Homeಮುಖಪುಟಸಿದ್ದರಾಮಯ್ಯನವರೇ, ಮಕ್ಕಳು ಧ್ಯಾನ ಮಾಡುವುದು ಗಿಮಿಕ್ ಹೇಗಾಗುತ್ತದೆ: ಬಿ.ಸಿ ನಾಗೇಶ್ ಪ್ರಶ್ನೆ

ಸಿದ್ದರಾಮಯ್ಯನವರೇ, ಮಕ್ಕಳು ಧ್ಯಾನ ಮಾಡುವುದು ಗಿಮಿಕ್ ಹೇಗಾಗುತ್ತದೆ: ಬಿ.ಸಿ ನಾಗೇಶ್ ಪ್ರಶ್ನೆ

- Advertisement -
- Advertisement -

ಶಾಲೆಗಳಲ್ಲಿ ಧ್ಯಾನ ಕಡ್ಡಾಯ ಮಾಡಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ರವರು ಈ ಯೋಜನೆಗೆ ಭಿನ್ನಾಭಿಪ್ರಾಯ ವ್ಯಕ್ತಪಡಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯನವರ ವಿರುದ್ಧ ಪ್ರಶ್ನೆಗಳ ಸುರಮಳೆ ಸುರಿಸಿದ್ದಾರೆ.

“ಸಿದ್ದರಾಮಯ್ಯನವರೇ, ಮಾನಸಿಕ, ದೈಹಿಕ ಆರೋಗ್ಯ, ಏಕಾಗ್ರತೆ, ವ್ಯಕ್ತಿತ್ವ ವಿಕಸನಕ್ಕಾಗಿ ಶಾಲಾ ಮಕ್ಕಳು 10 ನಿಮಿಷ ಧ್ಯಾನ ಮಾಡುವ ಉತ್ತಮ ಆಲೋಚನೆಯಲ್ಲೂ ನಿಮ್ಮಂತವರು ಗೊಂದಲ ಸೃಷ್ಟಿಸಲು ಯತ್ನಿಸುತ್ತಿರುವುದು ದುರಾದೃಷ್ಟಕರ. ಮಕ್ಕಳು ಧ್ಯಾನ ಮಾಡುವುದು ಗಿಮಿಕ್ ಹೇಗೆ ಆಗುತ್ತದೆ ಎಂಬುದನ್ನು ಜನತೆಗೆ ಸ್ವಲ್ಪ ವಿವರಿಸುವಿರಾ?” ಎಂದು ಬಿ.ಸಿ ನಾಗೇಶ್ ಟ್ವೀಟ್ ಮಾಡಿದ್ದಾರೆ.

ಸಂಶೋಧಕರು, ವೈದ್ಯರು, ವಿಜ್ಞಾನಿಗಳ ಪ್ರಕಾರ ಯೋಗ ಮತ್ತು ಧ್ಯಾನ ಮಾಡುವುದು ದೈಹಿಕ, ಮಾನಸಿಕ ಆರೋಗ್ಯಕ್ಕೆ ಅತ್ಯಂತ ಉಪಯುಕ್ತ. ಆದರೆ, ನೀವು ಮಾತ್ರ ಧ್ಯಾನ, ಯೋಗ ಮಾಡಿದರೆ ಮಕ್ಕಳು ‘ಕುಗ್ಗಿ ಹೋಗುತ್ತಾರೆ’ ಎನ್ನುತ್ತಿರುವುದು ಹಾಸ್ಯಾಸ್ಪದವಾಗಿದೆ ಎಂದು ಅವರು ಹೇಳಿದ್ದಾರೆ.

ಈ ಮೊದಲು “ಯೋಗ-ಧ್ಯಾನ ಯಾವುದಕ್ಕೂ ನನ್ನ ವಿರೋಧ ಇಲ್ಲ. ಆದರೆ ಶಾಲೆಗಳಲ್ಲಿ ಯಾವುದು ಮುಖ್ಯ, ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ರವರು ಯಾವುದಕ್ಕೆ ಆದ್ಯತೆ ನೀಡಬೇಕೆನ್ನುವುದಷ್ಟೇ ಪ್ರಶ್ನೆ. ಒಂದೆಡೆ ಶಾಲೆ ನಡೆಸಲು ಸಾರ್ವಜನಿಕರಿಂದ ಭಿಕ್ಷೆ ಬೇಡುತ್ತಿರುವ ಬಿಜೆಪಿ ಸರ್ಕಾರ ಇನ್ನೊಂದೆಡೆ ದಿನಕ್ಕೊಂದರಂತೆ ಗಿಮಿಕ್‌ಗಳನ್ನು ಮಾಡುತ್ತಿರುವುದು ಖಂಡನೀಯ” ಎಂದು ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದರು.

“ರಾಜ್ಯದಲ್ಲಿ ಬಿ.ಸಿ ನಾಗೇಶ್‌ರವರು ಶಿಕ್ಷಣ ಸಚಿವರಾದ ದಿನದಿಂದ ಪಠ್ಯಪುಸ್ತಕ ವಿವಾದದಿಂದ ಹಿಡಿದು ಶಾಲಾ ಶಿಕ್ಷಕರ ನೇಮಕದವರೆಗೆ ಬರೀ ಹಗರಣಗಳಲ್ಲೇ ಈಜಾಡುತ್ತಿದ್ದಾರೆ. ಅವರ ಮನಸ್ಸು ಸ್ಥಿಮಿತದಲ್ಲಿದ್ದ ಹಾಗಿಲ್ಲ, ನಿಜವಾಗಿ ಯೋಗ ಮತ್ತು ಧ್ಯಾನದ ಅಗತ್ಯ ಎಲ್ಲರಿಗಿಂತ ಹೆಚ್ಚಾಗಿ ಶಿಕ್ಷಣ ಸಚಿವರಿಗಿದೆ. ಎಳೆಯ ಮಕ್ಕಳು ಆಡುತ್ತಾ, ಕುಣಿಯುತ್ತಾ ಪಾಠ ಓದಬೇಕು. ಇದರ ಬದಲಿಗೆ ಅವರನ್ನು ಕೋಣೆಯಲ್ಲಿ ಕೂಡಿ ಹಾಕಿ ಬಲಾತ್ಕಾರವಾಗಿ ಯೋಗ-ಧ್ಯಾನಗಳ ಕಸರತ್ತು ಮಾಡಿಸಿದರೆ ಮಾನಸಿಕವಾಗಿ ಮತ್ತು ದೈಹಿಕವಾಗಿ ಅವರು ಇನ್ನಷ್ಟು ಕುಗ್ಗಿಹೋಗುತ್ತಾರೆ” ಎಂದು ಸಿದ್ದರಾಮಯ್ಯ ಆತಂಕ ವ್ಯಕ್ತಪಡಿಸಿದ್ದರು.

“ರಾಜ್ಯದಲ್ಲಿನ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಲ್ಲಿ ದೃಢತೆ, ಏಕಾಗ್ರತೆ, ಆರೋಗ್ಯ ವೃದ್ಧಿ, ದೈಹಿಕ ಮತ್ತು ಮಾನಸಿಕ ಒತ್ತಡ ಕಡಿಮೆಯಾಗಲು ಸಹಕಾರಿಯಾಗುವಂತೆ ಶಾಲೆಗಳಲ್ಲಿ ಪ್ರತಿದಿನ ಧ್ಯಾನವನ್ನು ಮಾಡಿಸುವುದು ಅಗತ್ಯವಾಗಿರುತ್ತದೆ. ಇದರಿಂದಾಗಿ ವಿದ್ಯಾರ್ಥಿಗಳಲ್ಲಿ ಸಕಾರಾತ್ಮಕ ಸ್ಪಂದನೆ, ಒಳ್ಳೆಯ ಹವ್ಯಾಸ ಬೆಳೆಸಿಕೊಂಡು ಉತ್ತಮ ಪ್ರಜೆಯಾಗಲು ಸಹಕಾರಿಯಾಗುತ್ತದೆ” ಎಂದು ನವೆಂಬರ್ 03ರಂದು ಬಿ.ಸಿ ನಾಗೇಶ್ ಸುತ್ತೋಲೆ ಹೊರಡಿಸಿದ್ದಾರೆ.

ಇದನ್ನೂ ಓದಿ: ರಾಜಕೀಯ ಅಜೆಂಡಾಕ್ಕಾಗಿ ಮಕ್ಕಳ ಬದುಕಿನಲ್ಲಿ ಚೆಲ್ಲಾಟವಾಡಬೇಡಿ: ಶಾಲೆಗಳಲ್ಲಿ ಧ್ಯಾನ ಕುರಿತು ಸಿದ್ದರಾಮಯ್ಯ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ನಾಗೇಷ್ ರವರೇ ಎರಡೂಕಡೆಯಿಂದ ಯೋಚಿಸೀ, ನಿಮ್ಮತರಹ ಮುಠ್ಠಾಳರು ವಿದ್ಯಾ ಮಂತ್ರಿಯೇ, ಈವಯಸ್ಸೀಲ್ಲೂ ಅರ್ಥವಾಗದಮೇಲೇ ಗುಂಡೀಗೋದಮೇಲೆ ಆಗುತ್ತದಯೇ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...