Homeಕರ್ನಾಟಕಸಿದ್ದರಾಮಯ್ಯ ಸ್ವಾರ್ಥಿ ಮತ್ತು ಎಡಬಿಡಂಗಿತನದ ರಾಜಕಾರಣಿ: ಕುಮಾರಸ್ವಾಮಿ

ಸಿದ್ದರಾಮಯ್ಯ ಸ್ವಾರ್ಥಿ ಮತ್ತು ಎಡಬಿಡಂಗಿತನದ ರಾಜಕಾರಣಿ: ಕುಮಾರಸ್ವಾಮಿ

ನಿಮ್ಮ ಸ್ವಾಭಿಮಾನದ ಪ್ರಲಾಪ ಮಠದೊಳಗಿನ‌ ಬೆಕ್ಕಿನ ಮುಖವಾಡದಂತಿದೆ

- Advertisement -
- Advertisement -

ಅಧಿಕಾರದ ಲಾಲಸೆಯಿಂದ ಕಾಂಗ್ರೆಸ್‌ಗೆ ಜಿಗಿದ ಸಿದ್ದರಾಮಯ್ಯ ‘ಜೆಡಿಎಸ್ ಅವಕಾಶವಾದಿ ಪಕ್ಷ’ ಎನ್ನುವ ಮೂಲಕ ತಮ್ಮ ಊಸರವಳ್ಳಿ ರಾಜಕಾರಣದ ನಿಜಬಣ್ಣ ಬಯಲು ಮಾಡಿಕೊಂಡಿದ್ದಾರೆ ಎಂದಿರುವ ಹೆಚ್‌.ಡಿ.ಕುಮಾರಸ್ವಾಮಿ “ನಿಮ್ಮ ಸ್ವಾಭಿಮಾನದ ಪ್ರಲಾಪ ಮಠದೊಳಗಿನ‌ ಬೆಕ್ಕಿನ ಮುಖವಾಡದಂತಿದೆ” ಎಂದು ತೀವ್ರವಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಮೇಲೆ ಹರಿಕಾಯ್ದಿದ್ದಾರೆ.

ಜೆಡಿಎಸ್ ಪಕ್ಷದಲ್ಲಿದ್ದಾಗ ಅಧಿಕಾರ, ಸ್ಥಾನ-ಮಾನಗಳನ್ನು ಅನುಭವಿಸಿ ತಮ್ಮ ಬೆಂಬಲಿಗರೊಂದಿಗೆ ಗಂಟು ಮೂಟೆ ಕಟ್ಟಿಕೊಂಡು ಅಧಿಕಾರದ ಆಸೆಗಾಗಿ, ಅವಕಾಶವಾದಿ ಹಾದಿ ಹಿಡಿದ ಕೃತಘ್ನಗೇಡಿತನದ ಸಿದ್ದರಾಮಯ್ಯ ಅವರಿಂದ ನಮ್ಮ ಪಕ್ಷ ಸ್ವಾಭಿಮಾನದ ಪಾಠ ಕಲಿಯಬೇಕಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಮುಖ್ಯಮಂತ್ರಿಯಾಗಿದ್ದಾಗಲೇ ಬಹಿರಂಗವಾಗಿ ಕಾಂಗ್ರೆಸ್ ಪಕ್ಷ ನಿರ್ನಾಮವಾಗಬೇಕು. ಇದನ್ನು ಬುಡಸಹಿತ ಕಿತ್ತೊಗೆಯಬೇಕು ಎಂದು ಬಹಿರಂಗವಾಗಿ ಅಂತರಂಗದ ಮಾತನ್ನು ಹೇಳಿದ್ದ ನೀವು ಎಂತಹ ಸ್ವಾರ್ಥಿ ಮತ್ತು ಎಡಬಿಡಂಗಿತನದ ರಾಜಕಾರಣಿ ಎಂಬುದು ಇಡೀ ನಾಡಿಗೆ ಗೊತ್ತಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪ್ರಧಾನಿಗೆ ವ್ಯಂಗ್ಯವಾಗಿ ಶುಭಾಶಯ ತಿಳಿಸಿದ ಎಚ್‌ಡಿಕೆ, ಸಿದ್ದರಾಮಯ್ಯ!

ಅಧಿಕಾರದ ನಿರ್ಮೋಹ, ಸ್ವಾಭಿಮಾನಕ್ಕೆ ಕಟ್ಟುಬಿದ್ದು ದೇವೇಗೌಡರು ಪ್ರಧಾನಿ ಹುದ್ದೆಯನ್ನೇ ತ್ಯಜಿಸಿ ಬಂದರು. ಅಧಿಕಾರ ಉಳಿಸಿಕೊಳ್ಳಬೇಕೆಂದಿದ್ದರೆ ಪ್ರಧಾನಿಯಾಗಿ ಮುಂದುವರಿಯಬಹುದಿತ್ತು. ದೇವೇಗೌಡರ ಈ ಸ್ವಾಭಿಮಾನಿ ರಾಜಕಾರಣವನ್ನು ಇಷ್ಟು ಬೇಗ ಮರೆತು ಬಿಟ್ಟಿರಾ? ಆತ್ಮವಂಚನೆಯ ರಾಜಕಾರಣಿಯಿಂದ ಜೆಡಿಎಸ್ ಕಲಿಯುವುದು ಏನೇನೂ ಇಲ್ಲ ಎಂದು ಹೇಳಿದ್ದಾರೆ.

ಜೆಡಿಎಸ್ ಪಕ್ಷ ಅಧಿಕಾರದಲ್ಲಿ ಇದ್ದಾಗಲೆಲ್ಲಾ ಜನರ ಕಷ್ಟಕಾರ್ಪಣ್ಯಗಳು, ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸಿದೆ. ಅಧಿಕಾರದ ಮದ ಮತ್ತು ದುರಹಂಕಾರವನ್ನು ಎಂದೂ ಪ್ರದರ್ಶನ ಮಾಡಿಲ್ಲ. ಅಧಿಕಾರದ ಅಲ್ಪಾವಧಿಯಲ್ಲೂ ಜನಕಲ್ಯಾಣ ಪಕ್ಷದ ಹೆಗ್ಗುರುತಾಗಿತ್ತು ಎಂದು ಅವರು ಹೇಳಿದ್ದಾರೆ.

ಪಕ್ಷಾಂತರ ಮಾಡಿ ಅಧಿಕಾರ ಹಿಡಿದ ನೀವು ಆ ಪಕ್ಷದಲ್ಲಿ ಬಿತ್ತಿದ ಬೆಳೆ ಮತ್ತು ಕಳೆ ಏನೆಂಬುದನ್ನು ನಿಮ್ಮನ್ನು ಆಲಿಂಗಿಸಿಕೊಂಡ ಪಕ್ಷದವರು ಈಗ ಅನುಭವಿಸುತ್ತಿದ್ದಾರೆ. ನಿಮ್ಮ ಸ್ವಾರ್ಥ ರಾಜಕಾರಣದ ಕುಟಿಲ ತಂತ್ರಗಳನ್ನು ಮರೆಮಾಚಿಕೊಳ್ಳಲು ಬೆಳೆದ ಪಕ್ಷಕ್ಕೆ ಮಗ್ಗುಲಲ್ಲಿ ಇದ್ದು ಬಾಕು ಹಾಕಿದವರ ಮಾರ್ಜಾಲ ಉಪದೇಶ ಯಾರಿಗೆ ಸಹ್ಯವಾದೀತು? ಎಂದು ಅವರು ವ್ಯಂಗ್ಯವಾಗಿ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಕರ್ನಾಟಕದ ಜನ ಏನು ಮಾಡಬೇಕು? ಮಣ್ಣು ತಿನ್ನಬೇಕಾ?: ಸಿದ್ದರಾಮಯ್ಯ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...