Homeಕರ್ನಾಟಕ‘ಸಿದ್ದರಾಮಯ್ಯ ಸರ್ಕಾರ ಕೊಟ್ಟ ಮಾತನ್ನು ಉಳಿಸಿಕೊಂಡಿಲ್ಲ, ಇದು ಗ್ಯಾರಂಟಿ ಸರ್ಕಾರವಲ್ಲ’: ನೂರ್ ಶ್ರೀಧರ್

‘ಸಿದ್ದರಾಮಯ್ಯ ಸರ್ಕಾರ ಕೊಟ್ಟ ಮಾತನ್ನು ಉಳಿಸಿಕೊಂಡಿಲ್ಲ, ಇದು ಗ್ಯಾರಂಟಿ ಸರ್ಕಾರವಲ್ಲ’: ನೂರ್ ಶ್ರೀಧರ್

- Advertisement -
- Advertisement -

ಬೆಂಗಳೂರು: ಸಮಸ್ಯೆಗಳ ಪಟ್ಟಿ ಹಾಗೂ ಮನೆಹಾಳು ಯೋಜನೆಗಳ ಪಟ್ಟಿ ಬೆಳೆಯುತ್ತಲೇ ಇದೆ. ಆದರೆ ಪರಿಹಾರ ಮಾತ್ರ ಸಿಗುತ್ತಿಲ್ಲ. ಮುಖ್ಯಮಂತ್ರಿಗಳ ಬಗ್ಗೆ ನಮ್ಮ ಅಭಿಪ್ರಾಯ ಏನು ಎಂಬುದು ಅವರಿಗೆ ಚೆನ್ನಾಗಿ ಗೊತ್ತಿದೆ, ಹೊಲಸು ರಾಜಕೀಯದಲ್ಲಿ ಅವರ ಮೇಲೆ ನಮಗೆ ಅಪಾರವಾದ ನಂಬಿಕೆ ಇದೆ ಎಂದು ಜನಶಕ್ತಿಯ ನೂರ್ ಶ್ರೀಧರ್ ಹೇಳಿದರು.

ನವೆಂಬರ್ 26ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ‘ಸಂಯುಕ್ತ ಹೋರಾಟ ಕರ್ನಾಟಕದ ಆಶ್ರಯ’ದಲ್ಲಿ ನಡೆದ ‘ಬೆಂಗಳೂರು ಚಲೋ’ ಬೃಹತ್ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.  

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸರ್ಕಾರದ ನಿಲುವುಗಳ ಬಗ್ಗೆ ಪ್ರಶ್ನಿಸಿದ ನೂರ್ ಶ್ರೀಧರ್ ಅವರು ನೀವು ಅಧಿಕಾರಕ್ಕೆ ಬಂದ ಬಳಿಕ ಕೊಟ್ಟ ಮಾತು ಉಳಿಸಿಕೊಂಡಿಲ್ಲ. ಬಿಜೆಪಿ ಸರ್ಕಾರದ ಎಲ್ಲ ಕಾನೂನುಗಳನ್ನು ವಿರೋಧ ಪಕ್ಷವಿದ್ದಾಗ ವಿರೋಧ ಮಾಡಿದ್ದೀರಾ, ಈಗ ನೀವು ಏನು ಮಾಡುತ್ತಾ ಇದ್ದೀರಿ ಎಂದು ಪ್ರಶ್ನಿಸಿದರು. 

ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಕಾಯ್ದೆ ಜಾರಿ ಆಗುವುದಕ್ಕೆ ಅವಕಾಶ ನೀಡುವುದಿಲ್ಲ ಎಂದು ಸಂಯುಕ್ತ ಹೋರಾಟ ವೇದಿಕೆಯಲ್ಲಿ ಹೇಳಿದ್ದೀರಿ, ಆದರೆ, ಎಪಿಎಂಸಿ ಕಾಯ್ದೆಗೆ ಸ್ವಲ್ಪ ತಿದ್ದುಪಡಿ ಮಾಡಿದ್ದು ಬಿಟ್ಟರೆ ಎಲ್ಲ ಕಾನೂನುಗಳೂ ಹಾಗೆ ಇವೆ. ಪ್ರಜಾತಂತ್ರವನ್ನು ಬುಡಮೇಲು ಮಾಡುವ, ವಿರೋಧ ಪಕ್ಷಗಳು ಅಧಿಕಾರಕ್ಕೆ ಬರಲೇಬಾರದು ಎಂದು SIR ಕಾಯ್ದೆ ಜಾರಿ ಮಾಡುತ್ತಿದ್ದಾರೆ. ಜಾತ್ಯತೀತ ಮತದಾರರ ಹೆಸರುಗಳನ್ನ ಶೇ.15 ರಷ್ಟು ಅಳಿಸುತ್ತಿದ್ದಾರೆ, ಇಷ್ಟೆಲ್ಲಾ ಆದರೂ ಕರ್ನಾಟಕದಲ್ಲಿ ನೀವು ಏನು ಮಾಡುತ್ತಾ ಇದ್ದೀರಾ ಎಂದು ಕೇಳಿದರು.  

ಮಮತಾ ಬ್ಯಾನರ್ಜಿ ಸೇರಿದಂತೆ ಎಡ ಪಕ್ಷಗಳು ಬಿಜೆಪಿಯ ಜನವಿರೋಧಿ ನೀತಿಗಳನ್ನ ವಿರೋಧಿಸುತ್ತಿದ್ದಾರೆ. ಆದರೆ ನೀವು ಇಲ್ಲಿ ತಣ್ಣಗೆ ಮಲಗಿದ್ದೀರಾ. ದೇವನಹಳ್ಳಿ ಭೂಸ್ವಾಧೀನ ರದ್ದುಪಡಿಸಲು ನಾವು ಹೋರಾಟಗಾರರು ತಿಂಗಳುಗಟ್ಟಲೆ ಎಲ್ಲಾ ಕೆಲಸ ಬಿಟ್ಟು ಹೋರಾಟ ಮಾಡಬೇಕಾಯಿತು, ಹಾಗಾದರೆ ಉಳಿದ ಬೇಡಿಕೆ ಈಡೇರಿಸಿಕೊಳ್ಳಲು ನಾವು ಇನ್ನೆಷ್ಟು ವರ್ಷ ಹೋರಾಟ ಮಾಡಬೇಕು ಎಂದು ಪ್ರಶ್ನಿಸಿದರು. 

ಇದೇ ವೇಳೆ ರಾಮನಗರ ಜಿಲ್ಲಾಧಿಕಾರಿಗಳು ಮತ್ತು ಕೋಲಾರ ಅರಣ್ಯಾಧಿಕಾರಿಗಳು ರೈತರೊಂದಿಗೆ ಸಂಯಮದಿಂದ ವರ್ತಿಸಬೇಕು. ಇಲ್ಲದಿದ್ದರೆ ಸಂಯುಕ್ತ ಹೋರಾಟ ರೈತರ ಬೆನ್ನಿಗೆ ನಿಲ್ಲಲಿದೆ. ರಾಮನಗರ ಜಿಲ್ಲಾಧಿಕಾರಿಗಳು ಪ್ರಜಾಪ್ರಭುತ್ವದ ಜಿಲ್ಲಾಧಿಕಾರಿ, ಅವರು ಬ್ರಿಟಿಷ್ ಸರ್ಕಾರದ ಪ್ರತಿನಿಧಿಯಂತೆ ವರ್ತಿಸಬಾರದು ಹೀಗೆ ಮುಂದುವರೆದರೆ ರಾಮನಗರಕ್ಕೆ ಮುತ್ತಿಗೆ ಹಾಕಬೇಕಾಗುತ್ತದೆ ಎಂದು ರೈತ ಸಂಘದ ಯು. ಬಸವರಾಜಪ್ಪ ಎಚ್ಚರಿಕೆ ನೀಡಿದರು.  

ಪ್ರೊ. ಬಾಬು ಮ್ಯಾಥ್ಯೂ ಮಾತನಾಡಿ ‘ಭಾರತದ ಸಂವಿಧಾನ ನಾಶಕ್ಕೆ ಹಲವು ಅಕ್ರಮ ಮತ್ತು ಹುನ್ನಾರ ನಡೆಸಲಾಗುತ್ತಿದೆ.. ಸಂವಿಧಾನ ನಂಬಿಕೊಂಡಿರುವ ರೈತರು ಮತ್ತು ಕಾರ್ಮಿಕರ ಐಕ್ಯತೆ ಮುರಿಯುವ ಯತ್ನ ನಡೆಯುತ್ತಿದೆ. ಸಾಮಾನ್ಯ ಜನರ ಮೇಲೆ ದೊಡ್ಡ ದೌರ್ಜನ್ಯದ ಜೊತೆಗೆ, ಬಂಡವಾಳಶಾಹಿ ವ್ಯಯವಸ್ಥೆಯಲ್ಲಿ ದೊಡ್ಡ ಬದಲಾವಣೆ ನಡೆಯುತ್ತಿದೆ. ಅಂಬಾನಿ ಅದಾನಿ ಎಂಬ ಹೊಸತರಹದ ಬಂಡವಾಳ ಶಾಹಿ ಹುಟ್ಟಿಕೊಂಡಿದ್ದಾರೆ. ಅದೇ ಗುತ್ತೇದಾರಿ (ಮನೋಪಲಿ) ಬಂಡವಾಳಶಾಹಿ.

ಮನೋಪಲಿ ಬಂಡವಾಳಕ್ಕೆ ಹೆಚ್ಚಿನ ಬೆಂಬಲ ನೀಡಿದರೆ ಫಾಸೀಸಂ ಮೇಲೆ ಕಡಿವಾಣ ಹಾಕಲು ಸಾಧ್ಯವಿಲ್ಲ. ಆಗ ಅವರು ಸಂವಿಧಾನವನ್ನು ದುರ್ಬಲ ಮಾಡುತ್ತಾರೆ ಎಂದು ಎಚ್ಚರಿಗೆ ನೀಡಿದರು. 

ಈಗ ಜಾರಿಯಾಗಿರುವ ಕಾರ್ಮಿಕ ವಿರೋಧಿ ಕಾಯ್ದೆಗಳು ಸಾಕಷ್ಟು ಅಮಾನವೀಯವಾಗಿವೆ. ಇನ್ನು ಮುಂದೆ ಕಾರ್ಮಿಕರು ಲೀಗಲ್ ಸ್ಟ್ರೈಕ್ ಮಾಡುವುದಕ್ಕೆ ಸಾಧ್ಯವಿಲ್ಲ. ಹೋರಾಟ ಮಾಡಿದರೆ ಅದು ಕಾನೂನು ಬಾಹಿರ ಆಗುತ್ತದೆ. ಕಾರ್ಮಿಕರ ಯೂನಿಯನ್ ಗಳು ನಿಷೇಧ ಆಗುತ್ತವೆ

ಹಳೆ ಕಾನೂನುಗಳ ಮೇಲೆ ನಮಗೆ ಹಿಡಿತ ಇತ್ತು. ಆದರೆ ಹೊಸ ಕಾನೂನುಗಳಲ್ಲಿ ಯಾವಾಗ ಬೇಕಾದರೂ ಕಾರ್ಮಿಕರನ್ನು ಕೆಲಸದಿಂದ ತೆಗೆಯಬಹುದು, ಯಾವಾಗ ಬೇಕಾದರೂ ಕಾರ್ಖಾನೆ ಮುಚ್ಚಿ ಬೇರೆ ತೆಗೆಯಬಹುದು. ಇದು ಕಾನೂನು ಬಾಹಿರ ಎಂಬುದನ್ನು ಮರೆಯಬಾರದು ಎಂದು ಹೇಳಿದರು. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...