Homeಕರ್ನಾಟಕನಾಟಕದಲ್ಲಿ ಸಿದ್ದರಾಮಯ್ಯ, ಡಿ.ಕೆ.ಶಿ ಅವಹೇಳನ: ಮೈಸೂರು ರಂಗಾಯಣ ಮುತ್ತಿಗೆಗೆ ನಿರ್ಧಾರ

ನಾಟಕದಲ್ಲಿ ಸಿದ್ದರಾಮಯ್ಯ, ಡಿ.ಕೆ.ಶಿ ಅವಹೇಳನ: ಮೈಸೂರು ರಂಗಾಯಣ ಮುತ್ತಿಗೆಗೆ ನಿರ್ಧಾರ

- Advertisement -
- Advertisement -

ಮೈಸೂರಿನ ರಂಗಾಯಣದಲ್ಲಿ ಪ್ರದರ್ಶನಗೊಂಡ ನಾಟಕವೊಂದರಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಕುರಿತು ಅವಹೇಳನಕಾರಿ ಸಂಭಾಷಣೆ ಬಳಸಿರುವುದನ್ನು ಖಂಡಿಸಿ ಜನವರಿ 10 ರಂದು ರಂಗಾಯಣ ಮುತ್ತಿಗೆ ಹೋರಾಟ ನಡೆಸಲು ಸ್ವಾಭಿಮಾನಿ ಹೋರಾಟ ಸಮಿತಿ ನಿರ್ಧರಿಸಿದೆ.

‘ರಂಗಾಯಣದ ನಿರ್ದೇಶಕ ಅಡ್ಡಂಡ ಕಾರ್ಯಪ್ಪನವರ ಪ್ರತಿ ನಡೆಯು ಕೋಮು ಸಂಘರ್ಷಕ್ಕೆ ಕಾರಣವಾಗುತ್ತಿದೆ. ಸರ್ಕಾರದ ಸಂಸ್ಥೆಯಾದ ರಂಗಾಯಣವನ್ನು ತಮ್ಮ ದುರುದ್ದೇಶಕ್ಕೆ ಬಿಜೆಪಿ ಹಾಗೂ ಆರ್‌ಸ್‌ಎಸ್ ರಹಸ್ಯ ಕಾರ್ಯಸೂಚಿಗಳ ಜಾರಿಗೆ ಬಳಸಿಕೊಳ್ಳುತ್ತಿದ್ದಾರೆ’ ಎಂದು ಸಭೆಯಲ್ಲಿ ಆಕ್ರೋಶ ವ್ಯಕ್ತವಾಗಿದೆ.

ಮೈಸೂರು ನಗರದ ಓವಲ್ ಮೈದಾನದಲ್ಲಿ ಜಮಾವಣೆಗೊಂಡು ಖಂಡನಾ ಸಮಾವೇಶ ನಡೆಸಲಾಗುವುದು. ಆನಂತರ ರಂಗಾಯಣಕ್ಕೆ ಮುತ್ತಿಗೆ ಹಾಕಿ ಹೋರಾಟ ನಡೆಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ.

ವಿಧಾನಪರಿಷತ್‌ ಸದಸ್ಯ ಡಾ.ಡಿ.ತಿಮ್ಮಯ್ಯ, ಕರ್ನಾಟಕ ಪ್ರದೇಶ ಕುರುಬರ ಸಂಘದ ಅಧ್ಯಕ್ಷ ಬಿ.ಸುಬ್ರಹ್ಮಣ್ಯ, ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ, ಕಾಂಗ್ರೆಸ್ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಬಿ.ಜೆ.ವಿಜಯ್‌ಕುಮಾರ್, ನಗರ ಘಟಕದ ಅಧ್ಯಕ್ಷ ಆರ್.ಮೂರ್ತಿ, ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಅಧ್ಯಕ್ಷ ಕೆ.ಎಸ್.ಶಿವರಾಮು, ಪೌರಕಾರ್ಮಿಕರ ಸಂಘದ ಅಧ್ಯಕ್ಷ ನಾರಾಯಣ ಮುಂತಾದವರು ಸಭೆಯಲ್ಲಿ ಭಾಗವಹಿಸಿದ್ದರು.

ಏನಿದು ಪ್ರಕರಣ

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಚಂದ್ರಶೇಖರ ಕಂಬಾರರ ‘ಸಾಂಬಶಿವ ಪ್ರಹಸನ’ ನಾಟಕವನ್ನು ಕಾರ್ತಿಕ್ ಉಪಮನ್ಯು ನಿರ್ದೇಶನದಲ್ಲಿ ‘ನಾಗರತ್ನಮ್ಮ’ ರಂಗ ಕಾರ್ಯಾಗಾರದ ಶಿಬಿರಾರ್ಥಿಗಳು ಡಿಸೆಂಬರ್ 31ರ ಶನಿವಾರ ಪ್ರದರ್ಶಿಸುತ್ತಿದ್ದರು. ಈ ನಾಟಕದಲ್ಲಿ ಕೆಲವು ಅಂಶಗಳನ್ನು ತಿರುಚಿ ಸಿದ್ದರಾಮಯ್ಯನವರನ್ನು ಹೀಯಾಳಿಸಲಾಗಿದೆ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್‌ ಅವರನ್ನೂ ಗೇಲಿ ಮಾಡಲಾಗಿದೆ ಎಂದು  ಜಯಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

 

‘ಅನ್ನಭಾಗ್ಯ’, ‘ಕ್ಷೀರಭಾಗ್ಯ’, ‘ಶಾದಿ ಭಾಗ್ಯ’ಗಳನ್ನು ಕೊಟ್ಟು ಜನರನ್ನು ಅವರು ಸೋಂಬೇರಿಗಳನ್ನಾಗಿ ಮಾಡಿದರು. ಅದೇ ರೀತಿ ‘ಕಳ್ಳತನ ಭಾಗ್ಯ’ವನ್ನು ನೀಡಬೇಕಾಗಿತ್ತು ಎನ್ನುವ ಸಂಭಾಷಣೆಯನ್ನು ರಂಗದ ಮೇಲೆ ಪ್ರಸ್ತುತಪಡಿಸಲಾಗಿತ್ತು. ಕಾರ್ಯಕ್ರಮಗಳಲ್ಲಿ ನಿದ್ರೆ ಹೊಡೆಯುವುದು, ಗೊರಕೆ ಹೊಡೆದು ಅವರಿಂದ ರಾಜ್ಯವೇ ಹಾಳಾಗಿದೆ. ನಿಮಗೆ ಈ ಭಾರಿ ಬಾದಾಮಿಯೂ ಕೂಡ ಸಿಗುವುದಿಲ್ಲ ಎಂದು ಸೇವಕನ ಪಾತ್ರಧಾರಿಯಿಂದ ನಾಟಕದಲ್ಲಿ ಹೇಳಿಸಲಾಗಿದೆ” ಎಂದು ಆರೋಪಿಸಿದ್ದಾರೆ.

ಕರ್ನಾಟಕ ಪ್ರದೇಶ ಕುರುಬರ ಸಂಘದ ಅಧ್ಯಕ್ಷರಾದ ಬಿ.ಸುಬ್ರಹ್ಮಣ್ಯ“ಇದು ನೇರವಾಗಿ ಸಿದ್ದರಾಮಯ್ಯನವರಿಗೆ ಹೋಲಿಕೆ ಮಾಡಲಾಗಿದೆ. ಹಾಗೂ ಕೇಡಿ ಆಂಕಲ್ ಎಂದು ಮಂತ್ರಿಯ ಪಾತ್ರವನ್ನು ಸೃಷ್ಟಿಸಿ ಅದರಲ್ಲಿ ಕಳ್ಳತನ ಮಾಡಿ ಕೊಳ್ಳೆ ಹೊಡೆಯುತ್ತಿದ್ದಾನೆ ಎಂದು ಹೇಳಿಸಲಾಗಿದೆ. ಇದೂ ಕೂಡ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರನ್ನೇ ಹೋಲುವಂತೆ ಪಾತ್ರ ಸೃಷ್ಟಿಸಲಾಗಿದೆ ಎಂದು ಕಿಡಿಕಾರಿದ್ದಾರೆ.

ಇದಕ್ಕೆ ಸ್ವತಃ ಕಂಬಾರರೇ ಆಕ್ರೋಶ ವ್ಯಕ್ತಪಡಿಸಿ “ಈ ರೀತಿ ನಾಟಕವನ್ನು ತಿರುಚಿದವರು ಮತ್ತು ನಾಟಕ ಪ್ರದರ್ಶಿಸಲು ಅವಕಾಶ ನೀಡಿರುವವರ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು” ಎಂದು ಮೈಸೂರು ಪೊಲೀಸ್ ಕಮಿಷನರ್‌ಗೆ ಅವರು ಪತ್ರ ಬರೆದಿದ್ದಾರೆ.

“ಮೈಸೂರಿನ ರಂಗಾಯಣದಲ್ಲಿ ನನ್ನ ನಾಟಕ, ಸಾಂಬಶಿವ ಪ್ರಹಸನವನ್ನು ಅಸಹ್ಯವಾಗಿ ತಿರುಚಿ ಪ್ರದರ್ಶಿಸಿರುವ ಬಗ್ಗೆ ನನಗೆ ತುಂಬ ವಿಷಾದವಾಗಿದೆ” ಎಂದಿರುವ ಕಂಬಾರರು, “ಮೊದಲನೆಯದಾಗಿ ನನ್ನ ನಾಟಕ ಪ್ರದರ್ಶಿಸುವುದಕ್ಕೆ ನನ್ನ ಅನುಮತಿ ಕೇಳಲೇ ಬೇಕಾಗಿತ್ತು. ಆದರೆ ಇವರು ಕೇಳಿಲ್ಲ. ರಂಗಾಯಣವಾದರೂ ನನ್ನ ಅನುಮತಿ ಇಲ್ಲದ ನಾಟಕ ಪ್ರದರ್ಶನಕ್ಕೆ ಅವಕಾಶ ಕೊಟ್ಟಿರುವುದು ವಿಷಾದಕರ” ಎಂದು ಟೀಕಿಸಿದ್ದಾರೆ.

“ಎರಡನೆಯದಾಗಿ, ನನ್ನ ಯಾವುದೇ ನಾಟಕಗಳಲ್ಲಿ ವ್ಯಕ್ತಿಗಳ ನಿಂದನೆ ಇರುವುದು ಸಾಧ್ಯವಿಲ್ಲ. ಅನುಮತಿ ಇಲ್ಲದೇ ನಾಟಕವನ್ನು ಪ್ರದರ್ಶಿಸಿದ್ದಕ್ಕೆ, ಪ್ರದರ್ಶಿಸಲು ಅವಕಾಶ ಮಾಡಿಕೊಟ್ಟವರಿಗೂ ಮತ್ತು ಇಲ್ಲದ ಸಾಹಿತ್ಯವನ್ನು ಸೇರಿಸಿದ್ದಕ್ಕೆ ನಿರ್ದೇಶಕರ ಮೇಲೂ ಈ ಅಹಿತಕರ ವಾತಾವರಣಕ್ಕೆ ಕಾರಣರಾದ, ಸಂಬಂಧಪಟ್ಟ ಎಲ್ಲರ ಮೇಲೂ, ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದು ಅವರು ಕೋರಿದ್ದಾರೆ.

ಇದನ್ನೂ ಓದಿ: ನಾಟಕದಲ್ಲಿ ಇಲ್ಲದ ವಿಚಾರ ತುರುಕಿ ಸಿದ್ದರಾಮಯ್ಯನವರಿಗೆ ಅವಹೇಳನ: ಕ್ರಮ ಜರುಗಿಸಲು ಮೈಸೂರು ಕಮಿಷನರ್‌ಗೆ ಕಂಬಾರರ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...