Homeಮುಖಪುಟಮೋದಿಯವರ 8 ವರ್ಷದ ಆಡಳಿತದಲ್ಲಿ ದೇಶದ ಅಭಿವೃದ್ದಿ 20 ವರ್ಷ ಹಿಂದಕ್ಕೆ ಕುಸಿದಿದೆ: ಸಿದ್ದರಾಮಯ್ಯ

ಮೋದಿಯವರ 8 ವರ್ಷದ ಆಡಳಿತದಲ್ಲಿ ದೇಶದ ಅಭಿವೃದ್ದಿ 20 ವರ್ಷ ಹಿಂದಕ್ಕೆ ಕುಸಿದಿದೆ: ಸಿದ್ದರಾಮಯ್ಯ

- Advertisement -
- Advertisement -

ಮೋದಿಯವರ ನೇತೃತ್ವದ ಬಿಜೆಪಿ ಸರ್ಕಾರದ 8 ವರ್ಷದ ಆಳ್ವಿಕೆಯಲ್ಲಿ ದೇಶದ ಅಭಿವೃದ್ಧಿ 20 ವರ್ಷದಷ್ಟು ಹಿಂದಕ್ಕೆ ಕುಸಿದಿದೆ. ದೇಶ ವಿಶ್ವಗುರುವಾಗುವ ಬದಲು ಪಾತಾಳದತ್ತ ಕುಸಿಯುತ್ತಿದೆ. ಇದನ್ನು ನಾನು ಹೇಳುತ್ತಿರುವುದಲ್ಲ ಬದಲಿಗೆ ಸರ್ಕಾರದ ದಾಖಲೆಗಳೇ ಹೇಳುತ್ತಿವೆ ಎಂದು ವಿರೋಧ ಪಕ್ಷದ ಮುಖಂಡ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ದೇಶ ಹಿಂದೆಂದೂ ಇಲ್ಲದಷ್ಟು ಸಾಲದ ಸುಳಿಗೆ ಸಿಲುಕಿದೆ. ರೂಪಾಯಿಯ ಬೆಲೆ ಪಾತಾಳಕ್ಕೆ ಕುಸಿಯುತ್ತಿದೆ. ಬೆಲೆ ಏರಿಕೆಯು ಹಿಂದೆಂದೂ ಇಲ್ಲದ ಮಟ್ಟಕ್ಕೆ ಮುಟ್ಟಿದೆ. ಹಣದುಬ್ಬರ ಕಳೆದ 17 ವರ್ಷಗಳಲ್ಲಿ ತೀವ್ರಗತಿಗೆ ಮುಟ್ಟಿದೆ. ನಿರುದ್ಯೋಗ ತಾರಕಕ್ಕೇರಿದೆ. ರಾಜ್ಯಗಳ ಆರ್ಥಿಕತೆ ಕುಸಿದು ಹೋಗುತ್ತಿದೆ. ಒಕ್ಕೂಟ ವ್ಯವಸ್ಥೆ ಶಿಥಿಲವಾಗುತ್ತಿದೆ. ಇದರ ಜೊತೆಯಲ್ಲಿ ದೇಶದ ಪ್ರಜಾತಾಂತ್ರಿಕೆಯೂ ಭಯಭೀತವಾಗಿದೆ” ಎಂದಿದ್ದಾರೆ.

ಅಮೇರಿಕಾದಂತಹ ದೇಶಗಳಿಗೆ ಆರ್ಥಿಕತೆಯನ್ನು ನಿಭಾಯಿಸುವುದು ಹೇಗೆ ಎಂದು ಹೇಳಿಕೊಟ್ಟು ಮಾದರಿಯಾಗಿದ್ದ ಡಾ. ಮನಮೋಹನ್‌ ಸಿಂಗರವರು ರೂಪಿಸಿ ತಲೆ ಎತ್ತಿ ನಿಲ್ಲವಂತೆ ಮಾಡಿದ್ದ ಭಾರತದ ಆರ್ಥಿಕತೆಯನ್ನು ಪ್ರಧಾನಿ ನರೇಂದ್ರ ಮೋದಿಯವರ ದುರಾಡಳಿತವು ನೆಲ ಕಚ್ಚುವಂತೆ ಮಾಡಿದೆ. ಇದೇ ಅವರ ಎಂಟು ವರ್ಷಗಳ ಸಾಧನೆ ಎಂದು ಅವರು ವ್ಯಂಗ್ಯವಾಡಿದ್ದಾರೆ.

ಡಿ ಮಾನಿಟೈಸೇಷನ್- ಜಿಎಸ್‍ಟಿ ವ್ಯವಸ್ಥೆ, ಕೊರೋನ ಸಾಂಕ್ರಾಮಿಕದ ಎಡಬಿಡಂಗಿ ನಿರ್ವಹಣೆಗಳು ದೇಶದ ಬೆನ್ನುಮೂಳೆಯನ್ನು ಟೊಳ್ಳು ಮಾಡಿವೆ. ದೇಶದ ಜನರು ಕಷ್ಟಪಟ್ಟು ಕಟ್ಟಿದ್ದ ಲಾಭದಾಯಕ ಸಂಸ್ಥೆ/ಕಂಪೆನಿ/ಕಾರ್ಖಾನೆಗಳನ್ನು ಖಾಸಗಿಯವರಿಗೆ ಬಿಡಿಗಾಸಿಗೆ ಮಾರಾಟ ಮಾಡಲಾಗುತ್ತಿದೆ. ರೈತ, ಕಾರ್ಮಿಕ, ಮಹಿಳೆ, ಯುವಜನರ ವಿರೋಧಿಯಾದ ಕಾನೂನುಗಳನ್ನು ಜಾರಿಗೆ ತಂದು ಮೂಲಕ ಜನರನ್ನು ಶತ್ರುಗಳಂತೆ ಭಾವಿಸಿ ದಮನಿಸಲಾಗುತ್ತಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ದೇಶದ ಸಾಲವನ್ನು ಯಾವ ಮಟ್ಟಕ್ಕೆ ಏರಿಸಲಾಗಿದೆಯೆಂದರೆ ಸರ್ಕಾರದ ದಾಖಲೆಗಳ ಪ್ರಕಾರ 2014 ರ ಮಾರ್ಚ್ ವೇಳೆಗೆ ಕೇಂದ್ರ ಸರ್ಕಾರ ಮಾಡಿರುವ ಸಾಲ 53.11 ಲಕ್ಷ ಕೋಟಿ ರೂಗಳಷ್ಟಿತ್ತು. ಇದು ದೇಶವು ಸ್ವಾತಂತ್ರ್ಯ ಗಳಿಸಿಕೊಂಡಾಗಿನಿಂದ ಮಾಡಿದ್ದ ಸಾಲ. ಈ ಸಾಲವು 2019-20 ರ ವೇಳೆಗೆ 106.45 ಲಕ್ಷ ಕೋಟಿಗೆ ಏರಿಕೆಯಾಯಿತು. 2022 ರ ಮಾರ್ಚ್-31 ರ ವೇಳೆಗೆ 139.57 ಲಕ್ಷ ಕೋಟಿಗಳಿಗೆ ತಲುಪಿದೆ. 2023 ರ ಮಾರ್ಚ್ ಅಂತ್ಯದ ವೇಳೆಗೆ 155 ಲಕ್ಷ ಕೋಟಿಗೆ ತಲುಪುವ ನಿರೀಕ್ಷೆಯಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕುವೆಂಪು, ಸ್ತ್ರೀದ್ವೇಷಿ ಮತ್ತು ರೇಪ್‌ ಸಮರ್ಥನೆಯ ಟ್ವೀಟ್‌ಗಳು ವೈರಲ್‌‌: ಫೇಸ್‌ಬುಕ್ & ಟ್ವಿಟರ್‌ಗೆ ಲಾಕ್‌ ಮಾಡಿದ ರೋಹಿತ್ ಚಕ್ರತೀರ್ಥ

ಕೇಂದ್ರ ಸರ್ಕಾರ ಕಾರ್ಪೊರೇಟ್ ಕಂಪೆನಿಗಳ ಪರವಾದ ನಿಲುವು ತಾಳಿರುವುದರಿಂದ, ಜನಪರ ಆರ್ಥಿಕ ನೀತಿ ಇಲ್ಲದಿರುವುದರಿಂದ ದೇಶವನ್ನು ಸಾಲದ ಸುನಾಮಿಗೆ ಸಿಲುಕಿಸಿದ್ದಾರೆ. ರಾಜ್ಯಕ್ಕೆ ನ್ಯಾಯಯುತವಾಗಿ ಕೊಡಬೇಕಾದಷ್ಟು ಅನುದಾನಗಳನ್ನು, ತೆರಿಗೆ ಹಂಚಿಕೆಯನ್ನು ಮಾಡದಿರುವುದರಿಂದ ನಮ್ಮ ರಾಜ್ಯವು ಸಾಲದ ಸುಳಿಗೆ ಸಿಲುಕಿಕೊಂಡಿದೆ. 15 ನೇ ಹಣಕಾಸು ಆಯೋಗವು ನಮ್ಮ ರಾಜ್ಯಕ್ಕೆ ಹೆಚ್ಚುವರಿಯಾಗಿ 5495 ಕೋಟಿ ರೂ ಗಳನ್ನು ಶಿಫಾರಸ್ಸು ಮಾಡಿದ್ದರೂ ಅದನ್ನು ಕೊಡುವುದಿಲ್ಲವೆಂದು ಹೇಳಿ ರಾಜ್ಯದ ಜನರ ಬೆನ್ನಿಗೆ ಇರಿದ ನಿರ್ಮಲಾ ಸೀತಾರಾಮನ್ ಅವರನ್ನು ಮತ್ತೆ ರಾಜ್ಯದಿಂದ ರಾಜ್ಯಸಭೆಗೆ ಆರಿಸಲು ಬಿಜೆಪಿ ಟಿಕೆಟ್ ನೀಡಿ ನಮ್ಮ ಜನರಿಗೆ ಅವಮಾನ ಮಾಡಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ರಾಜ್ಯಸಭೆ ಚುನಾವಣೆ ಕಾಂಗ್ರೆಸ್‌ ಎರಡನೇ ಅಭ್ಯರ್ಥಿ ನಾಮಪತ್ರವನ್ನು ಹಿಂಪಡೆಯುವ ಪ್ರಶ್ನೆಯೇ ಇಲ್ಲ. ಗೆಲ್ಲುವ ವಿಶ್ವಾಸದಿಂದಲೇ ನಾವು ನಾಮಪತ್ರ ಸಲ್ಲಿಸಿದ್ದೇವೆ. ನಮಗೂ ಬೇರೆ ಬೇರೆ ಮತಗಳು ಬರಲಿವೆ. ಆದರೆ, ಅದು ಹೇಗೆ ಎಂದು ಈಗ ಹೇಳುವುದಿಲ್ಲ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮೋದಿಯವರ ವೈಫಲ್ಯವನ್ನು ಸಿದ್ದರಾಮಯ್ಯ ಸರಿಯಾಗಿ ಗುರುತಿಸಿದ್ದಾರೆ.

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...