Homeಮುಖಪುಟಸಿದ್ದರಾಮಯ್ಯ ಬ್ರಾಹ್ಮಣ್ಯವನ್ನು ಹೆಚ್ಚು ಆಳವಾಗಿ ಬೇರೂರಿಸುವ ಜಾತಿ ನಾಯಕರು: ನಟ ಚೇತನ್

ಸಿದ್ದರಾಮಯ್ಯ ಬ್ರಾಹ್ಮಣ್ಯವನ್ನು ಹೆಚ್ಚು ಆಳವಾಗಿ ಬೇರೂರಿಸುವ ಜಾತಿ ನಾಯಕರು: ನಟ ಚೇತನ್

ಚೇತನ್‌ರವರ ಹೇಳಿಕೆಗೆ ಕರ್ನಾಟಕ ಜನಾಧಿಕಾರ ಪಕ್ಷದ ಅಧ್ಯಕ್ಷರಾದ ಬಿ. ಹರೀಶ್ ಕುಮಾರ್‌ರವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

ಕರ್ನಾಟಕದ ಪ್ರಬಲ ಮತ್ತು ವಾದನೀಯವಾಗಿ ಕಾಂಗ್ರೆಸ್ಸಿನ ಅತ್ಯುತ್ತಮ ನಾಯಕರಾದ ಸಿದ್ದರಾಮಯ್ಯನವರು, ಮೂಲಭೂತವಾಗಿ ಬ್ರಾಹ್ಮಣ್ಯವನ್ನು ಹೆಚ್ಚು ಆಳವಾಗಿ ಬೇರೂರಿಸುವ ‘ಜಾತಿ’ ನಾಯಕರು ಎಂದು ನಟ ಚೇತನ್ ಅಭಿಪ್ರಾಯಪಟ್ಟಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು “ನಿಜವಾದ ಬದಲಾವಣೆಗೆ ಕರ್ನಾಟಕ ಮತ್ತು ಭಾರತಕ್ಕೆ ‘ಜಾತಿ ವಿರೋಧಿ’ ನಾಯಕತ್ವ ಬೇಕಾಗಿದೆ. ಸಿದ್ದರಾಮಯ್ಯನವರ ಸೇವೆ ‘ಹುಟ್ಟಿದ ಜಾತಿಗೆ’ ಮಾತ್ರ ಸೀಮಿತವಾಗಿದ್ದು, ಇತರೆ ಬಹುಜನರಿಂದ ಸಿಗುವ ಮತಗಳಿಗಾಗಿ ಮಾತ್ರ ಬಣ್ಣದ ಮಾತಾಡುತ್ತಾರೆ” ಎಂದು ಆರೋಪಿಸಿದ್ದಾರೆ.

ಚೇತನ್‌ರವರ ಹೇಳಿಕೆಗೆ ಕರ್ನಾಟಕ ಜನಾಧಿಕಾರ ಪಕ್ಷದ ಅಧ್ಯಕ್ಷರಾದ ಹರೀಶ್ ಕುಮಾರ್‌ರವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯನವರು ಹೇಗೆ ಬ್ರಾಹ್ಮಣ್ಯ ಬೇರೂರಿಸುತ್ತಿದ್ದಾರೆ ಎಂಬದುನ್ನು ಉದಾಹರಣೆ ಸಹಿತ ವಿವರಿಸಬೇಕೆಂದು ಒತ್ತಾಯಿಸಿದ್ದಾರೆ.

ಸಿದ್ದರಾಮಯ್ಯ ಎಲ್ಲಿ ಬ್ರಾಹ್ಮಣ್ಯವನ್ನು ಗಟ್ಟಿಗೊಳಿಸಿದರು? ಅವರು ಯಾವುದಾದರೂ ಮಠಗಳಿಗೆ ನಡೆದುಕೊಂಡಿದ್ದಾರೆಯೇ? ಯಾವುದಾದರೂ ಸ್ವಾಮೀಜಿಯ ಅಣತಿಯಂತೆ ಕಾರ್ಯನಿರ್ವಹಿಸಿದ್ದಾರೆಯೇ? ಯಾವುದಾದರೂ ಅರ್ಚಕರ ಕಾಲಿಗೆ ಬಿದ್ದು ಏನಾದರೂ ಸಂದೇಶ ರವಾನಿಸಿದ್ದಾರೆಯೇ? ಸಿದ್ದರಾಮಯ್ಯನವರ ಯಾವ ನಡವಳಿಕೆಯು ಬ್ರಾಹ್ಮಣ್ಯವನ್ನು ಸಾರಿ ಹೇಳುತ್ತದೆ ಎಂದು ಚೇತನ್ ಸ್ಪಷ್ಟಪಡಿಸಬೇಕಾಗುತ್ತದೆ. ಕಾಂಗ್ರೆಸ್ಸಿನಲ್ಲಿ ಬ್ರಾಹ್ಮಣ್ಯವನ್ನು ಬೇರೂರಿಸುವ ಹಲವು ನಾಯಕರಿದ್ದಾರೆ. ಆದರೆ ಅವರೆಲ್ಲರನ್ನೂ ಬಿಟ್ಟು ಸಿದ್ದರಾಮಯ್ಯರನ್ನು ಟಾರ್ಗೆಟ್ ಮಾಡುವುದರ ಹಿಂದೆ ಗೆಳೆಯ ಚೇತನ್ ನ “ಜಾತಿ”ಯೇನಾದರೂ ವವ್ಯವಸ್ಥಿತವಾಗಿ ಕೆಲಸ ಮಾಡಿದೆಯೇ? ಎಂಬ ಅನುಮಾನಗಳು ಬರುವಂತಿದೆ ಎಂದು ಬಿ. ಹರೀಶ್ ಕುಮಾರ್ ಪ್ರತಿಕ್ರಿಯಿಸಿದ್ದಾರೆ.

ಒಬ್ಬ ಹೋರಾಟಗಾರ ಅನ್ನಿಸಿಕೊಳ್ಳಬೇಕಾದರೆ ಆತನಿಗೆ ಸಮಾಜದ ಜಾತಿ, ಸಾಮಾಜಿಕತೆ, ಅರ್ಥಿಕ, ರಾಜಕೀಯ ಸ್ಥಿತಿಗತಿಗಳ ಒಳನೋಟ ಇರಬೇಕು. ಸಿದ್ದರಾಮಯ್ಯನವರ ಸ್ವಜಾತಿ ಪ್ರೇಮದ ಬಗ್ಗೆ ಚೇತನ್ ಬರೆದಿದ್ದಾರೆ. ಸಿದ್ದರಾಮಯ್ಯ ಈ ರಾಜ್ಯಕ್ಕೆ ಕೊಟ್ಟ ಸೇವೆಯನ್ನು ಅವರು ಮಂಡಿಸಿದ ಬಜೆಟ್ ಮತ್ತು ಯೋಜನೆಗಳ ಮೂಲಕ ಮಾತ್ರ ಅಳೆಯಬೇಕು. ಯಾವ ಬಜೆಟ್ ನಲ್ಲಿ ಕುರುಬರಿಗಾಗಿ ಪ್ರತ್ಯೇಕ ಯೋಜನೆ/ಅನುದಾನವನ್ನು ಮೀಸಲಿಟ್ಟರು? ಸಿದ್ದರಾಮಯ್ಯರ ಕ್ಯಾಬಿನೆಟ್ ನಲ್ಲಿ ಇದ್ದ ಕುರುಬ ಸಮುದಾಯದ ಮಂತ್ರಿಗಳು ಎಷ್ಟು? ಎಷ್ಟು ನಿಗಮ ಮಂಡಳಿಗಳಲ್ಲಿ ಕುರುಬ ನಾಯಕರಿಗೆ ಸ್ಥಾನಮಾನ ನೀಡಲಾಗಿತ್ತು. ಜನಸಂಖ್ಯೆಯ ಆಧಾರದ ಮೇಲೆ ಅವಕಾಶ ನೀಡಲಾಗಿತ್ತೋ? ಸಾಮಾಜಿಕವಾಗಿ ಜಾತಿ ಪ್ರಭಾವದ ಆಧಾರದ ಮೇಲೆ ಅವಕಾಶ ನೀಡಲಾಗಿತ್ತೋ? ಸೂಕ್ಷ್ಮ, ಅತಿಸೂಕ್ಷ್ಮ ಜಾತಿಗಳವರಿಗೆ ಸಿದ್ದರಾಮಯ್ಯ ಮಾಡಿದ್ದೇನು? ಲೈಂಗಿಕ ಅಲ್ಪಸಂಖ್ಯಾತರ ಬಗ್ಗೆ ಸಿದ್ದರಾಮಯ್ಯರ ನಿಲುವೇನು? ಎಂಬುದರ ಬಗ್ಗೆ ಚೇತನ್ ಗೆ ಅಧ್ಯಯನದ ಅಗತ್ಯವಿದೆ ಎಂದು ಹರೀಶ್ ಕುಮಾರ್ ತಿಳಿಸಿದ್ದಾರೆ.

ಎಸ್ಸಿ ಮೀಸಲಾತಿಗಾಗಿ ಕುರುಬರು ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆಯಲ್ಲಿ ಸಮಾವೇಶ ನಡೆಸಿದಾಗ ಸಿದ್ದರಾಮಯ್ಯ ನಿಲುವೇನಾಗಿತ್ತು? “ನಿಜವಾಗಿಯೂ ಮೀಸಲಾತಿ ಬೇಕಾಗಿರುವ ಸಮುದಾಯಗಳಿಗೆ ನಾವು ಅನ್ಯಾಯ ಮಾಡಿದಂತಾಗುತ್ತದೆ, ನಾನು ಕುರುಬ ಸಮಾವೇಶಕ್ಕೆ ಹೋಗುವುದಿಲ್ಲ” ಎಂದು ಸಿದ್ದರಾಮಯ್ಯ ಹೇಳಿದ್ದನ್ನು ಬೇರೆ ಯಾವ ನಾಯಕರಿಂದಾದರೂ ನಿರೀಕ್ಷಿಸಲು ಸಾಧ್ಯವೇ? ಎಂದೂ ಸಹ ಅವರು ಹೇಳಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪರ-ವಿರೋಧದ ಚರ್ಚೆ ಆರಂಭವಾಗಿದೆ.


ಇದನ್ನೂ ಓದಿ; RSS ತಾಲಿಬಾನ್‌ನಂತೆ ಆಡಳಿತ ನಡೆಸಲು ಬಯಸುತ್ತದೆ: ನಟ ಚೇತನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...

‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ...

ರಾಜಕೀಯ ಪಕ್ಷಗಳ ಬಿಎಲ್‌ಎಗಳು ಎಸ್‌ಐಆರ್‌ನ ಎಲ್ಲ ಮಾಹಿತಿಗಳನ್ನೂ ಪರಿಶೀಲಿಸಲು ಜವಾಬ್ದಾರರಲ್ಲ : ದೆಹಲಿ ಹೈಕೋರ್ಟ್

ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳು (ಬಿಎಲ್‌ಎ) ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಎಣಿಕೆ ನಮೂನೆಗಳಲ್ಲಿರುವ (ಎನ್ಯುಮರೇಷನ್ ಫಾರಂ) ಎಲ್ಲ ವಿವರಗಳನ್ನು ಪರಿಶೀಲಿಸಲು ಜವಾಬ್ದಾರರಲ್ಲ ಎಂದು ದೆಹಲಿ ಹೈಕೋರ್ಟ್...

‘ಕೈಯಿಂದ ಮಲ ಹೊರುವ ಪದ್ಧತಿ ಇಲ್ಲ’ ಎಂದ ಸರ್ಕಾರ: ‘ಹಾಗಾದರೆ ನಾವು ಇನ್ನೂ ಏಕೆ ಈ ಕೆಲಸ ಮಾಡುತ್ತಿದ್ದೇವೆ?’ ಎಂದು ಪ್ರಶ್ನಿಸಿದ ಮಹಿಳಾ ಕಾರ್ಮಿಕರು

ನವದೆಹಲಿ: ದೇಶದಲ್ಲಿ ಕೈಯಿಂದ ಮಲ ಹೊರುವ ಪದ್ಧತಿ ಸಂಪೂರ್ಣವಾಗಿ ನಿರ್ಮೂಲನೆಯಾಗಿದೆ ಎಂದು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಹೇಳಿರುವ ಬೆನ್ನಲ್ಲೇ, ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ ಮತ್ತು ಜಮ್ಮು ಮತ್ತು ಕಾಶ್ಮೀರದ ಮಹಿಳಾ ನೈರ್ಮಲ್ಯ...

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಅಧಿಕಾರ ಬಾರ್ ಕೌನ್ಸಿಲ್‌ಗಳಿಗೆ ಇಲ್ಲ; ನಲ್ಸಾರ್ ವಿವಿ ವಿರುದ್ಧದ ಬಿಸಿಐ ಅಧ್ಯಕ್ಷರ ಆದೇಶ ಕಾನೂನುಬಾಹಿರ : ಸುಪ್ರೀಂ ಕೋರ್ಟ್

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ) ಮತ್ತು ರಾಜ್ಯ ಬಾರ್ ಕೌನ್ಸಿಲ್‌ಗಳಿಗೆ ಯಾವುದೇ ಶಾಸನಬದ್ಧ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ (ಸೆ.3) ಮಹತ್ವದ...

ದೇಶದ ಆರ್ಥಿಕ ಸ್ಥಿರತೆಯ ಬಗ್ಗೆ ಕೇಂದ್ರ ಸರ್ಕಾರದಿಂದ ಸುಳ್ಳು ನಿರೂಪಣೆ ಸೃಷ್ಟಿ: ಶರದ್ ಪವಾರ್

ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರ ಮತ್ತು ಸಂಕಷ್ಟದಲ್ಲಿರುವ ನೈಜ ಆರ್ಥಿಕತೆಯನ್ನು ಮರೆಮಾಚಲು ಕೇಂದ್ರ ಸರ್ಕಾರವು 'ಸಂಖ್ಯಾಶಾಸ್ತ್ರೀಯ ವಿಧಾನಗಳನ್ನು ತಿರುಚುತ್ತಿದೆ' ಎಂದು ನ್ಯಾಷನಲ್ ಕಾಂಗ್ರೆಸ್ ಪಾರ್ಟಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಆರೋಪಿಸಿದ್ದಾರೆ. "ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಶೇಕಡಾ...

ಮಹದೇವಪುರ, ಗಾಂಧಿನಗರ ವೋಟರ್ ಲಿಸ್ಟ್ ಹಗರಣ: ಇಸಿಐ ತನಿಖೆಗೆ ರಾಜ್ಯ ಚುನಾವಣಾ ಆಯೋಗ ಶಿಫಾರಸು

ಮಹದೇವಪುರ ಮತ್ತು ಗಾಂಧಿನಗರ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ಸಂಸದ ಮನ್ಸೂರ್ ಅಲಿ ಖಾನ್ ನೀಡಿದ್ದ ದೂರನ್ನು ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ಕೇಂದ್ರ ಚುನಾವಣಾ ಆಯೋಗಕ್ಕೆ...