Homeಕರ್ನಾಟಕನಾಟಕದಲ್ಲಿ ಸಿದ್ದರಾಮಯ್ಯ, ಡಿ.ಕೆ.ಶಿ ಅವಹೇಳನ: ಮೈಸೂರು ರಂಗಾಯಣ ಮುತ್ತಿಗೆಗೆ ನಿರ್ಧಾರ

ನಾಟಕದಲ್ಲಿ ಸಿದ್ದರಾಮಯ್ಯ, ಡಿ.ಕೆ.ಶಿ ಅವಹೇಳನ: ಮೈಸೂರು ರಂಗಾಯಣ ಮುತ್ತಿಗೆಗೆ ನಿರ್ಧಾರ

- Advertisement -
- Advertisement -

ಮೈಸೂರಿನ ರಂಗಾಯಣದಲ್ಲಿ ಪ್ರದರ್ಶನಗೊಂಡ ನಾಟಕವೊಂದರಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಕುರಿತು ಅವಹೇಳನಕಾರಿ ಸಂಭಾಷಣೆ ಬಳಸಿರುವುದನ್ನು ಖಂಡಿಸಿ ಜನವರಿ 10 ರಂದು ರಂಗಾಯಣ ಮುತ್ತಿಗೆ ಹೋರಾಟ ನಡೆಸಲು ಸ್ವಾಭಿಮಾನಿ ಹೋರಾಟ ಸಮಿತಿ ನಿರ್ಧರಿಸಿದೆ.

‘ರಂಗಾಯಣದ ನಿರ್ದೇಶಕ ಅಡ್ಡಂಡ ಕಾರ್ಯಪ್ಪನವರ ಪ್ರತಿ ನಡೆಯು ಕೋಮು ಸಂಘರ್ಷಕ್ಕೆ ಕಾರಣವಾಗುತ್ತಿದೆ. ಸರ್ಕಾರದ ಸಂಸ್ಥೆಯಾದ ರಂಗಾಯಣವನ್ನು ತಮ್ಮ ದುರುದ್ದೇಶಕ್ಕೆ ಬಿಜೆಪಿ ಹಾಗೂ ಆರ್‌ಸ್‌ಎಸ್ ರಹಸ್ಯ ಕಾರ್ಯಸೂಚಿಗಳ ಜಾರಿಗೆ ಬಳಸಿಕೊಳ್ಳುತ್ತಿದ್ದಾರೆ’ ಎಂದು ಸಭೆಯಲ್ಲಿ ಆಕ್ರೋಶ ವ್ಯಕ್ತವಾಗಿದೆ.

ಮೈಸೂರು ನಗರದ ಓವಲ್ ಮೈದಾನದಲ್ಲಿ ಜಮಾವಣೆಗೊಂಡು ಖಂಡನಾ ಸಮಾವೇಶ ನಡೆಸಲಾಗುವುದು. ಆನಂತರ ರಂಗಾಯಣಕ್ಕೆ ಮುತ್ತಿಗೆ ಹಾಕಿ ಹೋರಾಟ ನಡೆಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ.

ವಿಧಾನಪರಿಷತ್‌ ಸದಸ್ಯ ಡಾ.ಡಿ.ತಿಮ್ಮಯ್ಯ, ಕರ್ನಾಟಕ ಪ್ರದೇಶ ಕುರುಬರ ಸಂಘದ ಅಧ್ಯಕ್ಷ ಬಿ.ಸುಬ್ರಹ್ಮಣ್ಯ, ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ, ಕಾಂಗ್ರೆಸ್ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಬಿ.ಜೆ.ವಿಜಯ್‌ಕುಮಾರ್, ನಗರ ಘಟಕದ ಅಧ್ಯಕ್ಷ ಆರ್.ಮೂರ್ತಿ, ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಅಧ್ಯಕ್ಷ ಕೆ.ಎಸ್.ಶಿವರಾಮು, ಪೌರಕಾರ್ಮಿಕರ ಸಂಘದ ಅಧ್ಯಕ್ಷ ನಾರಾಯಣ ಮುಂತಾದವರು ಸಭೆಯಲ್ಲಿ ಭಾಗವಹಿಸಿದ್ದರು.

ಏನಿದು ಪ್ರಕರಣ

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಚಂದ್ರಶೇಖರ ಕಂಬಾರರ ‘ಸಾಂಬಶಿವ ಪ್ರಹಸನ’ ನಾಟಕವನ್ನು ಕಾರ್ತಿಕ್ ಉಪಮನ್ಯು ನಿರ್ದೇಶನದಲ್ಲಿ ‘ನಾಗರತ್ನಮ್ಮ’ ರಂಗ ಕಾರ್ಯಾಗಾರದ ಶಿಬಿರಾರ್ಥಿಗಳು ಡಿಸೆಂಬರ್ 31ರ ಶನಿವಾರ ಪ್ರದರ್ಶಿಸುತ್ತಿದ್ದರು. ಈ ನಾಟಕದಲ್ಲಿ ಕೆಲವು ಅಂಶಗಳನ್ನು ತಿರುಚಿ ಸಿದ್ದರಾಮಯ್ಯನವರನ್ನು ಹೀಯಾಳಿಸಲಾಗಿದೆ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್‌ ಅವರನ್ನೂ ಗೇಲಿ ಮಾಡಲಾಗಿದೆ ಎಂದು  ಜಯಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

 

‘ಅನ್ನಭಾಗ್ಯ’, ‘ಕ್ಷೀರಭಾಗ್ಯ’, ‘ಶಾದಿ ಭಾಗ್ಯ’ಗಳನ್ನು ಕೊಟ್ಟು ಜನರನ್ನು ಅವರು ಸೋಂಬೇರಿಗಳನ್ನಾಗಿ ಮಾಡಿದರು. ಅದೇ ರೀತಿ ‘ಕಳ್ಳತನ ಭಾಗ್ಯ’ವನ್ನು ನೀಡಬೇಕಾಗಿತ್ತು ಎನ್ನುವ ಸಂಭಾಷಣೆಯನ್ನು ರಂಗದ ಮೇಲೆ ಪ್ರಸ್ತುತಪಡಿಸಲಾಗಿತ್ತು. ಕಾರ್ಯಕ್ರಮಗಳಲ್ಲಿ ನಿದ್ರೆ ಹೊಡೆಯುವುದು, ಗೊರಕೆ ಹೊಡೆದು ಅವರಿಂದ ರಾಜ್ಯವೇ ಹಾಳಾಗಿದೆ. ನಿಮಗೆ ಈ ಭಾರಿ ಬಾದಾಮಿಯೂ ಕೂಡ ಸಿಗುವುದಿಲ್ಲ ಎಂದು ಸೇವಕನ ಪಾತ್ರಧಾರಿಯಿಂದ ನಾಟಕದಲ್ಲಿ ಹೇಳಿಸಲಾಗಿದೆ” ಎಂದು ಆರೋಪಿಸಿದ್ದಾರೆ.

ಕರ್ನಾಟಕ ಪ್ರದೇಶ ಕುರುಬರ ಸಂಘದ ಅಧ್ಯಕ್ಷರಾದ ಬಿ.ಸುಬ್ರಹ್ಮಣ್ಯ“ಇದು ನೇರವಾಗಿ ಸಿದ್ದರಾಮಯ್ಯನವರಿಗೆ ಹೋಲಿಕೆ ಮಾಡಲಾಗಿದೆ. ಹಾಗೂ ಕೇಡಿ ಆಂಕಲ್ ಎಂದು ಮಂತ್ರಿಯ ಪಾತ್ರವನ್ನು ಸೃಷ್ಟಿಸಿ ಅದರಲ್ಲಿ ಕಳ್ಳತನ ಮಾಡಿ ಕೊಳ್ಳೆ ಹೊಡೆಯುತ್ತಿದ್ದಾನೆ ಎಂದು ಹೇಳಿಸಲಾಗಿದೆ. ಇದೂ ಕೂಡ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರನ್ನೇ ಹೋಲುವಂತೆ ಪಾತ್ರ ಸೃಷ್ಟಿಸಲಾಗಿದೆ ಎಂದು ಕಿಡಿಕಾರಿದ್ದಾರೆ.

ಇದಕ್ಕೆ ಸ್ವತಃ ಕಂಬಾರರೇ ಆಕ್ರೋಶ ವ್ಯಕ್ತಪಡಿಸಿ “ಈ ರೀತಿ ನಾಟಕವನ್ನು ತಿರುಚಿದವರು ಮತ್ತು ನಾಟಕ ಪ್ರದರ್ಶಿಸಲು ಅವಕಾಶ ನೀಡಿರುವವರ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು” ಎಂದು ಮೈಸೂರು ಪೊಲೀಸ್ ಕಮಿಷನರ್‌ಗೆ ಅವರು ಪತ್ರ ಬರೆದಿದ್ದಾರೆ.

“ಮೈಸೂರಿನ ರಂಗಾಯಣದಲ್ಲಿ ನನ್ನ ನಾಟಕ, ಸಾಂಬಶಿವ ಪ್ರಹಸನವನ್ನು ಅಸಹ್ಯವಾಗಿ ತಿರುಚಿ ಪ್ರದರ್ಶಿಸಿರುವ ಬಗ್ಗೆ ನನಗೆ ತುಂಬ ವಿಷಾದವಾಗಿದೆ” ಎಂದಿರುವ ಕಂಬಾರರು, “ಮೊದಲನೆಯದಾಗಿ ನನ್ನ ನಾಟಕ ಪ್ರದರ್ಶಿಸುವುದಕ್ಕೆ ನನ್ನ ಅನುಮತಿ ಕೇಳಲೇ ಬೇಕಾಗಿತ್ತು. ಆದರೆ ಇವರು ಕೇಳಿಲ್ಲ. ರಂಗಾಯಣವಾದರೂ ನನ್ನ ಅನುಮತಿ ಇಲ್ಲದ ನಾಟಕ ಪ್ರದರ್ಶನಕ್ಕೆ ಅವಕಾಶ ಕೊಟ್ಟಿರುವುದು ವಿಷಾದಕರ” ಎಂದು ಟೀಕಿಸಿದ್ದಾರೆ.

“ಎರಡನೆಯದಾಗಿ, ನನ್ನ ಯಾವುದೇ ನಾಟಕಗಳಲ್ಲಿ ವ್ಯಕ್ತಿಗಳ ನಿಂದನೆ ಇರುವುದು ಸಾಧ್ಯವಿಲ್ಲ. ಅನುಮತಿ ಇಲ್ಲದೇ ನಾಟಕವನ್ನು ಪ್ರದರ್ಶಿಸಿದ್ದಕ್ಕೆ, ಪ್ರದರ್ಶಿಸಲು ಅವಕಾಶ ಮಾಡಿಕೊಟ್ಟವರಿಗೂ ಮತ್ತು ಇಲ್ಲದ ಸಾಹಿತ್ಯವನ್ನು ಸೇರಿಸಿದ್ದಕ್ಕೆ ನಿರ್ದೇಶಕರ ಮೇಲೂ ಈ ಅಹಿತಕರ ವಾತಾವರಣಕ್ಕೆ ಕಾರಣರಾದ, ಸಂಬಂಧಪಟ್ಟ ಎಲ್ಲರ ಮೇಲೂ, ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದು ಅವರು ಕೋರಿದ್ದಾರೆ.

ಇದನ್ನೂ ಓದಿ: ನಾಟಕದಲ್ಲಿ ಇಲ್ಲದ ವಿಚಾರ ತುರುಕಿ ಸಿದ್ದರಾಮಯ್ಯನವರಿಗೆ ಅವಹೇಳನ: ಕ್ರಮ ಜರುಗಿಸಲು ಮೈಸೂರು ಕಮಿಷನರ್‌ಗೆ ಕಂಬಾರರ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...