Homeಕರ್ನಾಟಕ‘ಸಿದ್ದರಾಮಯ್ಯ ಸರ್ಕಾರ ಕೊಟ್ಟ ಮಾತನ್ನು ಉಳಿಸಿಕೊಂಡಿಲ್ಲ, ಇದು ಗ್ಯಾರಂಟಿ ಸರ್ಕಾರವಲ್ಲ’: ನೂರ್ ಶ್ರೀಧರ್

‘ಸಿದ್ದರಾಮಯ್ಯ ಸರ್ಕಾರ ಕೊಟ್ಟ ಮಾತನ್ನು ಉಳಿಸಿಕೊಂಡಿಲ್ಲ, ಇದು ಗ್ಯಾರಂಟಿ ಸರ್ಕಾರವಲ್ಲ’: ನೂರ್ ಶ್ರೀಧರ್

- Advertisement -
- Advertisement -

ಬೆಂಗಳೂರು: ಸಮಸ್ಯೆಗಳ ಪಟ್ಟಿ ಹಾಗೂ ಮನೆಹಾಳು ಯೋಜನೆಗಳ ಪಟ್ಟಿ ಬೆಳೆಯುತ್ತಲೇ ಇದೆ. ಆದರೆ ಪರಿಹಾರ ಮಾತ್ರ ಸಿಗುತ್ತಿಲ್ಲ. ಮುಖ್ಯಮಂತ್ರಿಗಳ ಬಗ್ಗೆ ನಮ್ಮ ಅಭಿಪ್ರಾಯ ಏನು ಎಂಬುದು ಅವರಿಗೆ ಚೆನ್ನಾಗಿ ಗೊತ್ತಿದೆ, ಹೊಲಸು ರಾಜಕೀಯದಲ್ಲಿ ಅವರ ಮೇಲೆ ನಮಗೆ ಅಪಾರವಾದ ನಂಬಿಕೆ ಇದೆ ಎಂದು ಜನಶಕ್ತಿಯ ನೂರ್ ಶ್ರೀಧರ್ ಹೇಳಿದರು.

ನವೆಂಬರ್ 26ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ‘ಸಂಯುಕ್ತ ಹೋರಾಟ ಕರ್ನಾಟಕದ ಆಶ್ರಯ’ದಲ್ಲಿ ನಡೆದ ‘ಬೆಂಗಳೂರು ಚಲೋ’ ಬೃಹತ್ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.  

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸರ್ಕಾರದ ನಿಲುವುಗಳ ಬಗ್ಗೆ ಪ್ರಶ್ನಿಸಿದ ನೂರ್ ಶ್ರೀಧರ್ ಅವರು ನೀವು ಅಧಿಕಾರಕ್ಕೆ ಬಂದ ಬಳಿಕ ಕೊಟ್ಟ ಮಾತು ಉಳಿಸಿಕೊಂಡಿಲ್ಲ. ಬಿಜೆಪಿ ಸರ್ಕಾರದ ಎಲ್ಲ ಕಾನೂನುಗಳನ್ನು ವಿರೋಧ ಪಕ್ಷವಿದ್ದಾಗ ವಿರೋಧ ಮಾಡಿದ್ದೀರಾ, ಈಗ ನೀವು ಏನು ಮಾಡುತ್ತಾ ಇದ್ದೀರಿ ಎಂದು ಪ್ರಶ್ನಿಸಿದರು. 

ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಕಾಯ್ದೆ ಜಾರಿ ಆಗುವುದಕ್ಕೆ ಅವಕಾಶ ನೀಡುವುದಿಲ್ಲ ಎಂದು ಸಂಯುಕ್ತ ಹೋರಾಟ ವೇದಿಕೆಯಲ್ಲಿ ಹೇಳಿದ್ದೀರಿ, ಆದರೆ, ಎಪಿಎಂಸಿ ಕಾಯ್ದೆಗೆ ಸ್ವಲ್ಪ ತಿದ್ದುಪಡಿ ಮಾಡಿದ್ದು ಬಿಟ್ಟರೆ ಎಲ್ಲ ಕಾನೂನುಗಳೂ ಹಾಗೆ ಇವೆ. ಪ್ರಜಾತಂತ್ರವನ್ನು ಬುಡಮೇಲು ಮಾಡುವ, ವಿರೋಧ ಪಕ್ಷಗಳು ಅಧಿಕಾರಕ್ಕೆ ಬರಲೇಬಾರದು ಎಂದು SIR ಕಾಯ್ದೆ ಜಾರಿ ಮಾಡುತ್ತಿದ್ದಾರೆ. ಜಾತ್ಯತೀತ ಮತದಾರರ ಹೆಸರುಗಳನ್ನ ಶೇ.15 ರಷ್ಟು ಅಳಿಸುತ್ತಿದ್ದಾರೆ, ಇಷ್ಟೆಲ್ಲಾ ಆದರೂ ಕರ್ನಾಟಕದಲ್ಲಿ ನೀವು ಏನು ಮಾಡುತ್ತಾ ಇದ್ದೀರಾ ಎಂದು ಕೇಳಿದರು.  

ಮಮತಾ ಬ್ಯಾನರ್ಜಿ ಸೇರಿದಂತೆ ಎಡ ಪಕ್ಷಗಳು ಬಿಜೆಪಿಯ ಜನವಿರೋಧಿ ನೀತಿಗಳನ್ನ ವಿರೋಧಿಸುತ್ತಿದ್ದಾರೆ. ಆದರೆ ನೀವು ಇಲ್ಲಿ ತಣ್ಣಗೆ ಮಲಗಿದ್ದೀರಾ. ದೇವನಹಳ್ಳಿ ಭೂಸ್ವಾಧೀನ ರದ್ದುಪಡಿಸಲು ನಾವು ಹೋರಾಟಗಾರರು ತಿಂಗಳುಗಟ್ಟಲೆ ಎಲ್ಲಾ ಕೆಲಸ ಬಿಟ್ಟು ಹೋರಾಟ ಮಾಡಬೇಕಾಯಿತು, ಹಾಗಾದರೆ ಉಳಿದ ಬೇಡಿಕೆ ಈಡೇರಿಸಿಕೊಳ್ಳಲು ನಾವು ಇನ್ನೆಷ್ಟು ವರ್ಷ ಹೋರಾಟ ಮಾಡಬೇಕು ಎಂದು ಪ್ರಶ್ನಿಸಿದರು. 

ಇದೇ ವೇಳೆ ರಾಮನಗರ ಜಿಲ್ಲಾಧಿಕಾರಿಗಳು ಮತ್ತು ಕೋಲಾರ ಅರಣ್ಯಾಧಿಕಾರಿಗಳು ರೈತರೊಂದಿಗೆ ಸಂಯಮದಿಂದ ವರ್ತಿಸಬೇಕು. ಇಲ್ಲದಿದ್ದರೆ ಸಂಯುಕ್ತ ಹೋರಾಟ ರೈತರ ಬೆನ್ನಿಗೆ ನಿಲ್ಲಲಿದೆ. ರಾಮನಗರ ಜಿಲ್ಲಾಧಿಕಾರಿಗಳು ಪ್ರಜಾಪ್ರಭುತ್ವದ ಜಿಲ್ಲಾಧಿಕಾರಿ, ಅವರು ಬ್ರಿಟಿಷ್ ಸರ್ಕಾರದ ಪ್ರತಿನಿಧಿಯಂತೆ ವರ್ತಿಸಬಾರದು ಹೀಗೆ ಮುಂದುವರೆದರೆ ರಾಮನಗರಕ್ಕೆ ಮುತ್ತಿಗೆ ಹಾಕಬೇಕಾಗುತ್ತದೆ ಎಂದು ರೈತ ಸಂಘದ ಯು. ಬಸವರಾಜಪ್ಪ ಎಚ್ಚರಿಕೆ ನೀಡಿದರು.  

ಪ್ರೊ. ಬಾಬು ಮ್ಯಾಥ್ಯೂ ಮಾತನಾಡಿ ‘ಭಾರತದ ಸಂವಿಧಾನ ನಾಶಕ್ಕೆ ಹಲವು ಅಕ್ರಮ ಮತ್ತು ಹುನ್ನಾರ ನಡೆಸಲಾಗುತ್ತಿದೆ.. ಸಂವಿಧಾನ ನಂಬಿಕೊಂಡಿರುವ ರೈತರು ಮತ್ತು ಕಾರ್ಮಿಕರ ಐಕ್ಯತೆ ಮುರಿಯುವ ಯತ್ನ ನಡೆಯುತ್ತಿದೆ. ಸಾಮಾನ್ಯ ಜನರ ಮೇಲೆ ದೊಡ್ಡ ದೌರ್ಜನ್ಯದ ಜೊತೆಗೆ, ಬಂಡವಾಳಶಾಹಿ ವ್ಯಯವಸ್ಥೆಯಲ್ಲಿ ದೊಡ್ಡ ಬದಲಾವಣೆ ನಡೆಯುತ್ತಿದೆ. ಅಂಬಾನಿ ಅದಾನಿ ಎಂಬ ಹೊಸತರಹದ ಬಂಡವಾಳ ಶಾಹಿ ಹುಟ್ಟಿಕೊಂಡಿದ್ದಾರೆ. ಅದೇ ಗುತ್ತೇದಾರಿ (ಮನೋಪಲಿ) ಬಂಡವಾಳಶಾಹಿ.

ಮನೋಪಲಿ ಬಂಡವಾಳಕ್ಕೆ ಹೆಚ್ಚಿನ ಬೆಂಬಲ ನೀಡಿದರೆ ಫಾಸೀಸಂ ಮೇಲೆ ಕಡಿವಾಣ ಹಾಕಲು ಸಾಧ್ಯವಿಲ್ಲ. ಆಗ ಅವರು ಸಂವಿಧಾನವನ್ನು ದುರ್ಬಲ ಮಾಡುತ್ತಾರೆ ಎಂದು ಎಚ್ಚರಿಗೆ ನೀಡಿದರು. 

ಈಗ ಜಾರಿಯಾಗಿರುವ ಕಾರ್ಮಿಕ ವಿರೋಧಿ ಕಾಯ್ದೆಗಳು ಸಾಕಷ್ಟು ಅಮಾನವೀಯವಾಗಿವೆ. ಇನ್ನು ಮುಂದೆ ಕಾರ್ಮಿಕರು ಲೀಗಲ್ ಸ್ಟ್ರೈಕ್ ಮಾಡುವುದಕ್ಕೆ ಸಾಧ್ಯವಿಲ್ಲ. ಹೋರಾಟ ಮಾಡಿದರೆ ಅದು ಕಾನೂನು ಬಾಹಿರ ಆಗುತ್ತದೆ. ಕಾರ್ಮಿಕರ ಯೂನಿಯನ್ ಗಳು ನಿಷೇಧ ಆಗುತ್ತವೆ

ಹಳೆ ಕಾನೂನುಗಳ ಮೇಲೆ ನಮಗೆ ಹಿಡಿತ ಇತ್ತು. ಆದರೆ ಹೊಸ ಕಾನೂನುಗಳಲ್ಲಿ ಯಾವಾಗ ಬೇಕಾದರೂ ಕಾರ್ಮಿಕರನ್ನು ಕೆಲಸದಿಂದ ತೆಗೆಯಬಹುದು, ಯಾವಾಗ ಬೇಕಾದರೂ ಕಾರ್ಖಾನೆ ಮುಚ್ಚಿ ಬೇರೆ ತೆಗೆಯಬಹುದು. ಇದು ಕಾನೂನು ಬಾಹಿರ ಎಂಬುದನ್ನು ಮರೆಯಬಾರದು ಎಂದು ಹೇಳಿದರು. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...