ಸಿದ್ದರಾಮಯ್ಯ ಅವರು ಮುಂದಿನ ಅವಧಿಗೂ ಮುಖ್ಯಮಂತ್ರಿ ಆಗಿ ಮುಂದುವರಿಯುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಸಂಪುಟ ಸಚಿವ ಶಿವಾನಂದ ಪಾಟೀಲ್ ಅವರು ಸೋಮವಾರ ಬೆಳಗಾವಿಯಲ್ಲಿ ಹೇಳಿದ್ದಾರೆ. ಸಿದ್ದರಾಮಯ್ಯ ಮುಂದಿನ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಸಿದ್ದರಾಮಯ್ಯ ಮುಂದಿನ ಅವಧಿಗೂ ಸಿಎಂ ಆಗಿ ಮುಂದುವರಿಯುತ್ತಾರೆ ಎಂದು ಕೆಲವು ಸಚಿವರು ಹೇಳಿದ್ದರಲ್ಲಿ ಯಾವುದೇ ತಪ್ಪಿಲ್ಲ” ಎಂದು ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
“ಭವಿಷ್ಯವನ್ನು ನಾನು ಊಹಿಸಲು ಸಾಧ್ಯವಿಲ್ಲ, ಆದರೆ ಸಿದ್ದರಾಮಯ್ಯ ಮುಂದುವರಿಯಬೇಕೆ ಅಥವಾ ಅವರನ್ನು ಬದಲಾಯಿಸಬೇಕೆ ಎಂಬ ನಿರ್ಧಾರವನ್ನು ಕಾಂಗ್ರೆಸ್ ಶಾಸಕಾಂಗ ಪಕ್ಷ ಮತ್ತು ಹೈಕಮಾಂಡ್ ತೆಗೆದುಕೊಳ್ಳುತ್ತದೆ” ಎಂದು ಅವರು ಹೇಳಿದ್ದಾರೆ.
ನಾಯಕತ್ವ ಬದಲಾವಣೆಯ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, “ನನಗೆ ಇದರ ಕಾರಣಗಳ ಬಗ್ಗೆ ತಿಳಿದಿರಲಿಲ್ಲ. ಮಾಧ್ಯಮಗಳು ಹಲವಾರು ಪ್ರಶ್ನೆಗಳನ್ನು ಕೇಳುತ್ತಿರುವುದರಿಂದ ಅದರ ಬಗ್ಗೆ ಚರ್ಚಿಸಲಾಗುತ್ತಿದೆ ಎಂದು ಭಾವಿಸುತ್ತೇನೆ” ಎಂದು ಅವರು ಹೇಳಿದ್ದಾರೆ. ಸಿದ್ದರಾಮಯ್ಯ ಮುಂದಿನ
ಕಬ್ಬು ಬೆಳೆಯುವ ರೈತರ ಎಲ್ಲಾ ಬಾಕಿಗಳನ್ನು ಪಾವತಿಸಲಾಗುವುದು
ಇದೇ ವೇಳೆ ಅವರು, ಕೆಲವು ಸಕ್ಕರೆ ಕಾರ್ಖಾನೆಗಳು ರೈತರ ಬಾಕಿ ಮೊತ್ತವನ್ನು ಶೇಕಡಾ 80 ರಷ್ಟು ಮತ್ತು ಕೆಲವು ಶೇಕಡಾ 75 ರಷ್ಟು ಪಾವತಿಸಿವೆ ಎಂದು ಹೇಳಿದ್ದಾರೆ. ಇದರಲ್ಲಿ ಒಂದು ಭಾಗವು ಶೇಖಡಾ 55 ರಿಂದ ಶೇಕಡಾ 60 ರವರೆಗೆ ಪಾವತಿಸಿದೆ. ಶೀಘ್ರದಲ್ಲೇ ಎಲ್ಲಾ ಬಾಕಿಗಳನ್ನು ಪಾವತಿಸಲಾಗುವುದು ಎಂದು ನಾವು ಭಾವಿಸುತ್ತೇವೆ ಎಂದು ಸಚಿವರು ಹೇಳಿದ್ದಾರೆ.
ರಾಜ್ಯಾದ್ಯಂತ ಸುಮಾರು 72 ಸಕ್ಕರೆ ಕಾರ್ಖಾನೆಗಳಿವೆ ಎಂದು ಸಚಿವರು ಹೇಳಿದ್ದು, “ಈ ಹಿಂದೆ ಅವರು ಕಬ್ಬು ತೂಕ ಮಾಡಲು ಅನಲಾಗ್ ಮಾಪಕಗಳನ್ನು ಬಳಸುತ್ತಿದ್ದರು. ಆದರೆ ಈಗ ಅವುಗಳನ್ನು ಡಿಜಿಟಲ್ ಮಾಪಕಗಳಿಂದ ಬದಲಾಯಿಸಲಾಗಿದೆ. ಸಕ್ಕರೆ ಕಾರ್ಖಾನೆಗಳಲ್ಲಿ ತೂಕ ಮಾಪಕಗಳನ್ನು ಸ್ಥಾಪಿಸಲು ನಾವು ನಿರ್ಧರಿಸಿದ್ದೇವೆ” ಎಂದು ಹೇಳಿದ್ದಾರೆ.
ಮೊದಲ ಹಂತದಲ್ಲಿ ಎರಡು ಮೊಬೈಲ್ ತೂಕ ಮಾಪಕಗಳನ್ನು ಅಳವಡಿಸಲಾಗುವುದು ಮತ್ತು ಸ್ಥಳಾವಕಾಶ ಲಭ್ಯತೆಯ ಮೇಲೆ ಸಕ್ಕರೆ ಕಾರ್ಖಾನೆಗಳಲ್ಲಿ ಐದರಿಂದ ಆರು ಮಾಪಗಳನ್ನು ಅಳವಡಿಸಲಾಗುವುದು” ಎಂದು ಸಚಿವ ಪಾಟೀಲ್ ಹೇಳಿದ್ದಾರೆ.
ಇದನ್ನೂಓದಿ: ರಾಜಸ್ಥಾನ| ಪೊಲೀಸ್ ಭದ್ರತೆಯಲ್ಲಿ ದಲಿತ ವರನ ಕುದುರೆ ಮೆರವಣಿಗೆ; ಬೆದರಿಕೆ ಹಾಕಿದ ಪ್ರಬಲ ಜಾತಿಯ ನಾಲ್ವರ ಬಂಧನ
ರಾಜಸ್ಥಾನ| ಪೊಲೀಸ್ ಭದ್ರತೆಯಲ್ಲಿ ದಲಿತ ವರನ ಕುದುರೆ ಮೆರವಣಿಗೆ; ಬೆದರಿಕೆ ಹಾಕಿದ ಪ್ರಬಲ ಜಾತಿಯ ನಾಲ್ವರ ಬಂಧನ


