Homeಕರ್ನಾಟಕಸಿದ್ದರಾಮಯ್ಯನವರೇ ಬಹುಜನರ ಆಯ್ಕೆ, ಕಾಂಗ್ರೆಸ್ಸಿಗೆ ಜೈ ಎಂದ ಜನತೆ; ಎನ್.ಡಿ.ಟಿ.ವಿ. ಸಮೀಕ್ಷೆ

ಸಿದ್ದರಾಮಯ್ಯನವರೇ ಬಹುಜನರ ಆಯ್ಕೆ, ಕಾಂಗ್ರೆಸ್ಸಿಗೆ ಜೈ ಎಂದ ಜನತೆ; ಎನ್.ಡಿ.ಟಿ.ವಿ. ಸಮೀಕ್ಷೆ

- Advertisement -
- Advertisement -

ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಯಾರಾಗಬೇಕೆಂಬ ಪ್ರಶ್ನೆಗೆ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯನವರನ್ನೇ ಬಹುಜನರು ಆಯ್ಕೆ ಮಾಡಿದ್ದಾರೆ, ನಂತರದ ಸ್ಥಾನದಲ್ಲಿ ಬಸವರಾಜ ಬೊಮ್ಮಾಯಿ ಇದ್ದಾರೆ ಎಂದು ಲೋಕನೀತಿ-ಸೆಂಟರ್ ಫಾರ್ ದಿ ಸ್ಟಡಿ ಆಫ್ ಡೆವಲಪಿಂಗ್ ಸೊಸೈಟೀಸ್ (ಸಿಎಸ್‌ಡಿಎಸ್) ಸಹಭಾಗಿತ್ವದಲ್ಲಿ ಎನ್‌ಡಿಟಿವಿ ನಡೆಸಿರುವ ಸಮೀಕ್ಷೆ ಬಹಿರಂಗಪಡಿಸಿದೆ.

ಮೇ 10ರಂದು ನಡೆಯಲಿರುವ ಚುನಾವಣೆಯಲ್ಲಿ ಮತ್ತು ಆನಂತರ ಯಾರನ್ನು ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಬೇಕೆಂದು ಜನರು ಬಯಸುತ್ತಿದ್ದಾರೆಂಬ ವಿಷಯದ ಕುರಿತು ಸಮೀಕ್ಷೆ ಬೆಳಕುಚೆಲ್ಲಿದೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿರಿಯ ಮತದಾರರಲ್ಲಿ ಸ್ವಲ್ಪ ಹೆಚ್ಚು ಜನಪ್ರಿಯರಾಗಿದ್ದಾರೆ, ಆದರೆ ಕಿರಿಯ ಮತದಾರರು ಬೊಮ್ಮಾಯಿ ಅವರಿಗೆ ಆದ್ಯತೆ ನೀಡಿದ್ದಾರೆ ಎಂದು ಸಮೀಕ್ಷೆ ಹೇಳಿದೆ.

ಜೆಡಿಎಸ್ ನಾಯಕ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮೂರನೇ ಅತ್ಯಂತ ಜನಪ್ರಿಯ ಮುಖ್ಯಮಂತ್ರಿ ಅಭ್ಯರ್ಥಿಯಾಗಿದ್ದು, ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ನಂತರದ ಸ್ಥಾನದಲ್ಲಿದ್ದಾರೆ.

ಒಂದು ಅವಧಿಯನ್ನೂ ಪೂರ್ಣಗೊಳಿಸದೆ, ನಾಲ್ಕು ಬಾರಿ ಮುಖ್ಯಮಂತ್ರಿಯಾಗಿರುವ ಬಿಜೆಪಿಯ ಬಿಎಸ್ ಯಡಿಯೂರಪ್ಪ ಅವರು 5 ನೇ ಸ್ಥಾನದಲ್ಲಿದ್ದು ಆಶ್ಚರ್ಯಕರವಾಗಿ ಕಡಿಮೆ ಸ್ಥಾನ ಪಡೆದಿದ್ದಾರೆ.

ಬಸವರಾಜ ಬೊಮ್ಮಾಯಿಯವರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಕೂರಿಸುವವರೆಗೂ ಬಿ.ಎಸ್.ಯಡಿಯೂರಪ್ಪನವರು ಸಿಎಂ ಆಗಿದ್ದರು. ಚುನಾವಣಾ ರಾಜಕಾರಣದಿಂದ ಹಿಂದೆ ಸರಿದಿರುವ ಬಿ.ಎಸ್.ಯಡಿಯೂರಪ್ಪನವರು ಯಾವುದೇ ಪ್ರಬಲ ಸ್ಥಾನದ ಆಕಾಂಕ್ಷೆಯನ್ನು ಸದ್ಯಕ್ಕೆ ಹೊಂದಿಲ್ಲ.

ಆದರೆ ಮತ ಚಲಾಯಿಸುವಾಗ ಪಕ್ಷ ಮತ್ತು ಅಭ್ಯರ್ಥಿಯಷ್ಟೇ ಅಲ್ಲ, ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂಬುದನ್ನು ಮತದಾರರು ಗಮನಿಸುತ್ತಾರೆಯೇ ಎಂಬುದರ ಕುರಿತೂ ಸಮೀಕ್ಷೆ ಅವಲೋಕಿಸಿರುವುದಾಗಿ ಎನ್.ಡಿ.ಟಿ.ವಿ ವರದಿ ಪ್ರಕಟಿಸಿದೆ.

ಸಮೀಕ್ಷೆಗೆ ಪ್ರತಿಕ್ರಿಯಿಸಿದವರಲ್ಲಿ ಹೆಚ್ಚಿನವರು ಪಕ್ಷಕ್ಕೆ ಪ್ರಾಮುಖ್ಯತೆಯನ್ನು ನೀಡಿದ್ದಾರೆ. 56% ಮಂದಿ ಪಕ್ಷಕ್ಕೆ ಮತ್ತು 38% ಜನರು ಅಭ್ಯರ್ಥಿಗೆ ಒಲುವು ತೋರಿದ್ದಾರೆ. ಶೇ.4ರಷ್ಟು ಮಂದಿ ಮಾತ್ರ ಮುಖ್ಯಮಂತ್ರಿ ಯಾರೆಂದು ನೋಡಿ ಮತ ಹಾಕುವುದಾಗಿ ಹೇಳಿದ್ದಾರೆಂದು ವರದಿ ತಿಳಿಸಿದೆ.

ಕಾಂಗ್ರೆಸ್ ಅಥವಾ ಜೆಡಿಎಸ್ ಅನ್ನು ಬೆಂಬಲಿಸುವ ಮತದಾರರು ಹೆಚ್ಚಾಗಿ ಪಕ್ಷವನ್ನು ಪ್ರಮುಖ ಅಂಶವೆಂದು ಪರಿಗಣಿಸಿದ್ದಾರೆ. ಆದರೆ ಬಿಜೆಪಿ ಮತದಾರರು ಈ ವಿಚಾರವಾಗಿ ಭಿನ್ನಾಭಿಪ್ರಾಯ ಹೊಂದಿದ್ದಾರೆ.

ಮತದಾರರ ಗ್ರಹಿಕೆಗೆ ಬಂದಾಗ ಬಿಜೆಪಿಗಿಂತ ಕಾಂಗ್ರೆಸ್ ಉತ್ತಮವಾಗಿದೆ ಎಂದು ಸಮೀಕ್ಷೆ ಬಹಿರಂಗಪಡಿಸಿದೆ.

ಪ್ರತಿಕ್ರಿಯಿಸಿದವರು ಹೆಚ್ಚಿನವರು ಬಿಜೆಪಿ ಸರ್ಕಾರವನ್ನು `ಭ್ರಷ್ಟ’ ಎಂದು ಅಭಿಪ್ರಾಯಪಟ್ಟಿದ್ದಾರೆ. 59% ಮಂದಿ ಬಿಜೆಪಿಯನ್ನು ಭ್ರಷ್ಟ ಎಂದರೆ 35% ಜನರು ಕಾಂಗ್ರೆಸ್ ಪಕ್ಷವನ್ನು ಭ್ರಷ್ಟವೆಂದು ಟೀಕಿಸಿದ್ದಾರೆ. 3% ಜನರು ಜೆಡಿಎಸ್ ಪಕ್ಷವನ್ನು ಭ್ರಷ್ಟವೆಂದು ಪರಿಗಣಿಸಿದ್ದಾರೆ.

ಕುಟುಂಬ ರಾಜಕಾರಣದಲ್ಲೂ ಬಿಜೆಪಿಯೇ ಮುಂದಿದೆ ಎಂದು 59% ಮಂದಿ ಪ್ರತಿಕ್ರಿಯಿಸಿದ್ದಾರೆ. ಕಾಂಗ್ರೆಸ್ 30%, ಜೆಡಿಎಸ್ 8% ಸ್ವಜನಪಕ್ಷಪಾತ ಮಾಡಿರುವುದಾಗಿ ಜನರು ಅಭಿಪ್ರಾಯ ತಾಳಿದ್ದಾರೆ. ಗುಂಪುಗಾರಿಕೆಯಲ್ಲೂ ಬಿಜೆಪಿ (55%) ಪಕ್ಷವು, ಕಾಂಗ್ರೆಸ್ (30%), ಜೆಡಿಎಸ್ (12) ಪಕ್ಷಗಳಿಗಿಂತ ಮುಂದಿದೆ ಎಂದು ಸಮೀಕ್ಷೆ ತಿಳಿಸಿದೆ. ಇದು ಪಕ್ಷವನ್ನು ಹದಗೆಡಿಸುವ ಪ್ರಮುಖ ಅಂಶವೂ ಹೌದು.

ಕಾಂಗ್ರೆಸ್ ಪಕ್ಷವೇ ಅಭಿವೃದ್ಧಿ ವಿಚಾರದಲ್ಲಿ ಒಳ್ಳೆಯ ಕೆಲಸ ಮಾಡಿದೆ ಎಂದು ಹೆಚ್ಚಿನ ಮಂದಿ ಒಲುವು ತೋರಿದ್ದಾರೆ. ಈ ವಿಚಾರದಲ್ಲಿ ಕಾಂಗ್ರೆಸ್ 47%, ಬಿಜೆಪಿ 34%, ಜೆಡಿಎಸ್ 14% ಜನರ ಬೆಂಬಲ ಪಡೆದಿವೆ.

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದವನ್ನು ನಿಭಾಯಿಸುವಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಸಮಾನ ರೇಟಿಂಗ್ (40%)  ಪಡೆದಿವೆ. ಜೆಡಿಎಸ್ ಮೂರನೇ (14%) ಸ್ಥಾನ ಗಳಿಸಿದೆ.

ವಿವಿಧ ಜಾತಿಗಳು ಮತ್ತು ಸಮುದಾಯಗಳು ಹೇಗೆ ಮತ ಚಲಾಯಿಸುವ ಸಾಧ್ಯತೆಯಿದೆ ಎಂಬುದನ್ನು ತಿಳಿಯಲು ಎನ್.ಡಿ.ಟಿ.ವಿ. ಸಮೀಕ್ಷೆಯು ಪ್ರಯತ್ನಿಸಿದೆ.

ಒಕ್ಕಲಿಗರಲ್ಲಿ ಶೇ.34% ಮಂದಿ ಕಾಂಗ್ರೆಸ್ಸಿಗೂ, 36% ಜನರು ಜೆಡಿ(ಎಸ್) ಪಕ್ಷಕ್ಕೂ ಹಂಚಿ ಹೋಗಿದ್ದರೆ, 67% ಲಿಂಗಾಯತರು ಬಿಜೆಪಿಯೊಂದಿಗೆ ದೃಢವಾಗಿ ಉಳಿದಿದ್ದಾರೆ. ಮುಸ್ಲಿಮರಲ್ಲಿ 59% ಮಂದಿ ಕಾಂಗ್ರೆಸ್‌ಗೆ ಮತ ಹಾಕಲು ನಿರ್ಧರಿಸಿದ್ದಾರೆ.

ಸರ್ಕಾರದ ವಿರುದ್ಧ  ಆಡಳಿತ ವಿರೋಧಿ ಅಲೆ ಬಲವಾಗಿ ಇರುವುದನ್ನು ಸಮೀಕ್ಷೆ ಬಹಿರಂಗಪಡಿಸಿದೆ. ಬಡವರು, ಕೆಳ ಮಧ್ಯಮ ವರ್ಗದವರು ಮತ್ತು ಗ್ರಾಮೀಣ ಮತದಾರರಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಬೇಸರವಿರುವುದನ್ನು ಸಮೀಕ್ಷೆಯ  ಅಂಕಿ-ಅಂಶಗಳು ಎತ್ತಿಹಿಡಿದಿವೆ.

ಬಡಮತದಾರರು ಹೆಚ್ಚಿನದಾಗಿ ಕಾಂಗ್ರೆಸ್ಸಿಗೆ ಜೈ ಎಂದಿದ್ದಾರೆ. 50 ಬಡವರು ಕಾಂಗ್ರೆಸ್ಸಿನೊಂದಿಗೆ ನಿಂತರೆ, 23% ಬಡವರು ಬಿಜೆಪಿಗೆ ಸಮ್ಮತಿ ಸೂಚಿಸಿದ್ದಾರೆ. ಶ್ರೀಮಂತರಲ್ಲಿ 46% ಜನರು ಬಿಜೆಪಿಗೆ ಜೈ ಎಂದರೆ, 31% ಶ್ರೀಮಂತರು ಕಾಂಗ್ರೆಸ್ಸಿನತ್ತ ಹೊರಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿ ಆಗದಂತೆ ತಡೆದಿದ್ದು ರಾಹುಲ್ ಗಾಂಧಿ : ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿಯಾಗದಂತೆ ರಾಹುಲ್ ಗಾಂಧಿ ತಡೆದಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ (ಫೆ.17) ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "2014 ರಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ...

ಮಮತಾ ಬ್ಯಾನರ್ಜಿ ವಿರುದ್ಧ ಇಡಿ ಅರ್ಜಿ: ಮಾರ್ಚ್ 18ಕ್ಕೆ ವಿಚಾರಣೆ ಮುಂದೂಡಿಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಇತರರ ವಿರುದ್ಧದ ಐ-ಪ್ಯಾಕ್ ಕಚೇರಿ ಶೋಧಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಕೇಂದ್ರ ಜಾರಿ ನಿರ್ದೇಶನಾಲಯದ (ಇಡಿ) ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ...