Homeಕರ್ನಾಟಕಭೂ ದಾಹಕ್ಕೆ ಸಿದ್ದರಾಮಯ್ಯ ಸರ್ಕಾರ ಕೂಡಾ ಹೊರತಾಗಿಲ್ಲ: ಕಣ್ಣೀರು ಸುರಿಸಿದ ರೈತ ಕಾರಹಳ್ಳಿ ಶ್ರೀನಿವಾಸ್

ಭೂ ದಾಹಕ್ಕೆ ಸಿದ್ದರಾಮಯ್ಯ ಸರ್ಕಾರ ಕೂಡಾ ಹೊರತಾಗಿಲ್ಲ: ಕಣ್ಣೀರು ಸುರಿಸಿದ ರೈತ ಕಾರಹಳ್ಳಿ ಶ್ರೀನಿವಾಸ್

- Advertisement -
- Advertisement -

ಯಾವ ಸರ್ಕಾರ ಜನಪರ, ಸಮಾಜವಾದಿ ಸರ್ಕಾರ ಎಂದು ಭಾವಿಸಿದ್ದೆವೊ, ಅದೇ ಸರ್ಕಾರವೆ ಎಲ್ಲಾ ಜನವಿರೋಧಿ ನೀತಿಯನ್ನು ತಂದು ಜನ ಚಳವಳಿಯನ್ನು ಹತ್ತಿಕ್ಕುವ ಎಲ್ಲಾ ಪ್ರಯತ್ನ ಮಾಡುತ್ತಿದ್ದು, ಭೂ ದಾಹಕ್ಕೆ ಸಿದ್ದರಾಮಯ್ಯ ಸರ್ಕಾರ ಕೂಡಾ ಹೊರತಾಗಿಲ್ಲ ಎಂದು 1142 ದಿನಗಳಿಂದ ನಿರಂತರ ಹೋರಾಟ ಮಾಡುತ್ತಿರುವ ಚೆನ್ನರಾಯಪಟ್ಟಣ ಭೂ ಸ್ವಾಧೀನ ವಿರೋಧಿ ಹೋರಾಟಗಾರ ಕಾರಹಳ್ಳಿ ಶ್ರೀನಿವಾಸ್ ಹೇಳುತ್ತಾ ಕಣ್ಣೀರಾಗಿದ್ದಾರೆ.

ಮಂಗಳವಾರ ಬೆಂಗಳೂರಿನ ಗಾಂಧಿ ಭವನದಲ್ಲಿ ‘ಸಂಯುಕ್ತ ಹೋರಾಟ ಕರ್ನಾಟಕ’ ಆಯೋಜಿಸಿದ್ದ ಜನಾಗ್ರಹ ಸಮಾವೇಶ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ‘ಸಂಯುಕ್ತ ಹೋರಾಟ-ಕರ್ನಾಟಕ’ ರಾಜ್ಯದ ರೈತ, ದಲಿತ, ಕಾರ್ಮಿಕ, ವಿದ್ಯಾರ್ಥಿ, ಯುವಜನ, ಮಹಿಳಾ ಸಂಘಟನೆಗಳ ಸಮನ್ವಯ ಸಮಿತಿಯಾಗಿದೆ.

ರಾಜ್ಯದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ 2 ವರ್ಷಗಳಾದ ಹಿನ್ನಲೆ ಪಕ್ಷವು ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಬೃಹತ್ ಸಾಧನಾ ಸಮಾವೇಶವನ್ನು ಮಂಗಳವಾರ ಆಯೋಜಿಸಿದೆ. ಈ ಸಮಾವೇಶದ ನೈತಿಕತೆಯನ್ನು ಪ್ರಶ್ನಿಸಿ ಸಂಯುಕ್ತ ಹೋರಾಟ – ಕರ್ನಾಟಕ ಜನ ಚಳವಳಿಗಳಿಂದ ಜನಾಗ್ರಹ ಸಮಾವೇಶವನ್ನು ನಡೆಸಿದೆ.

ಸಮಾವೇಶ ಉದ್ಘಾಟಿಸಿ ಮಾತನಾಡಿದ ಕಾರಹಳ್ಳಿ ಶ್ರೀನಿವಾಸ್, ಈ ಸಮಾವೇಶಕ್ಕೆ ಭಾಗವಸಿದ್ದಕ್ಕೆ ಸಂತೋಷ ಮತ್ತು ಸಂಕಟದ ಅನುಭವಾಗುತ್ತಿದೆ. ಯಾವ ಸರ್ಕಾರ ಜನಪರ ಸರ್ಕಾರ, ಸಮಾಜವಾದಿ ಸರ್ಕಾರ ಎಂದು ಭಾವಿದ್ದೆವೊ, ಅದೇ ಸರ್ಕಾರ ಎಲ್ಲಾ ಜನವಿರೋಧಿ ನೀತಿಯನ್ನು ತಂದು ಜನ ಚಳವಳಿಯನ್ನು ಹತ್ತಿಕ್ಕುವ ಎಲ್ಲಾ ಪ್ರಯತ್ನ ಮಾಡುತ್ತಿದೆ ಎಂದು ಹೇಳಿದರು.

ಚನ್ನರಾಯಪಟ್ಟಣ ಹೋರಾಟದ ಬಗ್ಗೆ ಮಾತನಾಡಿದ ಅವರು, 2022ರ ಎಪ್ರಿಲ್ 4ರಂದು ಹೋರಾಟ ಪ್ರಾರಂಭವಾಗಿ ಇಂದಿಗೆ 1000ಕ್ಕೂ ಹೆಚ್ಚು ದಿನಗಳು ಕಳೆದಿವೆ. ಇವತ್ತಿಗೂ ಹೋರಾಟ ಸುದೀರ್ಘವಾಗಿ ನಡೆಯುತ್ತಿದೆ. ಎಲ್ಲಾ ರೀತಿಯ ಪ್ರಯತ್ನ ನಡೆಸುತ್ತಿದ್ದು, ಇವತ್ತಿಗೂ ಕೇಸ್‌ಗಳನ್ನು ಮೈಗೆಳೆದುಕೊಂಡು ರೈತರು ಹೋರಾಟ ನಡೆಸುತ್ತಿದ್ದಾರೆ” ಎಂದು ಹೇಳಿದರು.

“ಸ್ವತಃ ಸಿದ್ದರಾಮಯ್ಯ ಅವರು ವಿಪಕ್ಷದಲ್ಲಿದ್ದಾಗ ನಾವು ಅಧಿಕಾರಕ್ಕೆ ಬಂದರೆ ಭೂ ಸ್ವಾಧೀನ ಪ್ರಕ್ರಿಯೆ ರದ್ದು ಮಾಡುವುದಾಗಿ ಹೇಳಿದ್ದರು. ಆದರೆ ಈಗ ಸಿದ್ದರಾಮಯ್ಯ ಅವರು ಹೋರಾಟವನ್ನು ಹತ್ತಿಕ್ಕಲು ಪ್ರಯತ್ನಿಸುತ್ತಾ, ನೀಡಿದ್ದ ಮಾತು ಮರೆತಿದೆ. ಭೂ ದಾಹಕ್ಕೆ ಸಿದ್ದರಾಮಯ್ಯ ಸರ್ಕಾರ ಕೂಡಾ ಹೊರತಾಗಿಲ್ಲ” ಎಂದು ರೈತ ಹೋರಾಟಗಾರ ಶ್ರಿನಿವಾಸ್ ಅವರು ಕಣ್ಣೀರಾದರು.

ದೆಹಲಿ ಮಾದರಿ ಹೋರಾಟಗಳು ನಮಗೆ ಸ್ಪೂರ್ತಿಯಾಗಿದ್ದು ನಿಜವೇ ಆದರೂ, ನಮ್ಮದೇ ನೆಲದ ಹೋರಾಟವನ್ನು ನಗಣ್ಯ ಮಾಡುವುದು ಸರಿಯಲ್ಲ. ಕರ್ನಾಟಕದ ಈ ಹೋರಾಟಕ್ಕೆ ನಿಮ್ಮ ಶಕ್ತಿ ಬೇಕಿದೆ ಎಂದು ರಾಜ್ಯದ ಸಂಘಟನೆಗಳಿಗೆ ಶ್ರೀನಿವಾಸ್ ಅವರು ವಿನಂತಿಸಿದರು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಕಾಂಗ್ರೆಸ್ ಯಾವ ಮುಖ ಇಟ್ಟು ಸಾಧನಾ ಸಮಾವೇಶ ನಡೆಸುತ್ತಿದೆ: ರೈತ ಮುಖಂಡ ಚಾಮರಸಮಾಲೀ ಪಾಟೀಲ್ ಪ್ರಶ್ನೆ

ಕಾಂಗ್ರೆಸ್ ಯಾವ ಮುಖ ಇಟ್ಟು ಸಾಧನಾ ಸಮಾವೇಶ ನಡೆಸುತ್ತಿದೆ: ರೈತ ಮುಖಂಡ ಚಾಮರಸಮಾಲೀ ಪಾಟೀಲ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...

ಎಸ್‌ಐಆರ್‌ನ ನಿಜವಾದ ಉದ್ದೇಶ ಎನ್‌ಆರ್‌ಸಿ : ಮಮತಾ ಬ್ಯಾನರ್ಜಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಹಿಂದಿನ ಕೇಂದ್ರ ಸರ್ಕಾರದ ನಿಜವಾದ ಉದ್ದೇಶ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮಾಡುವುದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ನವೆಂಬರ್...

ಬೆಂಗಳೂರು ಚಲೋ: ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಸಚಿವ ಮಹದೇವಪ್ಪ: ಸಿಎಂ ಜೊತೆ ಚರ್ಚಿಸುವ ಭರವಸೆ 

ಕೇಂದ್ರ ಸರ್ಕಾರದ ರೈತ, ಕಾರ್ಮಿಕ, ಜನವಿರೋಧಿ ನೀತಿಗಳು ಹಾಗೂ ರಾಜ್ಯ ಸರ್ಕಾರದ ನಿರ್ಲಕ್ಷ್ಯ, ನಿರ್ಲಜ್ಜ ಧೋರಣೆಯ ವಿರುದ್ಧ ಸಂಯುಕ್ತ ಹೋರಾಟ ಕರ್ನಾಟಕದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ‘ಬೆಂಗಳೂರು ಚಲೋ’...

ಛತ್ತೀಸ್‌ಗಢ : ಬಿಜಾಪುರದಲ್ಲಿ 41 ಮಾವೋವಾದಿಗಳು ಶರಣಾಗತಿ

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಬುಧವಾರ (ನವೆಂಬರ್ 26) 41 ಮಂದಿ ನಕ್ಸಲರು ಶರಣಾಗಿದ್ದು, ಈ ಪೈಕಿ 32 ಮಂದಿಯ ತಲೆಗೆ ಒಟ್ಟು 1.19 ಕೋಟಿ ರೂಪಾಯಿ ಬಹುಮಾನ ಘೋಷಣೆಯಾಗಿತ್ತು ಎಂದು ವರದಿಯಾಗಿದೆ. ಸರ್ಕಾರದ ಹೊಸ...

ಬೆಂಗಳೂರು ಚಲೋ: ಧರಣಿ ಸ್ಥಳಕ್ಕೆ ಬಾರದ ಸಚಿವರು, ಕೋಪಗೊಂಡು ರಸ್ತೆಗಿಳಿದ ಪ್ರತಿಭಟನಾಕಾರರು

ಕೇಂದ್ರ ಸರ್ಕಾರದ ರೈತ, ಕಾರ್ಮಿಕ, ಜನವಿರೋಧಿ ನೀತಿಗಳು ಹಾಗೂ ರಾಜ್ಯ ಸರ್ಕಾರದ ನಿರ್ಲಕ್ಷ್ಯ, ನಿರ್ಲಜ್ಜ ಧೋರಣೆಯ ವಿರುದ್ಧ ಸಂಯುಕ್ತ ಹೋರಾಟ ಕರ್ನಾಟಕದ ನೇತೃತ್ವದಲ್ಲಿ ಬೃಹತ್ 'ಬೆಂಗಳೂರು ಚಲೋ' ಬುಧವಾರ (ನವೆಂಬರ್ 26) ಫ್ರೀಡಂ...

ಹಿಂಸಾಚಾರಕ್ಕೆ ತಿರುಗಿದ ವಿದ್ಯಾರ್ಥಿಗಳ ಪ್ರತಿಭಟನೆ: ವಿಐಟಿ ಭೋಪಾಲ್ ವಿವಿ ಕ್ಯಾಂಪಸ್ ಧ್ವಂಸ, ವಾಹನಗಳಿಗೆ ಬೆಂಕಿ

ಇಂದೋರ್-ಭೋಪಾಲ್ ಹೆದ್ದಾರಿಯಲ್ಲಿರುವ ಸೆಹೋರ್ ಜಿಲ್ಲೆಯ ವಿಐಟಿ ವಿಶ್ವವಿದ್ಯಾಲಯದಲ್ಲಿ ಮಂಗಳವಾರ ತಡರಾತ್ರಿ ನಡೆದ ಪ್ರತಿಭಟನೆ ದೊಡ್ಡ ಪ್ರಮಾಣದ ಹಿಂಸಾಚಾರಕ್ಕೆ ತಿರುಗಿದ್ದು, ಕೋಪಗೊಂಡ ವಿದ್ಯಾರ್ಥಿಗಳು ಹಲವಾರು ವಾಹನಗಳಿಗೆ ಬೆಂಕಿ ಹಚ್ಚಿ ಕ್ಯಾಂಪಸ್ ಆಸ್ತಿಗೆ ಹಾನಿ ಮಾಡಿದ್ದಾರೆ...