Homeಮುಖಪುಟಮೋದಿಯವರ 8 ವರ್ಷದ ಆಡಳಿತದಲ್ಲಿ ದೇಶದ ಅಭಿವೃದ್ದಿ 20 ವರ್ಷ ಹಿಂದಕ್ಕೆ ಕುಸಿದಿದೆ: ಸಿದ್ದರಾಮಯ್ಯ

ಮೋದಿಯವರ 8 ವರ್ಷದ ಆಡಳಿತದಲ್ಲಿ ದೇಶದ ಅಭಿವೃದ್ದಿ 20 ವರ್ಷ ಹಿಂದಕ್ಕೆ ಕುಸಿದಿದೆ: ಸಿದ್ದರಾಮಯ್ಯ

- Advertisement -
- Advertisement -

ಮೋದಿಯವರ ನೇತೃತ್ವದ ಬಿಜೆಪಿ ಸರ್ಕಾರದ 8 ವರ್ಷದ ಆಳ್ವಿಕೆಯಲ್ಲಿ ದೇಶದ ಅಭಿವೃದ್ಧಿ 20 ವರ್ಷದಷ್ಟು ಹಿಂದಕ್ಕೆ ಕುಸಿದಿದೆ. ದೇಶ ವಿಶ್ವಗುರುವಾಗುವ ಬದಲು ಪಾತಾಳದತ್ತ ಕುಸಿಯುತ್ತಿದೆ. ಇದನ್ನು ನಾನು ಹೇಳುತ್ತಿರುವುದಲ್ಲ ಬದಲಿಗೆ ಸರ್ಕಾರದ ದಾಖಲೆಗಳೇ ಹೇಳುತ್ತಿವೆ ಎಂದು ವಿರೋಧ ಪಕ್ಷದ ಮುಖಂಡ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ದೇಶ ಹಿಂದೆಂದೂ ಇಲ್ಲದಷ್ಟು ಸಾಲದ ಸುಳಿಗೆ ಸಿಲುಕಿದೆ. ರೂಪಾಯಿಯ ಬೆಲೆ ಪಾತಾಳಕ್ಕೆ ಕುಸಿಯುತ್ತಿದೆ. ಬೆಲೆ ಏರಿಕೆಯು ಹಿಂದೆಂದೂ ಇಲ್ಲದ ಮಟ್ಟಕ್ಕೆ ಮುಟ್ಟಿದೆ. ಹಣದುಬ್ಬರ ಕಳೆದ 17 ವರ್ಷಗಳಲ್ಲಿ ತೀವ್ರಗತಿಗೆ ಮುಟ್ಟಿದೆ. ನಿರುದ್ಯೋಗ ತಾರಕಕ್ಕೇರಿದೆ. ರಾಜ್ಯಗಳ ಆರ್ಥಿಕತೆ ಕುಸಿದು ಹೋಗುತ್ತಿದೆ. ಒಕ್ಕೂಟ ವ್ಯವಸ್ಥೆ ಶಿಥಿಲವಾಗುತ್ತಿದೆ. ಇದರ ಜೊತೆಯಲ್ಲಿ ದೇಶದ ಪ್ರಜಾತಾಂತ್ರಿಕೆಯೂ ಭಯಭೀತವಾಗಿದೆ” ಎಂದಿದ್ದಾರೆ.

ಅಮೇರಿಕಾದಂತಹ ದೇಶಗಳಿಗೆ ಆರ್ಥಿಕತೆಯನ್ನು ನಿಭಾಯಿಸುವುದು ಹೇಗೆ ಎಂದು ಹೇಳಿಕೊಟ್ಟು ಮಾದರಿಯಾಗಿದ್ದ ಡಾ. ಮನಮೋಹನ್‌ ಸಿಂಗರವರು ರೂಪಿಸಿ ತಲೆ ಎತ್ತಿ ನಿಲ್ಲವಂತೆ ಮಾಡಿದ್ದ ಭಾರತದ ಆರ್ಥಿಕತೆಯನ್ನು ಪ್ರಧಾನಿ ನರೇಂದ್ರ ಮೋದಿಯವರ ದುರಾಡಳಿತವು ನೆಲ ಕಚ್ಚುವಂತೆ ಮಾಡಿದೆ. ಇದೇ ಅವರ ಎಂಟು ವರ್ಷಗಳ ಸಾಧನೆ ಎಂದು ಅವರು ವ್ಯಂಗ್ಯವಾಡಿದ್ದಾರೆ.

ಡಿ ಮಾನಿಟೈಸೇಷನ್- ಜಿಎಸ್‍ಟಿ ವ್ಯವಸ್ಥೆ, ಕೊರೋನ ಸಾಂಕ್ರಾಮಿಕದ ಎಡಬಿಡಂಗಿ ನಿರ್ವಹಣೆಗಳು ದೇಶದ ಬೆನ್ನುಮೂಳೆಯನ್ನು ಟೊಳ್ಳು ಮಾಡಿವೆ. ದೇಶದ ಜನರು ಕಷ್ಟಪಟ್ಟು ಕಟ್ಟಿದ್ದ ಲಾಭದಾಯಕ ಸಂಸ್ಥೆ/ಕಂಪೆನಿ/ಕಾರ್ಖಾನೆಗಳನ್ನು ಖಾಸಗಿಯವರಿಗೆ ಬಿಡಿಗಾಸಿಗೆ ಮಾರಾಟ ಮಾಡಲಾಗುತ್ತಿದೆ. ರೈತ, ಕಾರ್ಮಿಕ, ಮಹಿಳೆ, ಯುವಜನರ ವಿರೋಧಿಯಾದ ಕಾನೂನುಗಳನ್ನು ಜಾರಿಗೆ ತಂದು ಮೂಲಕ ಜನರನ್ನು ಶತ್ರುಗಳಂತೆ ಭಾವಿಸಿ ದಮನಿಸಲಾಗುತ್ತಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ದೇಶದ ಸಾಲವನ್ನು ಯಾವ ಮಟ್ಟಕ್ಕೆ ಏರಿಸಲಾಗಿದೆಯೆಂದರೆ ಸರ್ಕಾರದ ದಾಖಲೆಗಳ ಪ್ರಕಾರ 2014 ರ ಮಾರ್ಚ್ ವೇಳೆಗೆ ಕೇಂದ್ರ ಸರ್ಕಾರ ಮಾಡಿರುವ ಸಾಲ 53.11 ಲಕ್ಷ ಕೋಟಿ ರೂಗಳಷ್ಟಿತ್ತು. ಇದು ದೇಶವು ಸ್ವಾತಂತ್ರ್ಯ ಗಳಿಸಿಕೊಂಡಾಗಿನಿಂದ ಮಾಡಿದ್ದ ಸಾಲ. ಈ ಸಾಲವು 2019-20 ರ ವೇಳೆಗೆ 106.45 ಲಕ್ಷ ಕೋಟಿಗೆ ಏರಿಕೆಯಾಯಿತು. 2022 ರ ಮಾರ್ಚ್-31 ರ ವೇಳೆಗೆ 139.57 ಲಕ್ಷ ಕೋಟಿಗಳಿಗೆ ತಲುಪಿದೆ. 2023 ರ ಮಾರ್ಚ್ ಅಂತ್ಯದ ವೇಳೆಗೆ 155 ಲಕ್ಷ ಕೋಟಿಗೆ ತಲುಪುವ ನಿರೀಕ್ಷೆಯಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕುವೆಂಪು, ಸ್ತ್ರೀದ್ವೇಷಿ ಮತ್ತು ರೇಪ್‌ ಸಮರ್ಥನೆಯ ಟ್ವೀಟ್‌ಗಳು ವೈರಲ್‌‌: ಫೇಸ್‌ಬುಕ್ & ಟ್ವಿಟರ್‌ಗೆ ಲಾಕ್‌ ಮಾಡಿದ ರೋಹಿತ್ ಚಕ್ರತೀರ್ಥ

ಕೇಂದ್ರ ಸರ್ಕಾರ ಕಾರ್ಪೊರೇಟ್ ಕಂಪೆನಿಗಳ ಪರವಾದ ನಿಲುವು ತಾಳಿರುವುದರಿಂದ, ಜನಪರ ಆರ್ಥಿಕ ನೀತಿ ಇಲ್ಲದಿರುವುದರಿಂದ ದೇಶವನ್ನು ಸಾಲದ ಸುನಾಮಿಗೆ ಸಿಲುಕಿಸಿದ್ದಾರೆ. ರಾಜ್ಯಕ್ಕೆ ನ್ಯಾಯಯುತವಾಗಿ ಕೊಡಬೇಕಾದಷ್ಟು ಅನುದಾನಗಳನ್ನು, ತೆರಿಗೆ ಹಂಚಿಕೆಯನ್ನು ಮಾಡದಿರುವುದರಿಂದ ನಮ್ಮ ರಾಜ್ಯವು ಸಾಲದ ಸುಳಿಗೆ ಸಿಲುಕಿಕೊಂಡಿದೆ. 15 ನೇ ಹಣಕಾಸು ಆಯೋಗವು ನಮ್ಮ ರಾಜ್ಯಕ್ಕೆ ಹೆಚ್ಚುವರಿಯಾಗಿ 5495 ಕೋಟಿ ರೂ ಗಳನ್ನು ಶಿಫಾರಸ್ಸು ಮಾಡಿದ್ದರೂ ಅದನ್ನು ಕೊಡುವುದಿಲ್ಲವೆಂದು ಹೇಳಿ ರಾಜ್ಯದ ಜನರ ಬೆನ್ನಿಗೆ ಇರಿದ ನಿರ್ಮಲಾ ಸೀತಾರಾಮನ್ ಅವರನ್ನು ಮತ್ತೆ ರಾಜ್ಯದಿಂದ ರಾಜ್ಯಸಭೆಗೆ ಆರಿಸಲು ಬಿಜೆಪಿ ಟಿಕೆಟ್ ನೀಡಿ ನಮ್ಮ ಜನರಿಗೆ ಅವಮಾನ ಮಾಡಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ರಾಜ್ಯಸಭೆ ಚುನಾವಣೆ ಕಾಂಗ್ರೆಸ್‌ ಎರಡನೇ ಅಭ್ಯರ್ಥಿ ನಾಮಪತ್ರವನ್ನು ಹಿಂಪಡೆಯುವ ಪ್ರಶ್ನೆಯೇ ಇಲ್ಲ. ಗೆಲ್ಲುವ ವಿಶ್ವಾಸದಿಂದಲೇ ನಾವು ನಾಮಪತ್ರ ಸಲ್ಲಿಸಿದ್ದೇವೆ. ನಮಗೂ ಬೇರೆ ಬೇರೆ ಮತಗಳು ಬರಲಿವೆ. ಆದರೆ, ಅದು ಹೇಗೆ ಎಂದು ಈಗ ಹೇಳುವುದಿಲ್ಲ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮೋದಿಯವರ ವೈಫಲ್ಯವನ್ನು ಸಿದ್ದರಾಮಯ್ಯ ಸರಿಯಾಗಿ ಗುರುತಿಸಿದ್ದಾರೆ.

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...