Homeಕರ್ನಾಟಕಸಿದ್ದರಾಮಯ್ಯ ಸ್ವಾರ್ಥಿ ಮತ್ತು ಎಡಬಿಡಂಗಿತನದ ರಾಜಕಾರಣಿ: ಕುಮಾರಸ್ವಾಮಿ

ಸಿದ್ದರಾಮಯ್ಯ ಸ್ವಾರ್ಥಿ ಮತ್ತು ಎಡಬಿಡಂಗಿತನದ ರಾಜಕಾರಣಿ: ಕುಮಾರಸ್ವಾಮಿ

ನಿಮ್ಮ ಸ್ವಾಭಿಮಾನದ ಪ್ರಲಾಪ ಮಠದೊಳಗಿನ‌ ಬೆಕ್ಕಿನ ಮುಖವಾಡದಂತಿದೆ

- Advertisement -
- Advertisement -

ಅಧಿಕಾರದ ಲಾಲಸೆಯಿಂದ ಕಾಂಗ್ರೆಸ್‌ಗೆ ಜಿಗಿದ ಸಿದ್ದರಾಮಯ್ಯ ‘ಜೆಡಿಎಸ್ ಅವಕಾಶವಾದಿ ಪಕ್ಷ’ ಎನ್ನುವ ಮೂಲಕ ತಮ್ಮ ಊಸರವಳ್ಳಿ ರಾಜಕಾರಣದ ನಿಜಬಣ್ಣ ಬಯಲು ಮಾಡಿಕೊಂಡಿದ್ದಾರೆ ಎಂದಿರುವ ಹೆಚ್‌.ಡಿ.ಕುಮಾರಸ್ವಾಮಿ “ನಿಮ್ಮ ಸ್ವಾಭಿಮಾನದ ಪ್ರಲಾಪ ಮಠದೊಳಗಿನ‌ ಬೆಕ್ಕಿನ ಮುಖವಾಡದಂತಿದೆ” ಎಂದು ತೀವ್ರವಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಮೇಲೆ ಹರಿಕಾಯ್ದಿದ್ದಾರೆ.

ಜೆಡಿಎಸ್ ಪಕ್ಷದಲ್ಲಿದ್ದಾಗ ಅಧಿಕಾರ, ಸ್ಥಾನ-ಮಾನಗಳನ್ನು ಅನುಭವಿಸಿ ತಮ್ಮ ಬೆಂಬಲಿಗರೊಂದಿಗೆ ಗಂಟು ಮೂಟೆ ಕಟ್ಟಿಕೊಂಡು ಅಧಿಕಾರದ ಆಸೆಗಾಗಿ, ಅವಕಾಶವಾದಿ ಹಾದಿ ಹಿಡಿದ ಕೃತಘ್ನಗೇಡಿತನದ ಸಿದ್ದರಾಮಯ್ಯ ಅವರಿಂದ ನಮ್ಮ ಪಕ್ಷ ಸ್ವಾಭಿಮಾನದ ಪಾಠ ಕಲಿಯಬೇಕಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಮುಖ್ಯಮಂತ್ರಿಯಾಗಿದ್ದಾಗಲೇ ಬಹಿರಂಗವಾಗಿ ಕಾಂಗ್ರೆಸ್ ಪಕ್ಷ ನಿರ್ನಾಮವಾಗಬೇಕು. ಇದನ್ನು ಬುಡಸಹಿತ ಕಿತ್ತೊಗೆಯಬೇಕು ಎಂದು ಬಹಿರಂಗವಾಗಿ ಅಂತರಂಗದ ಮಾತನ್ನು ಹೇಳಿದ್ದ ನೀವು ಎಂತಹ ಸ್ವಾರ್ಥಿ ಮತ್ತು ಎಡಬಿಡಂಗಿತನದ ರಾಜಕಾರಣಿ ಎಂಬುದು ಇಡೀ ನಾಡಿಗೆ ಗೊತ್ತಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪ್ರಧಾನಿಗೆ ವ್ಯಂಗ್ಯವಾಗಿ ಶುಭಾಶಯ ತಿಳಿಸಿದ ಎಚ್‌ಡಿಕೆ, ಸಿದ್ದರಾಮಯ್ಯ!

ಅಧಿಕಾರದ ನಿರ್ಮೋಹ, ಸ್ವಾಭಿಮಾನಕ್ಕೆ ಕಟ್ಟುಬಿದ್ದು ದೇವೇಗೌಡರು ಪ್ರಧಾನಿ ಹುದ್ದೆಯನ್ನೇ ತ್ಯಜಿಸಿ ಬಂದರು. ಅಧಿಕಾರ ಉಳಿಸಿಕೊಳ್ಳಬೇಕೆಂದಿದ್ದರೆ ಪ್ರಧಾನಿಯಾಗಿ ಮುಂದುವರಿಯಬಹುದಿತ್ತು. ದೇವೇಗೌಡರ ಈ ಸ್ವಾಭಿಮಾನಿ ರಾಜಕಾರಣವನ್ನು ಇಷ್ಟು ಬೇಗ ಮರೆತು ಬಿಟ್ಟಿರಾ? ಆತ್ಮವಂಚನೆಯ ರಾಜಕಾರಣಿಯಿಂದ ಜೆಡಿಎಸ್ ಕಲಿಯುವುದು ಏನೇನೂ ಇಲ್ಲ ಎಂದು ಹೇಳಿದ್ದಾರೆ.

ಜೆಡಿಎಸ್ ಪಕ್ಷ ಅಧಿಕಾರದಲ್ಲಿ ಇದ್ದಾಗಲೆಲ್ಲಾ ಜನರ ಕಷ್ಟಕಾರ್ಪಣ್ಯಗಳು, ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸಿದೆ. ಅಧಿಕಾರದ ಮದ ಮತ್ತು ದುರಹಂಕಾರವನ್ನು ಎಂದೂ ಪ್ರದರ್ಶನ ಮಾಡಿಲ್ಲ. ಅಧಿಕಾರದ ಅಲ್ಪಾವಧಿಯಲ್ಲೂ ಜನಕಲ್ಯಾಣ ಪಕ್ಷದ ಹೆಗ್ಗುರುತಾಗಿತ್ತು ಎಂದು ಅವರು ಹೇಳಿದ್ದಾರೆ.

ಪಕ್ಷಾಂತರ ಮಾಡಿ ಅಧಿಕಾರ ಹಿಡಿದ ನೀವು ಆ ಪಕ್ಷದಲ್ಲಿ ಬಿತ್ತಿದ ಬೆಳೆ ಮತ್ತು ಕಳೆ ಏನೆಂಬುದನ್ನು ನಿಮ್ಮನ್ನು ಆಲಿಂಗಿಸಿಕೊಂಡ ಪಕ್ಷದವರು ಈಗ ಅನುಭವಿಸುತ್ತಿದ್ದಾರೆ. ನಿಮ್ಮ ಸ್ವಾರ್ಥ ರಾಜಕಾರಣದ ಕುಟಿಲ ತಂತ್ರಗಳನ್ನು ಮರೆಮಾಚಿಕೊಳ್ಳಲು ಬೆಳೆದ ಪಕ್ಷಕ್ಕೆ ಮಗ್ಗುಲಲ್ಲಿ ಇದ್ದು ಬಾಕು ಹಾಕಿದವರ ಮಾರ್ಜಾಲ ಉಪದೇಶ ಯಾರಿಗೆ ಸಹ್ಯವಾದೀತು? ಎಂದು ಅವರು ವ್ಯಂಗ್ಯವಾಗಿ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಕರ್ನಾಟಕದ ಜನ ಏನು ಮಾಡಬೇಕು? ಮಣ್ಣು ತಿನ್ನಬೇಕಾ?: ಸಿದ್ದರಾಮಯ್ಯ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...