Homeಮುಖಪುಟದೇಶ ಮತ್ತು ಸಂವಿಧಾನ ಪ್ರೀತಿಸುವ ಪ್ರತಿಯೊಬ್ಬರು ಜಿಗ್ನೇಶ್ ಮೇವಾನಿ ಜೊತೆಗಿದ್ದಾರೆ: ಸಿದ್ದರಾಮಯ್ಯ

ದೇಶ ಮತ್ತು ಸಂವಿಧಾನ ಪ್ರೀತಿಸುವ ಪ್ರತಿಯೊಬ್ಬರು ಜಿಗ್ನೇಶ್ ಮೇವಾನಿ ಜೊತೆಗಿದ್ದಾರೆ: ಸಿದ್ದರಾಮಯ್ಯ

- Advertisement -
- Advertisement -

ಯುವ ದಲಿತ ಹೋರಾಟಗಾರ ಮತ್ತು ಗುಜರಾತ್‌ನ ಶಾಸಕ ಜಿಗ್ನೇಶ್ ಮೇವಾನಿಯವರ ಬಂಧನವು ಮೋದಿ ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ಸಾಕ್ಷಿಯಾಗಿದೆ ಎಂದು ಕರ್ನಾಟಕದ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು ಅಭಿಪ್ರಾಯಪಟ್ಟಿದ್ದಾರೆ.

“ಸುಳ್ಳು ಆರೋಪದ ಮೇಲೆ ಗುಜರಾತ್ ಶಾಸಕ ಮತ್ತು ದಲಿತ ಹೋರಾಟಗಾರ ಜಿಗ್ನೇಶ್ ಮೇವಾನಿಯವರ ಬಂಧನದ ಮೂಲಕ ಬಿಜೆಪಿ ಸರ್ಕಾರ ಅಭಿವ್ಯಕ್ತಿ ಸ್ವಾತಂತ್ರ್ಯದ ಕೊರಳು ಹಿಚುಕಲು ಹೊರಟಿರುವುದು ಅತ್ಯಂತ ಖಂಡನೀಯ. ರಾಜಕೀಯ ವಿರೋಧಿಗಳನ್ನು ಸೈದ್ಧಾಂತಿಕವಾಗಿ ಎದುರಿಸಲಾಗದೆ ಈ ರೀತಿ ಬಾಯಿಮುಚ್ಚಿಸುವುದು ಸರ್ವಾಧಿಕಾರಿ ಧೋರಣೆ” ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಯಾವುದೇ ಹೇಳಿಕೆಗಳಿಂದ ಯಾರಿಗಾದರೂ ಮಾನ ನಷ್ಟವಾಗಿದ್ದರೆ ಸಂಬಂಧಿತರಿಗೆ ನ್ಯಾಯಾಲಯದಲ್ಲಿ ನ್ಯಾಯ ಕೇಳಲು ಅವಕಾಶ ಇದೆ. ಇದರ ಬದಲಿಗೆ ಪೊಲೀಸರನ್ನು ದುರುಪಯೋಗಪಡಿಸಿಕೊಂಡು ತಮ್ಮ ರಾಜಕೀಯ ವಿರೋಧಿಗಳನ್ನು ಹಣಿಯಲು ಹೊರಟಿರುವುದು ಫ್ಯಾಸಿಸ್ಟ್ ಬುದ್ದಿ. ಭಾರತದಲ್ಲಿ ಇದು ನಡೆಯದು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ದೇಶವನ್ನು ಪ್ರೀತಿಸುವ, ಸಂವಿಧಾನದ ಮೇಲೆ ನಂಬಿಕೆ ಇಟ್ಟಿರುವ ಪ್ರತಿಯೊಬ್ಬರೂ ಜಿಗ್ನೇಶ್
ಜೊತೆ ಇದ್ದಾರೆ. ಒಬ್ಬ ಜಿಗ್ನೇಶ್ ರನ್ನು ಜೈಲಿಗೆ ಕಳಿಸಿದ್ದೇವೆ ಎಂದು ಬೀಗುವುದು ಬೇಡ, ಈ ಬೆಳವಣಿಗೆಯಿಂದಾಗಿ ದೇಶದ ತುಂಬ ನೂರಾರು ಜಿಗ್ನೇಶರು ಹುಟ್ಟಿಕೊಂಡು ಹೋರಾಟವನ್ನು ಮುಂದುವರಿಸಲಿದ್ದಾರೆ ಎನ್ನುವುದು ನೆನಪಲ್ಲಿರಲಿ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಮೋದಿ ಮತ್ತು ಗೋಡ್ಸೆ ಬಗ್ಗೆ ಟ್ವೀಟ್‌ ಮಾಡಿದ್ದಕ್ಕಾಗಿ ಗುಜರಾತ್‌ ಶಾಸಕ, ಹೋರಾಟಗಾರ ಜಿಗ್ನೇಶ್‌ ಮೇವಾನಿಯ ಬಂಧನ

ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ಅವರನ್ನು ಅಸ್ಸಾಂ ಪೊಲೀಸರು ಕಳೆದ ಬುಧವಾರ ತಡರಾತ್ರಿ ಗುಜರಾತ್‌ನ ಪಾಲನ್‌ಪುರ ಸರ್ಕ್ಯೂಟ್ ಹೌಸ್‌ನಿಂದ ಬಂಧಿಸಿದ್ದರು. ಪ್ರಧಾನಿ ಮೋದಿ ಬಗ್ಗೆ ಟ್ವೀಟ್ ಮಾಡಿದ್ದಕ್ಕೆ ಅಸ್ಸಾಂನ ಬಿಜೆಪಿ ನಾಯಕರೊಬ್ಬರು ಪೊಲೀಸರಿಗೆ ನೀಡಿದ ದೂರಿನ ಮೇಲೆ ಅವರನ್ನು ಬಂಧಿಸಲಾಗಿದೆ.

ಗುಜರಾತ್‌ನ ವಡ್ಗಾಮ್‌ ಕ್ಷೇತ್ರದ ಸ್ವತಂತ್ರ ಶಾಸಕರಾಗಿರುವ ಜಿಗ್ನೇಶ್‌ ಮೇವಾನಿ ದಲಿತ ಹಕ್ಕುಗಳ ಹೋರಾಟಗಾರ ಮತ್ತು ರಾಷ್ಟ್ರೀಯ ದಲಿತ ಅಧಿಕಾರ ಮಂಚ್‌ನ ಸಂಚಾಲಕರೂ ಆಗಿದ್ದಾರೆ. ಅವರು ಕಳೆದ ವರ್ಷ ಕಾಂಗ್ರೆಸ್‌ಗೆ ಬೆಂಬಲ ಘೋಷಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...