Homeಕರ್ನಾಟಕಮಹಿಳಾ ದೌರ್ಜನ್ಯ ಪ್ರಕರಣ ಹೆಚ್ಚಾಗುತ್ತಿದ್ದರೂ ಸಾಂತ್ವನ ಕೇಂದ್ರ ಸ್ಥಗಿತಕ್ಕೆ ಸರ್ಕಾರ ನಿರ್ಧಾರ- ಸಿದ್ದರಾಮಯ್ಯ ಕಿಡಿ

ಮಹಿಳಾ ದೌರ್ಜನ್ಯ ಪ್ರಕರಣ ಹೆಚ್ಚಾಗುತ್ತಿದ್ದರೂ ಸಾಂತ್ವನ ಕೇಂದ್ರ ಸ್ಥಗಿತಕ್ಕೆ ಸರ್ಕಾರ ನಿರ್ಧಾರ- ಸಿದ್ದರಾಮಯ್ಯ ಕಿಡಿ

- Advertisement -
- Advertisement -

ರಾಜ್ಯದಲ್ಲಿ ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿವೆ. ಇಂತಹ ಸಮಯದಲ್ಲಿ ಕರ್ನಾಟಕ ಸರ್ಕಾರ ಮಹಿಳಾ ಸಾಂತ್ವನ ಕೇಂದ್ರಗಳನ್ನು ಮುಚ್ಚಲು ಹೊರಟ್ಟಿದ್ದು, ಸರ್ಕಾರದ ನಿರ್ಧಾರಕ್ಕೆ ವಿಪ್ಷ ನಾಯಕ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.

ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿರುವ ಸಿದ್ದರಾಮಯ್ಯ, ಬಂದ್ ಆಗಿರುವ ಸಾಂತ್ವನ ಕೇಂದ್ರಗಳನ್ನು ತಕ್ಷಣ ಆರಂಭಿಸಬೇಕು. ಉಳಿದ ಕೇಂದ್ರಗಳನ್ನು ಬಂದ್ ಮಾಡುವ ನಿರ್ಧಾರವನ್ನು ಹಿಂದಕ್ಕೆ ಪಡೆಯಬೇಕು ಎಂದು ಆಗ್ರಹಿಸಿದ್ದಾರೆ.

“ರಾಜ್ಯದಲ್ಲಿ ಮಹಿಳಾ ದೌರ್ಜನ್ಯ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದ್ದರೂ ದೌರ್ಜನ್ಯಕ್ಕೆ ಒಳಗಾಗುವ ಮಹಿಳೆಯರಿಗೆ ಸಮಾಲೋಚನೆ ಸೇರಿದಂತೆ ವಿವಿಧ ರೀತಿಯ ನೆರವು ನೀಡುವ ಸಾಂತ್ವನ ಕೇಂದ್ರಗಳನ್ನು ಆರ್ಥಿಕ ಕೊರತೆಯ ನೆಪವೊಡ್ಡಿ ಸ್ಥಗಿತಗೊಳಿಸಲು ಹೊರಟಿರುವ ರಾಜ್ಯ ಸರ್ಕಾರದ ಮಹಿಳಾ ವಿರೋಧಿ ಕ್ರಮವನ್ನು ಖಂಡಿಸುತ್ತೇನೆ” ಎಂದಿದ್ದಾರೆ.

ಇದನ್ನೂ ಓದಿ: ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಆದೇಶವನ್ನು ಕೂಡಲೇ ವಾಪಸ್ ಪಡೆಯಿರಿ: ಸಿದ್ದರಾಮಯ್ಯ ಆಗ್ರಹ

“ನೊಂದ ಮತ್ತು ತುರ್ತು ಅಗತ್ಯ ಇರುವ ಮಹಿಳೆಯರಿಗೆ ತಾತ್ಕಾಲಿಕ ಆಶ್ರಯ, ಆರ್ಥಿಕ ನೆರವು, ಶಿಕ್ಷಣ, ಉದ್ಯೋಗ, ಉಚಿತ ಕಾನೂನು ನೆರವು ಸೇರಿದಂತೆ ಹಲವು ರೀತಿಯ ಸಹಾಯ ಒಂದೇ ಸೂರಿನ ಅಡಿಯಲ್ಲಿ ಸಿಗಬೇಕು ಎನ್ನುವ ಕಾಳಜಿಯಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಸಾಂತ್ವನ ಕೇಂದ್ರಗಳನ್ನು ನಿರ್ವಹಿಸಲಾಗುತಿತ್ತು”.

’ಸ್ವಯಂ ಸೇವಾ ಸಂಸ್ಥೆಗಳ ನೆರವಿನಿಂದ ಈ ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿದ್ದವು. ಸಾಂತ್ವನ ಕೇಂದ್ರಗಳ ಆಪ್ತ ಸಮಾಲೋಚಕರಿಂದ ಇದುವರೆಗೂ ಸಹಸ್ರಾರು ಮಹಿಳೆಯರು ಸಾಂತ್ವನ ಮತ್ತು ಭರವಸೆ ಪಡೆದುಕೊಂಡಿದ್ದಾರೆ. ಈ ಕೇಂದ್ರಗಳು ನೊಂದ ಮಹಿಳೆಯರಲ್ಲಿ ಆತ್ಮವಿಶ್ವಾಸ ತುಂಬಿ ಆತ್ಮಹತ್ಯೆ, ಖಿನ್ನತೆ ಸೇರಿದಂತೆ ಹಲವು ರೀತಿಯ ಸಮಸ್ಯೆಗಳಿಗೆ ಪರಿಹಾರ ದೊರಕಿಸಿಕೊಡುತ್ತಿದ್ದವು” ಎಂದಿದ್ದಾರೆ.

’ಈಗ ಕೋವಿಡ್ ನೆಪದಲ್ಲಿ ಆರ್ಥಿಕ ಬಿಕ್ಕಟ್ಟಿನ ಕಾರಣ ಹೇಳಿ 71 ಸಾಂತ್ವನ ಕೇಂದ್ರಗಳನ್ನು ಬಂದ್ ಮಾಡಲಾಗಿದೆ. ರಾಜಧಾನಿ ಬೆಂಗಳೂರು ಮಹಿಳೆಯರ ಮೇಲೆ ಅತಿ ಹೆಚ್ಚು ದೌರ್ಜನ್ಯ ನಡೆಯುತ್ತಿರುವ ನಗರಗಳಲ್ಲಿ ಒಂದಾಗಿದೆ. ಹೀಗಿದ್ದೂ ಬೆಂಗಳೂರು ನಗರದಲ್ಲಿದ್ದ ಎಲ್ಲಾ ಸಾಂತ್ವನ ಕೇಂದ್ರಗಳನ್ನು ಬಂದ್ ಮಾಡಿರುವುದು ಅಕ್ಷಮ್ಯ” ಎಂದು ಸಿದ್ದರಾಮಯ್ಯ ಸರ್ಕಾರದ ನಿರ್ಧಾರವನ್ನು ಖಂಡಿಸಿದ್ದಾರೆ.

’ಹೀಗಾಗಿ ಬಂದ್ ಆಗಿರುವ ಸಾಂತ್ವನ ಕೇಂದ್ರಗಳನ್ನು ತಕ್ಷಣ ಆರಂಭಿಸಬೇಕು. ಉಳಿದ ಕೇಂದ್ರಗಳನ್ನು ಬಂದ್ ಮಾಡುವ ನಿರ್ಧಾರವನ್ನು ಹಿಂದಕ್ಕೆ ಪಡೆಯಬೇಕು’ ಎಂದು ಮಾಜಿ ಸಿಎಂ ಸಿದ್ದರಾಮಯ್ಯ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.


ಇದನ್ನೂ ಓದಿ: ನಕಲಿ ದೇಶಭಕ್ತಿ ಹೇಳುತ್ತಿದ್ದ ಬಿಜೆಪಿ ಈಗ ಜನರ ಬದುಕನ್ನು ಹೈರಾಣಾಗಿಸಿದೆ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...