Homeಮುಖಪುಟಮೋದಿಯವರ 8 ವರ್ಷದ ಆಡಳಿತದಲ್ಲಿ ದೇಶದ ಅಭಿವೃದ್ದಿ 20 ವರ್ಷ ಹಿಂದಕ್ಕೆ ಕುಸಿದಿದೆ: ಸಿದ್ದರಾಮಯ್ಯ

ಮೋದಿಯವರ 8 ವರ್ಷದ ಆಡಳಿತದಲ್ಲಿ ದೇಶದ ಅಭಿವೃದ್ದಿ 20 ವರ್ಷ ಹಿಂದಕ್ಕೆ ಕುಸಿದಿದೆ: ಸಿದ್ದರಾಮಯ್ಯ

- Advertisement -
- Advertisement -

ಮೋದಿಯವರ ನೇತೃತ್ವದ ಬಿಜೆಪಿ ಸರ್ಕಾರದ 8 ವರ್ಷದ ಆಳ್ವಿಕೆಯಲ್ಲಿ ದೇಶದ ಅಭಿವೃದ್ಧಿ 20 ವರ್ಷದಷ್ಟು ಹಿಂದಕ್ಕೆ ಕುಸಿದಿದೆ. ದೇಶ ವಿಶ್ವಗುರುವಾಗುವ ಬದಲು ಪಾತಾಳದತ್ತ ಕುಸಿಯುತ್ತಿದೆ. ಇದನ್ನು ನಾನು ಹೇಳುತ್ತಿರುವುದಲ್ಲ ಬದಲಿಗೆ ಸರ್ಕಾರದ ದಾಖಲೆಗಳೇ ಹೇಳುತ್ತಿವೆ ಎಂದು ವಿರೋಧ ಪಕ್ಷದ ಮುಖಂಡ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ದೇಶ ಹಿಂದೆಂದೂ ಇಲ್ಲದಷ್ಟು ಸಾಲದ ಸುಳಿಗೆ ಸಿಲುಕಿದೆ. ರೂಪಾಯಿಯ ಬೆಲೆ ಪಾತಾಳಕ್ಕೆ ಕುಸಿಯುತ್ತಿದೆ. ಬೆಲೆ ಏರಿಕೆಯು ಹಿಂದೆಂದೂ ಇಲ್ಲದ ಮಟ್ಟಕ್ಕೆ ಮುಟ್ಟಿದೆ. ಹಣದುಬ್ಬರ ಕಳೆದ 17 ವರ್ಷಗಳಲ್ಲಿ ತೀವ್ರಗತಿಗೆ ಮುಟ್ಟಿದೆ. ನಿರುದ್ಯೋಗ ತಾರಕಕ್ಕೇರಿದೆ. ರಾಜ್ಯಗಳ ಆರ್ಥಿಕತೆ ಕುಸಿದು ಹೋಗುತ್ತಿದೆ. ಒಕ್ಕೂಟ ವ್ಯವಸ್ಥೆ ಶಿಥಿಲವಾಗುತ್ತಿದೆ. ಇದರ ಜೊತೆಯಲ್ಲಿ ದೇಶದ ಪ್ರಜಾತಾಂತ್ರಿಕೆಯೂ ಭಯಭೀತವಾಗಿದೆ” ಎಂದಿದ್ದಾರೆ.

ಅಮೇರಿಕಾದಂತಹ ದೇಶಗಳಿಗೆ ಆರ್ಥಿಕತೆಯನ್ನು ನಿಭಾಯಿಸುವುದು ಹೇಗೆ ಎಂದು ಹೇಳಿಕೊಟ್ಟು ಮಾದರಿಯಾಗಿದ್ದ ಡಾ. ಮನಮೋಹನ್‌ ಸಿಂಗರವರು ರೂಪಿಸಿ ತಲೆ ಎತ್ತಿ ನಿಲ್ಲವಂತೆ ಮಾಡಿದ್ದ ಭಾರತದ ಆರ್ಥಿಕತೆಯನ್ನು ಪ್ರಧಾನಿ ನರೇಂದ್ರ ಮೋದಿಯವರ ದುರಾಡಳಿತವು ನೆಲ ಕಚ್ಚುವಂತೆ ಮಾಡಿದೆ. ಇದೇ ಅವರ ಎಂಟು ವರ್ಷಗಳ ಸಾಧನೆ ಎಂದು ಅವರು ವ್ಯಂಗ್ಯವಾಡಿದ್ದಾರೆ.

ಡಿ ಮಾನಿಟೈಸೇಷನ್- ಜಿಎಸ್‍ಟಿ ವ್ಯವಸ್ಥೆ, ಕೊರೋನ ಸಾಂಕ್ರಾಮಿಕದ ಎಡಬಿಡಂಗಿ ನಿರ್ವಹಣೆಗಳು ದೇಶದ ಬೆನ್ನುಮೂಳೆಯನ್ನು ಟೊಳ್ಳು ಮಾಡಿವೆ. ದೇಶದ ಜನರು ಕಷ್ಟಪಟ್ಟು ಕಟ್ಟಿದ್ದ ಲಾಭದಾಯಕ ಸಂಸ್ಥೆ/ಕಂಪೆನಿ/ಕಾರ್ಖಾನೆಗಳನ್ನು ಖಾಸಗಿಯವರಿಗೆ ಬಿಡಿಗಾಸಿಗೆ ಮಾರಾಟ ಮಾಡಲಾಗುತ್ತಿದೆ. ರೈತ, ಕಾರ್ಮಿಕ, ಮಹಿಳೆ, ಯುವಜನರ ವಿರೋಧಿಯಾದ ಕಾನೂನುಗಳನ್ನು ಜಾರಿಗೆ ತಂದು ಮೂಲಕ ಜನರನ್ನು ಶತ್ರುಗಳಂತೆ ಭಾವಿಸಿ ದಮನಿಸಲಾಗುತ್ತಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ದೇಶದ ಸಾಲವನ್ನು ಯಾವ ಮಟ್ಟಕ್ಕೆ ಏರಿಸಲಾಗಿದೆಯೆಂದರೆ ಸರ್ಕಾರದ ದಾಖಲೆಗಳ ಪ್ರಕಾರ 2014 ರ ಮಾರ್ಚ್ ವೇಳೆಗೆ ಕೇಂದ್ರ ಸರ್ಕಾರ ಮಾಡಿರುವ ಸಾಲ 53.11 ಲಕ್ಷ ಕೋಟಿ ರೂಗಳಷ್ಟಿತ್ತು. ಇದು ದೇಶವು ಸ್ವಾತಂತ್ರ್ಯ ಗಳಿಸಿಕೊಂಡಾಗಿನಿಂದ ಮಾಡಿದ್ದ ಸಾಲ. ಈ ಸಾಲವು 2019-20 ರ ವೇಳೆಗೆ 106.45 ಲಕ್ಷ ಕೋಟಿಗೆ ಏರಿಕೆಯಾಯಿತು. 2022 ರ ಮಾರ್ಚ್-31 ರ ವೇಳೆಗೆ 139.57 ಲಕ್ಷ ಕೋಟಿಗಳಿಗೆ ತಲುಪಿದೆ. 2023 ರ ಮಾರ್ಚ್ ಅಂತ್ಯದ ವೇಳೆಗೆ 155 ಲಕ್ಷ ಕೋಟಿಗೆ ತಲುಪುವ ನಿರೀಕ್ಷೆಯಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕುವೆಂಪು, ಸ್ತ್ರೀದ್ವೇಷಿ ಮತ್ತು ರೇಪ್‌ ಸಮರ್ಥನೆಯ ಟ್ವೀಟ್‌ಗಳು ವೈರಲ್‌‌: ಫೇಸ್‌ಬುಕ್ & ಟ್ವಿಟರ್‌ಗೆ ಲಾಕ್‌ ಮಾಡಿದ ರೋಹಿತ್ ಚಕ್ರತೀರ್ಥ

ಕೇಂದ್ರ ಸರ್ಕಾರ ಕಾರ್ಪೊರೇಟ್ ಕಂಪೆನಿಗಳ ಪರವಾದ ನಿಲುವು ತಾಳಿರುವುದರಿಂದ, ಜನಪರ ಆರ್ಥಿಕ ನೀತಿ ಇಲ್ಲದಿರುವುದರಿಂದ ದೇಶವನ್ನು ಸಾಲದ ಸುನಾಮಿಗೆ ಸಿಲುಕಿಸಿದ್ದಾರೆ. ರಾಜ್ಯಕ್ಕೆ ನ್ಯಾಯಯುತವಾಗಿ ಕೊಡಬೇಕಾದಷ್ಟು ಅನುದಾನಗಳನ್ನು, ತೆರಿಗೆ ಹಂಚಿಕೆಯನ್ನು ಮಾಡದಿರುವುದರಿಂದ ನಮ್ಮ ರಾಜ್ಯವು ಸಾಲದ ಸುಳಿಗೆ ಸಿಲುಕಿಕೊಂಡಿದೆ. 15 ನೇ ಹಣಕಾಸು ಆಯೋಗವು ನಮ್ಮ ರಾಜ್ಯಕ್ಕೆ ಹೆಚ್ಚುವರಿಯಾಗಿ 5495 ಕೋಟಿ ರೂ ಗಳನ್ನು ಶಿಫಾರಸ್ಸು ಮಾಡಿದ್ದರೂ ಅದನ್ನು ಕೊಡುವುದಿಲ್ಲವೆಂದು ಹೇಳಿ ರಾಜ್ಯದ ಜನರ ಬೆನ್ನಿಗೆ ಇರಿದ ನಿರ್ಮಲಾ ಸೀತಾರಾಮನ್ ಅವರನ್ನು ಮತ್ತೆ ರಾಜ್ಯದಿಂದ ರಾಜ್ಯಸಭೆಗೆ ಆರಿಸಲು ಬಿಜೆಪಿ ಟಿಕೆಟ್ ನೀಡಿ ನಮ್ಮ ಜನರಿಗೆ ಅವಮಾನ ಮಾಡಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ರಾಜ್ಯಸಭೆ ಚುನಾವಣೆ ಕಾಂಗ್ರೆಸ್‌ ಎರಡನೇ ಅಭ್ಯರ್ಥಿ ನಾಮಪತ್ರವನ್ನು ಹಿಂಪಡೆಯುವ ಪ್ರಶ್ನೆಯೇ ಇಲ್ಲ. ಗೆಲ್ಲುವ ವಿಶ್ವಾಸದಿಂದಲೇ ನಾವು ನಾಮಪತ್ರ ಸಲ್ಲಿಸಿದ್ದೇವೆ. ನಮಗೂ ಬೇರೆ ಬೇರೆ ಮತಗಳು ಬರಲಿವೆ. ಆದರೆ, ಅದು ಹೇಗೆ ಎಂದು ಈಗ ಹೇಳುವುದಿಲ್ಲ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮೋದಿಯವರ ವೈಫಲ್ಯವನ್ನು ಸಿದ್ದರಾಮಯ್ಯ ಸರಿಯಾಗಿ ಗುರುತಿಸಿದ್ದಾರೆ.

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...