Homeಮುಖಪುಟಸಿದ್ದರಾಮಯ್ಯನವರೇ, ಮಕ್ಕಳು ಧ್ಯಾನ ಮಾಡುವುದು ಗಿಮಿಕ್ ಹೇಗಾಗುತ್ತದೆ: ಬಿ.ಸಿ ನಾಗೇಶ್ ಪ್ರಶ್ನೆ

ಸಿದ್ದರಾಮಯ್ಯನವರೇ, ಮಕ್ಕಳು ಧ್ಯಾನ ಮಾಡುವುದು ಗಿಮಿಕ್ ಹೇಗಾಗುತ್ತದೆ: ಬಿ.ಸಿ ನಾಗೇಶ್ ಪ್ರಶ್ನೆ

- Advertisement -
- Advertisement -

ಶಾಲೆಗಳಲ್ಲಿ ಧ್ಯಾನ ಕಡ್ಡಾಯ ಮಾಡಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ರವರು ಈ ಯೋಜನೆಗೆ ಭಿನ್ನಾಭಿಪ್ರಾಯ ವ್ಯಕ್ತಪಡಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯನವರ ವಿರುದ್ಧ ಪ್ರಶ್ನೆಗಳ ಸುರಮಳೆ ಸುರಿಸಿದ್ದಾರೆ.

“ಸಿದ್ದರಾಮಯ್ಯನವರೇ, ಮಾನಸಿಕ, ದೈಹಿಕ ಆರೋಗ್ಯ, ಏಕಾಗ್ರತೆ, ವ್ಯಕ್ತಿತ್ವ ವಿಕಸನಕ್ಕಾಗಿ ಶಾಲಾ ಮಕ್ಕಳು 10 ನಿಮಿಷ ಧ್ಯಾನ ಮಾಡುವ ಉತ್ತಮ ಆಲೋಚನೆಯಲ್ಲೂ ನಿಮ್ಮಂತವರು ಗೊಂದಲ ಸೃಷ್ಟಿಸಲು ಯತ್ನಿಸುತ್ತಿರುವುದು ದುರಾದೃಷ್ಟಕರ. ಮಕ್ಕಳು ಧ್ಯಾನ ಮಾಡುವುದು ಗಿಮಿಕ್ ಹೇಗೆ ಆಗುತ್ತದೆ ಎಂಬುದನ್ನು ಜನತೆಗೆ ಸ್ವಲ್ಪ ವಿವರಿಸುವಿರಾ?” ಎಂದು ಬಿ.ಸಿ ನಾಗೇಶ್ ಟ್ವೀಟ್ ಮಾಡಿದ್ದಾರೆ.

ಸಂಶೋಧಕರು, ವೈದ್ಯರು, ವಿಜ್ಞಾನಿಗಳ ಪ್ರಕಾರ ಯೋಗ ಮತ್ತು ಧ್ಯಾನ ಮಾಡುವುದು ದೈಹಿಕ, ಮಾನಸಿಕ ಆರೋಗ್ಯಕ್ಕೆ ಅತ್ಯಂತ ಉಪಯುಕ್ತ. ಆದರೆ, ನೀವು ಮಾತ್ರ ಧ್ಯಾನ, ಯೋಗ ಮಾಡಿದರೆ ಮಕ್ಕಳು ‘ಕುಗ್ಗಿ ಹೋಗುತ್ತಾರೆ’ ಎನ್ನುತ್ತಿರುವುದು ಹಾಸ್ಯಾಸ್ಪದವಾಗಿದೆ ಎಂದು ಅವರು ಹೇಳಿದ್ದಾರೆ.

ಈ ಮೊದಲು “ಯೋಗ-ಧ್ಯಾನ ಯಾವುದಕ್ಕೂ ನನ್ನ ವಿರೋಧ ಇಲ್ಲ. ಆದರೆ ಶಾಲೆಗಳಲ್ಲಿ ಯಾವುದು ಮುಖ್ಯ, ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ರವರು ಯಾವುದಕ್ಕೆ ಆದ್ಯತೆ ನೀಡಬೇಕೆನ್ನುವುದಷ್ಟೇ ಪ್ರಶ್ನೆ. ಒಂದೆಡೆ ಶಾಲೆ ನಡೆಸಲು ಸಾರ್ವಜನಿಕರಿಂದ ಭಿಕ್ಷೆ ಬೇಡುತ್ತಿರುವ ಬಿಜೆಪಿ ಸರ್ಕಾರ ಇನ್ನೊಂದೆಡೆ ದಿನಕ್ಕೊಂದರಂತೆ ಗಿಮಿಕ್‌ಗಳನ್ನು ಮಾಡುತ್ತಿರುವುದು ಖಂಡನೀಯ” ಎಂದು ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದರು.

“ರಾಜ್ಯದಲ್ಲಿ ಬಿ.ಸಿ ನಾಗೇಶ್‌ರವರು ಶಿಕ್ಷಣ ಸಚಿವರಾದ ದಿನದಿಂದ ಪಠ್ಯಪುಸ್ತಕ ವಿವಾದದಿಂದ ಹಿಡಿದು ಶಾಲಾ ಶಿಕ್ಷಕರ ನೇಮಕದವರೆಗೆ ಬರೀ ಹಗರಣಗಳಲ್ಲೇ ಈಜಾಡುತ್ತಿದ್ದಾರೆ. ಅವರ ಮನಸ್ಸು ಸ್ಥಿಮಿತದಲ್ಲಿದ್ದ ಹಾಗಿಲ್ಲ, ನಿಜವಾಗಿ ಯೋಗ ಮತ್ತು ಧ್ಯಾನದ ಅಗತ್ಯ ಎಲ್ಲರಿಗಿಂತ ಹೆಚ್ಚಾಗಿ ಶಿಕ್ಷಣ ಸಚಿವರಿಗಿದೆ. ಎಳೆಯ ಮಕ್ಕಳು ಆಡುತ್ತಾ, ಕುಣಿಯುತ್ತಾ ಪಾಠ ಓದಬೇಕು. ಇದರ ಬದಲಿಗೆ ಅವರನ್ನು ಕೋಣೆಯಲ್ಲಿ ಕೂಡಿ ಹಾಕಿ ಬಲಾತ್ಕಾರವಾಗಿ ಯೋಗ-ಧ್ಯಾನಗಳ ಕಸರತ್ತು ಮಾಡಿಸಿದರೆ ಮಾನಸಿಕವಾಗಿ ಮತ್ತು ದೈಹಿಕವಾಗಿ ಅವರು ಇನ್ನಷ್ಟು ಕುಗ್ಗಿಹೋಗುತ್ತಾರೆ” ಎಂದು ಸಿದ್ದರಾಮಯ್ಯ ಆತಂಕ ವ್ಯಕ್ತಪಡಿಸಿದ್ದರು.

“ರಾಜ್ಯದಲ್ಲಿನ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಲ್ಲಿ ದೃಢತೆ, ಏಕಾಗ್ರತೆ, ಆರೋಗ್ಯ ವೃದ್ಧಿ, ದೈಹಿಕ ಮತ್ತು ಮಾನಸಿಕ ಒತ್ತಡ ಕಡಿಮೆಯಾಗಲು ಸಹಕಾರಿಯಾಗುವಂತೆ ಶಾಲೆಗಳಲ್ಲಿ ಪ್ರತಿದಿನ ಧ್ಯಾನವನ್ನು ಮಾಡಿಸುವುದು ಅಗತ್ಯವಾಗಿರುತ್ತದೆ. ಇದರಿಂದಾಗಿ ವಿದ್ಯಾರ್ಥಿಗಳಲ್ಲಿ ಸಕಾರಾತ್ಮಕ ಸ್ಪಂದನೆ, ಒಳ್ಳೆಯ ಹವ್ಯಾಸ ಬೆಳೆಸಿಕೊಂಡು ಉತ್ತಮ ಪ್ರಜೆಯಾಗಲು ಸಹಕಾರಿಯಾಗುತ್ತದೆ” ಎಂದು ನವೆಂಬರ್ 03ರಂದು ಬಿ.ಸಿ ನಾಗೇಶ್ ಸುತ್ತೋಲೆ ಹೊರಡಿಸಿದ್ದಾರೆ.

ಇದನ್ನೂ ಓದಿ: ರಾಜಕೀಯ ಅಜೆಂಡಾಕ್ಕಾಗಿ ಮಕ್ಕಳ ಬದುಕಿನಲ್ಲಿ ಚೆಲ್ಲಾಟವಾಡಬೇಡಿ: ಶಾಲೆಗಳಲ್ಲಿ ಧ್ಯಾನ ಕುರಿತು ಸಿದ್ದರಾಮಯ್ಯ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ನಾಗೇಷ್ ರವರೇ ಎರಡೂಕಡೆಯಿಂದ ಯೋಚಿಸೀ, ನಿಮ್ಮತರಹ ಮುಠ್ಠಾಳರು ವಿದ್ಯಾ ಮಂತ್ರಿಯೇ, ಈವಯಸ್ಸೀಲ್ಲೂ ಅರ್ಥವಾಗದಮೇಲೇ ಗುಂಡೀಗೋದಮೇಲೆ ಆಗುತ್ತದಯೇ

LEAVE A REPLY

Please enter your comment!
Please enter your name here

- Advertisment -

ಕೋಗಿಲು ಬಳಿ ಒತ್ತುವರಿ ತೆರವು: ಕಳವಳ ವ್ಯಕ್ತಪಡಿಸಿದ ಕಾಂಗ್ರೆಸ್ ಹೈಕಮಾಂಡ್: ಪರಿಹಾರ ಕ್ರಮ ಜಾರಿಗೆ ತರುವಂತೆ ಸಿಎಂ, ಡಿಸಿಎಂಗೆ ಒತ್ತಾಯ 

ಬೆಂಗಳೂರು ಉತ್ತರದ ಕೋಗಿಲು ಲೇಔಟ್ ಬಳಿ ನಡೆದ ಮನೆಗಳ ತೆರವು ಪ್ರಕರಣ ಇದೀಗ ಕಾಂಗ್ರೆಸ್ ಪಕ್ಷದೊಳಗೆ ಬಿರುಕಿಗೂ ಕಾರಣವಾಗಿದೆ. ಮನೆಗಳ ತೆರವು ವಿಚಾರ ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದ್ದು, ಆಡಳಿತ ಪಕ್ಷಕ್ಕೆ ಅಹಿತಕರವಾಗಿ ಪರಿಣಮಿಸುತ್ತಿದ್ದಂತೆಯೇ...

ಛತ್ತೀಸ್‌ಗಢ : ಹಿಂಸಾಚಾರಕ್ಕೆ ತಿರುಗಿದ ಕಲ್ಲಿದ್ದಲು ಗಣಿ ವಿರೋಧಿ ಹೋರಾಟ : ಹಲವು ಪೊಲೀಸರಿಗೆ ಗಾಯ, ವಾಹನಗಳಿಗೆ ಬೆಂಕಿ

ಛತ್ತೀಸ್‌ಗಢದ ರಾಯ್‌ಗಢ ಜಿಲ್ಲೆಯ ತಮ್ನಾರ್ ಪ್ರದೇಶದಲ್ಲಿ ಕಲ್ಲಿದ್ದಲು ಗಣಿಗಾರಿಕೆ ಯೋಜನೆಯನ್ನು ವಿರೋಧಿಸಿ ಶನಿವಾರ (ಡಿ.27) ನಡೆದ ಪ್ರತಿಭಟನೆ ಹಿಂಸಾತ್ಮಕ ರೂಪ ಪಡೆದುಕೊಂಡಿದ್ದು, ಪೊಲೀಸ್ ಸಿಬ್ಬಂದಿ ಸೇರಿದಂತೆ ಕನಿಷ್ಠ ಎಂಟು ಜನರು ಗಾಯಗೊಂಡಿದ್ದಾರೆ ಮತ್ತು...

ತ್ರಿಪುರಾ: ಮಸೀದಿಗೆ ಮದ್ಯದ ಬಾಟಲಿಗಳನ್ನು ಇಟ್ಟು ಬೆಂಕಿ ಹಚ್ಚಲು ಯತ್ನ: ಬಜರಂಗದಳ ಧ್ವಜ ಕಟ್ಟಿದ ದುಷ್ಕರ್ಮಿಗಳು

ತ್ರಿಪುರಾದ ಧಲೈ ಜಿಲ್ಲೆಯ ಮಸೀದಿಯನ್ನು ಅಪವಿತ್ರಗೊಳಿಸಲಾಗಿದೆ ಎಂದು ಆರೋಪಿಸಲಾಗಿದೆ, ಇದನ್ನು ಸ್ಥಳೀಯ ಮುಸ್ಲಿಂ ಸಮುದಾಯವನ್ನು ಬೆದರಿಸುವ ಮತ್ತು ಹಿಂಸಾಚಾರವನ್ನು ಪ್ರಚೋದಿಸುವ ಉದ್ದೇಶಪೂರ್ವಕ ಪ್ರಯತ್ನ ಎಂದು ನಿವಾಸಿಗಳು ಮತ್ತು ಮಸೀದಿ ಅಧಿಕಾರಿಗಳು ಹೇಳಿದ್ದಾರೆ.  ಮನು-ಚೌಮಾನು ರಸ್ತೆಯಲ್ಲಿರುವ...

‘ಇಸ್ರೇಲ್ ಗಾಝಾಗೆ ಪಾಠ ಕಲಿಸಿದಂತೆ ಬಾಂಗ್ಲಾದೇಶಕ್ಕೂ ಕಲಿಸಬೇಕು’ : ನರಮೇಧ, ಜನಾಂಗೀಯ ಹತ್ಯೆಗೆ ಹಪಹಪಿಸಿದ ಬಿಜೆಪಿ ನಾಯಕ

"ಇಸ್ರೇಲ್ ಗಾಝಾಗೆ ಕಲಿಸಿದಂತೆ ಬಾಂಗ್ಲಾದೇಶಕ್ಕೂ ಪಾಠ ಕಲಿಸಬೇಕು" ಎಂದು ಬಿಜೆಪಿ ಹಾಗೂ ಪಶ್ಚಿಮ ಬಂಗಾಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ನೀಡಿದ ಹೇಳಿಕೆಗೆ ಸಾರ್ವಜನಿಕ ವಲಯದಲ್ಲಿ ಭಾರೀ ಖಂಡನೆ ವ್ಯಕ್ತವಾಗಿದೆ. ಡಿಸೆಂಬರ್...

“ನನಗೆ ಏನೂ ಆಗುವುದಿಲ್ಲ”: ಅತ್ಯಾಚಾರ ಮಾಡಿ ಸಂತ್ರಸ್ತೆಗೆ ಧಮ್ಕಿ ಹಾಕಿದ ಬಿಜೆಪಿ ಕೌನ್ಸಿಲರ್ ಪತಿ 

ಮಧ್ಯಪ್ರದೇಶದ ಸತ್ನಾ ಜಿಲ್ಲೆಯಲ್ಲಿ ಬಿಜೆಪಿ ಕೌನ್ಸಿಲರ್ ಒಬ್ಬರ ಪತಿ ಮಹಿಳೆಯೊಬ್ಬರ ಮೇಲೆ ಚಾಕು ತೋರಿಸಿ ಅತ್ಯಾಚಾರ ಎಸಗಿ, ಅದರ ವಿಡಿಯೋ ಮಾಡಿ, ನಂತರ ಅದನ್ನು ತೋರಿಸಿ ಪದೇ ಪದೇ ಲೈಂಗಿಕ ಸಂಬಂಧ ಹೊಂದುವಂತೆ...

ಅರಾವಳಿ ಬೆಟ್ಟಗಳ ಹೊಸ ವ್ಯಾಖ್ಯಾನಕ್ಕೆ ದೇಶದಾದ್ಯಂತ ತೀವ್ರ ವಿರೋಧ : ಸ್ವಯಂ ಪ್ರೇರಿತ ಪ್ರಕರಣ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್

ಅರಾವಳಿ ಬೆಟ್ಟಗಳ ಹೊಸ ವ್ಯಾಖ್ಯಾನದಿಂದ ಪರಿಸರದ ಮೇಲಾಗುವ ಹಾನಿಯ ಕುರಿತು ದೇಶದ ಜನರು ತೀವ್ರ ಆತಂಕ ಮತ್ತು ಕಳವಳ ವ್ಯಕ್ತಪಡಿಸುತ್ತಿರುವ ಹಿನ್ನೆಲೆ, ಸುಪ್ರೀಂ ಕೋರ್ಟ್‌ ಈ ಕುರಿತು ಸ್ವಯಂ ಪ್ರೇರಿತ (Suo Motu...

ನರೇಗಾ ಹೆಸರು ಬದಲಾವಣೆಯು ರಾಜ್ಯಗಳ ಸ್ವಾಯತ್ತತೆ, ಅಂಚಿನ ಸಮುದಾಯಗಳ ಹಕ್ಕಿನ ಮೇಲೆ ನೇರ ದಾಳಿ: ರಾಹುಲ್

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ) ಹೆಸರು ಬದಲಾವಣೆಯು ರಾಜ್ಯಗಳ ಹಕ್ಕುಗಳನ್ನು ದುರ್ಬಲಗೊಳಿಸುತ್ತಿದೆ. ಅಂಚಿನ ಸಮುದಾಯಗಳ ಹಕ್ಕಿನ ಮೇಲೆ ನೇರವಾಗಿ ದಾಳಿ ಮಾಡಲಾಗುತ್ತಿದೆ ಎಂದು ಲೋಕಸಭೆ ವಿರೋಧ ಪಕ್ಷದ...

‘2025ರಲ್ಲಿ ಗಾಜಾ ಪತ್ರಕರ್ತರಿಗೆ ವಿಶ್ವದ ಅತ್ಯಂತ ಅಪಾಯಕಾರಿ ಸ್ಥಳವಾಯಿತು’: ಪ್ಯಾಲೆಸ್ಟೀನಿಯನ್ ಪತ್ರಕರ್ತರ ಒಕ್ಕೂಟ

ಪ್ಯಾಲೆಸ್ಟೀನಿಯನ್ ಪತ್ರಕರ್ತರ ವಿರುದ್ಧ ಇಸ್ರೇಲ್‌ನ ವ್ಯವಸ್ಥಿತ ಹಿಂಸಾಚಾರ ಅಭಿಯಾನವು ಅಕ್ಟೋಬರ್ 2023 ರಿಂದ ನಡೆಯುತ್ತಿದೆ, ಇದು 2025 ರಲ್ಲಿ ಅತ್ಯಂತ ಮಾರಕ ಸ್ಥಿತಿಗೆ ತಲುಪಿತು. ಡಜನ್‌ಗಟ್ಟಲೆ ಮಾಧ್ಯಮ ಕಾರ್ಯಕರ್ತರನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ದಾಳಿ...

ಗಡಿ ಘರ್ಷಣೆ ಕೊನೆಗೊಳಿಸಿದ ಥೈಲ್ಯಾಂಡ್ ಮತ್ತು ಕಾಂಬೋಡಿಯಾ: ತಕ್ಷಣದ ಕದನ ವಿರಾಮಕ್ಕೆ ಎರಡು ದೇಶಗಳ ಒಪ್ಪಿಗೆ

ಥೈಲ್ಯಾಂಡ್ ಮತ್ತು ಕಾಂಬೋಡಿಯಾಗಳು ತಕ್ಷಣದ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ, ಇದು ಇತ್ತೀಚಿನ ಗಡಿ ಘರ್ಷಣೆಗಳ ನಂತರದ ಉದ್ವಿಗ್ನತೆಯನ್ನು ಕಡಿಮೆ ಮಾಡುವತ್ತ ಒಂದು ಪ್ರಮುಖ ಹೆಜ್ಜೆಯಾಗಿದೆ.  ಶನಿವಾರ ಎರಡೂ ದೇಶಗಳ ರಕ್ಷಣಾ ಸಚಿವರು ಸಹಿ ಮಾಡಿದ...

‘ಬಡವರ ಹೊಟ್ಟೆಗೆ ಒದ್ದ ನಂತರ, ಮೋದಿ ಸರ್ಕಾರ ಅವರ ಬೆನ್ನಿಗೆ ಚೂರಿ ಹಾಕಿದೆ’: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಯುಪಿಎಯ ದೂರದೃಷ್ಟಿಯ ಕಾರ್ಯಕ್ರಮವಾದ ಎಂಜಿಎನ್‌ಆರ್‌ಇಜಿಎಯನ್ನು ರದ್ದುಗೊಳಿಸುವ ಮೂಲಕ ಅವರು "ಬಡವರ ಹೊಟ್ಟೆಗೆ...