Homeಕರ್ನಾಟಕಭೂ ದಾಹಕ್ಕೆ ಸಿದ್ದರಾಮಯ್ಯ ಸರ್ಕಾರ ಕೂಡಾ ಹೊರತಾಗಿಲ್ಲ: ಕಣ್ಣೀರು ಸುರಿಸಿದ ರೈತ ಕಾರಹಳ್ಳಿ ಶ್ರೀನಿವಾಸ್

ಭೂ ದಾಹಕ್ಕೆ ಸಿದ್ದರಾಮಯ್ಯ ಸರ್ಕಾರ ಕೂಡಾ ಹೊರತಾಗಿಲ್ಲ: ಕಣ್ಣೀರು ಸುರಿಸಿದ ರೈತ ಕಾರಹಳ್ಳಿ ಶ್ರೀನಿವಾಸ್

- Advertisement -
- Advertisement -

ಯಾವ ಸರ್ಕಾರ ಜನಪರ, ಸಮಾಜವಾದಿ ಸರ್ಕಾರ ಎಂದು ಭಾವಿಸಿದ್ದೆವೊ, ಅದೇ ಸರ್ಕಾರವೆ ಎಲ್ಲಾ ಜನವಿರೋಧಿ ನೀತಿಯನ್ನು ತಂದು ಜನ ಚಳವಳಿಯನ್ನು ಹತ್ತಿಕ್ಕುವ ಎಲ್ಲಾ ಪ್ರಯತ್ನ ಮಾಡುತ್ತಿದ್ದು, ಭೂ ದಾಹಕ್ಕೆ ಸಿದ್ದರಾಮಯ್ಯ ಸರ್ಕಾರ ಕೂಡಾ ಹೊರತಾಗಿಲ್ಲ ಎಂದು 1142 ದಿನಗಳಿಂದ ನಿರಂತರ ಹೋರಾಟ ಮಾಡುತ್ತಿರುವ ಚೆನ್ನರಾಯಪಟ್ಟಣ ಭೂ ಸ್ವಾಧೀನ ವಿರೋಧಿ ಹೋರಾಟಗಾರ ಕಾರಹಳ್ಳಿ ಶ್ರೀನಿವಾಸ್ ಹೇಳುತ್ತಾ ಕಣ್ಣೀರಾಗಿದ್ದಾರೆ.

ಮಂಗಳವಾರ ಬೆಂಗಳೂರಿನ ಗಾಂಧಿ ಭವನದಲ್ಲಿ ‘ಸಂಯುಕ್ತ ಹೋರಾಟ ಕರ್ನಾಟಕ’ ಆಯೋಜಿಸಿದ್ದ ಜನಾಗ್ರಹ ಸಮಾವೇಶ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ‘ಸಂಯುಕ್ತ ಹೋರಾಟ-ಕರ್ನಾಟಕ’ ರಾಜ್ಯದ ರೈತ, ದಲಿತ, ಕಾರ್ಮಿಕ, ವಿದ್ಯಾರ್ಥಿ, ಯುವಜನ, ಮಹಿಳಾ ಸಂಘಟನೆಗಳ ಸಮನ್ವಯ ಸಮಿತಿಯಾಗಿದೆ.

ರಾಜ್ಯದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ 2 ವರ್ಷಗಳಾದ ಹಿನ್ನಲೆ ಪಕ್ಷವು ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಬೃಹತ್ ಸಾಧನಾ ಸಮಾವೇಶವನ್ನು ಮಂಗಳವಾರ ಆಯೋಜಿಸಿದೆ. ಈ ಸಮಾವೇಶದ ನೈತಿಕತೆಯನ್ನು ಪ್ರಶ್ನಿಸಿ ಸಂಯುಕ್ತ ಹೋರಾಟ – ಕರ್ನಾಟಕ ಜನ ಚಳವಳಿಗಳಿಂದ ಜನಾಗ್ರಹ ಸಮಾವೇಶವನ್ನು ನಡೆಸಿದೆ.

ಸಮಾವೇಶ ಉದ್ಘಾಟಿಸಿ ಮಾತನಾಡಿದ ಕಾರಹಳ್ಳಿ ಶ್ರೀನಿವಾಸ್, ಈ ಸಮಾವೇಶಕ್ಕೆ ಭಾಗವಸಿದ್ದಕ್ಕೆ ಸಂತೋಷ ಮತ್ತು ಸಂಕಟದ ಅನುಭವಾಗುತ್ತಿದೆ. ಯಾವ ಸರ್ಕಾರ ಜನಪರ ಸರ್ಕಾರ, ಸಮಾಜವಾದಿ ಸರ್ಕಾರ ಎಂದು ಭಾವಿದ್ದೆವೊ, ಅದೇ ಸರ್ಕಾರ ಎಲ್ಲಾ ಜನವಿರೋಧಿ ನೀತಿಯನ್ನು ತಂದು ಜನ ಚಳವಳಿಯನ್ನು ಹತ್ತಿಕ್ಕುವ ಎಲ್ಲಾ ಪ್ರಯತ್ನ ಮಾಡುತ್ತಿದೆ ಎಂದು ಹೇಳಿದರು.

ಚನ್ನರಾಯಪಟ್ಟಣ ಹೋರಾಟದ ಬಗ್ಗೆ ಮಾತನಾಡಿದ ಅವರು, 2022ರ ಎಪ್ರಿಲ್ 4ರಂದು ಹೋರಾಟ ಪ್ರಾರಂಭವಾಗಿ ಇಂದಿಗೆ 1000ಕ್ಕೂ ಹೆಚ್ಚು ದಿನಗಳು ಕಳೆದಿವೆ. ಇವತ್ತಿಗೂ ಹೋರಾಟ ಸುದೀರ್ಘವಾಗಿ ನಡೆಯುತ್ತಿದೆ. ಎಲ್ಲಾ ರೀತಿಯ ಪ್ರಯತ್ನ ನಡೆಸುತ್ತಿದ್ದು, ಇವತ್ತಿಗೂ ಕೇಸ್‌ಗಳನ್ನು ಮೈಗೆಳೆದುಕೊಂಡು ರೈತರು ಹೋರಾಟ ನಡೆಸುತ್ತಿದ್ದಾರೆ” ಎಂದು ಹೇಳಿದರು.

“ಸ್ವತಃ ಸಿದ್ದರಾಮಯ್ಯ ಅವರು ವಿಪಕ್ಷದಲ್ಲಿದ್ದಾಗ ನಾವು ಅಧಿಕಾರಕ್ಕೆ ಬಂದರೆ ಭೂ ಸ್ವಾಧೀನ ಪ್ರಕ್ರಿಯೆ ರದ್ದು ಮಾಡುವುದಾಗಿ ಹೇಳಿದ್ದರು. ಆದರೆ ಈಗ ಸಿದ್ದರಾಮಯ್ಯ ಅವರು ಹೋರಾಟವನ್ನು ಹತ್ತಿಕ್ಕಲು ಪ್ರಯತ್ನಿಸುತ್ತಾ, ನೀಡಿದ್ದ ಮಾತು ಮರೆತಿದೆ. ಭೂ ದಾಹಕ್ಕೆ ಸಿದ್ದರಾಮಯ್ಯ ಸರ್ಕಾರ ಕೂಡಾ ಹೊರತಾಗಿಲ್ಲ” ಎಂದು ರೈತ ಹೋರಾಟಗಾರ ಶ್ರಿನಿವಾಸ್ ಅವರು ಕಣ್ಣೀರಾದರು.

ದೆಹಲಿ ಮಾದರಿ ಹೋರಾಟಗಳು ನಮಗೆ ಸ್ಪೂರ್ತಿಯಾಗಿದ್ದು ನಿಜವೇ ಆದರೂ, ನಮ್ಮದೇ ನೆಲದ ಹೋರಾಟವನ್ನು ನಗಣ್ಯ ಮಾಡುವುದು ಸರಿಯಲ್ಲ. ಕರ್ನಾಟಕದ ಈ ಹೋರಾಟಕ್ಕೆ ನಿಮ್ಮ ಶಕ್ತಿ ಬೇಕಿದೆ ಎಂದು ರಾಜ್ಯದ ಸಂಘಟನೆಗಳಿಗೆ ಶ್ರೀನಿವಾಸ್ ಅವರು ವಿನಂತಿಸಿದರು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಕಾಂಗ್ರೆಸ್ ಯಾವ ಮುಖ ಇಟ್ಟು ಸಾಧನಾ ಸಮಾವೇಶ ನಡೆಸುತ್ತಿದೆ: ರೈತ ಮುಖಂಡ ಚಾಮರಸಮಾಲೀ ಪಾಟೀಲ್ ಪ್ರಶ್ನೆ

ಕಾಂಗ್ರೆಸ್ ಯಾವ ಮುಖ ಇಟ್ಟು ಸಾಧನಾ ಸಮಾವೇಶ ನಡೆಸುತ್ತಿದೆ: ರೈತ ಮುಖಂಡ ಚಾಮರಸಮಾಲೀ ಪಾಟೀಲ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಪರಾಧದ ಸ್ವರೂಪ ಏನೇ ಇರಲಿ, ತ್ವರಿತ ವಿಚಾರಣೆಯ ಹಕ್ಕು ಅನ್ವಯಿಸುತ್ತದೆ: ಸುಪ್ರೀಂ ಕೋರ್ಟ್

ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ತ್ವರಿತ ವಿಚಾರಣೆಯ ಹಕ್ಕು ಅಪರಾಧದ ಗಂಭೀರತೆ ಅಥವಾ ಸ್ವರೂಪವನ್ನು ಲೆಕ್ಕಿಸದೆ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಪುನರುಚ್ಚರಿಸಿದೆ. 2002 ರ ಹಣ ವರ್ಗಾವಣೆ ತಡೆ ಕಾಯ್ದೆಯ...

ಬಾಂಗ್ಲಾದೇಶ: ಗುಂಪು ದಾಳಿಯಿಂದ ತಪ್ಪಿಸಿಕೊಳ್ಳಲು ಕಾಲುವೆಗೆ ಹಾರಿದ ಹಿಂದೂ ವ್ಯಕ್ತಿ ಸಾವು

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರ ಸುದ್ದಿಗಳು ನಿರಂತರವಾಗಿ ವರದಿಯಾಗುತ್ತಿರುವ ನಡುವೆಯೇ, ನೌಗಾಂವ್ ಜಿಲ್ಲೆಯ ಮೊಹದೇವ್‌ಪುರ ಉಪಜಿಲ್ಲಾದಲ್ಲಿ ದರೋಡೆ ಆರೋಪ ಹೊರಿಸಿದ ಗುಂಪಿನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ 25 ವರ್ಷದ ಹಿಂದೂ ವ್ಯಕ್ತಿ ಕಾಲುವೆಗೆ ಹಾರಿ...

ಹೋರಾಟಗಾರ್ತಿ ಕಾಮ್ರೇಡ್ ಪದ್ಮಕ್ಕ ಶ್ರದ್ಧಾಂಜಲಿ ಸಭೆ

ಬೆಂಗಳೂರಿನ ಆಶೀರ್ವಾದ್ ಸೆಂಟರ್ ನಲ್ಲಿ ಶ್ರದ್ಧಾಂಜಲಿ ಸಭೆ ಆಯೋಜಿಸಲಾಗಿತ್ತು. ಪದ್ಮಾರವರ ಕುಟುಂಬ, ಸಹ ಹೋರಾಟಗಾರು, ಚಿಂತಕರು, ಸಾಹಿತಿಗಳು ಪಾಲ್ಗೊಂಡಿದ್ದರು. ಸಭೆಯಲ್ಲಿ ಪದ್ಮಾರವರ ಜೊತೆಗಿನ ಒಡನಾಟವನ್ನು ನೆನೆಯಲಾಯಿತು. ಡಿಸೆಂಬರ್ 25 ರಂದು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ...

‘ನಾಯಿಗಳ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲ’: ರಸ್ತೆಗಳು, ನಾಯಿಗಳಿಂದ ಮುಕ್ತವಾಗಿರಬೇಕು: ಸುಪ್ರೀಂ ಕೋರ್ಟ್

ನವದೆಹಲಿ: ನಾಯಿ ಕಚ್ಚುವ ಮನಸ್ಥಿತಿಯಲ್ಲಿರುವಾಗ ಅದರ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲವಾದ್ದರಿಂದ, ರಸ್ತೆಗಳು ಅಥವಾ ಬೀದಿಗಳು ನಾಯಿಗಳಿಂದ ಮುಕ್ತವಾಗುವಂತೆ ನೋಡಿಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ.  ಬೀದಿ ನಾಯಿಗಳಿಗೆ ಸಂಬಂಧಿಸಿದ ಸ್ವಯಂಪ್ರೇರಿತ ಪ್ರಕರಣವನ್ನು...

‘ಮಜಾ ನಾ ಕರಾಯಾ ತೋ..ಪೈಸೆ ವಾಪಸ್’: ಭಾರತಕ್ಕೆ ನೇರ ಬೆದರಿಕೆ ಹಾಕಿದ ಪಾಕಿಸ್ತಾನ ಸೇನಾಧಿಕಾರಿ ಅಹ್ಮದ್ ಷರೀಫ್ ಚೌಧರಿ

ಪಾಕಿಸ್ತಾನದ ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ (ISPR) ನ ಮಹಾನಿರ್ದೇಶಕ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ, ಕಾಬೂಲ್ ಜೊತೆಗಿನ ಇಸ್ಲಾಮಾಬಾದ್‌ನ ನಡೆಯುತ್ತಿರುವ ಸಂಘರ್ಷದೊಂದಿಗೆ ಭಾರತವನ್ನು ಜೋಡಿಸುವ ಮೂಲಕ ಮತ್ತೊಮ್ಮೆ ವಿವಾದವನ್ನು ಹುಟ್ಟುಹಾಕಿದ್ದಾರೆ.  ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ...

‘ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದ ನೆಹರು, ಮೊಘಲ್ ಆಕ್ರಮಣಕಾರರನ್ನು ವೈಭವೀಕರಿಸುತ್ತಿದ್ದರು’: ಬಿಜೆಪಿ ಆರೋಪ

ನವದೆಹಲಿ: ಸೋಮನಾಥ ದೇವಾಲಯವನ್ನು ಹಿಂದೆ ಘಜ್ನಿ ಮಹಮ್ಮದ್ ಮತ್ತು ಅಲಾವುದ್ದೀನ್ ಖಿಲ್ಜಿ ಲೂಟಿ ಮಾಡಿದ್ದರು ಆದರೆ ಸ್ವತಂತ್ರ ಭಾರತದಲ್ಲಿ ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಭಗವಾನ್ ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದರು ಎಂದು...

ಬಿಜೆಪಿ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿರುವುದಾಗಿ ಆರೋಪ: ಆಕೆ ತನ್ನನ್ನು ತಾನು ವಿವಸ್ತ್ರಗೊಳಿಸಿಕೊಂಡಿದ್ದಾಳೆ ಎಂದ ಪೊಲೀಸ್ ಕಮಿಷನರ್

ಹುಬ್ಬಳ್ಳಿ: ಪೊಲೀಸ್ ವ್ಯಾನ್ ಒಳಗೆ ಪೂರ್ಣ ಬಟ್ಟೆಯಿಲ್ಲದೆ ಮಹಿಳೆಯೊಬ್ಬರ ವಿಡಿಯೋ ವೈರಲ್ ಆದ ನಂತರ, ಬಿಜೆಪಿ ನಾಯಕರು ಪೊಲೀಸರು ಅವಳನ್ನು ಬಂಧಿಸುವಾಗ ಆಕೆಯ ಬಟ್ಟೆಗಳನ್ನು ಬಿಚ್ಚಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಜನವರಿ 5...

ಬಿಜೆಪಿಯೊಂದಿಗೆ ಕೈಜೋಡಿಸಿದ ಗೌಡರೊಂದಿಗಿನ ಸಂಬಂಧ ಕಡಿದುಕೊಳ್ಳಲು ನಿರ್ಧರಿಸಿದ ಕೇರಳ ಜೆಡಿಎಸ್; ಹೊಸ ಪಕ್ಷದೊಂದಿಗೆ ವಿಲೀನ

ಜನತಾ ದಳ (ಜಾತ್ಯತೀತ) ದ ಕೇರಳ ಘಟಕವು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ನೇತೃತ್ವದ ರಾಷ್ಟ್ರೀಯ ನಾಯಕತ್ವದೊಂದಿಗೆ ಸಂಬಂಧವನ್ನು ಕಡಿದುಕೊಂಡು ಹೊಸ ರಾಜಕೀಯ ಪಕ್ಷದೊಂದಿಗೆ ವಿಲೀನಗೊಳ್ಳಲು ನಿರ್ಧರಿಸಿದೆ. ಈ ನಿರ್ಧಾರದ ಕುರಿತು ಶೀಘ್ರದಲ್ಲೇ ಅಧಿಕೃತ...

‘ಚೀನಾ, ರಷ್ಯಾ, ಕ್ಯೂಬಾ, ಇರಾನ್‌ಗಳನ್ನು ಹೊರಗಿಡಿ’: ವೆನೆಜುವೆಲಾಗೆ ಟ್ರಂಪ್ ತಂಡದ ಹೊಸ ತೈಲ ಎಚ್ಚರಿಕೆ

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ವೆನೆಜುವೆಲಾದ ಮಧ್ಯಂತರ ಅಧ್ಯಕ್ಷ ಡೆಲ್ಸಿ ರೊಡ್ರಿಗಸ್ ನೇತೃತ್ವದ ಹೊಸ ಆಡಳಿತಕ್ಕೆ ಚೀನಾ, ರಷ್ಯಾ, ಇರಾನ್ ಮತ್ತು ಕ್ಯೂಬಾ ಜೊತೆಗಿನ ಆರ್ಥಿಕ ಸಂಬಂಧಗಳನ್ನು "ಕಿತ್ತುಹಾಕಬೇಕು" ಮತ್ತು "ಕಡಿತಗೊಳಿಸಬೇಕು" ಎಂದು...

ದೆಹಲಿ ಫೈಜ್-ಎ-ಇಲಾಹಿ ಮಸೀದಿ ಬಳಿ ತೆರವು ಕಾರ್ಯಾಚರಣೆಗೆ ಸ್ಥಳೀಯರಿಂದ ವಿರೋಧ, ಉದ್ವಿಗ್ನತೆ; ಅಶ್ರುವಾಯು ಪ್ರಯೋಗ, 10 ಜನರ ಬಂಧನ

ದೆಹಲಿಯ ತುರ್ಕಮನ್ ಗೇಟ್-ರಾಮ್ಲೀಲಾ ಮೈದಾನ ಪ್ರದೇಶದಲ್ಲಿರುವ ಶತಮಾನಗಳಷ್ಟು ಹಳೆಯದಾದ ಫೈಜ್-ಎ-ಇಲಾಹಿ ಮಸೀದಿಯ ಬಳಿ ಬುಧವಾರ ಮುಂಜಾನೆ ನಡೆದ ತೆರವು ಕಾರ್ಯಾಚರಣೆಗೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದು, ಆ ನಂತರ ಸ್ಥಳದಲ್ಲಿ ಉದ್ವಿಗ್ನತೆ ಉಂಟಾಗಿದೆ, ಇದು...