Homeಮುಖಪುಟಮೋದಿಯವರ 8 ವರ್ಷದ ಆಡಳಿತದಲ್ಲಿ ದೇಶದ ಅಭಿವೃದ್ದಿ 20 ವರ್ಷ ಹಿಂದಕ್ಕೆ ಕುಸಿದಿದೆ: ಸಿದ್ದರಾಮಯ್ಯ

ಮೋದಿಯವರ 8 ವರ್ಷದ ಆಡಳಿತದಲ್ಲಿ ದೇಶದ ಅಭಿವೃದ್ದಿ 20 ವರ್ಷ ಹಿಂದಕ್ಕೆ ಕುಸಿದಿದೆ: ಸಿದ್ದರಾಮಯ್ಯ

- Advertisement -
- Advertisement -

ಮೋದಿಯವರ ನೇತೃತ್ವದ ಬಿಜೆಪಿ ಸರ್ಕಾರದ 8 ವರ್ಷದ ಆಳ್ವಿಕೆಯಲ್ಲಿ ದೇಶದ ಅಭಿವೃದ್ಧಿ 20 ವರ್ಷದಷ್ಟು ಹಿಂದಕ್ಕೆ ಕುಸಿದಿದೆ. ದೇಶ ವಿಶ್ವಗುರುವಾಗುವ ಬದಲು ಪಾತಾಳದತ್ತ ಕುಸಿಯುತ್ತಿದೆ. ಇದನ್ನು ನಾನು ಹೇಳುತ್ತಿರುವುದಲ್ಲ ಬದಲಿಗೆ ಸರ್ಕಾರದ ದಾಖಲೆಗಳೇ ಹೇಳುತ್ತಿವೆ ಎಂದು ವಿರೋಧ ಪಕ್ಷದ ಮುಖಂಡ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ದೇಶ ಹಿಂದೆಂದೂ ಇಲ್ಲದಷ್ಟು ಸಾಲದ ಸುಳಿಗೆ ಸಿಲುಕಿದೆ. ರೂಪಾಯಿಯ ಬೆಲೆ ಪಾತಾಳಕ್ಕೆ ಕುಸಿಯುತ್ತಿದೆ. ಬೆಲೆ ಏರಿಕೆಯು ಹಿಂದೆಂದೂ ಇಲ್ಲದ ಮಟ್ಟಕ್ಕೆ ಮುಟ್ಟಿದೆ. ಹಣದುಬ್ಬರ ಕಳೆದ 17 ವರ್ಷಗಳಲ್ಲಿ ತೀವ್ರಗತಿಗೆ ಮುಟ್ಟಿದೆ. ನಿರುದ್ಯೋಗ ತಾರಕಕ್ಕೇರಿದೆ. ರಾಜ್ಯಗಳ ಆರ್ಥಿಕತೆ ಕುಸಿದು ಹೋಗುತ್ತಿದೆ. ಒಕ್ಕೂಟ ವ್ಯವಸ್ಥೆ ಶಿಥಿಲವಾಗುತ್ತಿದೆ. ಇದರ ಜೊತೆಯಲ್ಲಿ ದೇಶದ ಪ್ರಜಾತಾಂತ್ರಿಕೆಯೂ ಭಯಭೀತವಾಗಿದೆ” ಎಂದಿದ್ದಾರೆ.

ಅಮೇರಿಕಾದಂತಹ ದೇಶಗಳಿಗೆ ಆರ್ಥಿಕತೆಯನ್ನು ನಿಭಾಯಿಸುವುದು ಹೇಗೆ ಎಂದು ಹೇಳಿಕೊಟ್ಟು ಮಾದರಿಯಾಗಿದ್ದ ಡಾ. ಮನಮೋಹನ್‌ ಸಿಂಗರವರು ರೂಪಿಸಿ ತಲೆ ಎತ್ತಿ ನಿಲ್ಲವಂತೆ ಮಾಡಿದ್ದ ಭಾರತದ ಆರ್ಥಿಕತೆಯನ್ನು ಪ್ರಧಾನಿ ನರೇಂದ್ರ ಮೋದಿಯವರ ದುರಾಡಳಿತವು ನೆಲ ಕಚ್ಚುವಂತೆ ಮಾಡಿದೆ. ಇದೇ ಅವರ ಎಂಟು ವರ್ಷಗಳ ಸಾಧನೆ ಎಂದು ಅವರು ವ್ಯಂಗ್ಯವಾಡಿದ್ದಾರೆ.

ಡಿ ಮಾನಿಟೈಸೇಷನ್- ಜಿಎಸ್‍ಟಿ ವ್ಯವಸ್ಥೆ, ಕೊರೋನ ಸಾಂಕ್ರಾಮಿಕದ ಎಡಬಿಡಂಗಿ ನಿರ್ವಹಣೆಗಳು ದೇಶದ ಬೆನ್ನುಮೂಳೆಯನ್ನು ಟೊಳ್ಳು ಮಾಡಿವೆ. ದೇಶದ ಜನರು ಕಷ್ಟಪಟ್ಟು ಕಟ್ಟಿದ್ದ ಲಾಭದಾಯಕ ಸಂಸ್ಥೆ/ಕಂಪೆನಿ/ಕಾರ್ಖಾನೆಗಳನ್ನು ಖಾಸಗಿಯವರಿಗೆ ಬಿಡಿಗಾಸಿಗೆ ಮಾರಾಟ ಮಾಡಲಾಗುತ್ತಿದೆ. ರೈತ, ಕಾರ್ಮಿಕ, ಮಹಿಳೆ, ಯುವಜನರ ವಿರೋಧಿಯಾದ ಕಾನೂನುಗಳನ್ನು ಜಾರಿಗೆ ತಂದು ಮೂಲಕ ಜನರನ್ನು ಶತ್ರುಗಳಂತೆ ಭಾವಿಸಿ ದಮನಿಸಲಾಗುತ್ತಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ದೇಶದ ಸಾಲವನ್ನು ಯಾವ ಮಟ್ಟಕ್ಕೆ ಏರಿಸಲಾಗಿದೆಯೆಂದರೆ ಸರ್ಕಾರದ ದಾಖಲೆಗಳ ಪ್ರಕಾರ 2014 ರ ಮಾರ್ಚ್ ವೇಳೆಗೆ ಕೇಂದ್ರ ಸರ್ಕಾರ ಮಾಡಿರುವ ಸಾಲ 53.11 ಲಕ್ಷ ಕೋಟಿ ರೂಗಳಷ್ಟಿತ್ತು. ಇದು ದೇಶವು ಸ್ವಾತಂತ್ರ್ಯ ಗಳಿಸಿಕೊಂಡಾಗಿನಿಂದ ಮಾಡಿದ್ದ ಸಾಲ. ಈ ಸಾಲವು 2019-20 ರ ವೇಳೆಗೆ 106.45 ಲಕ್ಷ ಕೋಟಿಗೆ ಏರಿಕೆಯಾಯಿತು. 2022 ರ ಮಾರ್ಚ್-31 ರ ವೇಳೆಗೆ 139.57 ಲಕ್ಷ ಕೋಟಿಗಳಿಗೆ ತಲುಪಿದೆ. 2023 ರ ಮಾರ್ಚ್ ಅಂತ್ಯದ ವೇಳೆಗೆ 155 ಲಕ್ಷ ಕೋಟಿಗೆ ತಲುಪುವ ನಿರೀಕ್ಷೆಯಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕುವೆಂಪು, ಸ್ತ್ರೀದ್ವೇಷಿ ಮತ್ತು ರೇಪ್‌ ಸಮರ್ಥನೆಯ ಟ್ವೀಟ್‌ಗಳು ವೈರಲ್‌‌: ಫೇಸ್‌ಬುಕ್ & ಟ್ವಿಟರ್‌ಗೆ ಲಾಕ್‌ ಮಾಡಿದ ರೋಹಿತ್ ಚಕ್ರತೀರ್ಥ

ಕೇಂದ್ರ ಸರ್ಕಾರ ಕಾರ್ಪೊರೇಟ್ ಕಂಪೆನಿಗಳ ಪರವಾದ ನಿಲುವು ತಾಳಿರುವುದರಿಂದ, ಜನಪರ ಆರ್ಥಿಕ ನೀತಿ ಇಲ್ಲದಿರುವುದರಿಂದ ದೇಶವನ್ನು ಸಾಲದ ಸುನಾಮಿಗೆ ಸಿಲುಕಿಸಿದ್ದಾರೆ. ರಾಜ್ಯಕ್ಕೆ ನ್ಯಾಯಯುತವಾಗಿ ಕೊಡಬೇಕಾದಷ್ಟು ಅನುದಾನಗಳನ್ನು, ತೆರಿಗೆ ಹಂಚಿಕೆಯನ್ನು ಮಾಡದಿರುವುದರಿಂದ ನಮ್ಮ ರಾಜ್ಯವು ಸಾಲದ ಸುಳಿಗೆ ಸಿಲುಕಿಕೊಂಡಿದೆ. 15 ನೇ ಹಣಕಾಸು ಆಯೋಗವು ನಮ್ಮ ರಾಜ್ಯಕ್ಕೆ ಹೆಚ್ಚುವರಿಯಾಗಿ 5495 ಕೋಟಿ ರೂ ಗಳನ್ನು ಶಿಫಾರಸ್ಸು ಮಾಡಿದ್ದರೂ ಅದನ್ನು ಕೊಡುವುದಿಲ್ಲವೆಂದು ಹೇಳಿ ರಾಜ್ಯದ ಜನರ ಬೆನ್ನಿಗೆ ಇರಿದ ನಿರ್ಮಲಾ ಸೀತಾರಾಮನ್ ಅವರನ್ನು ಮತ್ತೆ ರಾಜ್ಯದಿಂದ ರಾಜ್ಯಸಭೆಗೆ ಆರಿಸಲು ಬಿಜೆಪಿ ಟಿಕೆಟ್ ನೀಡಿ ನಮ್ಮ ಜನರಿಗೆ ಅವಮಾನ ಮಾಡಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ರಾಜ್ಯಸಭೆ ಚುನಾವಣೆ ಕಾಂಗ್ರೆಸ್‌ ಎರಡನೇ ಅಭ್ಯರ್ಥಿ ನಾಮಪತ್ರವನ್ನು ಹಿಂಪಡೆಯುವ ಪ್ರಶ್ನೆಯೇ ಇಲ್ಲ. ಗೆಲ್ಲುವ ವಿಶ್ವಾಸದಿಂದಲೇ ನಾವು ನಾಮಪತ್ರ ಸಲ್ಲಿಸಿದ್ದೇವೆ. ನಮಗೂ ಬೇರೆ ಬೇರೆ ಮತಗಳು ಬರಲಿವೆ. ಆದರೆ, ಅದು ಹೇಗೆ ಎಂದು ಈಗ ಹೇಳುವುದಿಲ್ಲ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮೋದಿಯವರ ವೈಫಲ್ಯವನ್ನು ಸಿದ್ದರಾಮಯ್ಯ ಸರಿಯಾಗಿ ಗುರುತಿಸಿದ್ದಾರೆ.

LEAVE A REPLY

Please enter your comment!
Please enter your name here

- Advertisment -

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...