Homeಕರ್ನಾಟಕಸಮ್ಮಿಶ್ರ ಸರ್ಕಾರ ಬೀಳಿಸುವುದಾಗಿದ್ದರೆ ಕುಮಾರಸ್ವಾಮಿಯನ್ನು ಸಿಎಂ ಆಗುದಕ್ಕೆ ಬಿಡುತ್ತಿರಲಿಲ್ಲ: ಸಿದ್ದರಾಮಯ್ಯ

ಸಮ್ಮಿಶ್ರ ಸರ್ಕಾರ ಬೀಳಿಸುವುದಾಗಿದ್ದರೆ ಕುಮಾರಸ್ವಾಮಿಯನ್ನು ಸಿಎಂ ಆಗುದಕ್ಕೆ ಬಿಡುತ್ತಿರಲಿಲ್ಲ: ಸಿದ್ದರಾಮಯ್ಯ

ಕುಣಿಯೋಕೆ ಆಗದವರು ನೆಲಡೊಂಕು ಎನ್ನುತ್ತಾರೆ, ಕುಮಾರಸ್ವಾಮಿ ಕೂಡಾ ಇದೇ ರೀತಿ. ಸಮ್ಮಿಶ್ರ ಸರ್ಕಾರ ಬೀಳಲು ಕುಮಾರಸ್ವಾಮಿಯೆ ಕಾರಣ.

- Advertisement -
- Advertisement -

ಸಮ್ಮಿಶ್ರ ಸರ್ಕಾರವನ್ನು ಸಿದ್ದರಾಮಯ್ಯ ಬೀಳಿಸಿದ್ದಾರೆ ಎಂಬ ಕುಮಾರಸ್ವಾಮಿ ಹೇಳಿಕೆಗೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದು, “ಸರ್ಕಾರ ಬಿಳಿಸುವುದಾಗಿದ್ದರೆ ಕುಮಾರಸ್ವಾಮಿಯನ್ನು ಮುಖ್ಯಮಂತ್ರಿ ಆಗುವುದಕ್ಕೆ ಬಿಡುತ್ತಿರಲಿಲ್ಲ” ಎಂದು ಹೇಳಿದ್ದಾರೆ.

ಇಂದು ಮೈಸೂರಿನಲ್ಲಿ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ‘ಗ್ರಾಮ್ ಜನಾಧಿಕಾರ’ ಸಮಾವೇಶದಲ್ಲಿ ಮಾತನಾಡಿದ ಅವರ, “ಕುಮಾರಸ್ವಾಮಿ ನಾನು‌ ಸರ್ಕಾರ ಬಿಳಿಸಿದೆ ಅಂತಾರೆ. ನಾನು ಸರ್ಕಾರ ಬಿಳಿಸುವುದಾಗಿದ್ದರೆ ಕುಮಾರಸ್ವಾಮಿಯನ್ನು‌ ಮುಖ್ಯಮಂತ್ರಿ ಆಗುವುದಕ್ಕೆ ಬಿಡುತ್ತಿರಲಿಲ್ಲ. 80 ಸೀಟು ನಾವು ಗೆದ್ದಿದ್ದೆವು, ನಾವು ಜೆಡಿಎಸ್‌ಗೆ ಬೆಂಬಲಿಸದೆ ಇದ್ದಿದ್ದರೆ ಕುಮಾರಸ್ವಾಮಿ ಮುಖ್ಯಮಂತ್ರಿ ಆಗುತ್ತಿದ್ದರೆ? ನಾನು ಒಪ್ಪದೆ ಕುಳಿತಿದ್ದರೆ ಕಾಂಗ್ರೆಸ್-ಜೆಡಿಎಸ್ ಹೊಂದಾಣಿಕೆ ಆಗುತ್ತಿತ್ತೆ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ವಿಧಾನ ಪರಿಷತ್‌ ಕೋಲಾಹಲ ಬಿಜೆಪಿ-ಜೆಡಿಎಸ್‌ನ ‍ಷಡ್ಯಂತ್ರ: ಸಿದ್ದರಾಮಯ್ಯ

“ಇವರು ಅಧಿಕಾರ ಕಳೆದುಕೊಂಡಿದ್ದು ನನ್ನಿಂದಲ್ಲ. ಬದಲಿಗೆ ವೆಸ್ಟ್‌ಎಂಡ್‌ನಲ್ಲಿ ಕುಳಿತು ಅಧಿಕಾರ ಮಾಡುತ್ತಿದ್ದಿದ್ದಕ್ಕೆ ಅಧಿಕಾರ ಕಳೆದುಕೊಂಡರು. ಶಾಸಕರು ಹಾಗೂ ಸಚಿವರ ಕೈಗೆ ಸಿಗಲಿಲ್ಲ. ಯಾವ ಪತ್ರ ಕೊಟ್ಟರು ಒಂದಕ್ಷರ ಬರೆಯುತ್ತಿರಲಿಲ್ಲ. ಇದರಿಂದ ಬೇಸರಗೊಂಡು ಎಂಎಲ್‌ಎಗಳು ಹೊರಗೆ ಹೋದರು. ಇವರು ಎಂಎಲ್‌ಎಗಳ ಕೈಗೆ ಸಿಗುತ್ತಿದ್ದರೆ 14 ಎಂಎಲ್‌ಎಗಳು ನಮ್ಮಲ್ಲೆ ಇರುತ್ತಿದ್ದರು ಮತ್ತು ಸರ್ಕಾರವು ಬಿಳುತ್ತಿರಲಿಲ್ಲ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

“ಕುಣಿಯೋಕೆ ಆಗದವರು ನೆಲಡೊಂಕು ಎನ್ನುತ್ತಾರೆ, ಕುಮಾರಸ್ವಾಮಿ ಕೂಡಾ ಇದೇ ರೀತಿ. ಸಮ್ಮಿಶ್ರ ಸರ್ಕಾರ ಬೀಳಲು ಕುಮಾರಸ್ವಾಮಿಯೆ ಕಾರಣ. 5 ವರ್ಷ ನನ್ನ ವಿರುದ್ದ ಯಾವತ್ತು ಯಾವ ಎಂಎಲ್ಎಗಳು ಧ್ವನಿ ಎತ್ತಿರಲಿಲ್ಲ. ಸಚಿವ ಸ್ಥಾನದಿಂದ ಕೆಳಗಿಳಿಸಿದ್ದಕ್ಕೆ ಶ್ರೀನಿವಾಸ್ ಪ್ರಸಾದ್ ಹೋಗಿದ್ದು ಬಿಟ್ಟರೆ ಇನ್ಯಾರು ಮಾತನಾಡಿದ್ದಾರೆ. ಆದರೆ ಒಂದೂವರೆ ವರ್ಷ ಕುಮಾರಸ್ವಾಮಿ ವಿರುದ್ದ ಎಲ್ಲ ಎಂಎಲ್‌ಎಗಳು ಮಾತನಾಡಿದ್ದಾರೆ. ಈಗ ಸುಮ್ಮನೆ ನನ್ನ ಮೇಲೆ ಆರೋಪ‌ ಮಾಡುತ್ತಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: BJP ಮತೀಯ ಭಾವನೆ ಕೆರಳಿಸುತ್ತದೆಯೆ ವಿನಃ ಗೋವಿನ ಬಗ್ಗೆ ಭಕ್ತಿ, ಕಾಳಜಿ ಇಲ್ಲ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...