Homeಕರ್ನಾಟಕ‘ಸಿದ್ದರಾಮಯ್ಯ ಸರ್ಕಾರ ಕೊಟ್ಟ ಮಾತನ್ನು ಉಳಿಸಿಕೊಂಡಿಲ್ಲ, ಇದು ಗ್ಯಾರಂಟಿ ಸರ್ಕಾರವಲ್ಲ’: ನೂರ್ ಶ್ರೀಧರ್

‘ಸಿದ್ದರಾಮಯ್ಯ ಸರ್ಕಾರ ಕೊಟ್ಟ ಮಾತನ್ನು ಉಳಿಸಿಕೊಂಡಿಲ್ಲ, ಇದು ಗ್ಯಾರಂಟಿ ಸರ್ಕಾರವಲ್ಲ’: ನೂರ್ ಶ್ರೀಧರ್

- Advertisement -
- Advertisement -

ಬೆಂಗಳೂರು: ಸಮಸ್ಯೆಗಳ ಪಟ್ಟಿ ಹಾಗೂ ಮನೆಹಾಳು ಯೋಜನೆಗಳ ಪಟ್ಟಿ ಬೆಳೆಯುತ್ತಲೇ ಇದೆ. ಆದರೆ ಪರಿಹಾರ ಮಾತ್ರ ಸಿಗುತ್ತಿಲ್ಲ. ಮುಖ್ಯಮಂತ್ರಿಗಳ ಬಗ್ಗೆ ನಮ್ಮ ಅಭಿಪ್ರಾಯ ಏನು ಎಂಬುದು ಅವರಿಗೆ ಚೆನ್ನಾಗಿ ಗೊತ್ತಿದೆ, ಹೊಲಸು ರಾಜಕೀಯದಲ್ಲಿ ಅವರ ಮೇಲೆ ನಮಗೆ ಅಪಾರವಾದ ನಂಬಿಕೆ ಇದೆ ಎಂದು ಜನಶಕ್ತಿಯ ನೂರ್ ಶ್ರೀಧರ್ ಹೇಳಿದರು.

ನವೆಂಬರ್ 26ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ‘ಸಂಯುಕ್ತ ಹೋರಾಟ ಕರ್ನಾಟಕದ ಆಶ್ರಯ’ದಲ್ಲಿ ನಡೆದ ‘ಬೆಂಗಳೂರು ಚಲೋ’ ಬೃಹತ್ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.  

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸರ್ಕಾರದ ನಿಲುವುಗಳ ಬಗ್ಗೆ ಪ್ರಶ್ನಿಸಿದ ನೂರ್ ಶ್ರೀಧರ್ ಅವರು ನೀವು ಅಧಿಕಾರಕ್ಕೆ ಬಂದ ಬಳಿಕ ಕೊಟ್ಟ ಮಾತು ಉಳಿಸಿಕೊಂಡಿಲ್ಲ. ಬಿಜೆಪಿ ಸರ್ಕಾರದ ಎಲ್ಲ ಕಾನೂನುಗಳನ್ನು ವಿರೋಧ ಪಕ್ಷವಿದ್ದಾಗ ವಿರೋಧ ಮಾಡಿದ್ದೀರಾ, ಈಗ ನೀವು ಏನು ಮಾಡುತ್ತಾ ಇದ್ದೀರಿ ಎಂದು ಪ್ರಶ್ನಿಸಿದರು. 

ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಕಾಯ್ದೆ ಜಾರಿ ಆಗುವುದಕ್ಕೆ ಅವಕಾಶ ನೀಡುವುದಿಲ್ಲ ಎಂದು ಸಂಯುಕ್ತ ಹೋರಾಟ ವೇದಿಕೆಯಲ್ಲಿ ಹೇಳಿದ್ದೀರಿ, ಆದರೆ, ಎಪಿಎಂಸಿ ಕಾಯ್ದೆಗೆ ಸ್ವಲ್ಪ ತಿದ್ದುಪಡಿ ಮಾಡಿದ್ದು ಬಿಟ್ಟರೆ ಎಲ್ಲ ಕಾನೂನುಗಳೂ ಹಾಗೆ ಇವೆ. ಪ್ರಜಾತಂತ್ರವನ್ನು ಬುಡಮೇಲು ಮಾಡುವ, ವಿರೋಧ ಪಕ್ಷಗಳು ಅಧಿಕಾರಕ್ಕೆ ಬರಲೇಬಾರದು ಎಂದು SIR ಕಾಯ್ದೆ ಜಾರಿ ಮಾಡುತ್ತಿದ್ದಾರೆ. ಜಾತ್ಯತೀತ ಮತದಾರರ ಹೆಸರುಗಳನ್ನ ಶೇ.15 ರಷ್ಟು ಅಳಿಸುತ್ತಿದ್ದಾರೆ, ಇಷ್ಟೆಲ್ಲಾ ಆದರೂ ಕರ್ನಾಟಕದಲ್ಲಿ ನೀವು ಏನು ಮಾಡುತ್ತಾ ಇದ್ದೀರಾ ಎಂದು ಕೇಳಿದರು.  

ಮಮತಾ ಬ್ಯಾನರ್ಜಿ ಸೇರಿದಂತೆ ಎಡ ಪಕ್ಷಗಳು ಬಿಜೆಪಿಯ ಜನವಿರೋಧಿ ನೀತಿಗಳನ್ನ ವಿರೋಧಿಸುತ್ತಿದ್ದಾರೆ. ಆದರೆ ನೀವು ಇಲ್ಲಿ ತಣ್ಣಗೆ ಮಲಗಿದ್ದೀರಾ. ದೇವನಹಳ್ಳಿ ಭೂಸ್ವಾಧೀನ ರದ್ದುಪಡಿಸಲು ನಾವು ಹೋರಾಟಗಾರರು ತಿಂಗಳುಗಟ್ಟಲೆ ಎಲ್ಲಾ ಕೆಲಸ ಬಿಟ್ಟು ಹೋರಾಟ ಮಾಡಬೇಕಾಯಿತು, ಹಾಗಾದರೆ ಉಳಿದ ಬೇಡಿಕೆ ಈಡೇರಿಸಿಕೊಳ್ಳಲು ನಾವು ಇನ್ನೆಷ್ಟು ವರ್ಷ ಹೋರಾಟ ಮಾಡಬೇಕು ಎಂದು ಪ್ರಶ್ನಿಸಿದರು. 

ಇದೇ ವೇಳೆ ರಾಮನಗರ ಜಿಲ್ಲಾಧಿಕಾರಿಗಳು ಮತ್ತು ಕೋಲಾರ ಅರಣ್ಯಾಧಿಕಾರಿಗಳು ರೈತರೊಂದಿಗೆ ಸಂಯಮದಿಂದ ವರ್ತಿಸಬೇಕು. ಇಲ್ಲದಿದ್ದರೆ ಸಂಯುಕ್ತ ಹೋರಾಟ ರೈತರ ಬೆನ್ನಿಗೆ ನಿಲ್ಲಲಿದೆ. ರಾಮನಗರ ಜಿಲ್ಲಾಧಿಕಾರಿಗಳು ಪ್ರಜಾಪ್ರಭುತ್ವದ ಜಿಲ್ಲಾಧಿಕಾರಿ, ಅವರು ಬ್ರಿಟಿಷ್ ಸರ್ಕಾರದ ಪ್ರತಿನಿಧಿಯಂತೆ ವರ್ತಿಸಬಾರದು ಹೀಗೆ ಮುಂದುವರೆದರೆ ರಾಮನಗರಕ್ಕೆ ಮುತ್ತಿಗೆ ಹಾಕಬೇಕಾಗುತ್ತದೆ ಎಂದು ರೈತ ಸಂಘದ ಯು. ಬಸವರಾಜಪ್ಪ ಎಚ್ಚರಿಕೆ ನೀಡಿದರು.  

ಪ್ರೊ. ಬಾಬು ಮ್ಯಾಥ್ಯೂ ಮಾತನಾಡಿ ‘ಭಾರತದ ಸಂವಿಧಾನ ನಾಶಕ್ಕೆ ಹಲವು ಅಕ್ರಮ ಮತ್ತು ಹುನ್ನಾರ ನಡೆಸಲಾಗುತ್ತಿದೆ.. ಸಂವಿಧಾನ ನಂಬಿಕೊಂಡಿರುವ ರೈತರು ಮತ್ತು ಕಾರ್ಮಿಕರ ಐಕ್ಯತೆ ಮುರಿಯುವ ಯತ್ನ ನಡೆಯುತ್ತಿದೆ. ಸಾಮಾನ್ಯ ಜನರ ಮೇಲೆ ದೊಡ್ಡ ದೌರ್ಜನ್ಯದ ಜೊತೆಗೆ, ಬಂಡವಾಳಶಾಹಿ ವ್ಯಯವಸ್ಥೆಯಲ್ಲಿ ದೊಡ್ಡ ಬದಲಾವಣೆ ನಡೆಯುತ್ತಿದೆ. ಅಂಬಾನಿ ಅದಾನಿ ಎಂಬ ಹೊಸತರಹದ ಬಂಡವಾಳ ಶಾಹಿ ಹುಟ್ಟಿಕೊಂಡಿದ್ದಾರೆ. ಅದೇ ಗುತ್ತೇದಾರಿ (ಮನೋಪಲಿ) ಬಂಡವಾಳಶಾಹಿ.

ಮನೋಪಲಿ ಬಂಡವಾಳಕ್ಕೆ ಹೆಚ್ಚಿನ ಬೆಂಬಲ ನೀಡಿದರೆ ಫಾಸೀಸಂ ಮೇಲೆ ಕಡಿವಾಣ ಹಾಕಲು ಸಾಧ್ಯವಿಲ್ಲ. ಆಗ ಅವರು ಸಂವಿಧಾನವನ್ನು ದುರ್ಬಲ ಮಾಡುತ್ತಾರೆ ಎಂದು ಎಚ್ಚರಿಗೆ ನೀಡಿದರು. 

ಈಗ ಜಾರಿಯಾಗಿರುವ ಕಾರ್ಮಿಕ ವಿರೋಧಿ ಕಾಯ್ದೆಗಳು ಸಾಕಷ್ಟು ಅಮಾನವೀಯವಾಗಿವೆ. ಇನ್ನು ಮುಂದೆ ಕಾರ್ಮಿಕರು ಲೀಗಲ್ ಸ್ಟ್ರೈಕ್ ಮಾಡುವುದಕ್ಕೆ ಸಾಧ್ಯವಿಲ್ಲ. ಹೋರಾಟ ಮಾಡಿದರೆ ಅದು ಕಾನೂನು ಬಾಹಿರ ಆಗುತ್ತದೆ. ಕಾರ್ಮಿಕರ ಯೂನಿಯನ್ ಗಳು ನಿಷೇಧ ಆಗುತ್ತವೆ

ಹಳೆ ಕಾನೂನುಗಳ ಮೇಲೆ ನಮಗೆ ಹಿಡಿತ ಇತ್ತು. ಆದರೆ ಹೊಸ ಕಾನೂನುಗಳಲ್ಲಿ ಯಾವಾಗ ಬೇಕಾದರೂ ಕಾರ್ಮಿಕರನ್ನು ಕೆಲಸದಿಂದ ತೆಗೆಯಬಹುದು, ಯಾವಾಗ ಬೇಕಾದರೂ ಕಾರ್ಖಾನೆ ಮುಚ್ಚಿ ಬೇರೆ ತೆಗೆಯಬಹುದು. ಇದು ಕಾನೂನು ಬಾಹಿರ ಎಂಬುದನ್ನು ಮರೆಯಬಾರದು ಎಂದು ಹೇಳಿದರು. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ BJP ಗೆಲುವು SIR ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...