Homeಮುಖಪುಟಸಿದ್ದರಾಮಯ್ಯ ಬ್ರಾಹ್ಮಣ್ಯವನ್ನು ಹೆಚ್ಚು ಆಳವಾಗಿ ಬೇರೂರಿಸುವ ಜಾತಿ ನಾಯಕರು: ನಟ ಚೇತನ್

ಸಿದ್ದರಾಮಯ್ಯ ಬ್ರಾಹ್ಮಣ್ಯವನ್ನು ಹೆಚ್ಚು ಆಳವಾಗಿ ಬೇರೂರಿಸುವ ಜಾತಿ ನಾಯಕರು: ನಟ ಚೇತನ್

ಚೇತನ್‌ರವರ ಹೇಳಿಕೆಗೆ ಕರ್ನಾಟಕ ಜನಾಧಿಕಾರ ಪಕ್ಷದ ಅಧ್ಯಕ್ಷರಾದ ಬಿ. ಹರೀಶ್ ಕುಮಾರ್‌ರವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

ಕರ್ನಾಟಕದ ಪ್ರಬಲ ಮತ್ತು ವಾದನೀಯವಾಗಿ ಕಾಂಗ್ರೆಸ್ಸಿನ ಅತ್ಯುತ್ತಮ ನಾಯಕರಾದ ಸಿದ್ದರಾಮಯ್ಯನವರು, ಮೂಲಭೂತವಾಗಿ ಬ್ರಾಹ್ಮಣ್ಯವನ್ನು ಹೆಚ್ಚು ಆಳವಾಗಿ ಬೇರೂರಿಸುವ ‘ಜಾತಿ’ ನಾಯಕರು ಎಂದು ನಟ ಚೇತನ್ ಅಭಿಪ್ರಾಯಪಟ್ಟಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು “ನಿಜವಾದ ಬದಲಾವಣೆಗೆ ಕರ್ನಾಟಕ ಮತ್ತು ಭಾರತಕ್ಕೆ ‘ಜಾತಿ ವಿರೋಧಿ’ ನಾಯಕತ್ವ ಬೇಕಾಗಿದೆ. ಸಿದ್ದರಾಮಯ್ಯನವರ ಸೇವೆ ‘ಹುಟ್ಟಿದ ಜಾತಿಗೆ’ ಮಾತ್ರ ಸೀಮಿತವಾಗಿದ್ದು, ಇತರೆ ಬಹುಜನರಿಂದ ಸಿಗುವ ಮತಗಳಿಗಾಗಿ ಮಾತ್ರ ಬಣ್ಣದ ಮಾತಾಡುತ್ತಾರೆ” ಎಂದು ಆರೋಪಿಸಿದ್ದಾರೆ.

ಚೇತನ್‌ರವರ ಹೇಳಿಕೆಗೆ ಕರ್ನಾಟಕ ಜನಾಧಿಕಾರ ಪಕ್ಷದ ಅಧ್ಯಕ್ಷರಾದ ಹರೀಶ್ ಕುಮಾರ್‌ರವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯನವರು ಹೇಗೆ ಬ್ರಾಹ್ಮಣ್ಯ ಬೇರೂರಿಸುತ್ತಿದ್ದಾರೆ ಎಂಬದುನ್ನು ಉದಾಹರಣೆ ಸಹಿತ ವಿವರಿಸಬೇಕೆಂದು ಒತ್ತಾಯಿಸಿದ್ದಾರೆ.

ಸಿದ್ದರಾಮಯ್ಯ ಎಲ್ಲಿ ಬ್ರಾಹ್ಮಣ್ಯವನ್ನು ಗಟ್ಟಿಗೊಳಿಸಿದರು? ಅವರು ಯಾವುದಾದರೂ ಮಠಗಳಿಗೆ ನಡೆದುಕೊಂಡಿದ್ದಾರೆಯೇ? ಯಾವುದಾದರೂ ಸ್ವಾಮೀಜಿಯ ಅಣತಿಯಂತೆ ಕಾರ್ಯನಿರ್ವಹಿಸಿದ್ದಾರೆಯೇ? ಯಾವುದಾದರೂ ಅರ್ಚಕರ ಕಾಲಿಗೆ ಬಿದ್ದು ಏನಾದರೂ ಸಂದೇಶ ರವಾನಿಸಿದ್ದಾರೆಯೇ? ಸಿದ್ದರಾಮಯ್ಯನವರ ಯಾವ ನಡವಳಿಕೆಯು ಬ್ರಾಹ್ಮಣ್ಯವನ್ನು ಸಾರಿ ಹೇಳುತ್ತದೆ ಎಂದು ಚೇತನ್ ಸ್ಪಷ್ಟಪಡಿಸಬೇಕಾಗುತ್ತದೆ. ಕಾಂಗ್ರೆಸ್ಸಿನಲ್ಲಿ ಬ್ರಾಹ್ಮಣ್ಯವನ್ನು ಬೇರೂರಿಸುವ ಹಲವು ನಾಯಕರಿದ್ದಾರೆ. ಆದರೆ ಅವರೆಲ್ಲರನ್ನೂ ಬಿಟ್ಟು ಸಿದ್ದರಾಮಯ್ಯರನ್ನು ಟಾರ್ಗೆಟ್ ಮಾಡುವುದರ ಹಿಂದೆ ಗೆಳೆಯ ಚೇತನ್ ನ “ಜಾತಿ”ಯೇನಾದರೂ ವವ್ಯವಸ್ಥಿತವಾಗಿ ಕೆಲಸ ಮಾಡಿದೆಯೇ? ಎಂಬ ಅನುಮಾನಗಳು ಬರುವಂತಿದೆ ಎಂದು ಬಿ. ಹರೀಶ್ ಕುಮಾರ್ ಪ್ರತಿಕ್ರಿಯಿಸಿದ್ದಾರೆ.

ಒಬ್ಬ ಹೋರಾಟಗಾರ ಅನ್ನಿಸಿಕೊಳ್ಳಬೇಕಾದರೆ ಆತನಿಗೆ ಸಮಾಜದ ಜಾತಿ, ಸಾಮಾಜಿಕತೆ, ಅರ್ಥಿಕ, ರಾಜಕೀಯ ಸ್ಥಿತಿಗತಿಗಳ ಒಳನೋಟ ಇರಬೇಕು. ಸಿದ್ದರಾಮಯ್ಯನವರ ಸ್ವಜಾತಿ ಪ್ರೇಮದ ಬಗ್ಗೆ ಚೇತನ್ ಬರೆದಿದ್ದಾರೆ. ಸಿದ್ದರಾಮಯ್ಯ ಈ ರಾಜ್ಯಕ್ಕೆ ಕೊಟ್ಟ ಸೇವೆಯನ್ನು ಅವರು ಮಂಡಿಸಿದ ಬಜೆಟ್ ಮತ್ತು ಯೋಜನೆಗಳ ಮೂಲಕ ಮಾತ್ರ ಅಳೆಯಬೇಕು. ಯಾವ ಬಜೆಟ್ ನಲ್ಲಿ ಕುರುಬರಿಗಾಗಿ ಪ್ರತ್ಯೇಕ ಯೋಜನೆ/ಅನುದಾನವನ್ನು ಮೀಸಲಿಟ್ಟರು? ಸಿದ್ದರಾಮಯ್ಯರ ಕ್ಯಾಬಿನೆಟ್ ನಲ್ಲಿ ಇದ್ದ ಕುರುಬ ಸಮುದಾಯದ ಮಂತ್ರಿಗಳು ಎಷ್ಟು? ಎಷ್ಟು ನಿಗಮ ಮಂಡಳಿಗಳಲ್ಲಿ ಕುರುಬ ನಾಯಕರಿಗೆ ಸ್ಥಾನಮಾನ ನೀಡಲಾಗಿತ್ತು. ಜನಸಂಖ್ಯೆಯ ಆಧಾರದ ಮೇಲೆ ಅವಕಾಶ ನೀಡಲಾಗಿತ್ತೋ? ಸಾಮಾಜಿಕವಾಗಿ ಜಾತಿ ಪ್ರಭಾವದ ಆಧಾರದ ಮೇಲೆ ಅವಕಾಶ ನೀಡಲಾಗಿತ್ತೋ? ಸೂಕ್ಷ್ಮ, ಅತಿಸೂಕ್ಷ್ಮ ಜಾತಿಗಳವರಿಗೆ ಸಿದ್ದರಾಮಯ್ಯ ಮಾಡಿದ್ದೇನು? ಲೈಂಗಿಕ ಅಲ್ಪಸಂಖ್ಯಾತರ ಬಗ್ಗೆ ಸಿದ್ದರಾಮಯ್ಯರ ನಿಲುವೇನು? ಎಂಬುದರ ಬಗ್ಗೆ ಚೇತನ್ ಗೆ ಅಧ್ಯಯನದ ಅಗತ್ಯವಿದೆ ಎಂದು ಹರೀಶ್ ಕುಮಾರ್ ತಿಳಿಸಿದ್ದಾರೆ.

ಎಸ್ಸಿ ಮೀಸಲಾತಿಗಾಗಿ ಕುರುಬರು ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆಯಲ್ಲಿ ಸಮಾವೇಶ ನಡೆಸಿದಾಗ ಸಿದ್ದರಾಮಯ್ಯ ನಿಲುವೇನಾಗಿತ್ತು? “ನಿಜವಾಗಿಯೂ ಮೀಸಲಾತಿ ಬೇಕಾಗಿರುವ ಸಮುದಾಯಗಳಿಗೆ ನಾವು ಅನ್ಯಾಯ ಮಾಡಿದಂತಾಗುತ್ತದೆ, ನಾನು ಕುರುಬ ಸಮಾವೇಶಕ್ಕೆ ಹೋಗುವುದಿಲ್ಲ” ಎಂದು ಸಿದ್ದರಾಮಯ್ಯ ಹೇಳಿದ್ದನ್ನು ಬೇರೆ ಯಾವ ನಾಯಕರಿಂದಾದರೂ ನಿರೀಕ್ಷಿಸಲು ಸಾಧ್ಯವೇ? ಎಂದೂ ಸಹ ಅವರು ಹೇಳಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪರ-ವಿರೋಧದ ಚರ್ಚೆ ಆರಂಭವಾಗಿದೆ.


ಇದನ್ನೂ ಓದಿ; RSS ತಾಲಿಬಾನ್‌ನಂತೆ ಆಡಳಿತ ನಡೆಸಲು ಬಯಸುತ್ತದೆ: ನಟ ಚೇತನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...