Homeಕರ್ನಾಟಕಸಿದ್ದರಾಮಯ್ಯ-ಡಿಕೆಶಿ ಜಗಳ ಶೀಘ್ರವೇ ಬೀದಿಗೆ - ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್

ಸಿದ್ದರಾಮಯ್ಯ-ಡಿಕೆಶಿ ಜಗಳ ಶೀಘ್ರವೇ ಬೀದಿಗೆ – ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆರ್. ಆರ್ ನಗರವನ್ನು ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶಿರಾ ಕ್ಷೇತ್ರವನ್ನು ಹಂಚಿಕೊಂಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್‌ ಕಟೀಲ್ ಆರೋಪಿಸಿದ್ದಾರೆ.

- Advertisement -
- Advertisement -

ಕಾಂಗ್ರೆಸ್‌ನ ಆಂತರಿಕ ಜಗಳದಿಂದಾಗಿ ಶಿರಾ ಕ್ಷೇತ್ರದಲ್ಲಿ 25 ಸಾವಿರ ಮತ್ತು ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ 40 ಸಾವಿರ ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ. ಹಾಗೆಯೇ ವಿಧಾನ ಪರಿಷತ್ ನ ನಾಲ್ಲು ಕ್ಷೇತ್ರಗಳು ಬಿಜೆಪಿ ಪಾಲಾಗಲಿವೆ ಎಂದು ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅತೀವ ವಿಶ್ವಾಸ ವ್ಯಕ್ತಪಡಿಸಿದರು.

ತುಮಕೂರಿನ ಮಾಧ್ಯಮಗಳೊಂದಿಗೆ ಮಾತನಾಡಿ ಅವರು ಶಿರಾ ಉಪಚುನಾವಣೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಬಿ.ಸುರೇಶ್ ಗೌಡ, ವಿಜಯೇಂದ್ರ ಮತ್ತು ಸ್ಥಳೀಯ ಮುಖಂಡರು ಸಕ್ರಿಯವಾಗಿ ತೊಡಗಿಸಿಕೊಂಡ ಕೆಲಸ ಮಾಡಿದ ಪರಿಣಾಮ ಪಕ್ಷದ ಅಭ್ಯರ್ಥಿ ರಾಜೇಶ್ ಗೌಡ 25 ಸಾವಿರ ಮತಗಳ ಅಂತರಿಂದ ಆಯ್ಕೆಯಾಗಲಿದ್ದಾರೆ ಎಂದರು.

ಆರ್.ಆರ್. ನಗರದಲ್ಲಿ ಮುಖ್ಯಮಂತ್ರಿಗಳ ಪ್ರಚಾರ ಮತ್ತು ಸಚಿವರ, ಮುಖಂಡರ ಪ್ರಚಾರದಿಂದ ಬಿಜೆಪಿ 40 ಸಾವಿರ ಮತಗಳ ಅಂತರದಿಂದ ಜಯಭೇರಿ ಬಾರಿಸಲಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆರ್. ಆರ್ ನಗರವನ್ನು ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶಿರಾ ಕ್ಷೇತ್ರವನ್ನು ಹಂಚಿಕೊಂಡಿದ್ದಾರೆ ಎಂದಿದ್ದಾರೆ.

ಡಿ.ಕೆ. ಶಿವಕುಮಾರ್ ಅವರು ಟಿ.ಬಿ.ಜಯಚಂದ್ರ ಅವರನ್ನು ಸೋಲಿಸಲು ಪಣ ತೊಟ್ಟಿದ್ದಾರೆ. ಹಾಗೆಯೇ ಸಿದ್ದರಾಮಯ್ಯ ರಾಜರಾಜೇಶ್ವರಿ ನಗರ ಕ್ಷೇತ್ರದ ಕುಸುಮಾ ಅವರನ್ನು ಸೋಲಿಸಲು ಪ್ರಯತ್ನ ನಡೆಸಿದ್ದಾರೆ. ಇದು ಕಾಂಗ್ರೆಸ್ ಒಳ ಜಗಳವಾಗಿದೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಶಿರಾ ಉಪಚುನಾವಣೆ: ಚುನಾವಣೋತ್ತರ ಸಮೀಕ್ಷೆಗಳು ಏನು ಹೇಳುತ್ತವೆ?

ಕಾಂಗ್ರೆಸ್ ನಲ್ಲಿರುವ ಆಂತರಿಕ ಜಗಳ ಬಿಜೆಪಿಗೆ ವರದಾನವಾಗಲಿದೆ. ಕಾಂಗ್ರೆಸ್ ಅಭ್ಯರ್ಥಿಗಳು ಸೋಲುವ ಭಯದಿಂದಲೇ ಸಿದ್ದರಾಮಯ್ಯ ದಿನಕ್ಕೊಂದು ಹೇಳಿಕೆ ನೀಡುತ್ತಿದ್ದಾರೆ. ಸಿದ್ದರಾಮಯ್ಯ ಅವರು ಕೆಲವೇ ದಿನಗಳಲ್ಲಿ ಕಳೆದು ಹೋಗಲಿದ್ದಾರೆ. ಅವರನ್ನು ಮೂಲೆಗುಂಪು ಮಾಡಲು ಯತ್ನ ನಡೆಯುತ್ತಿದೆ. ಡಿಕೆಶಿ ಮತ್ತು ಸಿದ್ದರಾಮಯ್ಯ ನಡುವೆ ನಾಯಕತ್ವಕ್ಕಾಗಿ ಪೈಪೋಟಿ ನಡೆಯುತ್ತಿದೆ. ಈ ಒಳಜಗಳ ಶೀಘ್ರವೇ ಬೀದಿಗೆ ಬರಲಿದೆ ಎಂದು ಟೀಕಿಸಿದರು.

ಶಿರಾದಲ್ಲಿ ಟಿ.ಬಿ.ಜಯಚಂದ್ರ ಸೋಲುವುದು ಖಚಿತ. ಸೋಲಿನ ಭೀತಿಯಿಂದಲೇ ಇವಿಎಂ ದೋಷದ ಬಗ್ಗೆ ಮಾತನಾಡುತ್ತಾರೆ. ಸೋಲಿನ ಸಂದೇಶವನ್ನು ಅವರೇ ನೀಡಿದ್ದಾರೆ. ಈಗಾಗಲೇ ಇವಿಎಂ ದೋಷದ ಕುರಿತು ಚುನಾವಣಾ ಆಯೋಗ ಮತ್ತು ಸುಪ್ರೀಂಕೋರ್ಟ್ ಕಾಂಗ್ರೆಸ್‌ಗೆ ಛೀಮಾರಿ ಹಾಕಿವೆ. ಆದರೂ ಇವಿಎಂ ದೋಷದ ಕುರಿತು ಕಾಂಗ್ರೆಸ್ ಮುಖಂಡರು ಮಾತನಾಡುತ್ತಿದ್ದಾರೆ ಎಂದು ಗೇಲಿ ಮಾಡಿದರು.


ಇದನ್ನೂ ಓದಿ:ಕಟೀಲ್ ವಿರುದ್ಧ ಟೀಕಾಸ್ತ್ರ: ಸಿದ್ದರಾಮಯ್ಯ ಕಾಂಗ್ರೆಸ್ ’ವಿದೂಷಕ’ ಎಂದ ಬಿಜೆಪಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಬಿ ಜೆ ಪಿಯಲ್ಲಿ ಈಗಾಗಲೇ ಅದು ನಡೆಯುತ್ತಿದೆ.
    ಈಗಾಗಲೇ ಹೇಳಿಕೆ ಬರುತ್ತಿದೆ

  2. ನಿಮಗೆ ನಾಚಿಕೆ ಆಗಬೇಕು ಇಷ್ಟೆಲ್ಲ ಹಣ ಸಂದಾಯ ವಾದರೂ ಬೆಲೆ ಏರಿಕೆ ಕಡಿಮೆ ಯಾಗಲಿಲ್ಲ..

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...