Homeಕರ್ನಾಟಕ‘ಸಿದ್ದರಾಮಯ್ಯ ಸರ್ಕಾರ ಕೊಟ್ಟ ಮಾತನ್ನು ಉಳಿಸಿಕೊಂಡಿಲ್ಲ, ಇದು ಗ್ಯಾರಂಟಿ ಸರ್ಕಾರವಲ್ಲ’: ನೂರ್ ಶ್ರೀಧರ್

‘ಸಿದ್ದರಾಮಯ್ಯ ಸರ್ಕಾರ ಕೊಟ್ಟ ಮಾತನ್ನು ಉಳಿಸಿಕೊಂಡಿಲ್ಲ, ಇದು ಗ್ಯಾರಂಟಿ ಸರ್ಕಾರವಲ್ಲ’: ನೂರ್ ಶ್ರೀಧರ್

- Advertisement -
- Advertisement -

ಬೆಂಗಳೂರು: ಸಮಸ್ಯೆಗಳ ಪಟ್ಟಿ ಹಾಗೂ ಮನೆಹಾಳು ಯೋಜನೆಗಳ ಪಟ್ಟಿ ಬೆಳೆಯುತ್ತಲೇ ಇದೆ. ಆದರೆ ಪರಿಹಾರ ಮಾತ್ರ ಸಿಗುತ್ತಿಲ್ಲ. ಮುಖ್ಯಮಂತ್ರಿಗಳ ಬಗ್ಗೆ ನಮ್ಮ ಅಭಿಪ್ರಾಯ ಏನು ಎಂಬುದು ಅವರಿಗೆ ಚೆನ್ನಾಗಿ ಗೊತ್ತಿದೆ, ಹೊಲಸು ರಾಜಕೀಯದಲ್ಲಿ ಅವರ ಮೇಲೆ ನಮಗೆ ಅಪಾರವಾದ ನಂಬಿಕೆ ಇದೆ ಎಂದು ಜನಶಕ್ತಿಯ ನೂರ್ ಶ್ರೀಧರ್ ಹೇಳಿದರು.

ನವೆಂಬರ್ 26ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ‘ಸಂಯುಕ್ತ ಹೋರಾಟ ಕರ್ನಾಟಕದ ಆಶ್ರಯ’ದಲ್ಲಿ ನಡೆದ ‘ಬೆಂಗಳೂರು ಚಲೋ’ ಬೃಹತ್ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.  

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸರ್ಕಾರದ ನಿಲುವುಗಳ ಬಗ್ಗೆ ಪ್ರಶ್ನಿಸಿದ ನೂರ್ ಶ್ರೀಧರ್ ಅವರು ನೀವು ಅಧಿಕಾರಕ್ಕೆ ಬಂದ ಬಳಿಕ ಕೊಟ್ಟ ಮಾತು ಉಳಿಸಿಕೊಂಡಿಲ್ಲ. ಬಿಜೆಪಿ ಸರ್ಕಾರದ ಎಲ್ಲ ಕಾನೂನುಗಳನ್ನು ವಿರೋಧ ಪಕ್ಷವಿದ್ದಾಗ ವಿರೋಧ ಮಾಡಿದ್ದೀರಾ, ಈಗ ನೀವು ಏನು ಮಾಡುತ್ತಾ ಇದ್ದೀರಿ ಎಂದು ಪ್ರಶ್ನಿಸಿದರು. 

ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಕಾಯ್ದೆ ಜಾರಿ ಆಗುವುದಕ್ಕೆ ಅವಕಾಶ ನೀಡುವುದಿಲ್ಲ ಎಂದು ಸಂಯುಕ್ತ ಹೋರಾಟ ವೇದಿಕೆಯಲ್ಲಿ ಹೇಳಿದ್ದೀರಿ, ಆದರೆ, ಎಪಿಎಂಸಿ ಕಾಯ್ದೆಗೆ ಸ್ವಲ್ಪ ತಿದ್ದುಪಡಿ ಮಾಡಿದ್ದು ಬಿಟ್ಟರೆ ಎಲ್ಲ ಕಾನೂನುಗಳೂ ಹಾಗೆ ಇವೆ. ಪ್ರಜಾತಂತ್ರವನ್ನು ಬುಡಮೇಲು ಮಾಡುವ, ವಿರೋಧ ಪಕ್ಷಗಳು ಅಧಿಕಾರಕ್ಕೆ ಬರಲೇಬಾರದು ಎಂದು SIR ಕಾಯ್ದೆ ಜಾರಿ ಮಾಡುತ್ತಿದ್ದಾರೆ. ಜಾತ್ಯತೀತ ಮತದಾರರ ಹೆಸರುಗಳನ್ನ ಶೇ.15 ರಷ್ಟು ಅಳಿಸುತ್ತಿದ್ದಾರೆ, ಇಷ್ಟೆಲ್ಲಾ ಆದರೂ ಕರ್ನಾಟಕದಲ್ಲಿ ನೀವು ಏನು ಮಾಡುತ್ತಾ ಇದ್ದೀರಾ ಎಂದು ಕೇಳಿದರು.  

ಮಮತಾ ಬ್ಯಾನರ್ಜಿ ಸೇರಿದಂತೆ ಎಡ ಪಕ್ಷಗಳು ಬಿಜೆಪಿಯ ಜನವಿರೋಧಿ ನೀತಿಗಳನ್ನ ವಿರೋಧಿಸುತ್ತಿದ್ದಾರೆ. ಆದರೆ ನೀವು ಇಲ್ಲಿ ತಣ್ಣಗೆ ಮಲಗಿದ್ದೀರಾ. ದೇವನಹಳ್ಳಿ ಭೂಸ್ವಾಧೀನ ರದ್ದುಪಡಿಸಲು ನಾವು ಹೋರಾಟಗಾರರು ತಿಂಗಳುಗಟ್ಟಲೆ ಎಲ್ಲಾ ಕೆಲಸ ಬಿಟ್ಟು ಹೋರಾಟ ಮಾಡಬೇಕಾಯಿತು, ಹಾಗಾದರೆ ಉಳಿದ ಬೇಡಿಕೆ ಈಡೇರಿಸಿಕೊಳ್ಳಲು ನಾವು ಇನ್ನೆಷ್ಟು ವರ್ಷ ಹೋರಾಟ ಮಾಡಬೇಕು ಎಂದು ಪ್ರಶ್ನಿಸಿದರು. 

ಇದೇ ವೇಳೆ ರಾಮನಗರ ಜಿಲ್ಲಾಧಿಕಾರಿಗಳು ಮತ್ತು ಕೋಲಾರ ಅರಣ್ಯಾಧಿಕಾರಿಗಳು ರೈತರೊಂದಿಗೆ ಸಂಯಮದಿಂದ ವರ್ತಿಸಬೇಕು. ಇಲ್ಲದಿದ್ದರೆ ಸಂಯುಕ್ತ ಹೋರಾಟ ರೈತರ ಬೆನ್ನಿಗೆ ನಿಲ್ಲಲಿದೆ. ರಾಮನಗರ ಜಿಲ್ಲಾಧಿಕಾರಿಗಳು ಪ್ರಜಾಪ್ರಭುತ್ವದ ಜಿಲ್ಲಾಧಿಕಾರಿ, ಅವರು ಬ್ರಿಟಿಷ್ ಸರ್ಕಾರದ ಪ್ರತಿನಿಧಿಯಂತೆ ವರ್ತಿಸಬಾರದು ಹೀಗೆ ಮುಂದುವರೆದರೆ ರಾಮನಗರಕ್ಕೆ ಮುತ್ತಿಗೆ ಹಾಕಬೇಕಾಗುತ್ತದೆ ಎಂದು ರೈತ ಸಂಘದ ಯು. ಬಸವರಾಜಪ್ಪ ಎಚ್ಚರಿಕೆ ನೀಡಿದರು.  

ಪ್ರೊ. ಬಾಬು ಮ್ಯಾಥ್ಯೂ ಮಾತನಾಡಿ ‘ಭಾರತದ ಸಂವಿಧಾನ ನಾಶಕ್ಕೆ ಹಲವು ಅಕ್ರಮ ಮತ್ತು ಹುನ್ನಾರ ನಡೆಸಲಾಗುತ್ತಿದೆ.. ಸಂವಿಧಾನ ನಂಬಿಕೊಂಡಿರುವ ರೈತರು ಮತ್ತು ಕಾರ್ಮಿಕರ ಐಕ್ಯತೆ ಮುರಿಯುವ ಯತ್ನ ನಡೆಯುತ್ತಿದೆ. ಸಾಮಾನ್ಯ ಜನರ ಮೇಲೆ ದೊಡ್ಡ ದೌರ್ಜನ್ಯದ ಜೊತೆಗೆ, ಬಂಡವಾಳಶಾಹಿ ವ್ಯಯವಸ್ಥೆಯಲ್ಲಿ ದೊಡ್ಡ ಬದಲಾವಣೆ ನಡೆಯುತ್ತಿದೆ. ಅಂಬಾನಿ ಅದಾನಿ ಎಂಬ ಹೊಸತರಹದ ಬಂಡವಾಳ ಶಾಹಿ ಹುಟ್ಟಿಕೊಂಡಿದ್ದಾರೆ. ಅದೇ ಗುತ್ತೇದಾರಿ (ಮನೋಪಲಿ) ಬಂಡವಾಳಶಾಹಿ.

ಮನೋಪಲಿ ಬಂಡವಾಳಕ್ಕೆ ಹೆಚ್ಚಿನ ಬೆಂಬಲ ನೀಡಿದರೆ ಫಾಸೀಸಂ ಮೇಲೆ ಕಡಿವಾಣ ಹಾಕಲು ಸಾಧ್ಯವಿಲ್ಲ. ಆಗ ಅವರು ಸಂವಿಧಾನವನ್ನು ದುರ್ಬಲ ಮಾಡುತ್ತಾರೆ ಎಂದು ಎಚ್ಚರಿಗೆ ನೀಡಿದರು. 

ಈಗ ಜಾರಿಯಾಗಿರುವ ಕಾರ್ಮಿಕ ವಿರೋಧಿ ಕಾಯ್ದೆಗಳು ಸಾಕಷ್ಟು ಅಮಾನವೀಯವಾಗಿವೆ. ಇನ್ನು ಮುಂದೆ ಕಾರ್ಮಿಕರು ಲೀಗಲ್ ಸ್ಟ್ರೈಕ್ ಮಾಡುವುದಕ್ಕೆ ಸಾಧ್ಯವಿಲ್ಲ. ಹೋರಾಟ ಮಾಡಿದರೆ ಅದು ಕಾನೂನು ಬಾಹಿರ ಆಗುತ್ತದೆ. ಕಾರ್ಮಿಕರ ಯೂನಿಯನ್ ಗಳು ನಿಷೇಧ ಆಗುತ್ತವೆ

ಹಳೆ ಕಾನೂನುಗಳ ಮೇಲೆ ನಮಗೆ ಹಿಡಿತ ಇತ್ತು. ಆದರೆ ಹೊಸ ಕಾನೂನುಗಳಲ್ಲಿ ಯಾವಾಗ ಬೇಕಾದರೂ ಕಾರ್ಮಿಕರನ್ನು ಕೆಲಸದಿಂದ ತೆಗೆಯಬಹುದು, ಯಾವಾಗ ಬೇಕಾದರೂ ಕಾರ್ಖಾನೆ ಮುಚ್ಚಿ ಬೇರೆ ತೆಗೆಯಬಹುದು. ಇದು ಕಾನೂನು ಬಾಹಿರ ಎಂಬುದನ್ನು ಮರೆಯಬಾರದು ಎಂದು ಹೇಳಿದರು. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...