Homeಮುಖಪುಟಮೋದಿಯವರ 8 ವರ್ಷದ ಆಡಳಿತದಲ್ಲಿ ದೇಶದ ಅಭಿವೃದ್ದಿ 20 ವರ್ಷ ಹಿಂದಕ್ಕೆ ಕುಸಿದಿದೆ: ಸಿದ್ದರಾಮಯ್ಯ

ಮೋದಿಯವರ 8 ವರ್ಷದ ಆಡಳಿತದಲ್ಲಿ ದೇಶದ ಅಭಿವೃದ್ದಿ 20 ವರ್ಷ ಹಿಂದಕ್ಕೆ ಕುಸಿದಿದೆ: ಸಿದ್ದರಾಮಯ್ಯ

- Advertisement -
- Advertisement -

ಮೋದಿಯವರ ನೇತೃತ್ವದ ಬಿಜೆಪಿ ಸರ್ಕಾರದ 8 ವರ್ಷದ ಆಳ್ವಿಕೆಯಲ್ಲಿ ದೇಶದ ಅಭಿವೃದ್ಧಿ 20 ವರ್ಷದಷ್ಟು ಹಿಂದಕ್ಕೆ ಕುಸಿದಿದೆ. ದೇಶ ವಿಶ್ವಗುರುವಾಗುವ ಬದಲು ಪಾತಾಳದತ್ತ ಕುಸಿಯುತ್ತಿದೆ. ಇದನ್ನು ನಾನು ಹೇಳುತ್ತಿರುವುದಲ್ಲ ಬದಲಿಗೆ ಸರ್ಕಾರದ ದಾಖಲೆಗಳೇ ಹೇಳುತ್ತಿವೆ ಎಂದು ವಿರೋಧ ಪಕ್ಷದ ಮುಖಂಡ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ದೇಶ ಹಿಂದೆಂದೂ ಇಲ್ಲದಷ್ಟು ಸಾಲದ ಸುಳಿಗೆ ಸಿಲುಕಿದೆ. ರೂಪಾಯಿಯ ಬೆಲೆ ಪಾತಾಳಕ್ಕೆ ಕುಸಿಯುತ್ತಿದೆ. ಬೆಲೆ ಏರಿಕೆಯು ಹಿಂದೆಂದೂ ಇಲ್ಲದ ಮಟ್ಟಕ್ಕೆ ಮುಟ್ಟಿದೆ. ಹಣದುಬ್ಬರ ಕಳೆದ 17 ವರ್ಷಗಳಲ್ಲಿ ತೀವ್ರಗತಿಗೆ ಮುಟ್ಟಿದೆ. ನಿರುದ್ಯೋಗ ತಾರಕಕ್ಕೇರಿದೆ. ರಾಜ್ಯಗಳ ಆರ್ಥಿಕತೆ ಕುಸಿದು ಹೋಗುತ್ತಿದೆ. ಒಕ್ಕೂಟ ವ್ಯವಸ್ಥೆ ಶಿಥಿಲವಾಗುತ್ತಿದೆ. ಇದರ ಜೊತೆಯಲ್ಲಿ ದೇಶದ ಪ್ರಜಾತಾಂತ್ರಿಕೆಯೂ ಭಯಭೀತವಾಗಿದೆ” ಎಂದಿದ್ದಾರೆ.

ಅಮೇರಿಕಾದಂತಹ ದೇಶಗಳಿಗೆ ಆರ್ಥಿಕತೆಯನ್ನು ನಿಭಾಯಿಸುವುದು ಹೇಗೆ ಎಂದು ಹೇಳಿಕೊಟ್ಟು ಮಾದರಿಯಾಗಿದ್ದ ಡಾ. ಮನಮೋಹನ್‌ ಸಿಂಗರವರು ರೂಪಿಸಿ ತಲೆ ಎತ್ತಿ ನಿಲ್ಲವಂತೆ ಮಾಡಿದ್ದ ಭಾರತದ ಆರ್ಥಿಕತೆಯನ್ನು ಪ್ರಧಾನಿ ನರೇಂದ್ರ ಮೋದಿಯವರ ದುರಾಡಳಿತವು ನೆಲ ಕಚ್ಚುವಂತೆ ಮಾಡಿದೆ. ಇದೇ ಅವರ ಎಂಟು ವರ್ಷಗಳ ಸಾಧನೆ ಎಂದು ಅವರು ವ್ಯಂಗ್ಯವಾಡಿದ್ದಾರೆ.

ಡಿ ಮಾನಿಟೈಸೇಷನ್- ಜಿಎಸ್‍ಟಿ ವ್ಯವಸ್ಥೆ, ಕೊರೋನ ಸಾಂಕ್ರಾಮಿಕದ ಎಡಬಿಡಂಗಿ ನಿರ್ವಹಣೆಗಳು ದೇಶದ ಬೆನ್ನುಮೂಳೆಯನ್ನು ಟೊಳ್ಳು ಮಾಡಿವೆ. ದೇಶದ ಜನರು ಕಷ್ಟಪಟ್ಟು ಕಟ್ಟಿದ್ದ ಲಾಭದಾಯಕ ಸಂಸ್ಥೆ/ಕಂಪೆನಿ/ಕಾರ್ಖಾನೆಗಳನ್ನು ಖಾಸಗಿಯವರಿಗೆ ಬಿಡಿಗಾಸಿಗೆ ಮಾರಾಟ ಮಾಡಲಾಗುತ್ತಿದೆ. ರೈತ, ಕಾರ್ಮಿಕ, ಮಹಿಳೆ, ಯುವಜನರ ವಿರೋಧಿಯಾದ ಕಾನೂನುಗಳನ್ನು ಜಾರಿಗೆ ತಂದು ಮೂಲಕ ಜನರನ್ನು ಶತ್ರುಗಳಂತೆ ಭಾವಿಸಿ ದಮನಿಸಲಾಗುತ್ತಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ದೇಶದ ಸಾಲವನ್ನು ಯಾವ ಮಟ್ಟಕ್ಕೆ ಏರಿಸಲಾಗಿದೆಯೆಂದರೆ ಸರ್ಕಾರದ ದಾಖಲೆಗಳ ಪ್ರಕಾರ 2014 ರ ಮಾರ್ಚ್ ವೇಳೆಗೆ ಕೇಂದ್ರ ಸರ್ಕಾರ ಮಾಡಿರುವ ಸಾಲ 53.11 ಲಕ್ಷ ಕೋಟಿ ರೂಗಳಷ್ಟಿತ್ತು. ಇದು ದೇಶವು ಸ್ವಾತಂತ್ರ್ಯ ಗಳಿಸಿಕೊಂಡಾಗಿನಿಂದ ಮಾಡಿದ್ದ ಸಾಲ. ಈ ಸಾಲವು 2019-20 ರ ವೇಳೆಗೆ 106.45 ಲಕ್ಷ ಕೋಟಿಗೆ ಏರಿಕೆಯಾಯಿತು. 2022 ರ ಮಾರ್ಚ್-31 ರ ವೇಳೆಗೆ 139.57 ಲಕ್ಷ ಕೋಟಿಗಳಿಗೆ ತಲುಪಿದೆ. 2023 ರ ಮಾರ್ಚ್ ಅಂತ್ಯದ ವೇಳೆಗೆ 155 ಲಕ್ಷ ಕೋಟಿಗೆ ತಲುಪುವ ನಿರೀಕ್ಷೆಯಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕುವೆಂಪು, ಸ್ತ್ರೀದ್ವೇಷಿ ಮತ್ತು ರೇಪ್‌ ಸಮರ್ಥನೆಯ ಟ್ವೀಟ್‌ಗಳು ವೈರಲ್‌‌: ಫೇಸ್‌ಬುಕ್ & ಟ್ವಿಟರ್‌ಗೆ ಲಾಕ್‌ ಮಾಡಿದ ರೋಹಿತ್ ಚಕ್ರತೀರ್ಥ

ಕೇಂದ್ರ ಸರ್ಕಾರ ಕಾರ್ಪೊರೇಟ್ ಕಂಪೆನಿಗಳ ಪರವಾದ ನಿಲುವು ತಾಳಿರುವುದರಿಂದ, ಜನಪರ ಆರ್ಥಿಕ ನೀತಿ ಇಲ್ಲದಿರುವುದರಿಂದ ದೇಶವನ್ನು ಸಾಲದ ಸುನಾಮಿಗೆ ಸಿಲುಕಿಸಿದ್ದಾರೆ. ರಾಜ್ಯಕ್ಕೆ ನ್ಯಾಯಯುತವಾಗಿ ಕೊಡಬೇಕಾದಷ್ಟು ಅನುದಾನಗಳನ್ನು, ತೆರಿಗೆ ಹಂಚಿಕೆಯನ್ನು ಮಾಡದಿರುವುದರಿಂದ ನಮ್ಮ ರಾಜ್ಯವು ಸಾಲದ ಸುಳಿಗೆ ಸಿಲುಕಿಕೊಂಡಿದೆ. 15 ನೇ ಹಣಕಾಸು ಆಯೋಗವು ನಮ್ಮ ರಾಜ್ಯಕ್ಕೆ ಹೆಚ್ಚುವರಿಯಾಗಿ 5495 ಕೋಟಿ ರೂ ಗಳನ್ನು ಶಿಫಾರಸ್ಸು ಮಾಡಿದ್ದರೂ ಅದನ್ನು ಕೊಡುವುದಿಲ್ಲವೆಂದು ಹೇಳಿ ರಾಜ್ಯದ ಜನರ ಬೆನ್ನಿಗೆ ಇರಿದ ನಿರ್ಮಲಾ ಸೀತಾರಾಮನ್ ಅವರನ್ನು ಮತ್ತೆ ರಾಜ್ಯದಿಂದ ರಾಜ್ಯಸಭೆಗೆ ಆರಿಸಲು ಬಿಜೆಪಿ ಟಿಕೆಟ್ ನೀಡಿ ನಮ್ಮ ಜನರಿಗೆ ಅವಮಾನ ಮಾಡಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ರಾಜ್ಯಸಭೆ ಚುನಾವಣೆ ಕಾಂಗ್ರೆಸ್‌ ಎರಡನೇ ಅಭ್ಯರ್ಥಿ ನಾಮಪತ್ರವನ್ನು ಹಿಂಪಡೆಯುವ ಪ್ರಶ್ನೆಯೇ ಇಲ್ಲ. ಗೆಲ್ಲುವ ವಿಶ್ವಾಸದಿಂದಲೇ ನಾವು ನಾಮಪತ್ರ ಸಲ್ಲಿಸಿದ್ದೇವೆ. ನಮಗೂ ಬೇರೆ ಬೇರೆ ಮತಗಳು ಬರಲಿವೆ. ಆದರೆ, ಅದು ಹೇಗೆ ಎಂದು ಈಗ ಹೇಳುವುದಿಲ್ಲ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮೋದಿಯವರ ವೈಫಲ್ಯವನ್ನು ಸಿದ್ದರಾಮಯ್ಯ ಸರಿಯಾಗಿ ಗುರುತಿಸಿದ್ದಾರೆ.

LEAVE A REPLY

Please enter your comment!
Please enter your name here

- Advertisment -

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...