Homeಕರ್ನಾಟಕಸಿದ್ದರಾಮಯ್ಯ, ಡಿ.ಕೆ.ಶಿ.ಗೆ ಗುಂಡಿಕ್ಕಿ ಕೊಲ್ಲುವ ಬೆದರಿಕೆ: ಪಬ್ಲಿಕ್‌ ಟಿವಿ ವಿರುದ್ಧ ಕಾಂಗ್ರೆಸ್‌ ದೂರು

ಸಿದ್ದರಾಮಯ್ಯ, ಡಿ.ಕೆ.ಶಿ.ಗೆ ಗುಂಡಿಕ್ಕಿ ಕೊಲ್ಲುವ ಬೆದರಿಕೆ: ಪಬ್ಲಿಕ್‌ ಟಿವಿ ವಿರುದ್ಧ ಕಾಂಗ್ರೆಸ್‌ ದೂರು

- Advertisement -
- Advertisement -

ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್‌ ಅವರಿಗೆ ಕೊಲೆ ಬೆದರಿಕೆ ಹಾಕಿದ ದಾವಣಗೆರೆಯ ವೀರಣ್ಣ ಮತ್ತು ಪ್ರಚೋದನಕಾರಿ ಹೇಳಿಕೆಯನ್ನು ಪ್ರೋತ್ಸಾಹಿಸಿದ ಪಬ್ಲಿಕ್ ಟಿವಿ ನಿರೂಪಕ ಅರಣ್‌ ಬಡಿಗೇರ್‌, ವಿಡಿಯೊ ಪ್ರಕಟಿಸಿದ ಪಬ್ಲಿಕ್ ಟಿ.ವಿ. ಫೇಸ್‌ಬುಕ್ ಖಾತೆಯ ಅಡ್ಮಿನ್‌ ವಿರುದ್ಧ ಕಾಂಗ್ರೆಸ್ ದೂರು ನೀಡಿದೆ.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಾನೂನು ಮತ್ತು ಮಾನವ ಹಕ್ಕುಗಳ ವಿಭಾಗದ ಪ್ರಧಾನ ಕಾರ್ಯದರ್ಶಿ ಸೂರ್ಯ ಮುಕುಂದ್‌ರಾಜ್ ಅವರು ಬೆಂಗಳೂರಿನ ಹೈಗ್ರೌಂಡ್ಸ್‌‌ ಪೊಲೀಸ್‌ ಠಾಣೆಗೆ ದೂರು ನೀಡಿದ್ದು, ಪಬ್ಲಿಕ್ ಟಿವಿಯಲ್ಲಿ ಪ್ರಸಾರವಾದ ಕಾರ್ಯಕ್ರಮದಲ್ಲಿ ಮಾಡಲಾಗಿರುವ ಕೊಲೆ ಬೆದರಿಕೆಯನ್ನು ಉಲ್ಲೇಖಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಜೂನ್‌ 30ರಂದು ಕೋಮು ಭಾವನೆಯನ್ನು ಪ್ರಚೋದಿಸುವಂತೆ ಪಬ್ಲಿಕ್‌ ಟಿ.ವಿ. ವಾಹಿನಿಯಲ್ಲಿ ಸಾರ್ವಜನಿಕರ ಪೋನ್‌ ಇನ್ ಕಾರ್ಯಕ್ರಮ ಪ್ರಸಾರ ಮಾಡಲಾಗುತ್ತಿದ್ದ ಸಂದರ್ಭದಲ್ಲಿ ದಾವಣಗೆರೆಯಿಂದ ಕರೆ ಮಾಡಿದ ವೀರಣ್ಣ ಎಂಬಾತ ಕೊಲೆ ಬೆದರಿಕೆ ಹಾಕಿದ್ದಾನೆ. ‘ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್‌ ಅವರನ್ನು ಗುಂಡಿಕ್ಕಿ ಸಾಯಿಸಿದರೆ ಎಲ್ಲ ಸರಿಹೋಗುತ್ತದೆ’ ಎಂದು ಹತ್ಯೆ ಮಾಡಲು ಪ್ರಚೋದನೆ ನೀಡಿರುತ್ತಾನೆ. ಆತನ ಹೇಳಿಕೆಯನ್ನು ಕಾರ್ಯಕ್ರಮ ನಿರೂಪಕ ಅರುಣ್‌ ಬಡಿಗೇರ್‌ ತೀಕ್ಷ್ಣವಾಗಿ ಖಂಡಿಸುವುದನ್ನು ಬಿಟ್ಟು ಮತ್ತಷ್ಟು ಪ್ರಚೋದನಕಾರಿ ಮಾತನ್ನು ಹೇಳಲು ಪ್ರೋತ್ಸಾಹದಿಂದ ಮಾತನಾಡಿದ್ದಾರೆ. ನಿರೂಪಕ ಅರುಣ್‌ ಬಡಿಗೇರ್‌ ಮತ್ತು ದಾವಣೆಗೆರೆ ಮೂಲದ ಕಿಡಿಗೇಡಿ ವೀರಣ್ಣ ಇಬ್ಬರ ಸಂಭಾಷಣೆ ಇರುವ ವಿಡಿಯೊವನ್ನು ಪಬ್ಲಿಕ್‌ ಟಿವಿಯ ಫೇಸ್ಬುಕ್‌ ಖಾತೆಯಲ್ಲಿ ಪ್ರಕಟಿಸಲಾಗಿದೆ” ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿರಿ: ಪಬ್ಲಿಕ್‌, ಸುವರ್ಣ, ಟಿವಿ9 ಮತ್ತು ಪಬ್ಲಿಕ್ ಟಿವಿ ಕಚೇರಿ ಮುಂದೆ ಬುಧವಾರ ‘ಆತ್ಮಾವಲೋಕನ ಸತ್ಯಾಗ್ರಹ’

“ಫಸ್ಟ್‌ ಸಿದ್ರಾಮಣ್ಣ & ಡಿಕೆಶಿನ ಗುಂಡಿಟ್ಟು ಹೊಡೆದ್ರೆ ಇವ್ರೆಲ್ಲ ತಣ್ಣಗಾಗ್ತಾರೆ ಸರ್‌!” ಎಂಬ ಶೀರ್ಷಿಕೆಯಲ್ಲಿ ವಿಡಿಯೊ ಪೋಸ್ಟ್ ಮಾಡಲಾಗಿದ್ದು, #UdaipurTailor #Murder #TerrorAttack #KanhaiyaLal  #ProphetMohammad #Udaipur #Rajasthan #DKShivakumar #Siddaramaiah ಎಂಬ ಹ್ಯಾಷ್‌ಟ್ಯಾಗ್‌ಗಳನ್ನು ಪೋಸ್ಟ್‌ನಲ್ಲಿ ಹಾಕಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಜೊತೆಗೆ ಸಂಭಾಷಣೆಯ ವಿವರಣೆಯನ್ನು ಪೊಲೀಸರಿಗೆ ಸಲ್ಲಿಸಲಾಗಿದೆ.

ಪಬ್ಲಿಕ್ ಟಿ.ವಿ.ಯಲ್ಲಿ ನಡೆದ ಸಂಭಾಷಣೆ ಹೀಗಿದೆ:

ವೀರಣ್ಣ: ಮುಸಲ್ಮಾನರಿಗೆ ಯಾವುದೇ ರೀತಿಯ ಬೆಂಬಲ ಕೊಡಬಾರದು. ಪಬ್ಲಿಕ್‌ ಟಿ.ವಿ.ಗೆ ಮುಸಲ್ಮಾರನ್ನು ಕರೆಸಿ ಇದು ಮಾಡುತ್ತೀರಲ್ಲ, ಅದನ್ನು ಬಿಡಬೇಕು.

ಅರುಣ್ ಬಡಿಗೇರ್‌: ಅವರನ್ನು ಕರೆಸಲೇಬಾರದು ಅಂತೀರಾ?

ವೀರಣ್ಣ: ಕರೆಸಲೇಬಾರದು ಅವರನ್ನು. ಅವರೊಂದು ಇವರೊಂದು ಹೇಳುತ್ತಾರೆ. ಅವರು ಬಾಲ ಬಿಚ್ಚದಂತೆ ನೋಡಿಕೊಳ್ಳಬೇಕು. ಅವರಿಗೆ ಸ್ಥಾನ ಮಾನ ಕೊಡಬಾರದು.

ಬಡಿಗೇರ್:  ಅವರು ಬಾಲ ಬಿಚ್ಚದಂತೆ ನೋಡಿಕೊಳ್ಳಬೇಕು.

ವೀರಣ್ಣ: ಅವರನ್ನು ಕರೆಸಲೇಬಾರದು. ಅವರಿಗೆ ಭಾರತ ದೇಶದಲ್ಲಿ ಯಾವುದೇ ಸ್ಥಾನಮಾನ ಕೊಡಬಾರದು. ಅನ್ನ ನೀರು ಹಾಕಿರುವವರು ನಾವು. ನಮ್ಮ ಮೇಲೆಯೇ ಬಾಲ ಬಿಚ್ಚುತ್ತಿದ್ದಾರೆ. ಫಸ್ಟ್‌ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ಗೆ ಗುಂಡಿಕ್ಕಿ ಹೊಡೆದರೆ ಇವರೆಲ್ಲ ಸುಮ್ಮನಾಗುತ್ತಾರೆ.

(ಈ ಮಾತಿಗೆ ನಗುತ್ತಾ ಬಡಿಗೇರ್‌ ಪ್ರತಿಕ್ರಿಯೆ ನೀಡುತ್ತಾರೆ)

ಬಡಿಗೇರ್‌: ಸಾರ್‌, ನಾಯಕರ ವಿಚಾರದಲ್ಲಿ ಹಾಗೆಲ್ಲ ಮಾತನಾಡಬಾರದು. ಅವರ ಮೇಲೆ ಕೋಪ ಇದೆ ಎಂದು ಹೀಗೆಲ್ಲ ಹೇಳಬಾರದು. ಹಂತಕರಿಗೂ ನಿಮಗೂ ವ್ಯತ್ಯಾಸ ಏನಿದೆ?

ವೀರಣ್ಣ: ನಿನ್ನೆಯಿಂದ ಇವರ್‍ಯಾಕೆ ಮಾತನಾಡಿಲ್ಲ?

ಬಡಿಗೇರ್‌: ಭಿನ್ನಾಭಿಪ್ರಾಯ ಇರಲಿ. ಆದರೆ ನಮಗೂ ಅವರಿಗೂ ವ್ಯತ್ಯಾಸ ಇರುತ್ತದೆಯೇ? ತಮ್ಮ ಪಕ್ಷದಲ್ಲಿರುವ ವೋಟುಗಳಿಗೆ ತಮ್ಮ ನಿರ್ಧಾರಗಳನ್ನು ತೆಗೆದುಕೊಳ್ಳಬಹುದು. ಹಾಗೆಂದು ಗುಂಡು ಹೊಡೆದು ಸಾಯಿಸಿ ಎಂದರೆ? ಇದು ಒಳ್ಳೆಯದಲ್ಲ.

ವೀರಣ್ಣ: ಒಂದು ಕಲ್ಲಂಗಡಿಯನ್ನು ಹೊಡೆದಿದ್ದಕ್ಕೆ ದಂಡ ಕಟ್ಟಿಸಲಿಲ್ಲವೇ?

ಬಡಿಗೇರ್‌: ಹೂಂ ಹೂಂ, ಹಾ… ಹಾ.. ಓಕೆ.

ವೀರಣ್ಣ: ಅವರ ಬೆಂಬಲದಿಂದಾಗಿಯೇ ನಿಗುರುತ್ತಿದ್ದಾರೆ.

ಬಡಿಗೇರ್‌: ಅವರನ್ನು ಬೆಂಬಲಿಸುವುದಕ್ಕಾಗಿಯೇ ಹೀಗೆ ಮಾಡುತ್ತಿದ್ದಾರೆ ಅಂತಾನಾ?

ವೀರಣ್ಣ: ಕರೆಕ್ಟ್‌ ಸರ್‌‌.

ಬಡಿಗೇರ್‌: ಓಕೆ ಓಕೆ

ವೀರಣ್ಣ: ಅವರನ್ನು ಫಸ್ಟ್‌ ನಿರ್ನಾಮ ಮಾಡಿದರೆ ಇವರೆಲ್ಲ ಪ್ಲಾಪ್‌ ಆಗುತ್ತಾರೆ.

ಬಡಿಗೇರ್‌: ಧನ್ಯವಾದಗಳು ವೀರಣ್ಣನವರೇ ನಮ್ಮ ಜೊತೆ ಮಾತನಾಡಿದ್ದಕ್ಕೆ…

– ಹೀಗೆ ಸಂಭಾಷಣೆ ನಡೆದಿರುವುದನ್ನು ದೂರಿನಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿರಿ: ಪಬ್ಲಿಕ್‌‌ ಟಿವಿ ಸಂಪಾದಕ ರಂಗನಾಥ್‌ ಮತ್ತು ನಿರೂಪಕ ಅರುಣ್ ಬಡಿಗೇರ್‌ ವಿರುದ್ಧ FIR ದಾಖಲು

“ದೇಶದಾದ್ಯಂತ ಈಗಾಗಲೇ ಪರಿಸ್ಥಿತಿ ಉದ್ವಿಗ್ನವಾಗಿದ್ದು ಗೌರವಾನ್ವಿತ ಸುಪ್ರೀಂಕೋರ್ಟ್ ಕೂಡ ಇದನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಇಂತಹ ಸಂದರ್ಭದಲ್ಲಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಗೆ ಭಂಗ ತರುವಂತೆ ಪಬ್ಲಿಕ್‌ ಟಿವಿಯಲ್ಲಿ ಪ್ರಚೋದನಕಾರಿ ಕಾರ್ಯಕ್ರಮ ಪ್ರಸಾರ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಲಾಗಿದೆ. ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್‌ ಅವರನ್ನು ಕೊಲೆ ಮಾಡುವಂತೆ ಪ್ರಚೋದನೆ ನೀಡಿರುವ ದಾವಣೆಗೆರೆ ಮೂಲದ ವೀರಣ್ಣ, ಆತನಿಗೆ ಪ್ರೋತ್ಸಾಹಿಸುವಂತೆ ವರ್ತಿಸಿರುವ ನಿರೂಪಕ ಅರುಣ್ ಬಡಿಗೇರ್‌ ಹಾಗೂ ಪ್ರಚೋದನಕಾರಿ ಪೋಸ್ಟ್‌ ಮಾಡಿರುವ ಪಬ್ಲಿಕ್‌ ಟಿವಿ ಫೇಸ್ಬುಕ್‌ ಖಾತೆ ಅಡ್ಮಿನ್ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕೋರುತ್ತೇನೆ” ಎಂದು ಮುಕುಂದ್ ರಾಜ್ ದೂರಿನಲ್ಲಿ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಮೊದಲು ಕಮ್ಯೂನಿಸ್ಟ್ ರನ್ನಾ ಬೀದಿಯಲ್ಲಿ ಬಡಿಬೇಕು ,ಈ ರೀತಿ ದೇಶ ಹಾಳಾಗಲು ನೀವೇ ಕಾರಣ

  2. ವೀರಣ್ಣ, ಬಡಿಗೇರ್ ಇಬ್ರನ್ನು 4,5 ದಿನ ಪೊಲೀಸ್ ಕಸ್ಟಡಿಗೆ ಕೊಟ್ಟು ಲಾಠಿಗೆ ಉಪ್ಪು, ಖಾರ ಹಚ್ಚಿ ಮಸಾಜ್ ಮಾಡಸಬೇಕು ಆವಾಗ್ಲೇ ಬುದ್ದಿ ಬರೋದು,, ಮುಸಲ್ಮಾನರಿಗೆ ಊಟ, ಬಟ್ಟೆ ಈ 2 ಭೋ… ಮಕ್ಕಳು ಕೊಡತಾರ…? ಇಲ್ಲಿ ಎಲ್ಲರು ಟ್ಯಾಕ್ಸ್ ಕಟ್ಟತಾರೆ. ಮೊದಲು ಮೆದಳು ತಲೇಲಿದಿಯೋ ಅಥವಾ ಮುಕಳಿಲಿ ಇದಿಯಾ ಅಂತ ಸ್ಕ್ಯಾನಿಂಗ್ ಮಾಡಸ್ಕೊಳ್ರೋ ನಾಯಿಗಳ. 😡😡😡

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...