Homeಕರ್ನಾಟಕಸಿದ್ದರಾಮಯ್ಯನವರೇ ಬಹುಜನರ ಆಯ್ಕೆ, ಕಾಂಗ್ರೆಸ್ಸಿಗೆ ಜೈ ಎಂದ ಜನತೆ; ಎನ್.ಡಿ.ಟಿ.ವಿ. ಸಮೀಕ್ಷೆ

ಸಿದ್ದರಾಮಯ್ಯನವರೇ ಬಹುಜನರ ಆಯ್ಕೆ, ಕಾಂಗ್ರೆಸ್ಸಿಗೆ ಜೈ ಎಂದ ಜನತೆ; ಎನ್.ಡಿ.ಟಿ.ವಿ. ಸಮೀಕ್ಷೆ

- Advertisement -
- Advertisement -

ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಯಾರಾಗಬೇಕೆಂಬ ಪ್ರಶ್ನೆಗೆ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯನವರನ್ನೇ ಬಹುಜನರು ಆಯ್ಕೆ ಮಾಡಿದ್ದಾರೆ, ನಂತರದ ಸ್ಥಾನದಲ್ಲಿ ಬಸವರಾಜ ಬೊಮ್ಮಾಯಿ ಇದ್ದಾರೆ ಎಂದು ಲೋಕನೀತಿ-ಸೆಂಟರ್ ಫಾರ್ ದಿ ಸ್ಟಡಿ ಆಫ್ ಡೆವಲಪಿಂಗ್ ಸೊಸೈಟೀಸ್ (ಸಿಎಸ್‌ಡಿಎಸ್) ಸಹಭಾಗಿತ್ವದಲ್ಲಿ ಎನ್‌ಡಿಟಿವಿ ನಡೆಸಿರುವ ಸಮೀಕ್ಷೆ ಬಹಿರಂಗಪಡಿಸಿದೆ.

ಮೇ 10ರಂದು ನಡೆಯಲಿರುವ ಚುನಾವಣೆಯಲ್ಲಿ ಮತ್ತು ಆನಂತರ ಯಾರನ್ನು ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಬೇಕೆಂದು ಜನರು ಬಯಸುತ್ತಿದ್ದಾರೆಂಬ ವಿಷಯದ ಕುರಿತು ಸಮೀಕ್ಷೆ ಬೆಳಕುಚೆಲ್ಲಿದೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿರಿಯ ಮತದಾರರಲ್ಲಿ ಸ್ವಲ್ಪ ಹೆಚ್ಚು ಜನಪ್ರಿಯರಾಗಿದ್ದಾರೆ, ಆದರೆ ಕಿರಿಯ ಮತದಾರರು ಬೊಮ್ಮಾಯಿ ಅವರಿಗೆ ಆದ್ಯತೆ ನೀಡಿದ್ದಾರೆ ಎಂದು ಸಮೀಕ್ಷೆ ಹೇಳಿದೆ.

ಜೆಡಿಎಸ್ ನಾಯಕ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮೂರನೇ ಅತ್ಯಂತ ಜನಪ್ರಿಯ ಮುಖ್ಯಮಂತ್ರಿ ಅಭ್ಯರ್ಥಿಯಾಗಿದ್ದು, ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ನಂತರದ ಸ್ಥಾನದಲ್ಲಿದ್ದಾರೆ.

ಒಂದು ಅವಧಿಯನ್ನೂ ಪೂರ್ಣಗೊಳಿಸದೆ, ನಾಲ್ಕು ಬಾರಿ ಮುಖ್ಯಮಂತ್ರಿಯಾಗಿರುವ ಬಿಜೆಪಿಯ ಬಿಎಸ್ ಯಡಿಯೂರಪ್ಪ ಅವರು 5 ನೇ ಸ್ಥಾನದಲ್ಲಿದ್ದು ಆಶ್ಚರ್ಯಕರವಾಗಿ ಕಡಿಮೆ ಸ್ಥಾನ ಪಡೆದಿದ್ದಾರೆ.

ಬಸವರಾಜ ಬೊಮ್ಮಾಯಿಯವರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಕೂರಿಸುವವರೆಗೂ ಬಿ.ಎಸ್.ಯಡಿಯೂರಪ್ಪನವರು ಸಿಎಂ ಆಗಿದ್ದರು. ಚುನಾವಣಾ ರಾಜಕಾರಣದಿಂದ ಹಿಂದೆ ಸರಿದಿರುವ ಬಿ.ಎಸ್.ಯಡಿಯೂರಪ್ಪನವರು ಯಾವುದೇ ಪ್ರಬಲ ಸ್ಥಾನದ ಆಕಾಂಕ್ಷೆಯನ್ನು ಸದ್ಯಕ್ಕೆ ಹೊಂದಿಲ್ಲ.

ಆದರೆ ಮತ ಚಲಾಯಿಸುವಾಗ ಪಕ್ಷ ಮತ್ತು ಅಭ್ಯರ್ಥಿಯಷ್ಟೇ ಅಲ್ಲ, ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂಬುದನ್ನು ಮತದಾರರು ಗಮನಿಸುತ್ತಾರೆಯೇ ಎಂಬುದರ ಕುರಿತೂ ಸಮೀಕ್ಷೆ ಅವಲೋಕಿಸಿರುವುದಾಗಿ ಎನ್.ಡಿ.ಟಿ.ವಿ ವರದಿ ಪ್ರಕಟಿಸಿದೆ.

ಸಮೀಕ್ಷೆಗೆ ಪ್ರತಿಕ್ರಿಯಿಸಿದವರಲ್ಲಿ ಹೆಚ್ಚಿನವರು ಪಕ್ಷಕ್ಕೆ ಪ್ರಾಮುಖ್ಯತೆಯನ್ನು ನೀಡಿದ್ದಾರೆ. 56% ಮಂದಿ ಪಕ್ಷಕ್ಕೆ ಮತ್ತು 38% ಜನರು ಅಭ್ಯರ್ಥಿಗೆ ಒಲುವು ತೋರಿದ್ದಾರೆ. ಶೇ.4ರಷ್ಟು ಮಂದಿ ಮಾತ್ರ ಮುಖ್ಯಮಂತ್ರಿ ಯಾರೆಂದು ನೋಡಿ ಮತ ಹಾಕುವುದಾಗಿ ಹೇಳಿದ್ದಾರೆಂದು ವರದಿ ತಿಳಿಸಿದೆ.

ಕಾಂಗ್ರೆಸ್ ಅಥವಾ ಜೆಡಿಎಸ್ ಅನ್ನು ಬೆಂಬಲಿಸುವ ಮತದಾರರು ಹೆಚ್ಚಾಗಿ ಪಕ್ಷವನ್ನು ಪ್ರಮುಖ ಅಂಶವೆಂದು ಪರಿಗಣಿಸಿದ್ದಾರೆ. ಆದರೆ ಬಿಜೆಪಿ ಮತದಾರರು ಈ ವಿಚಾರವಾಗಿ ಭಿನ್ನಾಭಿಪ್ರಾಯ ಹೊಂದಿದ್ದಾರೆ.

ಮತದಾರರ ಗ್ರಹಿಕೆಗೆ ಬಂದಾಗ ಬಿಜೆಪಿಗಿಂತ ಕಾಂಗ್ರೆಸ್ ಉತ್ತಮವಾಗಿದೆ ಎಂದು ಸಮೀಕ್ಷೆ ಬಹಿರಂಗಪಡಿಸಿದೆ.

ಪ್ರತಿಕ್ರಿಯಿಸಿದವರು ಹೆಚ್ಚಿನವರು ಬಿಜೆಪಿ ಸರ್ಕಾರವನ್ನು `ಭ್ರಷ್ಟ’ ಎಂದು ಅಭಿಪ್ರಾಯಪಟ್ಟಿದ್ದಾರೆ. 59% ಮಂದಿ ಬಿಜೆಪಿಯನ್ನು ಭ್ರಷ್ಟ ಎಂದರೆ 35% ಜನರು ಕಾಂಗ್ರೆಸ್ ಪಕ್ಷವನ್ನು ಭ್ರಷ್ಟವೆಂದು ಟೀಕಿಸಿದ್ದಾರೆ. 3% ಜನರು ಜೆಡಿಎಸ್ ಪಕ್ಷವನ್ನು ಭ್ರಷ್ಟವೆಂದು ಪರಿಗಣಿಸಿದ್ದಾರೆ.

ಕುಟುಂಬ ರಾಜಕಾರಣದಲ್ಲೂ ಬಿಜೆಪಿಯೇ ಮುಂದಿದೆ ಎಂದು 59% ಮಂದಿ ಪ್ರತಿಕ್ರಿಯಿಸಿದ್ದಾರೆ. ಕಾಂಗ್ರೆಸ್ 30%, ಜೆಡಿಎಸ್ 8% ಸ್ವಜನಪಕ್ಷಪಾತ ಮಾಡಿರುವುದಾಗಿ ಜನರು ಅಭಿಪ್ರಾಯ ತಾಳಿದ್ದಾರೆ. ಗುಂಪುಗಾರಿಕೆಯಲ್ಲೂ ಬಿಜೆಪಿ (55%) ಪಕ್ಷವು, ಕಾಂಗ್ರೆಸ್ (30%), ಜೆಡಿಎಸ್ (12) ಪಕ್ಷಗಳಿಗಿಂತ ಮುಂದಿದೆ ಎಂದು ಸಮೀಕ್ಷೆ ತಿಳಿಸಿದೆ. ಇದು ಪಕ್ಷವನ್ನು ಹದಗೆಡಿಸುವ ಪ್ರಮುಖ ಅಂಶವೂ ಹೌದು.

ಕಾಂಗ್ರೆಸ್ ಪಕ್ಷವೇ ಅಭಿವೃದ್ಧಿ ವಿಚಾರದಲ್ಲಿ ಒಳ್ಳೆಯ ಕೆಲಸ ಮಾಡಿದೆ ಎಂದು ಹೆಚ್ಚಿನ ಮಂದಿ ಒಲುವು ತೋರಿದ್ದಾರೆ. ಈ ವಿಚಾರದಲ್ಲಿ ಕಾಂಗ್ರೆಸ್ 47%, ಬಿಜೆಪಿ 34%, ಜೆಡಿಎಸ್ 14% ಜನರ ಬೆಂಬಲ ಪಡೆದಿವೆ.

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದವನ್ನು ನಿಭಾಯಿಸುವಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಸಮಾನ ರೇಟಿಂಗ್ (40%)  ಪಡೆದಿವೆ. ಜೆಡಿಎಸ್ ಮೂರನೇ (14%) ಸ್ಥಾನ ಗಳಿಸಿದೆ.

ವಿವಿಧ ಜಾತಿಗಳು ಮತ್ತು ಸಮುದಾಯಗಳು ಹೇಗೆ ಮತ ಚಲಾಯಿಸುವ ಸಾಧ್ಯತೆಯಿದೆ ಎಂಬುದನ್ನು ತಿಳಿಯಲು ಎನ್.ಡಿ.ಟಿ.ವಿ. ಸಮೀಕ್ಷೆಯು ಪ್ರಯತ್ನಿಸಿದೆ.

ಒಕ್ಕಲಿಗರಲ್ಲಿ ಶೇ.34% ಮಂದಿ ಕಾಂಗ್ರೆಸ್ಸಿಗೂ, 36% ಜನರು ಜೆಡಿ(ಎಸ್) ಪಕ್ಷಕ್ಕೂ ಹಂಚಿ ಹೋಗಿದ್ದರೆ, 67% ಲಿಂಗಾಯತರು ಬಿಜೆಪಿಯೊಂದಿಗೆ ದೃಢವಾಗಿ ಉಳಿದಿದ್ದಾರೆ. ಮುಸ್ಲಿಮರಲ್ಲಿ 59% ಮಂದಿ ಕಾಂಗ್ರೆಸ್‌ಗೆ ಮತ ಹಾಕಲು ನಿರ್ಧರಿಸಿದ್ದಾರೆ.

ಸರ್ಕಾರದ ವಿರುದ್ಧ  ಆಡಳಿತ ವಿರೋಧಿ ಅಲೆ ಬಲವಾಗಿ ಇರುವುದನ್ನು ಸಮೀಕ್ಷೆ ಬಹಿರಂಗಪಡಿಸಿದೆ. ಬಡವರು, ಕೆಳ ಮಧ್ಯಮ ವರ್ಗದವರು ಮತ್ತು ಗ್ರಾಮೀಣ ಮತದಾರರಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಬೇಸರವಿರುವುದನ್ನು ಸಮೀಕ್ಷೆಯ  ಅಂಕಿ-ಅಂಶಗಳು ಎತ್ತಿಹಿಡಿದಿವೆ.

ಬಡಮತದಾರರು ಹೆಚ್ಚಿನದಾಗಿ ಕಾಂಗ್ರೆಸ್ಸಿಗೆ ಜೈ ಎಂದಿದ್ದಾರೆ. 50 ಬಡವರು ಕಾಂಗ್ರೆಸ್ಸಿನೊಂದಿಗೆ ನಿಂತರೆ, 23% ಬಡವರು ಬಿಜೆಪಿಗೆ ಸಮ್ಮತಿ ಸೂಚಿಸಿದ್ದಾರೆ. ಶ್ರೀಮಂತರಲ್ಲಿ 46% ಜನರು ಬಿಜೆಪಿಗೆ ಜೈ ಎಂದರೆ, 31% ಶ್ರೀಮಂತರು ಕಾಂಗ್ರೆಸ್ಸಿನತ್ತ ಹೊರಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...