Homeಕರ್ನಾಟಕಸಿದ್ದರಾಮಯ್ಯನವರೇ ಬಹುಜನರ ಆಯ್ಕೆ, ಕಾಂಗ್ರೆಸ್ಸಿಗೆ ಜೈ ಎಂದ ಜನತೆ; ಎನ್.ಡಿ.ಟಿ.ವಿ. ಸಮೀಕ್ಷೆ

ಸಿದ್ದರಾಮಯ್ಯನವರೇ ಬಹುಜನರ ಆಯ್ಕೆ, ಕಾಂಗ್ರೆಸ್ಸಿಗೆ ಜೈ ಎಂದ ಜನತೆ; ಎನ್.ಡಿ.ಟಿ.ವಿ. ಸಮೀಕ್ಷೆ

- Advertisement -
- Advertisement -

ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಯಾರಾಗಬೇಕೆಂಬ ಪ್ರಶ್ನೆಗೆ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯನವರನ್ನೇ ಬಹುಜನರು ಆಯ್ಕೆ ಮಾಡಿದ್ದಾರೆ, ನಂತರದ ಸ್ಥಾನದಲ್ಲಿ ಬಸವರಾಜ ಬೊಮ್ಮಾಯಿ ಇದ್ದಾರೆ ಎಂದು ಲೋಕನೀತಿ-ಸೆಂಟರ್ ಫಾರ್ ದಿ ಸ್ಟಡಿ ಆಫ್ ಡೆವಲಪಿಂಗ್ ಸೊಸೈಟೀಸ್ (ಸಿಎಸ್‌ಡಿಎಸ್) ಸಹಭಾಗಿತ್ವದಲ್ಲಿ ಎನ್‌ಡಿಟಿವಿ ನಡೆಸಿರುವ ಸಮೀಕ್ಷೆ ಬಹಿರಂಗಪಡಿಸಿದೆ.

ಮೇ 10ರಂದು ನಡೆಯಲಿರುವ ಚುನಾವಣೆಯಲ್ಲಿ ಮತ್ತು ಆನಂತರ ಯಾರನ್ನು ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಬೇಕೆಂದು ಜನರು ಬಯಸುತ್ತಿದ್ದಾರೆಂಬ ವಿಷಯದ ಕುರಿತು ಸಮೀಕ್ಷೆ ಬೆಳಕುಚೆಲ್ಲಿದೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿರಿಯ ಮತದಾರರಲ್ಲಿ ಸ್ವಲ್ಪ ಹೆಚ್ಚು ಜನಪ್ರಿಯರಾಗಿದ್ದಾರೆ, ಆದರೆ ಕಿರಿಯ ಮತದಾರರು ಬೊಮ್ಮಾಯಿ ಅವರಿಗೆ ಆದ್ಯತೆ ನೀಡಿದ್ದಾರೆ ಎಂದು ಸಮೀಕ್ಷೆ ಹೇಳಿದೆ.

ಜೆಡಿಎಸ್ ನಾಯಕ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮೂರನೇ ಅತ್ಯಂತ ಜನಪ್ರಿಯ ಮುಖ್ಯಮಂತ್ರಿ ಅಭ್ಯರ್ಥಿಯಾಗಿದ್ದು, ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ನಂತರದ ಸ್ಥಾನದಲ್ಲಿದ್ದಾರೆ.

ಒಂದು ಅವಧಿಯನ್ನೂ ಪೂರ್ಣಗೊಳಿಸದೆ, ನಾಲ್ಕು ಬಾರಿ ಮುಖ್ಯಮಂತ್ರಿಯಾಗಿರುವ ಬಿಜೆಪಿಯ ಬಿಎಸ್ ಯಡಿಯೂರಪ್ಪ ಅವರು 5 ನೇ ಸ್ಥಾನದಲ್ಲಿದ್ದು ಆಶ್ಚರ್ಯಕರವಾಗಿ ಕಡಿಮೆ ಸ್ಥಾನ ಪಡೆದಿದ್ದಾರೆ.

ಬಸವರಾಜ ಬೊಮ್ಮಾಯಿಯವರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಕೂರಿಸುವವರೆಗೂ ಬಿ.ಎಸ್.ಯಡಿಯೂರಪ್ಪನವರು ಸಿಎಂ ಆಗಿದ್ದರು. ಚುನಾವಣಾ ರಾಜಕಾರಣದಿಂದ ಹಿಂದೆ ಸರಿದಿರುವ ಬಿ.ಎಸ್.ಯಡಿಯೂರಪ್ಪನವರು ಯಾವುದೇ ಪ್ರಬಲ ಸ್ಥಾನದ ಆಕಾಂಕ್ಷೆಯನ್ನು ಸದ್ಯಕ್ಕೆ ಹೊಂದಿಲ್ಲ.

ಆದರೆ ಮತ ಚಲಾಯಿಸುವಾಗ ಪಕ್ಷ ಮತ್ತು ಅಭ್ಯರ್ಥಿಯಷ್ಟೇ ಅಲ್ಲ, ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂಬುದನ್ನು ಮತದಾರರು ಗಮನಿಸುತ್ತಾರೆಯೇ ಎಂಬುದರ ಕುರಿತೂ ಸಮೀಕ್ಷೆ ಅವಲೋಕಿಸಿರುವುದಾಗಿ ಎನ್.ಡಿ.ಟಿ.ವಿ ವರದಿ ಪ್ರಕಟಿಸಿದೆ.

ಸಮೀಕ್ಷೆಗೆ ಪ್ರತಿಕ್ರಿಯಿಸಿದವರಲ್ಲಿ ಹೆಚ್ಚಿನವರು ಪಕ್ಷಕ್ಕೆ ಪ್ರಾಮುಖ್ಯತೆಯನ್ನು ನೀಡಿದ್ದಾರೆ. 56% ಮಂದಿ ಪಕ್ಷಕ್ಕೆ ಮತ್ತು 38% ಜನರು ಅಭ್ಯರ್ಥಿಗೆ ಒಲುವು ತೋರಿದ್ದಾರೆ. ಶೇ.4ರಷ್ಟು ಮಂದಿ ಮಾತ್ರ ಮುಖ್ಯಮಂತ್ರಿ ಯಾರೆಂದು ನೋಡಿ ಮತ ಹಾಕುವುದಾಗಿ ಹೇಳಿದ್ದಾರೆಂದು ವರದಿ ತಿಳಿಸಿದೆ.

ಕಾಂಗ್ರೆಸ್ ಅಥವಾ ಜೆಡಿಎಸ್ ಅನ್ನು ಬೆಂಬಲಿಸುವ ಮತದಾರರು ಹೆಚ್ಚಾಗಿ ಪಕ್ಷವನ್ನು ಪ್ರಮುಖ ಅಂಶವೆಂದು ಪರಿಗಣಿಸಿದ್ದಾರೆ. ಆದರೆ ಬಿಜೆಪಿ ಮತದಾರರು ಈ ವಿಚಾರವಾಗಿ ಭಿನ್ನಾಭಿಪ್ರಾಯ ಹೊಂದಿದ್ದಾರೆ.

ಮತದಾರರ ಗ್ರಹಿಕೆಗೆ ಬಂದಾಗ ಬಿಜೆಪಿಗಿಂತ ಕಾಂಗ್ರೆಸ್ ಉತ್ತಮವಾಗಿದೆ ಎಂದು ಸಮೀಕ್ಷೆ ಬಹಿರಂಗಪಡಿಸಿದೆ.

ಪ್ರತಿಕ್ರಿಯಿಸಿದವರು ಹೆಚ್ಚಿನವರು ಬಿಜೆಪಿ ಸರ್ಕಾರವನ್ನು `ಭ್ರಷ್ಟ’ ಎಂದು ಅಭಿಪ್ರಾಯಪಟ್ಟಿದ್ದಾರೆ. 59% ಮಂದಿ ಬಿಜೆಪಿಯನ್ನು ಭ್ರಷ್ಟ ಎಂದರೆ 35% ಜನರು ಕಾಂಗ್ರೆಸ್ ಪಕ್ಷವನ್ನು ಭ್ರಷ್ಟವೆಂದು ಟೀಕಿಸಿದ್ದಾರೆ. 3% ಜನರು ಜೆಡಿಎಸ್ ಪಕ್ಷವನ್ನು ಭ್ರಷ್ಟವೆಂದು ಪರಿಗಣಿಸಿದ್ದಾರೆ.

ಕುಟುಂಬ ರಾಜಕಾರಣದಲ್ಲೂ ಬಿಜೆಪಿಯೇ ಮುಂದಿದೆ ಎಂದು 59% ಮಂದಿ ಪ್ರತಿಕ್ರಿಯಿಸಿದ್ದಾರೆ. ಕಾಂಗ್ರೆಸ್ 30%, ಜೆಡಿಎಸ್ 8% ಸ್ವಜನಪಕ್ಷಪಾತ ಮಾಡಿರುವುದಾಗಿ ಜನರು ಅಭಿಪ್ರಾಯ ತಾಳಿದ್ದಾರೆ. ಗುಂಪುಗಾರಿಕೆಯಲ್ಲೂ ಬಿಜೆಪಿ (55%) ಪಕ್ಷವು, ಕಾಂಗ್ರೆಸ್ (30%), ಜೆಡಿಎಸ್ (12) ಪಕ್ಷಗಳಿಗಿಂತ ಮುಂದಿದೆ ಎಂದು ಸಮೀಕ್ಷೆ ತಿಳಿಸಿದೆ. ಇದು ಪಕ್ಷವನ್ನು ಹದಗೆಡಿಸುವ ಪ್ರಮುಖ ಅಂಶವೂ ಹೌದು.

ಕಾಂಗ್ರೆಸ್ ಪಕ್ಷವೇ ಅಭಿವೃದ್ಧಿ ವಿಚಾರದಲ್ಲಿ ಒಳ್ಳೆಯ ಕೆಲಸ ಮಾಡಿದೆ ಎಂದು ಹೆಚ್ಚಿನ ಮಂದಿ ಒಲುವು ತೋರಿದ್ದಾರೆ. ಈ ವಿಚಾರದಲ್ಲಿ ಕಾಂಗ್ರೆಸ್ 47%, ಬಿಜೆಪಿ 34%, ಜೆಡಿಎಸ್ 14% ಜನರ ಬೆಂಬಲ ಪಡೆದಿವೆ.

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದವನ್ನು ನಿಭಾಯಿಸುವಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಸಮಾನ ರೇಟಿಂಗ್ (40%)  ಪಡೆದಿವೆ. ಜೆಡಿಎಸ್ ಮೂರನೇ (14%) ಸ್ಥಾನ ಗಳಿಸಿದೆ.

ವಿವಿಧ ಜಾತಿಗಳು ಮತ್ತು ಸಮುದಾಯಗಳು ಹೇಗೆ ಮತ ಚಲಾಯಿಸುವ ಸಾಧ್ಯತೆಯಿದೆ ಎಂಬುದನ್ನು ತಿಳಿಯಲು ಎನ್.ಡಿ.ಟಿ.ವಿ. ಸಮೀಕ್ಷೆಯು ಪ್ರಯತ್ನಿಸಿದೆ.

ಒಕ್ಕಲಿಗರಲ್ಲಿ ಶೇ.34% ಮಂದಿ ಕಾಂಗ್ರೆಸ್ಸಿಗೂ, 36% ಜನರು ಜೆಡಿ(ಎಸ್) ಪಕ್ಷಕ್ಕೂ ಹಂಚಿ ಹೋಗಿದ್ದರೆ, 67% ಲಿಂಗಾಯತರು ಬಿಜೆಪಿಯೊಂದಿಗೆ ದೃಢವಾಗಿ ಉಳಿದಿದ್ದಾರೆ. ಮುಸ್ಲಿಮರಲ್ಲಿ 59% ಮಂದಿ ಕಾಂಗ್ರೆಸ್‌ಗೆ ಮತ ಹಾಕಲು ನಿರ್ಧರಿಸಿದ್ದಾರೆ.

ಸರ್ಕಾರದ ವಿರುದ್ಧ  ಆಡಳಿತ ವಿರೋಧಿ ಅಲೆ ಬಲವಾಗಿ ಇರುವುದನ್ನು ಸಮೀಕ್ಷೆ ಬಹಿರಂಗಪಡಿಸಿದೆ. ಬಡವರು, ಕೆಳ ಮಧ್ಯಮ ವರ್ಗದವರು ಮತ್ತು ಗ್ರಾಮೀಣ ಮತದಾರರಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಬೇಸರವಿರುವುದನ್ನು ಸಮೀಕ್ಷೆಯ  ಅಂಕಿ-ಅಂಶಗಳು ಎತ್ತಿಹಿಡಿದಿವೆ.

ಬಡಮತದಾರರು ಹೆಚ್ಚಿನದಾಗಿ ಕಾಂಗ್ರೆಸ್ಸಿಗೆ ಜೈ ಎಂದಿದ್ದಾರೆ. 50 ಬಡವರು ಕಾಂಗ್ರೆಸ್ಸಿನೊಂದಿಗೆ ನಿಂತರೆ, 23% ಬಡವರು ಬಿಜೆಪಿಗೆ ಸಮ್ಮತಿ ಸೂಚಿಸಿದ್ದಾರೆ. ಶ್ರೀಮಂತರಲ್ಲಿ 46% ಜನರು ಬಿಜೆಪಿಗೆ ಜೈ ಎಂದರೆ, 31% ಶ್ರೀಮಂತರು ಕಾಂಗ್ರೆಸ್ಸಿನತ್ತ ಹೊರಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...