Homeಮುಖಪುಟಸಿದ್ದರಾಮಯ್ಯ ಬ್ರಾಹ್ಮಣ್ಯವನ್ನು ಹೆಚ್ಚು ಆಳವಾಗಿ ಬೇರೂರಿಸುವ ಜಾತಿ ನಾಯಕರು: ನಟ ಚೇತನ್

ಸಿದ್ದರಾಮಯ್ಯ ಬ್ರಾಹ್ಮಣ್ಯವನ್ನು ಹೆಚ್ಚು ಆಳವಾಗಿ ಬೇರೂರಿಸುವ ಜಾತಿ ನಾಯಕರು: ನಟ ಚೇತನ್

ಚೇತನ್‌ರವರ ಹೇಳಿಕೆಗೆ ಕರ್ನಾಟಕ ಜನಾಧಿಕಾರ ಪಕ್ಷದ ಅಧ್ಯಕ್ಷರಾದ ಬಿ. ಹರೀಶ್ ಕುಮಾರ್‌ರವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

ಕರ್ನಾಟಕದ ಪ್ರಬಲ ಮತ್ತು ವಾದನೀಯವಾಗಿ ಕಾಂಗ್ರೆಸ್ಸಿನ ಅತ್ಯುತ್ತಮ ನಾಯಕರಾದ ಸಿದ್ದರಾಮಯ್ಯನವರು, ಮೂಲಭೂತವಾಗಿ ಬ್ರಾಹ್ಮಣ್ಯವನ್ನು ಹೆಚ್ಚು ಆಳವಾಗಿ ಬೇರೂರಿಸುವ ‘ಜಾತಿ’ ನಾಯಕರು ಎಂದು ನಟ ಚೇತನ್ ಅಭಿಪ್ರಾಯಪಟ್ಟಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು “ನಿಜವಾದ ಬದಲಾವಣೆಗೆ ಕರ್ನಾಟಕ ಮತ್ತು ಭಾರತಕ್ಕೆ ‘ಜಾತಿ ವಿರೋಧಿ’ ನಾಯಕತ್ವ ಬೇಕಾಗಿದೆ. ಸಿದ್ದರಾಮಯ್ಯನವರ ಸೇವೆ ‘ಹುಟ್ಟಿದ ಜಾತಿಗೆ’ ಮಾತ್ರ ಸೀಮಿತವಾಗಿದ್ದು, ಇತರೆ ಬಹುಜನರಿಂದ ಸಿಗುವ ಮತಗಳಿಗಾಗಿ ಮಾತ್ರ ಬಣ್ಣದ ಮಾತಾಡುತ್ತಾರೆ” ಎಂದು ಆರೋಪಿಸಿದ್ದಾರೆ.

ಚೇತನ್‌ರವರ ಹೇಳಿಕೆಗೆ ಕರ್ನಾಟಕ ಜನಾಧಿಕಾರ ಪಕ್ಷದ ಅಧ್ಯಕ್ಷರಾದ ಹರೀಶ್ ಕುಮಾರ್‌ರವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯನವರು ಹೇಗೆ ಬ್ರಾಹ್ಮಣ್ಯ ಬೇರೂರಿಸುತ್ತಿದ್ದಾರೆ ಎಂಬದುನ್ನು ಉದಾಹರಣೆ ಸಹಿತ ವಿವರಿಸಬೇಕೆಂದು ಒತ್ತಾಯಿಸಿದ್ದಾರೆ.

ಸಿದ್ದರಾಮಯ್ಯ ಎಲ್ಲಿ ಬ್ರಾಹ್ಮಣ್ಯವನ್ನು ಗಟ್ಟಿಗೊಳಿಸಿದರು? ಅವರು ಯಾವುದಾದರೂ ಮಠಗಳಿಗೆ ನಡೆದುಕೊಂಡಿದ್ದಾರೆಯೇ? ಯಾವುದಾದರೂ ಸ್ವಾಮೀಜಿಯ ಅಣತಿಯಂತೆ ಕಾರ್ಯನಿರ್ವಹಿಸಿದ್ದಾರೆಯೇ? ಯಾವುದಾದರೂ ಅರ್ಚಕರ ಕಾಲಿಗೆ ಬಿದ್ದು ಏನಾದರೂ ಸಂದೇಶ ರವಾನಿಸಿದ್ದಾರೆಯೇ? ಸಿದ್ದರಾಮಯ್ಯನವರ ಯಾವ ನಡವಳಿಕೆಯು ಬ್ರಾಹ್ಮಣ್ಯವನ್ನು ಸಾರಿ ಹೇಳುತ್ತದೆ ಎಂದು ಚೇತನ್ ಸ್ಪಷ್ಟಪಡಿಸಬೇಕಾಗುತ್ತದೆ. ಕಾಂಗ್ರೆಸ್ಸಿನಲ್ಲಿ ಬ್ರಾಹ್ಮಣ್ಯವನ್ನು ಬೇರೂರಿಸುವ ಹಲವು ನಾಯಕರಿದ್ದಾರೆ. ಆದರೆ ಅವರೆಲ್ಲರನ್ನೂ ಬಿಟ್ಟು ಸಿದ್ದರಾಮಯ್ಯರನ್ನು ಟಾರ್ಗೆಟ್ ಮಾಡುವುದರ ಹಿಂದೆ ಗೆಳೆಯ ಚೇತನ್ ನ “ಜಾತಿ”ಯೇನಾದರೂ ವವ್ಯವಸ್ಥಿತವಾಗಿ ಕೆಲಸ ಮಾಡಿದೆಯೇ? ಎಂಬ ಅನುಮಾನಗಳು ಬರುವಂತಿದೆ ಎಂದು ಬಿ. ಹರೀಶ್ ಕುಮಾರ್ ಪ್ರತಿಕ್ರಿಯಿಸಿದ್ದಾರೆ.

ಒಬ್ಬ ಹೋರಾಟಗಾರ ಅನ್ನಿಸಿಕೊಳ್ಳಬೇಕಾದರೆ ಆತನಿಗೆ ಸಮಾಜದ ಜಾತಿ, ಸಾಮಾಜಿಕತೆ, ಅರ್ಥಿಕ, ರಾಜಕೀಯ ಸ್ಥಿತಿಗತಿಗಳ ಒಳನೋಟ ಇರಬೇಕು. ಸಿದ್ದರಾಮಯ್ಯನವರ ಸ್ವಜಾತಿ ಪ್ರೇಮದ ಬಗ್ಗೆ ಚೇತನ್ ಬರೆದಿದ್ದಾರೆ. ಸಿದ್ದರಾಮಯ್ಯ ಈ ರಾಜ್ಯಕ್ಕೆ ಕೊಟ್ಟ ಸೇವೆಯನ್ನು ಅವರು ಮಂಡಿಸಿದ ಬಜೆಟ್ ಮತ್ತು ಯೋಜನೆಗಳ ಮೂಲಕ ಮಾತ್ರ ಅಳೆಯಬೇಕು. ಯಾವ ಬಜೆಟ್ ನಲ್ಲಿ ಕುರುಬರಿಗಾಗಿ ಪ್ರತ್ಯೇಕ ಯೋಜನೆ/ಅನುದಾನವನ್ನು ಮೀಸಲಿಟ್ಟರು? ಸಿದ್ದರಾಮಯ್ಯರ ಕ್ಯಾಬಿನೆಟ್ ನಲ್ಲಿ ಇದ್ದ ಕುರುಬ ಸಮುದಾಯದ ಮಂತ್ರಿಗಳು ಎಷ್ಟು? ಎಷ್ಟು ನಿಗಮ ಮಂಡಳಿಗಳಲ್ಲಿ ಕುರುಬ ನಾಯಕರಿಗೆ ಸ್ಥಾನಮಾನ ನೀಡಲಾಗಿತ್ತು. ಜನಸಂಖ್ಯೆಯ ಆಧಾರದ ಮೇಲೆ ಅವಕಾಶ ನೀಡಲಾಗಿತ್ತೋ? ಸಾಮಾಜಿಕವಾಗಿ ಜಾತಿ ಪ್ರಭಾವದ ಆಧಾರದ ಮೇಲೆ ಅವಕಾಶ ನೀಡಲಾಗಿತ್ತೋ? ಸೂಕ್ಷ್ಮ, ಅತಿಸೂಕ್ಷ್ಮ ಜಾತಿಗಳವರಿಗೆ ಸಿದ್ದರಾಮಯ್ಯ ಮಾಡಿದ್ದೇನು? ಲೈಂಗಿಕ ಅಲ್ಪಸಂಖ್ಯಾತರ ಬಗ್ಗೆ ಸಿದ್ದರಾಮಯ್ಯರ ನಿಲುವೇನು? ಎಂಬುದರ ಬಗ್ಗೆ ಚೇತನ್ ಗೆ ಅಧ್ಯಯನದ ಅಗತ್ಯವಿದೆ ಎಂದು ಹರೀಶ್ ಕುಮಾರ್ ತಿಳಿಸಿದ್ದಾರೆ.

ಎಸ್ಸಿ ಮೀಸಲಾತಿಗಾಗಿ ಕುರುಬರು ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆಯಲ್ಲಿ ಸಮಾವೇಶ ನಡೆಸಿದಾಗ ಸಿದ್ದರಾಮಯ್ಯ ನಿಲುವೇನಾಗಿತ್ತು? “ನಿಜವಾಗಿಯೂ ಮೀಸಲಾತಿ ಬೇಕಾಗಿರುವ ಸಮುದಾಯಗಳಿಗೆ ನಾವು ಅನ್ಯಾಯ ಮಾಡಿದಂತಾಗುತ್ತದೆ, ನಾನು ಕುರುಬ ಸಮಾವೇಶಕ್ಕೆ ಹೋಗುವುದಿಲ್ಲ” ಎಂದು ಸಿದ್ದರಾಮಯ್ಯ ಹೇಳಿದ್ದನ್ನು ಬೇರೆ ಯಾವ ನಾಯಕರಿಂದಾದರೂ ನಿರೀಕ್ಷಿಸಲು ಸಾಧ್ಯವೇ? ಎಂದೂ ಸಹ ಅವರು ಹೇಳಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪರ-ವಿರೋಧದ ಚರ್ಚೆ ಆರಂಭವಾಗಿದೆ.


ಇದನ್ನೂ ಓದಿ; RSS ತಾಲಿಬಾನ್‌ನಂತೆ ಆಡಳಿತ ನಡೆಸಲು ಬಯಸುತ್ತದೆ: ನಟ ಚೇತನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...