Homeಕರ್ನಾಟಕರಾಜ್ಯ ಸರ್ಕಾರ ದಿವಾಳಿಯಾಗಿದೆಯೇ? ಪ್ರವಾಹ ಪರಿಹಾರ ಕಡಿಮೆ ನೀಡಿದ್ದಕ್ಕೆ ಸಿದ್ದು ಗರಂ..

ರಾಜ್ಯ ಸರ್ಕಾರ ದಿವಾಳಿಯಾಗಿದೆಯೇ? ಪ್ರವಾಹ ಪರಿಹಾರ ಕಡಿಮೆ ನೀಡಿದ್ದಕ್ಕೆ ಸಿದ್ದು ಗರಂ..

- Advertisement -
- Advertisement -

ಅತಿವೃಷ್ಟಿಯಿಂದ ಆಗಿರುವ ನಷ್ಟ ರೂ.35,160 ಕೋಟಿ ಎಂದು ಅಂದಾಜು ಮಾಡಿರುವ ರಾಜ್ಯಸರ್ಕಾರ, ಪರಿಹಾರಕ್ಕಾಗಿ ಕೇವಲ ರೂ.1500 ಕೋಟಿ ಬಿಡುಗಡೆ ಮಾಡಿರುವುದು ಸಂತ್ರಸ್ತರಿಗೆ ಮಾಡಿರುವ ಘೋರ ಅನ್ಯಾಯ. ಯಡಿಯೂರಪ್ಪನವರೆ ರಾಜ್ಯ ಸರ್ಕಾರ ದಿವಾಳಿಯಾಗಿದೆಯೇ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಅತಿವೃಷ್ಟಿಯಂತಹ ತುರ್ತು ಸ್ಥಿತಿಯಲ್ಲಿಯೂ ಪ್ರಧಾನಿ ನರೇಂದ್ರ ಮೋದಿಯವರು ನಮ್ಮ ರಾಜ್ಯದ ಮುಖ್ಯಮಂತ್ರಿಗಳಿಗೆ ಸಂದರ್ಶನ ನಿರಾಕರಿಸುತ್ತಿರುವುದು ಯಡಿಯೂರಪ್ಪನವರಿಗೆ ಅವಮಾನವಾದರೆ, ಅದು ರಾಜ್ಯಕ್ಕೆ ಮಾಡುತ್ತಿರುವ ಅನ್ಯಾಯವಾಗಿದೆ. ಸ್ವಾಭಿಮಾನಿ ಕನ್ನಡಿಗರು ಇದನ್ನು‌ ಸಹಿಸರು ಎಂದು ಸಿದ್ದರಾಮಯ್ಯ ಗುಡುಗಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯನವರು ತಮ್ಮ ಟ್ವೀಟ್ ನಲ್ಲಿ ಪ್ರವಾಸೋಧ್ಯಮ ಸಚಿವ ಸಿ.ಟಿ ರವಿಯವರನ್ನು ಸಹ ತರಾಟೆಗೆ ತೆಗೆದುಕೊಂಡಿದ್ದಾರೆ.

ಇದಕ್ಕೂ ಮೊದಲು ಸಿ.ಟಿ ರವಿಯವರು ‘ಮಾನ್ಯ ಸಿದ್ದರಾಮಯ್ಯನವರೆ, ರಾಜಸ್ತಾನದಲ್ಲಿ 6 ಬಿಎಸ್ಪಿ ಶಾಸಕರು ತಮ್ಮ ಪಕ್ಷವನ್ನು ಬಿಟ್ಟು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ನಿಮ್ಮ ಪ್ರಕಾರ ಇದು “ಆಪರೇಷನ್ ನೀಚ್ ಹಸ್ತ” ಆಗಿರುವುದರಿಂದ ನೀವು ಕಾಂಗ್ರೆಸ್ ಮತ್ತು ಸೋನಿಯಾ-ರಾಹುಲ್  ಅವರ “ಮರ್ಡರ್ ಆಫ್ ಡೆಮಾಕ್ರಸಿ” ಯ ವಿರುದ್ಧ ಪ್ರತಿಭಟನೆ ನಡೆಸುವಿರಿ ಎಂದು ನನಗೆ ವಿಶ್ವಾಸವಿದೆ.’ ಎಂದು ಟ್ವೀಟ್ ಮಾಡಿದ್ದರು.

ಇದಕ್ಕೆ ತಿರುಗೇಟು ನೀಡಿರುವ ಸಿದ್ದರಾಮಯ್ಯನವರು, “ಸಿ.ಟಿ.ರವಿಯವರೇ, ರಾಜಸ್ತಾನದ ಪಕ್ಷಾಂತರದ ಬಗ್ಗೆ ಅಲ್ಲಿಯ ಜನ ಮತ್ತು ಪಕ್ಷಗಳು ನೋಡಿಕೊಳ್ತಾರೆ. ನಮ್ಮ ರಾಜ್ಯಕ್ಕೆ ಪ್ರಧಾನಿ ಮಾಡುತ್ತಿರುವ ಅನ್ಯಾಯಕ್ಕೆ ಅವರ ಕಚೇರಿ ಮುಂದೆ ನೀವು ಯಾವಾಗ ಧರಣಿ ನಡೆಸ್ತೀರಿ? ನಿಮಗೆ ಜೊತೆ ನೀಡಲು ನಾನೂ ಬರ್ತೇನೆ” ಎಂದು ಟ್ವೀಟ್ ಮಾಡಿದ್ದಾರೆ. ಜೊತೆಗೆ ನೆರೆ ನಷ್ಟದ ಬಗ್ಗೆ ಇರುವ ಪತ್ರಿಕಾ ವರದಿಗಳನ್ನೂ ಲಗತ್ತಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...