Homeಮುಖಪುಟಬಿಜೆಪಿ ಮೂಲತಃ ಸಂವಿಧಾನ ವಿರೋಧಿ ಪಕ್ಷ : ಯತ್ನಾಳ್ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ ಸಿದ್ದರಾಮಯ್ಯ

ಬಿಜೆಪಿ ಮೂಲತಃ ಸಂವಿಧಾನ ವಿರೋಧಿ ಪಕ್ಷ : ಯತ್ನಾಳ್ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ ಸಿದ್ದರಾಮಯ್ಯ

ಸ್ವಾತಂತ್ರ್ಯ ಹೋರಾಟಗಾರರಿಗೆ ಅವಮಾನಿಸುವುದು ಬಿಜೆಪಿ ಮತ್ತು ಸಂಘಪರಿವಾರದ ಸಂಸ್ಕೃತಿಯಾಗಿದೆ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

- Advertisement -
- Advertisement -

ಸಂವಿಧಾನ ಹಾಗೂ ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿ ನಡೆದುಕೊಂಡಿರುವ ಯತ್ನಾಳ್‌ ಶಾಸಕರಾಗಿ ಮುಂದುವರೆಯುವ ಅರ್ಹತೆ ಕಳೆದುಕೊಂಡಿದ್ದಾರೆ. ಸ್ವಾತಂತ್ರ್ಯ ಹೋರಾಟಗಾರರಿಗೆ ಅವಮಾನಿಸುವುದು ಬಿಜೆಪಿ ಮತ್ತು ಸಂಘಪರಿವಾರದ ಸಂಸ್ಕೃತಿಯಾಗಿದೆ. ಹಾಗಾಗಿ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ್ದೇವೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬಿಜೆಪಿ‌ ನಾಯಕರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿಲ್ಲ, ಹಾಗಾಗಿ ಸ್ವಾತಂತ್ರ್ಯ ಹೋರಾಟದ ಬಗ್ಗೆ ಅವರಿಗೆ ಎಳ್ಳಷ್ಟು ಗೌರವವಿಲ್ಲ. ಇದೊಂದು ಷಡ್ಯಂತ್ರವಾಗಿದ್ದು, ಈ ಹೇಳಿಕೆಯ ಹಿಂದೆ ಬಿಜೆಪಿಯ ಹಲವು ನಾಯಕರ ಕುಮ್ಮಕ್ಕಿದೆ ಎಂಬ ಅನುಮಾನವಿದೆ. ರಾಜ್ಯಪಾಲರು ಕೂಡಲೇ ಮಧ್ಯ ಪ್ರವೇಶಿಸಿ ಸೂಕ್ತ ಕ್ರಮ ಜರುಗಿಸುವಂತೆ ಇಂದು ಮನವಿ ಮಾಡಿದ್ದೇವೆ. ರಾಜ್ಯಪಾಲರು ನಮ್ಮ ಮನವಿಗೆ ಸಕಾರಾತ್ಮಕ ಸ್ಪಂದನೆ‌ ನೀಡಿದ್ದು, ಸಂವಿಧಾನಾತ್ಮಕ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಯತ್ನಾಳ್‌ರಂತಹ ನಾಯಕರು ಇಂದಿನ ಸಮಾಜಕ್ಕೆ ಮಾದರಿಯಾಗಬಾರದು, ದೇಶದ ಸ್ವಾತಂತ್ರ್ಯ ಹೋರಾಟಗಾರರನ್ನು ಗೌರವಿಸಬೇಕೆಂಬ ಸಂದೇಶ ಸಮಾಜಕ್ಕೆ ತಲುಪಬೇಕೆಂಬುದಷ್ಟೇ ನಮ್ಮ ಉದ್ದೇಶ ಎಂದು ಅವರು ಹೇಳಿದ್ದಾರೆ.

ನಾವು ಸ್ಪೀಕರ್ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಲಿದ್ದೇವೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿರುವುದು ಸತ್ಯಕ್ಕೆ ದೂರವಾದ ವಿಚಾರ. ಸಂವಿಧಾನದ ಪರಿಚ್ಚೇದ 175ರಡಿ ತಪ್ಪು ಮಾಡಿರುವ ಶಾಸಕರ ವಿರುದ್ಧ ಕ್ರಮಕೈಗೊಳ್ಳುವಂತೆ ನಿರ್ದೇಶನ ನೀಡಲು ರಾಜ್ಯಪಾಲರಿಗೆ ಅಧಿಕಾರ ಇದೆ. ಅದನ್ನಷ್ಟೇ ಕೇಳಿಕೊಂಡಿದ್ದೇವೆ. ಈ ಬಗ್ಗೆ ತಪ್ಪು ಮಾಹಿತಿ ಬೇಡ. ನಮ್ಮ ಪ್ರತಿಭಟನೆಯನ್ನು ಬಳಸಿಕೊಂಡು ಜನವಿರೋಧಿಯಾಗಿರುವ ಕೆಲವು ಮಹತ್ವದ ಮಸೂದೆಗಳಿಗೆ ಅಂಗೀಕಾರ ಪಡೆಯುವ ಹುನ್ನಾರವನ್ನು ಬಿಜೆಪಿ ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಹಿತದೃಷ್ಟಿಯಿಂದ ನಮ್ಮ ಧರಣಿ ವಾಪಸು ಪಡೆದು ಕಲಾಪದಲ್ಲಿ ಪಾಲ್ಗೊಳ್ಳಲು ನಿರ್ಧರಿಸಿದ್ದೇವೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಬಿಜೆಪಿ ಮೂಲತಃ ಸಂವಿಧಾನ ವಿರೋಧಿ ಪಕ್ಷ. ಏಕಪಕ್ಷೀಯ ಚರ್ಚೆಯ ನೆಪದಲ್ಲಿ ಸಂವಿಧಾನದ ಬಗ್ಗೆ ಅವರು ಸುಳ್ಳು ಮಾಹಿತಿಯನ್ನು ನೀಡಿ ಜನರ ದಾರಿ ತಪ್ಪಿಸುವ ಸಾಧ್ಯತೆ ಇದೆ. ಈ ಕುತಂತ್ರವನ್ನು ವಿಫಲಗೊಳಿಸಲು ಚರ್ಚೆಯಲ್ಲಿ ಭಾಗವಹಿಸಲು ಧರಣಿ ವಾಪಸು ಪಡೆದಿದ್ದೇವೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....