Homeಕರ್ನಾಟಕ‘ಸಿದ್ದರಾಮಯ್ಯ ಸರ್ಕಾರ ಕೊಟ್ಟ ಮಾತನ್ನು ಉಳಿಸಿಕೊಂಡಿಲ್ಲ, ಇದು ಗ್ಯಾರಂಟಿ ಸರ್ಕಾರವಲ್ಲ’: ನೂರ್ ಶ್ರೀಧರ್

‘ಸಿದ್ದರಾಮಯ್ಯ ಸರ್ಕಾರ ಕೊಟ್ಟ ಮಾತನ್ನು ಉಳಿಸಿಕೊಂಡಿಲ್ಲ, ಇದು ಗ್ಯಾರಂಟಿ ಸರ್ಕಾರವಲ್ಲ’: ನೂರ್ ಶ್ರೀಧರ್

- Advertisement -
- Advertisement -

ಬೆಂಗಳೂರು: ಸಮಸ್ಯೆಗಳ ಪಟ್ಟಿ ಹಾಗೂ ಮನೆಹಾಳು ಯೋಜನೆಗಳ ಪಟ್ಟಿ ಬೆಳೆಯುತ್ತಲೇ ಇದೆ. ಆದರೆ ಪರಿಹಾರ ಮಾತ್ರ ಸಿಗುತ್ತಿಲ್ಲ. ಮುಖ್ಯಮಂತ್ರಿಗಳ ಬಗ್ಗೆ ನಮ್ಮ ಅಭಿಪ್ರಾಯ ಏನು ಎಂಬುದು ಅವರಿಗೆ ಚೆನ್ನಾಗಿ ಗೊತ್ತಿದೆ, ಹೊಲಸು ರಾಜಕೀಯದಲ್ಲಿ ಅವರ ಮೇಲೆ ನಮಗೆ ಅಪಾರವಾದ ನಂಬಿಕೆ ಇದೆ ಎಂದು ಜನಶಕ್ತಿಯ ನೂರ್ ಶ್ರೀಧರ್ ಹೇಳಿದರು.

ನವೆಂಬರ್ 26ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ‘ಸಂಯುಕ್ತ ಹೋರಾಟ ಕರ್ನಾಟಕದ ಆಶ್ರಯ’ದಲ್ಲಿ ನಡೆದ ‘ಬೆಂಗಳೂರು ಚಲೋ’ ಬೃಹತ್ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.  

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸರ್ಕಾರದ ನಿಲುವುಗಳ ಬಗ್ಗೆ ಪ್ರಶ್ನಿಸಿದ ನೂರ್ ಶ್ರೀಧರ್ ಅವರು ನೀವು ಅಧಿಕಾರಕ್ಕೆ ಬಂದ ಬಳಿಕ ಕೊಟ್ಟ ಮಾತು ಉಳಿಸಿಕೊಂಡಿಲ್ಲ. ಬಿಜೆಪಿ ಸರ್ಕಾರದ ಎಲ್ಲ ಕಾನೂನುಗಳನ್ನು ವಿರೋಧ ಪಕ್ಷವಿದ್ದಾಗ ವಿರೋಧ ಮಾಡಿದ್ದೀರಾ, ಈಗ ನೀವು ಏನು ಮಾಡುತ್ತಾ ಇದ್ದೀರಿ ಎಂದು ಪ್ರಶ್ನಿಸಿದರು. 

ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಕಾಯ್ದೆ ಜಾರಿ ಆಗುವುದಕ್ಕೆ ಅವಕಾಶ ನೀಡುವುದಿಲ್ಲ ಎಂದು ಸಂಯುಕ್ತ ಹೋರಾಟ ವೇದಿಕೆಯಲ್ಲಿ ಹೇಳಿದ್ದೀರಿ, ಆದರೆ, ಎಪಿಎಂಸಿ ಕಾಯ್ದೆಗೆ ಸ್ವಲ್ಪ ತಿದ್ದುಪಡಿ ಮಾಡಿದ್ದು ಬಿಟ್ಟರೆ ಎಲ್ಲ ಕಾನೂನುಗಳೂ ಹಾಗೆ ಇವೆ. ಪ್ರಜಾತಂತ್ರವನ್ನು ಬುಡಮೇಲು ಮಾಡುವ, ವಿರೋಧ ಪಕ್ಷಗಳು ಅಧಿಕಾರಕ್ಕೆ ಬರಲೇಬಾರದು ಎಂದು SIR ಕಾಯ್ದೆ ಜಾರಿ ಮಾಡುತ್ತಿದ್ದಾರೆ. ಜಾತ್ಯತೀತ ಮತದಾರರ ಹೆಸರುಗಳನ್ನ ಶೇ.15 ರಷ್ಟು ಅಳಿಸುತ್ತಿದ್ದಾರೆ, ಇಷ್ಟೆಲ್ಲಾ ಆದರೂ ಕರ್ನಾಟಕದಲ್ಲಿ ನೀವು ಏನು ಮಾಡುತ್ತಾ ಇದ್ದೀರಾ ಎಂದು ಕೇಳಿದರು.  

ಮಮತಾ ಬ್ಯಾನರ್ಜಿ ಸೇರಿದಂತೆ ಎಡ ಪಕ್ಷಗಳು ಬಿಜೆಪಿಯ ಜನವಿರೋಧಿ ನೀತಿಗಳನ್ನ ವಿರೋಧಿಸುತ್ತಿದ್ದಾರೆ. ಆದರೆ ನೀವು ಇಲ್ಲಿ ತಣ್ಣಗೆ ಮಲಗಿದ್ದೀರಾ. ದೇವನಹಳ್ಳಿ ಭೂಸ್ವಾಧೀನ ರದ್ದುಪಡಿಸಲು ನಾವು ಹೋರಾಟಗಾರರು ತಿಂಗಳುಗಟ್ಟಲೆ ಎಲ್ಲಾ ಕೆಲಸ ಬಿಟ್ಟು ಹೋರಾಟ ಮಾಡಬೇಕಾಯಿತು, ಹಾಗಾದರೆ ಉಳಿದ ಬೇಡಿಕೆ ಈಡೇರಿಸಿಕೊಳ್ಳಲು ನಾವು ಇನ್ನೆಷ್ಟು ವರ್ಷ ಹೋರಾಟ ಮಾಡಬೇಕು ಎಂದು ಪ್ರಶ್ನಿಸಿದರು. 

ಇದೇ ವೇಳೆ ರಾಮನಗರ ಜಿಲ್ಲಾಧಿಕಾರಿಗಳು ಮತ್ತು ಕೋಲಾರ ಅರಣ್ಯಾಧಿಕಾರಿಗಳು ರೈತರೊಂದಿಗೆ ಸಂಯಮದಿಂದ ವರ್ತಿಸಬೇಕು. ಇಲ್ಲದಿದ್ದರೆ ಸಂಯುಕ್ತ ಹೋರಾಟ ರೈತರ ಬೆನ್ನಿಗೆ ನಿಲ್ಲಲಿದೆ. ರಾಮನಗರ ಜಿಲ್ಲಾಧಿಕಾರಿಗಳು ಪ್ರಜಾಪ್ರಭುತ್ವದ ಜಿಲ್ಲಾಧಿಕಾರಿ, ಅವರು ಬ್ರಿಟಿಷ್ ಸರ್ಕಾರದ ಪ್ರತಿನಿಧಿಯಂತೆ ವರ್ತಿಸಬಾರದು ಹೀಗೆ ಮುಂದುವರೆದರೆ ರಾಮನಗರಕ್ಕೆ ಮುತ್ತಿಗೆ ಹಾಕಬೇಕಾಗುತ್ತದೆ ಎಂದು ರೈತ ಸಂಘದ ಯು. ಬಸವರಾಜಪ್ಪ ಎಚ್ಚರಿಕೆ ನೀಡಿದರು.  

ಪ್ರೊ. ಬಾಬು ಮ್ಯಾಥ್ಯೂ ಮಾತನಾಡಿ ‘ಭಾರತದ ಸಂವಿಧಾನ ನಾಶಕ್ಕೆ ಹಲವು ಅಕ್ರಮ ಮತ್ತು ಹುನ್ನಾರ ನಡೆಸಲಾಗುತ್ತಿದೆ.. ಸಂವಿಧಾನ ನಂಬಿಕೊಂಡಿರುವ ರೈತರು ಮತ್ತು ಕಾರ್ಮಿಕರ ಐಕ್ಯತೆ ಮುರಿಯುವ ಯತ್ನ ನಡೆಯುತ್ತಿದೆ. ಸಾಮಾನ್ಯ ಜನರ ಮೇಲೆ ದೊಡ್ಡ ದೌರ್ಜನ್ಯದ ಜೊತೆಗೆ, ಬಂಡವಾಳಶಾಹಿ ವ್ಯಯವಸ್ಥೆಯಲ್ಲಿ ದೊಡ್ಡ ಬದಲಾವಣೆ ನಡೆಯುತ್ತಿದೆ. ಅಂಬಾನಿ ಅದಾನಿ ಎಂಬ ಹೊಸತರಹದ ಬಂಡವಾಳ ಶಾಹಿ ಹುಟ್ಟಿಕೊಂಡಿದ್ದಾರೆ. ಅದೇ ಗುತ್ತೇದಾರಿ (ಮನೋಪಲಿ) ಬಂಡವಾಳಶಾಹಿ.

ಮನೋಪಲಿ ಬಂಡವಾಳಕ್ಕೆ ಹೆಚ್ಚಿನ ಬೆಂಬಲ ನೀಡಿದರೆ ಫಾಸೀಸಂ ಮೇಲೆ ಕಡಿವಾಣ ಹಾಕಲು ಸಾಧ್ಯವಿಲ್ಲ. ಆಗ ಅವರು ಸಂವಿಧಾನವನ್ನು ದುರ್ಬಲ ಮಾಡುತ್ತಾರೆ ಎಂದು ಎಚ್ಚರಿಗೆ ನೀಡಿದರು. 

ಈಗ ಜಾರಿಯಾಗಿರುವ ಕಾರ್ಮಿಕ ವಿರೋಧಿ ಕಾಯ್ದೆಗಳು ಸಾಕಷ್ಟು ಅಮಾನವೀಯವಾಗಿವೆ. ಇನ್ನು ಮುಂದೆ ಕಾರ್ಮಿಕರು ಲೀಗಲ್ ಸ್ಟ್ರೈಕ್ ಮಾಡುವುದಕ್ಕೆ ಸಾಧ್ಯವಿಲ್ಲ. ಹೋರಾಟ ಮಾಡಿದರೆ ಅದು ಕಾನೂನು ಬಾಹಿರ ಆಗುತ್ತದೆ. ಕಾರ್ಮಿಕರ ಯೂನಿಯನ್ ಗಳು ನಿಷೇಧ ಆಗುತ್ತವೆ

ಹಳೆ ಕಾನೂನುಗಳ ಮೇಲೆ ನಮಗೆ ಹಿಡಿತ ಇತ್ತು. ಆದರೆ ಹೊಸ ಕಾನೂನುಗಳಲ್ಲಿ ಯಾವಾಗ ಬೇಕಾದರೂ ಕಾರ್ಮಿಕರನ್ನು ಕೆಲಸದಿಂದ ತೆಗೆಯಬಹುದು, ಯಾವಾಗ ಬೇಕಾದರೂ ಕಾರ್ಖಾನೆ ಮುಚ್ಚಿ ಬೇರೆ ತೆಗೆಯಬಹುದು. ಇದು ಕಾನೂನು ಬಾಹಿರ ಎಂಬುದನ್ನು ಮರೆಯಬಾರದು ಎಂದು ಹೇಳಿದರು. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಬ್ಬಾರ್​ರನ್ನು ಎಂಎಲ್‌ಸಿ ಮಾಡಿದ್ದು ನಾವು, ಪಕ್ಷದ ಅನ್ನ ತಿಂದ ಮೇಲೆ ಕೆಲಸ ಮಾಡಬೇಕಿತ್ತು : ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜನರ ಪ್ರತಿಕ್ರಿಯೆ ಚೆನ್ನಾಗಿತ್ತು, ನಾವು ಗೆಲುವು ಸಾಧಿಸುತ್ತೇವೆ ಎಂಬ ವಿಶ್ವಾಸವಿದೆ. ನಮ್ಮ ಮತದಾರ ಬಂಧುಗಳು ಉತ್ತಮವಾಗಿ ಮತದಾನ ಮಾಡಿದ್ದಾರೆ. ಒಳ್ಳೆಯ ಅಂತರದಲ್ಲಿ ಕಾಂಗ್ರೆಸ್‌ ಪಕ್ಷ ಗೆಲ್ಲುತ್ತೆ,...

ಧಾರವಾಡ: ಯುವ ಕಾಂಗ್ರೆಸ್ ನಾಯಕ ಫೈರೋಜ್ ಖಾನ್ ಪಠಾಣ್ ಹತ್ಯೆ; ಮೂವರು ಆರೋಪಿಗಳ ಬಂಧನ

ಧಾರವಾಡದಲ್ಲಿ ಶುಕ್ರವಾರ ತಡರಾತ್ರಿ ಯುವ ಕಾಂಗ್ರೆಸ್ ನಾಯಕನೊಬ್ಬನನ್ನು ಅವರ ನಿವಾಸದೊಳಗೆ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ನಗರದಾದ್ಯಂತ ಆಘಾತದ ಅಲೆಗಳನ್ನು ಸೃಷ್ಟಿಸಿದೆ. ಮೃತ ವ್ಯಕ್ತಿಯನ್ನು ಫೈರೋಜ್ ಖಾನ್ ಪಠಾಣ್ (34) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ,...

ಮಧ್ಯಪ್ರದೇಶದ ಕಟ್ನಿಯಲ್ಲಿ ಮಹಾರಾಷ್ಟ್ರಕ್ಕೆ ರೈಲಿನಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ 163 ಅಪ್ರಾಪ್ತ ಬಾಲಕರ ರಕ್ಷಣೆ; 8 ಮಂದಿ ಬಂಧನ

ಕಟ್ನಿ: ಬಿಹಾರದಿಂದ ಮಹಾರಾಷ್ಟ್ರಕ್ಕೆ ಕಳ್ಳಸಾಗಣೆ ಮಾಡಲಾಗುತ್ತಿತ್ತು ಎನ್ನಲಾದ 163 ಅಪ್ರಾಪ್ತ ಬಾಲಕರನ್ನು ಮಧ್ಯಪ್ರದೇಶದ ಕಟ್ನಿ ಜಿಲ್ಲೆಯಲ್ಲಿ ಎಕ್ಸ್‌ಪ್ರೆಸ್ ರೈಲಿನಿಂದ ರೈಲ್ವೆ ಪೊಲೀಸರು ರಕ್ಷಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಆರು ರಿಂದ 13 ವರ್ಷದೊಳಗಿನ...

ನಗರಪಾಲಿಕೆ ಚುನಾವಣೆಯಲ್ಲಿ ನಮಗೆ ಅಧಿಕಾರಕ್ಕೆ ಬರಲು ಒಂದು ಅವಕಾಶ ನೀಡಿ: ಬೆಂಗಳೂರಿಗರಿಗೆ ಎಚ್‌.ಡಿ ಕುಮಾರಸ್ವಾಮಿ ಮನವಿ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಡಿಯಲ್ಲಿರುವ ಐದು ಮಹಾನಗರ ಪಾಲಿಕೆಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವ ಮೂಲಕ ಅಧಿಕಾರಕ್ಕೆ ಬರುವ ಅವಕಾಶ ನೀಡುವಂತೆ ದೇವೇಗೌಡ ನೇತೃತ್ವದ ಜೆಡಿಎಸ್ ಶನಿವಾರ ಬೆಂಗಳೂರಿನ ಜನರನ್ನು...

ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕರಿಸಿದ ಡಿ.ಕೆ ಶಿವಕುಮಾರ್; ಕೆಪಿಸಿಸಿ ಅಲ್ಪಸಂಖ್ಯಾತ ಘಟಕ ಸಮಿತಿ ವಿಸರ್ಜನೆ

ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗಕ್ಕೆ ನೀಡಿದ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಂಗೀಕರಿಸಿದ್ದಾರೆ, ಜೊತೆಗೆ ಅಲ್ಪಸಂಖ್ಯಾತ ಘಟಕ ಸಮಿತಿಯನ್ನೂ ವಿಸರ್ಜಿಸಿದ್ದಾರೆ ಎಂದು ವರದಿಯಾಗಿದೆ. ಕೆಪಿಸಿಸಿ ಅಲ್ಪಸಂಖ್ಯಾತ...

‘ಯುದ್ಧ ಭುಗಿಲೆದ್ದು ಪಾಕಿಸ್ತಾನ ಶಾಂತಿ ಸ್ಥಾಪಿಸಲು ವಿಫಲವಾದರೆ, ಇಸ್ರೇಲ್ ಮೇಲೆ ದಾಳಿ ಮಾಡುವುದು ನಮ್ಮ ಕರ್ತವ್ಯ’: ಟರ್ಕಿ ಅಧ್ಯಕ್ಷ ಎರ್ಡೋಗನ್

ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಇಸ್ರೇಲ್ ವಿರುದ್ಧ ತೀಕ್ಷ್ಣ ಎಚ್ಚರಿಕೆ ನೀಡಿದ್ದು, ನಡೆಯುತ್ತಿರುವ ಸಂಘರ್ಷವನ್ನು ಶಮನಗೊಳಿಸಲು ರಾಜತಾಂತ್ರಿಕ ಪ್ರಯತ್ನಗಳು ವಿಫಲವಾದರೆ ಸಂಭಾವ್ಯ ಕ್ರಮ ಕೈಗೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಕಠಿಣ ಪದಗಳ ಹೇಳಿಕೆಯಲ್ಲಿ,...

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ನಿಧನ

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ (92) ಅವರು ಭಾನುವಾರ (ಏ.12) ನಿಧನರಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ವೈದ್ಯ ಡಾ. ಪ್ರತೀತ್ ಸಮ್ದಾನಿ...

‘ಸಂವಿಧಾನವನ್ನು ಕೊನೆಗೊಳಿಸುವುದು ಆರ್‌ಎಸ್‌ಎಸ್-ಬಿಜೆಪಿಯ ಮುಖ್ಯ ಉದ್ದೇಶ’: ರಾಹುಲ್ ಗಾಂಧಿ ಆರೋಪ

ನವದೆಹಲಿ: ಆರ್‌ಎಸ್‌ಎಸ್ - ಬಿಜೆಪಿ ವಿರುದ್ಧ ಭಾನುವಾರ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಭಾರತದಲ್ಲಿ ಎಲ್ಲರನ್ನೂ ಸಮಾನರು ಎಂದು ಪರಿಗಣಿಸಲು ಬಯಸದ ಕಾರಣ ಸಂವಿಧಾನವನ್ನು ಕೊನೆಗೊಳಿಸುವುದು ಅವರ ಮುಖ್ಯ...

ಗಾಝಾಗೆ ಜೀವರಕ್ಷಕ ನೆರವಿಗಾಗಿ ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ನೌಕಾಯಾನ; ನಾಗರಿಕರ ರಕ್ಷಣೆಗೆ ಕರೆ ನೀಡಿದ ಯುನೈಟೆಡ್ ಸ್ಟಾಫ್ ಫಾರ್ ಗಾಝಾ

ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ಭಾನುವಾರ ನೌಕಾಯಾನ ಮಾಡಲು ಸಿದ್ಧವಾಗುತ್ತಿದ್ದಂತೆ, ಗಾಝಾದ ಯುನೈಟೆಡ್ ಸ್ಟಾಫ್ ಅಂತರರಾಷ್ಟ್ರೀಯ ಕಾನೂನಿನ ಅಡಿಯಲ್ಲಿ ಕಾರ್ಯಾಚರಣೆಯಲ್ಲಿರುವ ನಾಗರಿಕರ ರಕ್ಷಣೆಗಾಗಿ ಕರೆ ನೀಡಿತು ಮತ್ತು ಗಾಝಾಗೆ ಮಾನವೀಯ ನೆರವು ಪ್ರಯತ್ನಗಳಿಗೆ ಬೆಂಬಲವನ್ನು...

ಲೆಬನಾನ್ ಮೇಲೆ ದಾಳಿ ಮುಂದುವರಿಸಿದ ಇಸ್ರೇಲ್ : 2 ಸಾವಿರ ದಾಟಿದ ಮೃತರ ಸಂಖ್ಯೆ

ಮಾರ್ಚ್ 2ರಿಂದ ಇಸ್ರೇಲ್ ನಡೆಸಿದ ದಾಳಿಯಲ್ಲಿ ಕನಿಷ್ಠ 2,020 ಜನರು ಸಾವನ್ನಪ್ಪಿದ್ದಾರೆ ಮತ್ತು 6,436 ಜನರು ಗಾಯಗೊಂಡಿದ್ದಾರೆ ಎಂದು ಲೆಬನಾನ್ ಆರೋಗ್ಯ ಸಚಿವಾಲಯ ತಿಳಿಸಿದೆ. ಸಾವನ್ನಪ್ಪಿದವರಲ್ಲಿ 165 ಮಕ್ಕಳು, 248 ಮಹಿಳೆಯರು ಮತ್ತು 85...