿಕಾರದಲ್ಲಿ ಅವರು ಕಾಲೂರಲು ದೇವೇಗೌಡರು ಮತ್ತು ಕುಮಾರಸ್ವಾಮಿ ಕಾರಣ. ವಚನ ಭ್ರಷ್ಟರು ಯಾರು? 20 ತಿಂಗಳ ಅಧಿಕಾರ ಕೊಡದೇ ಇವರು ಈ ಸ್ಥಿತಿ ತಂದಿದ್ದಾರೆ.

ನಾವು ರಾಜಕಾರಣ ಎಂದರೆ ಜನಸೇವೆ ಮಾಡಲು ಬಂದಿದ್ದೇನೆ. ಜನ ಅವಕಾಶ ಕೊಟ್ಟರೆ ಮಾಡಬೇಕು ಇಲ್ಲ ಅಂದ್ರೆ ಮನೆಲೀರಬೇಕು ಅಷ್ಟೇ. ನಾನು ಅಳುವುದಿಲ್ಲ. ಕಣ್ಣೀರು ಹಾಕೋದು ದೇವೇಗೌಡರ ಗಿಮಿಕ್. ನನ್ನ ಮೇಲೆ ದೇವೇಗೌಡರಿಗೆ ರಾಜಕೀಯ ದ್ವೇಷ ಇದೆ, ಸೇಡು ತೀರಿಸಿಕೊಳ್ಳಲು ಅವರು ಈ ರೀತಿ ಆರೋಪ ಮಾಡುತ್ತಿದ್ದಾರೆ. ನನ್ನನ್ನು ರಾಜಕೀಯವಾಗಿ ಮುಗಿಸಲು ಹೊಂಚು ಹಾಕುತ್ತಿದ್ದಾರೆ. ನಾನು ಮುಗಿದರೆ ಕಾಂಗ್ರೆಸ್ ಮುಗಿಸುವುದು ಸುಲಭ ಎಂಬುದು ಅವರ ಲೆಕ್ಕಾಚಾರ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...