Homeಕರ್ನಾಟಕಸಿದ್ದರಾಮಯ್ಯನವರೇ ಬಹುಜನರ ಆಯ್ಕೆ, ಕಾಂಗ್ರೆಸ್ಸಿಗೆ ಜೈ ಎಂದ ಜನತೆ; ಎನ್.ಡಿ.ಟಿ.ವಿ. ಸಮೀಕ್ಷೆ

ಸಿದ್ದರಾಮಯ್ಯನವರೇ ಬಹುಜನರ ಆಯ್ಕೆ, ಕಾಂಗ್ರೆಸ್ಸಿಗೆ ಜೈ ಎಂದ ಜನತೆ; ಎನ್.ಡಿ.ಟಿ.ವಿ. ಸಮೀಕ್ಷೆ

- Advertisement -
- Advertisement -

ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಯಾರಾಗಬೇಕೆಂಬ ಪ್ರಶ್ನೆಗೆ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯನವರನ್ನೇ ಬಹುಜನರು ಆಯ್ಕೆ ಮಾಡಿದ್ದಾರೆ, ನಂತರದ ಸ್ಥಾನದಲ್ಲಿ ಬಸವರಾಜ ಬೊಮ್ಮಾಯಿ ಇದ್ದಾರೆ ಎಂದು ಲೋಕನೀತಿ-ಸೆಂಟರ್ ಫಾರ್ ದಿ ಸ್ಟಡಿ ಆಫ್ ಡೆವಲಪಿಂಗ್ ಸೊಸೈಟೀಸ್ (ಸಿಎಸ್‌ಡಿಎಸ್) ಸಹಭಾಗಿತ್ವದಲ್ಲಿ ಎನ್‌ಡಿಟಿವಿ ನಡೆಸಿರುವ ಸಮೀಕ್ಷೆ ಬಹಿರಂಗಪಡಿಸಿದೆ.

ಮೇ 10ರಂದು ನಡೆಯಲಿರುವ ಚುನಾವಣೆಯಲ್ಲಿ ಮತ್ತು ಆನಂತರ ಯಾರನ್ನು ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಬೇಕೆಂದು ಜನರು ಬಯಸುತ್ತಿದ್ದಾರೆಂಬ ವಿಷಯದ ಕುರಿತು ಸಮೀಕ್ಷೆ ಬೆಳಕುಚೆಲ್ಲಿದೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿರಿಯ ಮತದಾರರಲ್ಲಿ ಸ್ವಲ್ಪ ಹೆಚ್ಚು ಜನಪ್ರಿಯರಾಗಿದ್ದಾರೆ, ಆದರೆ ಕಿರಿಯ ಮತದಾರರು ಬೊಮ್ಮಾಯಿ ಅವರಿಗೆ ಆದ್ಯತೆ ನೀಡಿದ್ದಾರೆ ಎಂದು ಸಮೀಕ್ಷೆ ಹೇಳಿದೆ.

ಜೆಡಿಎಸ್ ನಾಯಕ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮೂರನೇ ಅತ್ಯಂತ ಜನಪ್ರಿಯ ಮುಖ್ಯಮಂತ್ರಿ ಅಭ್ಯರ್ಥಿಯಾಗಿದ್ದು, ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ನಂತರದ ಸ್ಥಾನದಲ್ಲಿದ್ದಾರೆ.

ಒಂದು ಅವಧಿಯನ್ನೂ ಪೂರ್ಣಗೊಳಿಸದೆ, ನಾಲ್ಕು ಬಾರಿ ಮುಖ್ಯಮಂತ್ರಿಯಾಗಿರುವ ಬಿಜೆಪಿಯ ಬಿಎಸ್ ಯಡಿಯೂರಪ್ಪ ಅವರು 5 ನೇ ಸ್ಥಾನದಲ್ಲಿದ್ದು ಆಶ್ಚರ್ಯಕರವಾಗಿ ಕಡಿಮೆ ಸ್ಥಾನ ಪಡೆದಿದ್ದಾರೆ.

ಬಸವರಾಜ ಬೊಮ್ಮಾಯಿಯವರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಕೂರಿಸುವವರೆಗೂ ಬಿ.ಎಸ್.ಯಡಿಯೂರಪ್ಪನವರು ಸಿಎಂ ಆಗಿದ್ದರು. ಚುನಾವಣಾ ರಾಜಕಾರಣದಿಂದ ಹಿಂದೆ ಸರಿದಿರುವ ಬಿ.ಎಸ್.ಯಡಿಯೂರಪ್ಪನವರು ಯಾವುದೇ ಪ್ರಬಲ ಸ್ಥಾನದ ಆಕಾಂಕ್ಷೆಯನ್ನು ಸದ್ಯಕ್ಕೆ ಹೊಂದಿಲ್ಲ.

ಆದರೆ ಮತ ಚಲಾಯಿಸುವಾಗ ಪಕ್ಷ ಮತ್ತು ಅಭ್ಯರ್ಥಿಯಷ್ಟೇ ಅಲ್ಲ, ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂಬುದನ್ನು ಮತದಾರರು ಗಮನಿಸುತ್ತಾರೆಯೇ ಎಂಬುದರ ಕುರಿತೂ ಸಮೀಕ್ಷೆ ಅವಲೋಕಿಸಿರುವುದಾಗಿ ಎನ್.ಡಿ.ಟಿ.ವಿ ವರದಿ ಪ್ರಕಟಿಸಿದೆ.

ಸಮೀಕ್ಷೆಗೆ ಪ್ರತಿಕ್ರಿಯಿಸಿದವರಲ್ಲಿ ಹೆಚ್ಚಿನವರು ಪಕ್ಷಕ್ಕೆ ಪ್ರಾಮುಖ್ಯತೆಯನ್ನು ನೀಡಿದ್ದಾರೆ. 56% ಮಂದಿ ಪಕ್ಷಕ್ಕೆ ಮತ್ತು 38% ಜನರು ಅಭ್ಯರ್ಥಿಗೆ ಒಲುವು ತೋರಿದ್ದಾರೆ. ಶೇ.4ರಷ್ಟು ಮಂದಿ ಮಾತ್ರ ಮುಖ್ಯಮಂತ್ರಿ ಯಾರೆಂದು ನೋಡಿ ಮತ ಹಾಕುವುದಾಗಿ ಹೇಳಿದ್ದಾರೆಂದು ವರದಿ ತಿಳಿಸಿದೆ.

ಕಾಂಗ್ರೆಸ್ ಅಥವಾ ಜೆಡಿಎಸ್ ಅನ್ನು ಬೆಂಬಲಿಸುವ ಮತದಾರರು ಹೆಚ್ಚಾಗಿ ಪಕ್ಷವನ್ನು ಪ್ರಮುಖ ಅಂಶವೆಂದು ಪರಿಗಣಿಸಿದ್ದಾರೆ. ಆದರೆ ಬಿಜೆಪಿ ಮತದಾರರು ಈ ವಿಚಾರವಾಗಿ ಭಿನ್ನಾಭಿಪ್ರಾಯ ಹೊಂದಿದ್ದಾರೆ.

ಮತದಾರರ ಗ್ರಹಿಕೆಗೆ ಬಂದಾಗ ಬಿಜೆಪಿಗಿಂತ ಕಾಂಗ್ರೆಸ್ ಉತ್ತಮವಾಗಿದೆ ಎಂದು ಸಮೀಕ್ಷೆ ಬಹಿರಂಗಪಡಿಸಿದೆ.

ಪ್ರತಿಕ್ರಿಯಿಸಿದವರು ಹೆಚ್ಚಿನವರು ಬಿಜೆಪಿ ಸರ್ಕಾರವನ್ನು `ಭ್ರಷ್ಟ’ ಎಂದು ಅಭಿಪ್ರಾಯಪಟ್ಟಿದ್ದಾರೆ. 59% ಮಂದಿ ಬಿಜೆಪಿಯನ್ನು ಭ್ರಷ್ಟ ಎಂದರೆ 35% ಜನರು ಕಾಂಗ್ರೆಸ್ ಪಕ್ಷವನ್ನು ಭ್ರಷ್ಟವೆಂದು ಟೀಕಿಸಿದ್ದಾರೆ. 3% ಜನರು ಜೆಡಿಎಸ್ ಪಕ್ಷವನ್ನು ಭ್ರಷ್ಟವೆಂದು ಪರಿಗಣಿಸಿದ್ದಾರೆ.

ಕುಟುಂಬ ರಾಜಕಾರಣದಲ್ಲೂ ಬಿಜೆಪಿಯೇ ಮುಂದಿದೆ ಎಂದು 59% ಮಂದಿ ಪ್ರತಿಕ್ರಿಯಿಸಿದ್ದಾರೆ. ಕಾಂಗ್ರೆಸ್ 30%, ಜೆಡಿಎಸ್ 8% ಸ್ವಜನಪಕ್ಷಪಾತ ಮಾಡಿರುವುದಾಗಿ ಜನರು ಅಭಿಪ್ರಾಯ ತಾಳಿದ್ದಾರೆ. ಗುಂಪುಗಾರಿಕೆಯಲ್ಲೂ ಬಿಜೆಪಿ (55%) ಪಕ್ಷವು, ಕಾಂಗ್ರೆಸ್ (30%), ಜೆಡಿಎಸ್ (12) ಪಕ್ಷಗಳಿಗಿಂತ ಮುಂದಿದೆ ಎಂದು ಸಮೀಕ್ಷೆ ತಿಳಿಸಿದೆ. ಇದು ಪಕ್ಷವನ್ನು ಹದಗೆಡಿಸುವ ಪ್ರಮುಖ ಅಂಶವೂ ಹೌದು.

ಕಾಂಗ್ರೆಸ್ ಪಕ್ಷವೇ ಅಭಿವೃದ್ಧಿ ವಿಚಾರದಲ್ಲಿ ಒಳ್ಳೆಯ ಕೆಲಸ ಮಾಡಿದೆ ಎಂದು ಹೆಚ್ಚಿನ ಮಂದಿ ಒಲುವು ತೋರಿದ್ದಾರೆ. ಈ ವಿಚಾರದಲ್ಲಿ ಕಾಂಗ್ರೆಸ್ 47%, ಬಿಜೆಪಿ 34%, ಜೆಡಿಎಸ್ 14% ಜನರ ಬೆಂಬಲ ಪಡೆದಿವೆ.

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದವನ್ನು ನಿಭಾಯಿಸುವಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಸಮಾನ ರೇಟಿಂಗ್ (40%)  ಪಡೆದಿವೆ. ಜೆಡಿಎಸ್ ಮೂರನೇ (14%) ಸ್ಥಾನ ಗಳಿಸಿದೆ.

ವಿವಿಧ ಜಾತಿಗಳು ಮತ್ತು ಸಮುದಾಯಗಳು ಹೇಗೆ ಮತ ಚಲಾಯಿಸುವ ಸಾಧ್ಯತೆಯಿದೆ ಎಂಬುದನ್ನು ತಿಳಿಯಲು ಎನ್.ಡಿ.ಟಿ.ವಿ. ಸಮೀಕ್ಷೆಯು ಪ್ರಯತ್ನಿಸಿದೆ.

ಒಕ್ಕಲಿಗರಲ್ಲಿ ಶೇ.34% ಮಂದಿ ಕಾಂಗ್ರೆಸ್ಸಿಗೂ, 36% ಜನರು ಜೆಡಿ(ಎಸ್) ಪಕ್ಷಕ್ಕೂ ಹಂಚಿ ಹೋಗಿದ್ದರೆ, 67% ಲಿಂಗಾಯತರು ಬಿಜೆಪಿಯೊಂದಿಗೆ ದೃಢವಾಗಿ ಉಳಿದಿದ್ದಾರೆ. ಮುಸ್ಲಿಮರಲ್ಲಿ 59% ಮಂದಿ ಕಾಂಗ್ರೆಸ್‌ಗೆ ಮತ ಹಾಕಲು ನಿರ್ಧರಿಸಿದ್ದಾರೆ.

ಸರ್ಕಾರದ ವಿರುದ್ಧ  ಆಡಳಿತ ವಿರೋಧಿ ಅಲೆ ಬಲವಾಗಿ ಇರುವುದನ್ನು ಸಮೀಕ್ಷೆ ಬಹಿರಂಗಪಡಿಸಿದೆ. ಬಡವರು, ಕೆಳ ಮಧ್ಯಮ ವರ್ಗದವರು ಮತ್ತು ಗ್ರಾಮೀಣ ಮತದಾರರಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಬೇಸರವಿರುವುದನ್ನು ಸಮೀಕ್ಷೆಯ  ಅಂಕಿ-ಅಂಶಗಳು ಎತ್ತಿಹಿಡಿದಿವೆ.

ಬಡಮತದಾರರು ಹೆಚ್ಚಿನದಾಗಿ ಕಾಂಗ್ರೆಸ್ಸಿಗೆ ಜೈ ಎಂದಿದ್ದಾರೆ. 50 ಬಡವರು ಕಾಂಗ್ರೆಸ್ಸಿನೊಂದಿಗೆ ನಿಂತರೆ, 23% ಬಡವರು ಬಿಜೆಪಿಗೆ ಸಮ್ಮತಿ ಸೂಚಿಸಿದ್ದಾರೆ. ಶ್ರೀಮಂತರಲ್ಲಿ 46% ಜನರು ಬಿಜೆಪಿಗೆ ಜೈ ಎಂದರೆ, 31% ಶ್ರೀಮಂತರು ಕಾಂಗ್ರೆಸ್ಸಿನತ್ತ ಹೊರಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...