Homeಮುಖಪುಟಸಿದ್ದರಾಮಯ್ಯ ಬ್ರಾಹ್ಮಣ್ಯವನ್ನು ಹೆಚ್ಚು ಆಳವಾಗಿ ಬೇರೂರಿಸುವ ಜಾತಿ ನಾಯಕರು: ನಟ ಚೇತನ್

ಸಿದ್ದರಾಮಯ್ಯ ಬ್ರಾಹ್ಮಣ್ಯವನ್ನು ಹೆಚ್ಚು ಆಳವಾಗಿ ಬೇರೂರಿಸುವ ಜಾತಿ ನಾಯಕರು: ನಟ ಚೇತನ್

ಚೇತನ್‌ರವರ ಹೇಳಿಕೆಗೆ ಕರ್ನಾಟಕ ಜನಾಧಿಕಾರ ಪಕ್ಷದ ಅಧ್ಯಕ್ಷರಾದ ಬಿ. ಹರೀಶ್ ಕುಮಾರ್‌ರವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

ಕರ್ನಾಟಕದ ಪ್ರಬಲ ಮತ್ತು ವಾದನೀಯವಾಗಿ ಕಾಂಗ್ರೆಸ್ಸಿನ ಅತ್ಯುತ್ತಮ ನಾಯಕರಾದ ಸಿದ್ದರಾಮಯ್ಯನವರು, ಮೂಲಭೂತವಾಗಿ ಬ್ರಾಹ್ಮಣ್ಯವನ್ನು ಹೆಚ್ಚು ಆಳವಾಗಿ ಬೇರೂರಿಸುವ ‘ಜಾತಿ’ ನಾಯಕರು ಎಂದು ನಟ ಚೇತನ್ ಅಭಿಪ್ರಾಯಪಟ್ಟಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು “ನಿಜವಾದ ಬದಲಾವಣೆಗೆ ಕರ್ನಾಟಕ ಮತ್ತು ಭಾರತಕ್ಕೆ ‘ಜಾತಿ ವಿರೋಧಿ’ ನಾಯಕತ್ವ ಬೇಕಾಗಿದೆ. ಸಿದ್ದರಾಮಯ್ಯನವರ ಸೇವೆ ‘ಹುಟ್ಟಿದ ಜಾತಿಗೆ’ ಮಾತ್ರ ಸೀಮಿತವಾಗಿದ್ದು, ಇತರೆ ಬಹುಜನರಿಂದ ಸಿಗುವ ಮತಗಳಿಗಾಗಿ ಮಾತ್ರ ಬಣ್ಣದ ಮಾತಾಡುತ್ತಾರೆ” ಎಂದು ಆರೋಪಿಸಿದ್ದಾರೆ.

ಚೇತನ್‌ರವರ ಹೇಳಿಕೆಗೆ ಕರ್ನಾಟಕ ಜನಾಧಿಕಾರ ಪಕ್ಷದ ಅಧ್ಯಕ್ಷರಾದ ಹರೀಶ್ ಕುಮಾರ್‌ರವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯನವರು ಹೇಗೆ ಬ್ರಾಹ್ಮಣ್ಯ ಬೇರೂರಿಸುತ್ತಿದ್ದಾರೆ ಎಂಬದುನ್ನು ಉದಾಹರಣೆ ಸಹಿತ ವಿವರಿಸಬೇಕೆಂದು ಒತ್ತಾಯಿಸಿದ್ದಾರೆ.

ಸಿದ್ದರಾಮಯ್ಯ ಎಲ್ಲಿ ಬ್ರಾಹ್ಮಣ್ಯವನ್ನು ಗಟ್ಟಿಗೊಳಿಸಿದರು? ಅವರು ಯಾವುದಾದರೂ ಮಠಗಳಿಗೆ ನಡೆದುಕೊಂಡಿದ್ದಾರೆಯೇ? ಯಾವುದಾದರೂ ಸ್ವಾಮೀಜಿಯ ಅಣತಿಯಂತೆ ಕಾರ್ಯನಿರ್ವಹಿಸಿದ್ದಾರೆಯೇ? ಯಾವುದಾದರೂ ಅರ್ಚಕರ ಕಾಲಿಗೆ ಬಿದ್ದು ಏನಾದರೂ ಸಂದೇಶ ರವಾನಿಸಿದ್ದಾರೆಯೇ? ಸಿದ್ದರಾಮಯ್ಯನವರ ಯಾವ ನಡವಳಿಕೆಯು ಬ್ರಾಹ್ಮಣ್ಯವನ್ನು ಸಾರಿ ಹೇಳುತ್ತದೆ ಎಂದು ಚೇತನ್ ಸ್ಪಷ್ಟಪಡಿಸಬೇಕಾಗುತ್ತದೆ. ಕಾಂಗ್ರೆಸ್ಸಿನಲ್ಲಿ ಬ್ರಾಹ್ಮಣ್ಯವನ್ನು ಬೇರೂರಿಸುವ ಹಲವು ನಾಯಕರಿದ್ದಾರೆ. ಆದರೆ ಅವರೆಲ್ಲರನ್ನೂ ಬಿಟ್ಟು ಸಿದ್ದರಾಮಯ್ಯರನ್ನು ಟಾರ್ಗೆಟ್ ಮಾಡುವುದರ ಹಿಂದೆ ಗೆಳೆಯ ಚೇತನ್ ನ “ಜಾತಿ”ಯೇನಾದರೂ ವವ್ಯವಸ್ಥಿತವಾಗಿ ಕೆಲಸ ಮಾಡಿದೆಯೇ? ಎಂಬ ಅನುಮಾನಗಳು ಬರುವಂತಿದೆ ಎಂದು ಬಿ. ಹರೀಶ್ ಕುಮಾರ್ ಪ್ರತಿಕ್ರಿಯಿಸಿದ್ದಾರೆ.

ಒಬ್ಬ ಹೋರಾಟಗಾರ ಅನ್ನಿಸಿಕೊಳ್ಳಬೇಕಾದರೆ ಆತನಿಗೆ ಸಮಾಜದ ಜಾತಿ, ಸಾಮಾಜಿಕತೆ, ಅರ್ಥಿಕ, ರಾಜಕೀಯ ಸ್ಥಿತಿಗತಿಗಳ ಒಳನೋಟ ಇರಬೇಕು. ಸಿದ್ದರಾಮಯ್ಯನವರ ಸ್ವಜಾತಿ ಪ್ರೇಮದ ಬಗ್ಗೆ ಚೇತನ್ ಬರೆದಿದ್ದಾರೆ. ಸಿದ್ದರಾಮಯ್ಯ ಈ ರಾಜ್ಯಕ್ಕೆ ಕೊಟ್ಟ ಸೇವೆಯನ್ನು ಅವರು ಮಂಡಿಸಿದ ಬಜೆಟ್ ಮತ್ತು ಯೋಜನೆಗಳ ಮೂಲಕ ಮಾತ್ರ ಅಳೆಯಬೇಕು. ಯಾವ ಬಜೆಟ್ ನಲ್ಲಿ ಕುರುಬರಿಗಾಗಿ ಪ್ರತ್ಯೇಕ ಯೋಜನೆ/ಅನುದಾನವನ್ನು ಮೀಸಲಿಟ್ಟರು? ಸಿದ್ದರಾಮಯ್ಯರ ಕ್ಯಾಬಿನೆಟ್ ನಲ್ಲಿ ಇದ್ದ ಕುರುಬ ಸಮುದಾಯದ ಮಂತ್ರಿಗಳು ಎಷ್ಟು? ಎಷ್ಟು ನಿಗಮ ಮಂಡಳಿಗಳಲ್ಲಿ ಕುರುಬ ನಾಯಕರಿಗೆ ಸ್ಥಾನಮಾನ ನೀಡಲಾಗಿತ್ತು. ಜನಸಂಖ್ಯೆಯ ಆಧಾರದ ಮೇಲೆ ಅವಕಾಶ ನೀಡಲಾಗಿತ್ತೋ? ಸಾಮಾಜಿಕವಾಗಿ ಜಾತಿ ಪ್ರಭಾವದ ಆಧಾರದ ಮೇಲೆ ಅವಕಾಶ ನೀಡಲಾಗಿತ್ತೋ? ಸೂಕ್ಷ್ಮ, ಅತಿಸೂಕ್ಷ್ಮ ಜಾತಿಗಳವರಿಗೆ ಸಿದ್ದರಾಮಯ್ಯ ಮಾಡಿದ್ದೇನು? ಲೈಂಗಿಕ ಅಲ್ಪಸಂಖ್ಯಾತರ ಬಗ್ಗೆ ಸಿದ್ದರಾಮಯ್ಯರ ನಿಲುವೇನು? ಎಂಬುದರ ಬಗ್ಗೆ ಚೇತನ್ ಗೆ ಅಧ್ಯಯನದ ಅಗತ್ಯವಿದೆ ಎಂದು ಹರೀಶ್ ಕುಮಾರ್ ತಿಳಿಸಿದ್ದಾರೆ.

ಎಸ್ಸಿ ಮೀಸಲಾತಿಗಾಗಿ ಕುರುಬರು ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆಯಲ್ಲಿ ಸಮಾವೇಶ ನಡೆಸಿದಾಗ ಸಿದ್ದರಾಮಯ್ಯ ನಿಲುವೇನಾಗಿತ್ತು? “ನಿಜವಾಗಿಯೂ ಮೀಸಲಾತಿ ಬೇಕಾಗಿರುವ ಸಮುದಾಯಗಳಿಗೆ ನಾವು ಅನ್ಯಾಯ ಮಾಡಿದಂತಾಗುತ್ತದೆ, ನಾನು ಕುರುಬ ಸಮಾವೇಶಕ್ಕೆ ಹೋಗುವುದಿಲ್ಲ” ಎಂದು ಸಿದ್ದರಾಮಯ್ಯ ಹೇಳಿದ್ದನ್ನು ಬೇರೆ ಯಾವ ನಾಯಕರಿಂದಾದರೂ ನಿರೀಕ್ಷಿಸಲು ಸಾಧ್ಯವೇ? ಎಂದೂ ಸಹ ಅವರು ಹೇಳಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪರ-ವಿರೋಧದ ಚರ್ಚೆ ಆರಂಭವಾಗಿದೆ.


ಇದನ್ನೂ ಓದಿ; RSS ತಾಲಿಬಾನ್‌ನಂತೆ ಆಡಳಿತ ನಡೆಸಲು ಬಯಸುತ್ತದೆ: ನಟ ಚೇತನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...