Homeಕರ್ನಾಟಕಮುಂದಿನ ಅವಧಿಗೂ ಸಿದ್ದರಾಮಯ್ಯ ಅವರೇ ಸಿಎಂ ಆದರೆ ತಪ್ಪೇನಿಲ್ಲ: ಸಚಿವ ಶಿವಾನಂದ ಪಾಟೀಲ್

ಮುಂದಿನ ಅವಧಿಗೂ ಸಿದ್ದರಾಮಯ್ಯ ಅವರೇ ಸಿಎಂ ಆದರೆ ತಪ್ಪೇನಿಲ್ಲ: ಸಚಿವ ಶಿವಾನಂದ ಪಾಟೀಲ್

- Advertisement -
- Advertisement -

ಸಿದ್ದರಾಮಯ್ಯ ಅವರು ಮುಂದಿನ ಅವಧಿಗೂ ಮುಖ್ಯಮಂತ್ರಿ ಆಗಿ ಮುಂದುವರಿಯುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಸಂಪುಟ ಸಚಿವ ಶಿವಾನಂದ ಪಾಟೀಲ್ ಅವರು ಸೋಮವಾರ ಬೆಳಗಾವಿಯಲ್ಲಿ ಹೇಳಿದ್ದಾರೆ. ಸಿದ್ದರಾಮಯ್ಯ ಮುಂದಿನ

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಸಿದ್ದರಾಮಯ್ಯ ಮುಂದಿನ ಅವಧಿಗೂ ಸಿಎಂ ಆಗಿ ಮುಂದುವರಿಯುತ್ತಾರೆ ಎಂದು ಕೆಲವು ಸಚಿವರು ಹೇಳಿದ್ದರಲ್ಲಿ ಯಾವುದೇ ತಪ್ಪಿಲ್ಲ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಭವಿಷ್ಯವನ್ನು ನಾನು ಊಹಿಸಲು ಸಾಧ್ಯವಿಲ್ಲ, ಆದರೆ ಸಿದ್ದರಾಮಯ್ಯ ಮುಂದುವರಿಯಬೇಕೆ ಅಥವಾ ಅವರನ್ನು ಬದಲಾಯಿಸಬೇಕೆ ಎಂಬ ನಿರ್ಧಾರವನ್ನು ಕಾಂಗ್ರೆಸ್ ಶಾಸಕಾಂಗ ಪಕ್ಷ ಮತ್ತು ಹೈಕಮಾಂಡ್ ತೆಗೆದುಕೊಳ್ಳುತ್ತದೆ” ಎಂದು ಅವರು ಹೇಳಿದ್ದಾರೆ.

ನಾಯಕತ್ವ ಬದಲಾವಣೆಯ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, “ನನಗೆ ಇದರ ಕಾರಣಗಳ ಬಗ್ಗೆ ತಿಳಿದಿರಲಿಲ್ಲ. ಮಾಧ್ಯಮಗಳು ಹಲವಾರು ಪ್ರಶ್ನೆಗಳನ್ನು ಕೇಳುತ್ತಿರುವುದರಿಂದ ಅದರ ಬಗ್ಗೆ ಚರ್ಚಿಸಲಾಗುತ್ತಿದೆ ಎಂದು ಭಾವಿಸುತ್ತೇನೆ” ಎಂದು ಅವರು ಹೇಳಿದ್ದಾರೆ. ಸಿದ್ದರಾಮಯ್ಯ ಮುಂದಿನ

ಕಬ್ಬು ಬೆಳೆಯುವ ರೈತರ ಎಲ್ಲಾ ಬಾಕಿಗಳನ್ನು ಪಾವತಿಸಲಾಗುವುದು

ಇದೇ ವೇಳೆ ಅವರು, ಕೆಲವು ಸಕ್ಕರೆ ಕಾರ್ಖಾನೆಗಳು ರೈತರ ಬಾಕಿ ಮೊತ್ತವನ್ನು ಶೇಕಡಾ 80 ರಷ್ಟು ಮತ್ತು ಕೆಲವು ಶೇಕಡಾ 75 ರಷ್ಟು ಪಾವತಿಸಿವೆ ಎಂದು ಹೇಳಿದ್ದಾರೆ. ಇದರಲ್ಲಿ ಒಂದು ಭಾಗವು ಶೇಖಡಾ 55 ರಿಂದ ಶೇಕಡಾ 60 ರವರೆಗೆ ಪಾವತಿಸಿದೆ. ಶೀಘ್ರದಲ್ಲೇ ಎಲ್ಲಾ ಬಾಕಿಗಳನ್ನು ಪಾವತಿಸಲಾಗುವುದು ಎಂದು ನಾವು ಭಾವಿಸುತ್ತೇವೆ ಎಂದು ಸಚಿವರು ಹೇಳಿದ್ದಾರೆ.

ರಾಜ್ಯಾದ್ಯಂತ ಸುಮಾರು 72 ಸಕ್ಕರೆ ಕಾರ್ಖಾನೆಗಳಿವೆ ಎಂದು ಸಚಿವರು ಹೇಳಿದ್ದು, “ಈ ಹಿಂದೆ ಅವರು ಕಬ್ಬು ತೂಕ ಮಾಡಲು ಅನಲಾಗ್ ಮಾಪಕಗಳನ್ನು ಬಳಸುತ್ತಿದ್ದರು. ಆದರೆ ಈಗ ಅವುಗಳನ್ನು ಡಿಜಿಟಲ್ ಮಾಪಕಗಳಿಂದ ಬದಲಾಯಿಸಲಾಗಿದೆ. ಸಕ್ಕರೆ ಕಾರ್ಖಾನೆಗಳಲ್ಲಿ ತೂಕ ಮಾಪಕಗಳನ್ನು ಸ್ಥಾಪಿಸಲು ನಾವು ನಿರ್ಧರಿಸಿದ್ದೇವೆ” ಎಂದು ಹೇಳಿದ್ದಾರೆ.

ಮೊದಲ ಹಂತದಲ್ಲಿ ಎರಡು ಮೊಬೈಲ್ ತೂಕ ಮಾಪಕಗಳನ್ನು ಅಳವಡಿಸಲಾಗುವುದು ಮತ್ತು ಸ್ಥಳಾವಕಾಶ ಲಭ್ಯತೆಯ ಮೇಲೆ ಸಕ್ಕರೆ ಕಾರ್ಖಾನೆಗಳಲ್ಲಿ ಐದರಿಂದ ಆರು ಮಾಪಗಳನ್ನು ಅಳವಡಿಸಲಾಗುವುದು” ಎಂದು ಸಚಿವ ಪಾಟೀಲ್ ಹೇಳಿದ್ದಾರೆ.

ಇದನ್ನೂಓದಿ:  ರಾಜಸ್ಥಾನ| ಪೊಲೀಸ್ ಭದ್ರತೆಯಲ್ಲಿ ದಲಿತ ವರನ ಕುದುರೆ ಮೆರವಣಿಗೆ; ಬೆದರಿಕೆ ಹಾಕಿದ ಪ್ರಬಲ ಜಾತಿಯ ನಾಲ್ವರ ಬಂಧನ

ರಾಜಸ್ಥಾನ| ಪೊಲೀಸ್ ಭದ್ರತೆಯಲ್ಲಿ ದಲಿತ ವರನ ಕುದುರೆ ಮೆರವಣಿಗೆ; ಬೆದರಿಕೆ ಹಾಕಿದ ಪ್ರಬಲ ಜಾತಿಯ ನಾಲ್ವರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...