Homeಕರ್ನಾಟಕ‘ಸಿದ್ದರಾಮಯ್ಯ ಸರ್ಕಾರ ಕೊಟ್ಟ ಮಾತನ್ನು ಉಳಿಸಿಕೊಂಡಿಲ್ಲ, ಇದು ಗ್ಯಾರಂಟಿ ಸರ್ಕಾರವಲ್ಲ’: ನೂರ್ ಶ್ರೀಧರ್

‘ಸಿದ್ದರಾಮಯ್ಯ ಸರ್ಕಾರ ಕೊಟ್ಟ ಮಾತನ್ನು ಉಳಿಸಿಕೊಂಡಿಲ್ಲ, ಇದು ಗ್ಯಾರಂಟಿ ಸರ್ಕಾರವಲ್ಲ’: ನೂರ್ ಶ್ರೀಧರ್

- Advertisement -
- Advertisement -

ಬೆಂಗಳೂರು: ಸಮಸ್ಯೆಗಳ ಪಟ್ಟಿ ಹಾಗೂ ಮನೆಹಾಳು ಯೋಜನೆಗಳ ಪಟ್ಟಿ ಬೆಳೆಯುತ್ತಲೇ ಇದೆ. ಆದರೆ ಪರಿಹಾರ ಮಾತ್ರ ಸಿಗುತ್ತಿಲ್ಲ. ಮುಖ್ಯಮಂತ್ರಿಗಳ ಬಗ್ಗೆ ನಮ್ಮ ಅಭಿಪ್ರಾಯ ಏನು ಎಂಬುದು ಅವರಿಗೆ ಚೆನ್ನಾಗಿ ಗೊತ್ತಿದೆ, ಹೊಲಸು ರಾಜಕೀಯದಲ್ಲಿ ಅವರ ಮೇಲೆ ನಮಗೆ ಅಪಾರವಾದ ನಂಬಿಕೆ ಇದೆ ಎಂದು ಜನಶಕ್ತಿಯ ನೂರ್ ಶ್ರೀಧರ್ ಹೇಳಿದರು.

ನವೆಂಬರ್ 26ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ‘ಸಂಯುಕ್ತ ಹೋರಾಟ ಕರ್ನಾಟಕದ ಆಶ್ರಯ’ದಲ್ಲಿ ನಡೆದ ‘ಬೆಂಗಳೂರು ಚಲೋ’ ಬೃಹತ್ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.  

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸರ್ಕಾರದ ನಿಲುವುಗಳ ಬಗ್ಗೆ ಪ್ರಶ್ನಿಸಿದ ನೂರ್ ಶ್ರೀಧರ್ ಅವರು ನೀವು ಅಧಿಕಾರಕ್ಕೆ ಬಂದ ಬಳಿಕ ಕೊಟ್ಟ ಮಾತು ಉಳಿಸಿಕೊಂಡಿಲ್ಲ. ಬಿಜೆಪಿ ಸರ್ಕಾರದ ಎಲ್ಲ ಕಾನೂನುಗಳನ್ನು ವಿರೋಧ ಪಕ್ಷವಿದ್ದಾಗ ವಿರೋಧ ಮಾಡಿದ್ದೀರಾ, ಈಗ ನೀವು ಏನು ಮಾಡುತ್ತಾ ಇದ್ದೀರಿ ಎಂದು ಪ್ರಶ್ನಿಸಿದರು. 

ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಕಾಯ್ದೆ ಜಾರಿ ಆಗುವುದಕ್ಕೆ ಅವಕಾಶ ನೀಡುವುದಿಲ್ಲ ಎಂದು ಸಂಯುಕ್ತ ಹೋರಾಟ ವೇದಿಕೆಯಲ್ಲಿ ಹೇಳಿದ್ದೀರಿ, ಆದರೆ, ಎಪಿಎಂಸಿ ಕಾಯ್ದೆಗೆ ಸ್ವಲ್ಪ ತಿದ್ದುಪಡಿ ಮಾಡಿದ್ದು ಬಿಟ್ಟರೆ ಎಲ್ಲ ಕಾನೂನುಗಳೂ ಹಾಗೆ ಇವೆ. ಪ್ರಜಾತಂತ್ರವನ್ನು ಬುಡಮೇಲು ಮಾಡುವ, ವಿರೋಧ ಪಕ್ಷಗಳು ಅಧಿಕಾರಕ್ಕೆ ಬರಲೇಬಾರದು ಎಂದು SIR ಕಾಯ್ದೆ ಜಾರಿ ಮಾಡುತ್ತಿದ್ದಾರೆ. ಜಾತ್ಯತೀತ ಮತದಾರರ ಹೆಸರುಗಳನ್ನ ಶೇ.15 ರಷ್ಟು ಅಳಿಸುತ್ತಿದ್ದಾರೆ, ಇಷ್ಟೆಲ್ಲಾ ಆದರೂ ಕರ್ನಾಟಕದಲ್ಲಿ ನೀವು ಏನು ಮಾಡುತ್ತಾ ಇದ್ದೀರಾ ಎಂದು ಕೇಳಿದರು.  

ಮಮತಾ ಬ್ಯಾನರ್ಜಿ ಸೇರಿದಂತೆ ಎಡ ಪಕ್ಷಗಳು ಬಿಜೆಪಿಯ ಜನವಿರೋಧಿ ನೀತಿಗಳನ್ನ ವಿರೋಧಿಸುತ್ತಿದ್ದಾರೆ. ಆದರೆ ನೀವು ಇಲ್ಲಿ ತಣ್ಣಗೆ ಮಲಗಿದ್ದೀರಾ. ದೇವನಹಳ್ಳಿ ಭೂಸ್ವಾಧೀನ ರದ್ದುಪಡಿಸಲು ನಾವು ಹೋರಾಟಗಾರರು ತಿಂಗಳುಗಟ್ಟಲೆ ಎಲ್ಲಾ ಕೆಲಸ ಬಿಟ್ಟು ಹೋರಾಟ ಮಾಡಬೇಕಾಯಿತು, ಹಾಗಾದರೆ ಉಳಿದ ಬೇಡಿಕೆ ಈಡೇರಿಸಿಕೊಳ್ಳಲು ನಾವು ಇನ್ನೆಷ್ಟು ವರ್ಷ ಹೋರಾಟ ಮಾಡಬೇಕು ಎಂದು ಪ್ರಶ್ನಿಸಿದರು. 

ಇದೇ ವೇಳೆ ರಾಮನಗರ ಜಿಲ್ಲಾಧಿಕಾರಿಗಳು ಮತ್ತು ಕೋಲಾರ ಅರಣ್ಯಾಧಿಕಾರಿಗಳು ರೈತರೊಂದಿಗೆ ಸಂಯಮದಿಂದ ವರ್ತಿಸಬೇಕು. ಇಲ್ಲದಿದ್ದರೆ ಸಂಯುಕ್ತ ಹೋರಾಟ ರೈತರ ಬೆನ್ನಿಗೆ ನಿಲ್ಲಲಿದೆ. ರಾಮನಗರ ಜಿಲ್ಲಾಧಿಕಾರಿಗಳು ಪ್ರಜಾಪ್ರಭುತ್ವದ ಜಿಲ್ಲಾಧಿಕಾರಿ, ಅವರು ಬ್ರಿಟಿಷ್ ಸರ್ಕಾರದ ಪ್ರತಿನಿಧಿಯಂತೆ ವರ್ತಿಸಬಾರದು ಹೀಗೆ ಮುಂದುವರೆದರೆ ರಾಮನಗರಕ್ಕೆ ಮುತ್ತಿಗೆ ಹಾಕಬೇಕಾಗುತ್ತದೆ ಎಂದು ರೈತ ಸಂಘದ ಯು. ಬಸವರಾಜಪ್ಪ ಎಚ್ಚರಿಕೆ ನೀಡಿದರು.  

ಪ್ರೊ. ಬಾಬು ಮ್ಯಾಥ್ಯೂ ಮಾತನಾಡಿ ‘ಭಾರತದ ಸಂವಿಧಾನ ನಾಶಕ್ಕೆ ಹಲವು ಅಕ್ರಮ ಮತ್ತು ಹುನ್ನಾರ ನಡೆಸಲಾಗುತ್ತಿದೆ.. ಸಂವಿಧಾನ ನಂಬಿಕೊಂಡಿರುವ ರೈತರು ಮತ್ತು ಕಾರ್ಮಿಕರ ಐಕ್ಯತೆ ಮುರಿಯುವ ಯತ್ನ ನಡೆಯುತ್ತಿದೆ. ಸಾಮಾನ್ಯ ಜನರ ಮೇಲೆ ದೊಡ್ಡ ದೌರ್ಜನ್ಯದ ಜೊತೆಗೆ, ಬಂಡವಾಳಶಾಹಿ ವ್ಯಯವಸ್ಥೆಯಲ್ಲಿ ದೊಡ್ಡ ಬದಲಾವಣೆ ನಡೆಯುತ್ತಿದೆ. ಅಂಬಾನಿ ಅದಾನಿ ಎಂಬ ಹೊಸತರಹದ ಬಂಡವಾಳ ಶಾಹಿ ಹುಟ್ಟಿಕೊಂಡಿದ್ದಾರೆ. ಅದೇ ಗುತ್ತೇದಾರಿ (ಮನೋಪಲಿ) ಬಂಡವಾಳಶಾಹಿ.

ಮನೋಪಲಿ ಬಂಡವಾಳಕ್ಕೆ ಹೆಚ್ಚಿನ ಬೆಂಬಲ ನೀಡಿದರೆ ಫಾಸೀಸಂ ಮೇಲೆ ಕಡಿವಾಣ ಹಾಕಲು ಸಾಧ್ಯವಿಲ್ಲ. ಆಗ ಅವರು ಸಂವಿಧಾನವನ್ನು ದುರ್ಬಲ ಮಾಡುತ್ತಾರೆ ಎಂದು ಎಚ್ಚರಿಗೆ ನೀಡಿದರು. 

ಈಗ ಜಾರಿಯಾಗಿರುವ ಕಾರ್ಮಿಕ ವಿರೋಧಿ ಕಾಯ್ದೆಗಳು ಸಾಕಷ್ಟು ಅಮಾನವೀಯವಾಗಿವೆ. ಇನ್ನು ಮುಂದೆ ಕಾರ್ಮಿಕರು ಲೀಗಲ್ ಸ್ಟ್ರೈಕ್ ಮಾಡುವುದಕ್ಕೆ ಸಾಧ್ಯವಿಲ್ಲ. ಹೋರಾಟ ಮಾಡಿದರೆ ಅದು ಕಾನೂನು ಬಾಹಿರ ಆಗುತ್ತದೆ. ಕಾರ್ಮಿಕರ ಯೂನಿಯನ್ ಗಳು ನಿಷೇಧ ಆಗುತ್ತವೆ

ಹಳೆ ಕಾನೂನುಗಳ ಮೇಲೆ ನಮಗೆ ಹಿಡಿತ ಇತ್ತು. ಆದರೆ ಹೊಸ ಕಾನೂನುಗಳಲ್ಲಿ ಯಾವಾಗ ಬೇಕಾದರೂ ಕಾರ್ಮಿಕರನ್ನು ಕೆಲಸದಿಂದ ತೆಗೆಯಬಹುದು, ಯಾವಾಗ ಬೇಕಾದರೂ ಕಾರ್ಖಾನೆ ಮುಚ್ಚಿ ಬೇರೆ ತೆಗೆಯಬಹುದು. ಇದು ಕಾನೂನು ಬಾಹಿರ ಎಂಬುದನ್ನು ಮರೆಯಬಾರದು ಎಂದು ಹೇಳಿದರು. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...