Homeಮುಖಪುಟಮೋದಿಯವರ 8 ವರ್ಷದ ಆಡಳಿತದಲ್ಲಿ ದೇಶದ ಅಭಿವೃದ್ದಿ 20 ವರ್ಷ ಹಿಂದಕ್ಕೆ ಕುಸಿದಿದೆ: ಸಿದ್ದರಾಮಯ್ಯ

ಮೋದಿಯವರ 8 ವರ್ಷದ ಆಡಳಿತದಲ್ಲಿ ದೇಶದ ಅಭಿವೃದ್ದಿ 20 ವರ್ಷ ಹಿಂದಕ್ಕೆ ಕುಸಿದಿದೆ: ಸಿದ್ದರಾಮಯ್ಯ

- Advertisement -
- Advertisement -

ಮೋದಿಯವರ ನೇತೃತ್ವದ ಬಿಜೆಪಿ ಸರ್ಕಾರದ 8 ವರ್ಷದ ಆಳ್ವಿಕೆಯಲ್ಲಿ ದೇಶದ ಅಭಿವೃದ್ಧಿ 20 ವರ್ಷದಷ್ಟು ಹಿಂದಕ್ಕೆ ಕುಸಿದಿದೆ. ದೇಶ ವಿಶ್ವಗುರುವಾಗುವ ಬದಲು ಪಾತಾಳದತ್ತ ಕುಸಿಯುತ್ತಿದೆ. ಇದನ್ನು ನಾನು ಹೇಳುತ್ತಿರುವುದಲ್ಲ ಬದಲಿಗೆ ಸರ್ಕಾರದ ದಾಖಲೆಗಳೇ ಹೇಳುತ್ತಿವೆ ಎಂದು ವಿರೋಧ ಪಕ್ಷದ ಮುಖಂಡ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ದೇಶ ಹಿಂದೆಂದೂ ಇಲ್ಲದಷ್ಟು ಸಾಲದ ಸುಳಿಗೆ ಸಿಲುಕಿದೆ. ರೂಪಾಯಿಯ ಬೆಲೆ ಪಾತಾಳಕ್ಕೆ ಕುಸಿಯುತ್ತಿದೆ. ಬೆಲೆ ಏರಿಕೆಯು ಹಿಂದೆಂದೂ ಇಲ್ಲದ ಮಟ್ಟಕ್ಕೆ ಮುಟ್ಟಿದೆ. ಹಣದುಬ್ಬರ ಕಳೆದ 17 ವರ್ಷಗಳಲ್ಲಿ ತೀವ್ರಗತಿಗೆ ಮುಟ್ಟಿದೆ. ನಿರುದ್ಯೋಗ ತಾರಕಕ್ಕೇರಿದೆ. ರಾಜ್ಯಗಳ ಆರ್ಥಿಕತೆ ಕುಸಿದು ಹೋಗುತ್ತಿದೆ. ಒಕ್ಕೂಟ ವ್ಯವಸ್ಥೆ ಶಿಥಿಲವಾಗುತ್ತಿದೆ. ಇದರ ಜೊತೆಯಲ್ಲಿ ದೇಶದ ಪ್ರಜಾತಾಂತ್ರಿಕೆಯೂ ಭಯಭೀತವಾಗಿದೆ” ಎಂದಿದ್ದಾರೆ.

ಅಮೇರಿಕಾದಂತಹ ದೇಶಗಳಿಗೆ ಆರ್ಥಿಕತೆಯನ್ನು ನಿಭಾಯಿಸುವುದು ಹೇಗೆ ಎಂದು ಹೇಳಿಕೊಟ್ಟು ಮಾದರಿಯಾಗಿದ್ದ ಡಾ. ಮನಮೋಹನ್‌ ಸಿಂಗರವರು ರೂಪಿಸಿ ತಲೆ ಎತ್ತಿ ನಿಲ್ಲವಂತೆ ಮಾಡಿದ್ದ ಭಾರತದ ಆರ್ಥಿಕತೆಯನ್ನು ಪ್ರಧಾನಿ ನರೇಂದ್ರ ಮೋದಿಯವರ ದುರಾಡಳಿತವು ನೆಲ ಕಚ್ಚುವಂತೆ ಮಾಡಿದೆ. ಇದೇ ಅವರ ಎಂಟು ವರ್ಷಗಳ ಸಾಧನೆ ಎಂದು ಅವರು ವ್ಯಂಗ್ಯವಾಡಿದ್ದಾರೆ.

ಡಿ ಮಾನಿಟೈಸೇಷನ್- ಜಿಎಸ್‍ಟಿ ವ್ಯವಸ್ಥೆ, ಕೊರೋನ ಸಾಂಕ್ರಾಮಿಕದ ಎಡಬಿಡಂಗಿ ನಿರ್ವಹಣೆಗಳು ದೇಶದ ಬೆನ್ನುಮೂಳೆಯನ್ನು ಟೊಳ್ಳು ಮಾಡಿವೆ. ದೇಶದ ಜನರು ಕಷ್ಟಪಟ್ಟು ಕಟ್ಟಿದ್ದ ಲಾಭದಾಯಕ ಸಂಸ್ಥೆ/ಕಂಪೆನಿ/ಕಾರ್ಖಾನೆಗಳನ್ನು ಖಾಸಗಿಯವರಿಗೆ ಬಿಡಿಗಾಸಿಗೆ ಮಾರಾಟ ಮಾಡಲಾಗುತ್ತಿದೆ. ರೈತ, ಕಾರ್ಮಿಕ, ಮಹಿಳೆ, ಯುವಜನರ ವಿರೋಧಿಯಾದ ಕಾನೂನುಗಳನ್ನು ಜಾರಿಗೆ ತಂದು ಮೂಲಕ ಜನರನ್ನು ಶತ್ರುಗಳಂತೆ ಭಾವಿಸಿ ದಮನಿಸಲಾಗುತ್ತಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ದೇಶದ ಸಾಲವನ್ನು ಯಾವ ಮಟ್ಟಕ್ಕೆ ಏರಿಸಲಾಗಿದೆಯೆಂದರೆ ಸರ್ಕಾರದ ದಾಖಲೆಗಳ ಪ್ರಕಾರ 2014 ರ ಮಾರ್ಚ್ ವೇಳೆಗೆ ಕೇಂದ್ರ ಸರ್ಕಾರ ಮಾಡಿರುವ ಸಾಲ 53.11 ಲಕ್ಷ ಕೋಟಿ ರೂಗಳಷ್ಟಿತ್ತು. ಇದು ದೇಶವು ಸ್ವಾತಂತ್ರ್ಯ ಗಳಿಸಿಕೊಂಡಾಗಿನಿಂದ ಮಾಡಿದ್ದ ಸಾಲ. ಈ ಸಾಲವು 2019-20 ರ ವೇಳೆಗೆ 106.45 ಲಕ್ಷ ಕೋಟಿಗೆ ಏರಿಕೆಯಾಯಿತು. 2022 ರ ಮಾರ್ಚ್-31 ರ ವೇಳೆಗೆ 139.57 ಲಕ್ಷ ಕೋಟಿಗಳಿಗೆ ತಲುಪಿದೆ. 2023 ರ ಮಾರ್ಚ್ ಅಂತ್ಯದ ವೇಳೆಗೆ 155 ಲಕ್ಷ ಕೋಟಿಗೆ ತಲುಪುವ ನಿರೀಕ್ಷೆಯಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕುವೆಂಪು, ಸ್ತ್ರೀದ್ವೇಷಿ ಮತ್ತು ರೇಪ್‌ ಸಮರ್ಥನೆಯ ಟ್ವೀಟ್‌ಗಳು ವೈರಲ್‌‌: ಫೇಸ್‌ಬುಕ್ & ಟ್ವಿಟರ್‌ಗೆ ಲಾಕ್‌ ಮಾಡಿದ ರೋಹಿತ್ ಚಕ್ರತೀರ್ಥ

ಕೇಂದ್ರ ಸರ್ಕಾರ ಕಾರ್ಪೊರೇಟ್ ಕಂಪೆನಿಗಳ ಪರವಾದ ನಿಲುವು ತಾಳಿರುವುದರಿಂದ, ಜನಪರ ಆರ್ಥಿಕ ನೀತಿ ಇಲ್ಲದಿರುವುದರಿಂದ ದೇಶವನ್ನು ಸಾಲದ ಸುನಾಮಿಗೆ ಸಿಲುಕಿಸಿದ್ದಾರೆ. ರಾಜ್ಯಕ್ಕೆ ನ್ಯಾಯಯುತವಾಗಿ ಕೊಡಬೇಕಾದಷ್ಟು ಅನುದಾನಗಳನ್ನು, ತೆರಿಗೆ ಹಂಚಿಕೆಯನ್ನು ಮಾಡದಿರುವುದರಿಂದ ನಮ್ಮ ರಾಜ್ಯವು ಸಾಲದ ಸುಳಿಗೆ ಸಿಲುಕಿಕೊಂಡಿದೆ. 15 ನೇ ಹಣಕಾಸು ಆಯೋಗವು ನಮ್ಮ ರಾಜ್ಯಕ್ಕೆ ಹೆಚ್ಚುವರಿಯಾಗಿ 5495 ಕೋಟಿ ರೂ ಗಳನ್ನು ಶಿಫಾರಸ್ಸು ಮಾಡಿದ್ದರೂ ಅದನ್ನು ಕೊಡುವುದಿಲ್ಲವೆಂದು ಹೇಳಿ ರಾಜ್ಯದ ಜನರ ಬೆನ್ನಿಗೆ ಇರಿದ ನಿರ್ಮಲಾ ಸೀತಾರಾಮನ್ ಅವರನ್ನು ಮತ್ತೆ ರಾಜ್ಯದಿಂದ ರಾಜ್ಯಸಭೆಗೆ ಆರಿಸಲು ಬಿಜೆಪಿ ಟಿಕೆಟ್ ನೀಡಿ ನಮ್ಮ ಜನರಿಗೆ ಅವಮಾನ ಮಾಡಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ರಾಜ್ಯಸಭೆ ಚುನಾವಣೆ ಕಾಂಗ್ರೆಸ್‌ ಎರಡನೇ ಅಭ್ಯರ್ಥಿ ನಾಮಪತ್ರವನ್ನು ಹಿಂಪಡೆಯುವ ಪ್ರಶ್ನೆಯೇ ಇಲ್ಲ. ಗೆಲ್ಲುವ ವಿಶ್ವಾಸದಿಂದಲೇ ನಾವು ನಾಮಪತ್ರ ಸಲ್ಲಿಸಿದ್ದೇವೆ. ನಮಗೂ ಬೇರೆ ಬೇರೆ ಮತಗಳು ಬರಲಿವೆ. ಆದರೆ, ಅದು ಹೇಗೆ ಎಂದು ಈಗ ಹೇಳುವುದಿಲ್ಲ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮೋದಿಯವರ ವೈಫಲ್ಯವನ್ನು ಸಿದ್ದರಾಮಯ್ಯ ಸರಿಯಾಗಿ ಗುರುತಿಸಿದ್ದಾರೆ.

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...