Homeಕರ್ನಾಟಕನಾಟಕದಲ್ಲಿ ಸಿದ್ದರಾಮಯ್ಯ, ಡಿ.ಕೆ.ಶಿ ಅವಹೇಳನ: ಮೈಸೂರು ರಂಗಾಯಣ ಮುತ್ತಿಗೆಗೆ ನಿರ್ಧಾರ

ನಾಟಕದಲ್ಲಿ ಸಿದ್ದರಾಮಯ್ಯ, ಡಿ.ಕೆ.ಶಿ ಅವಹೇಳನ: ಮೈಸೂರು ರಂಗಾಯಣ ಮುತ್ತಿಗೆಗೆ ನಿರ್ಧಾರ

- Advertisement -
- Advertisement -

ಮೈಸೂರಿನ ರಂಗಾಯಣದಲ್ಲಿ ಪ್ರದರ್ಶನಗೊಂಡ ನಾಟಕವೊಂದರಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಕುರಿತು ಅವಹೇಳನಕಾರಿ ಸಂಭಾಷಣೆ ಬಳಸಿರುವುದನ್ನು ಖಂಡಿಸಿ ಜನವರಿ 10 ರಂದು ರಂಗಾಯಣ ಮುತ್ತಿಗೆ ಹೋರಾಟ ನಡೆಸಲು ಸ್ವಾಭಿಮಾನಿ ಹೋರಾಟ ಸಮಿತಿ ನಿರ್ಧರಿಸಿದೆ.

‘ರಂಗಾಯಣದ ನಿರ್ದೇಶಕ ಅಡ್ಡಂಡ ಕಾರ್ಯಪ್ಪನವರ ಪ್ರತಿ ನಡೆಯು ಕೋಮು ಸಂಘರ್ಷಕ್ಕೆ ಕಾರಣವಾಗುತ್ತಿದೆ. ಸರ್ಕಾರದ ಸಂಸ್ಥೆಯಾದ ರಂಗಾಯಣವನ್ನು ತಮ್ಮ ದುರುದ್ದೇಶಕ್ಕೆ ಬಿಜೆಪಿ ಹಾಗೂ ಆರ್‌ಸ್‌ಎಸ್ ರಹಸ್ಯ ಕಾರ್ಯಸೂಚಿಗಳ ಜಾರಿಗೆ ಬಳಸಿಕೊಳ್ಳುತ್ತಿದ್ದಾರೆ’ ಎಂದು ಸಭೆಯಲ್ಲಿ ಆಕ್ರೋಶ ವ್ಯಕ್ತವಾಗಿದೆ.

ಮೈಸೂರು ನಗರದ ಓವಲ್ ಮೈದಾನದಲ್ಲಿ ಜಮಾವಣೆಗೊಂಡು ಖಂಡನಾ ಸಮಾವೇಶ ನಡೆಸಲಾಗುವುದು. ಆನಂತರ ರಂಗಾಯಣಕ್ಕೆ ಮುತ್ತಿಗೆ ಹಾಕಿ ಹೋರಾಟ ನಡೆಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ.

ವಿಧಾನಪರಿಷತ್‌ ಸದಸ್ಯ ಡಾ.ಡಿ.ತಿಮ್ಮಯ್ಯ, ಕರ್ನಾಟಕ ಪ್ರದೇಶ ಕುರುಬರ ಸಂಘದ ಅಧ್ಯಕ್ಷ ಬಿ.ಸುಬ್ರಹ್ಮಣ್ಯ, ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ, ಕಾಂಗ್ರೆಸ್ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಬಿ.ಜೆ.ವಿಜಯ್‌ಕುಮಾರ್, ನಗರ ಘಟಕದ ಅಧ್ಯಕ್ಷ ಆರ್.ಮೂರ್ತಿ, ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಅಧ್ಯಕ್ಷ ಕೆ.ಎಸ್.ಶಿವರಾಮು, ಪೌರಕಾರ್ಮಿಕರ ಸಂಘದ ಅಧ್ಯಕ್ಷ ನಾರಾಯಣ ಮುಂತಾದವರು ಸಭೆಯಲ್ಲಿ ಭಾಗವಹಿಸಿದ್ದರು.

ಏನಿದು ಪ್ರಕರಣ

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಚಂದ್ರಶೇಖರ ಕಂಬಾರರ ‘ಸಾಂಬಶಿವ ಪ್ರಹಸನ’ ನಾಟಕವನ್ನು ಕಾರ್ತಿಕ್ ಉಪಮನ್ಯು ನಿರ್ದೇಶನದಲ್ಲಿ ‘ನಾಗರತ್ನಮ್ಮ’ ರಂಗ ಕಾರ್ಯಾಗಾರದ ಶಿಬಿರಾರ್ಥಿಗಳು ಡಿಸೆಂಬರ್ 31ರ ಶನಿವಾರ ಪ್ರದರ್ಶಿಸುತ್ತಿದ್ದರು. ಈ ನಾಟಕದಲ್ಲಿ ಕೆಲವು ಅಂಶಗಳನ್ನು ತಿರುಚಿ ಸಿದ್ದರಾಮಯ್ಯನವರನ್ನು ಹೀಯಾಳಿಸಲಾಗಿದೆ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್‌ ಅವರನ್ನೂ ಗೇಲಿ ಮಾಡಲಾಗಿದೆ ಎಂದು  ಜಯಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

 

‘ಅನ್ನಭಾಗ್ಯ’, ‘ಕ್ಷೀರಭಾಗ್ಯ’, ‘ಶಾದಿ ಭಾಗ್ಯ’ಗಳನ್ನು ಕೊಟ್ಟು ಜನರನ್ನು ಅವರು ಸೋಂಬೇರಿಗಳನ್ನಾಗಿ ಮಾಡಿದರು. ಅದೇ ರೀತಿ ‘ಕಳ್ಳತನ ಭಾಗ್ಯ’ವನ್ನು ನೀಡಬೇಕಾಗಿತ್ತು ಎನ್ನುವ ಸಂಭಾಷಣೆಯನ್ನು ರಂಗದ ಮೇಲೆ ಪ್ರಸ್ತುತಪಡಿಸಲಾಗಿತ್ತು. ಕಾರ್ಯಕ್ರಮಗಳಲ್ಲಿ ನಿದ್ರೆ ಹೊಡೆಯುವುದು, ಗೊರಕೆ ಹೊಡೆದು ಅವರಿಂದ ರಾಜ್ಯವೇ ಹಾಳಾಗಿದೆ. ನಿಮಗೆ ಈ ಭಾರಿ ಬಾದಾಮಿಯೂ ಕೂಡ ಸಿಗುವುದಿಲ್ಲ ಎಂದು ಸೇವಕನ ಪಾತ್ರಧಾರಿಯಿಂದ ನಾಟಕದಲ್ಲಿ ಹೇಳಿಸಲಾಗಿದೆ” ಎಂದು ಆರೋಪಿಸಿದ್ದಾರೆ.

ಕರ್ನಾಟಕ ಪ್ರದೇಶ ಕುರುಬರ ಸಂಘದ ಅಧ್ಯಕ್ಷರಾದ ಬಿ.ಸುಬ್ರಹ್ಮಣ್ಯ“ಇದು ನೇರವಾಗಿ ಸಿದ್ದರಾಮಯ್ಯನವರಿಗೆ ಹೋಲಿಕೆ ಮಾಡಲಾಗಿದೆ. ಹಾಗೂ ಕೇಡಿ ಆಂಕಲ್ ಎಂದು ಮಂತ್ರಿಯ ಪಾತ್ರವನ್ನು ಸೃಷ್ಟಿಸಿ ಅದರಲ್ಲಿ ಕಳ್ಳತನ ಮಾಡಿ ಕೊಳ್ಳೆ ಹೊಡೆಯುತ್ತಿದ್ದಾನೆ ಎಂದು ಹೇಳಿಸಲಾಗಿದೆ. ಇದೂ ಕೂಡ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರನ್ನೇ ಹೋಲುವಂತೆ ಪಾತ್ರ ಸೃಷ್ಟಿಸಲಾಗಿದೆ ಎಂದು ಕಿಡಿಕಾರಿದ್ದಾರೆ.

ಇದಕ್ಕೆ ಸ್ವತಃ ಕಂಬಾರರೇ ಆಕ್ರೋಶ ವ್ಯಕ್ತಪಡಿಸಿ “ಈ ರೀತಿ ನಾಟಕವನ್ನು ತಿರುಚಿದವರು ಮತ್ತು ನಾಟಕ ಪ್ರದರ್ಶಿಸಲು ಅವಕಾಶ ನೀಡಿರುವವರ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು” ಎಂದು ಮೈಸೂರು ಪೊಲೀಸ್ ಕಮಿಷನರ್‌ಗೆ ಅವರು ಪತ್ರ ಬರೆದಿದ್ದಾರೆ.

“ಮೈಸೂರಿನ ರಂಗಾಯಣದಲ್ಲಿ ನನ್ನ ನಾಟಕ, ಸಾಂಬಶಿವ ಪ್ರಹಸನವನ್ನು ಅಸಹ್ಯವಾಗಿ ತಿರುಚಿ ಪ್ರದರ್ಶಿಸಿರುವ ಬಗ್ಗೆ ನನಗೆ ತುಂಬ ವಿಷಾದವಾಗಿದೆ” ಎಂದಿರುವ ಕಂಬಾರರು, “ಮೊದಲನೆಯದಾಗಿ ನನ್ನ ನಾಟಕ ಪ್ರದರ್ಶಿಸುವುದಕ್ಕೆ ನನ್ನ ಅನುಮತಿ ಕೇಳಲೇ ಬೇಕಾಗಿತ್ತು. ಆದರೆ ಇವರು ಕೇಳಿಲ್ಲ. ರಂಗಾಯಣವಾದರೂ ನನ್ನ ಅನುಮತಿ ಇಲ್ಲದ ನಾಟಕ ಪ್ರದರ್ಶನಕ್ಕೆ ಅವಕಾಶ ಕೊಟ್ಟಿರುವುದು ವಿಷಾದಕರ” ಎಂದು ಟೀಕಿಸಿದ್ದಾರೆ.

“ಎರಡನೆಯದಾಗಿ, ನನ್ನ ಯಾವುದೇ ನಾಟಕಗಳಲ್ಲಿ ವ್ಯಕ್ತಿಗಳ ನಿಂದನೆ ಇರುವುದು ಸಾಧ್ಯವಿಲ್ಲ. ಅನುಮತಿ ಇಲ್ಲದೇ ನಾಟಕವನ್ನು ಪ್ರದರ್ಶಿಸಿದ್ದಕ್ಕೆ, ಪ್ರದರ್ಶಿಸಲು ಅವಕಾಶ ಮಾಡಿಕೊಟ್ಟವರಿಗೂ ಮತ್ತು ಇಲ್ಲದ ಸಾಹಿತ್ಯವನ್ನು ಸೇರಿಸಿದ್ದಕ್ಕೆ ನಿರ್ದೇಶಕರ ಮೇಲೂ ಈ ಅಹಿತಕರ ವಾತಾವರಣಕ್ಕೆ ಕಾರಣರಾದ, ಸಂಬಂಧಪಟ್ಟ ಎಲ್ಲರ ಮೇಲೂ, ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದು ಅವರು ಕೋರಿದ್ದಾರೆ.

ಇದನ್ನೂ ಓದಿ: ನಾಟಕದಲ್ಲಿ ಇಲ್ಲದ ವಿಚಾರ ತುರುಕಿ ಸಿದ್ದರಾಮಯ್ಯನವರಿಗೆ ಅವಹೇಳನ: ಕ್ರಮ ಜರುಗಿಸಲು ಮೈಸೂರು ಕಮಿಷನರ್‌ಗೆ ಕಂಬಾರರ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...