Homeಅಂಕಣಗಳುಸಿದ್ರಾಮಯ್ಯ-ಕುಮಾರಸ್ವಾಮಿಯವರೇ, ನಮ್ಮ ಜನರೀಗ ಯಾವ ನಿರೀಕ್ಷೆಯಲ್ಲಿದ್ದಾರೆ ಗೊತ್ತಾ....?

ಸಿದ್ರಾಮಯ್ಯ-ಕುಮಾರಸ್ವಾಮಿಯವರೇ, ನಮ್ಮ ಜನರೀಗ ಯಾವ ನಿರೀಕ್ಷೆಯಲ್ಲಿದ್ದಾರೆ ಗೊತ್ತಾ….?

- Advertisement -
- Advertisement -

ಬಸನಗೌಡ ಪಾಟೀಲ್ ಯತ್ನಾಳ್‍ರವರು ನನ್ನನ್ನು ಖೋಟಾ ಸ್ವಾತಂತ್ರ್ಯ ಹೋರಾಟಗಾರ, ಪಾಕಿಸ್ತಾನದ ಏಜೆಂಟ್ ಎಂದು ಗುರುತರ ಆರೋಪ ಮಾಡಿ ನನ್ನನ್ನು ನೋಯಿಸಿದ್ದಾರೆ. ನಾನು ಸಾರ್ವಜನಿಕ ಜೀವನವನ್ನು ಆರಂಭಿಸಿ 60 ವರ್ಷಗಳ ಮೇಲಾಗಿದೆ. ಅಪಾರ ಸಂಖ್ಯೆಯಲ್ಲಿ ಸ್ನೇಹಿತರ, ಸಾಮಾಜಿಕ ಕಾರ್ಯಕರ್ತರ, ಸಾಮಾಜಿಕ ಹೋರಾಟಗಾರರ ಒಡನಾಟ ನನಗಿದೆ. ಹೀಗಾಗಿ ಸಮಾಜದ ಎಲ್ಲ ಸ್ತರದ ಜನ ನನ್ನನ್ನು ವಿನಾಕಾರಣ ಅಪಮಾನಕ್ಕೀಡುಮಾಡಿದ ಬಸನಗೌಡ ಯತ್ನಾಳ್ ವಿರುದ್ಧವಾಗಿ ಧ್ವನಿ ಎತ್ತುತ್ತಿದ್ದಾರೆ. ಅವರೆಲ್ಲರಿಗೂ ನಾನು ಆಭಾರಿ.

ಅಷ್ಟೇಅಲ್ಲದೆ ವಿಧಾನಸಭೆಯಲ್ಲೂ ಮಾನ್ಯ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶಾಸಕ ಯತ್ನಾಳರವರ ಆಧಾರರಹಿತ ನಿಂದನೆಗಳನ್ನು ಗಂಭೀರವಾಗಿ ಪರಿಗಣಿಸಿ ಅಸೆಂಬ್ಲಿಯಲ್ಲಿ ಈ ಕುರಿತು ಪ್ರಸ್ತಾಪಿಸುವುದಾಗಿಯೂ ಯತ್ನಾಳರಿಗೆ ಅಧಿವೇಶನಕ್ಕೆ ಭಾಗವಹಿಸಲು ಅನುಮತಿ ನೀಡಬಾರದೆಂದು ಸ್ಪೀಕರ್‍ಗೆ ಮನವಿ ಮಾಡುವುದಾಗಿಯೂ ಪ್ರಸ್ತಾಪ ಮಾಡಿದ್ದಾರೆ. ಅಷ್ಟೇಅಲ್ಲದೆ ಕಾಂಗ್ರೆಸ್ ಕಾರ್ಯಕರ್ತರು ಇದರ ಜೊತೆಜೊತೆಗೇ ಬೀದಿಗಿಳಿದು ಪ್ರತಿಭಟಿಸುವುದಾಗಿಯೂ ತಿಳಿಸಿದ್ದರು. ಅಸೆಂಬ್ಲಿ ಸ್ಪೀಕರ್ ಸಿದ್ದರಾಮಯ್ಯನವರಿಗೆ ಈ ಕುರಿತು ಮಾತನಾಡಲು ಅವಕಾಶ ಕೊಡಲಿಲ್ಲವಾಗಿ ಕಾಂಗ್ರೆಸ್ ಶಾಸಕರೆಲ್ಲರೂ ಅಸೆಂಬ್ಲಿ ಬಾವಿಯೊಳಗೆ ಕುಳಿತು ಸಿದ್ದರಾಮಯ್ಯನವರಿಗೆ ಯತ್ನಾಳರ ವರ್ತನೆ ಬಗೆಗೆ ಮಾತನಾಡಲು ಅವಕಾಶ ನೀಡಬೇಕೆಂದೂ, ಯತ್ನಾಳರನ್ನು ಅಧಿವೇಶನಕ್ಕೆ ಬರಗೊಡಬಾರದೆಂದೂ ಸ್ಪೀಕರನ್ನು ಒತ್ತಾಯಿಸುತ್ತಿದ್ದಾರೆ.

ನಾನು ಅಸೆಂಬ್ಲಿ ಪಾರ್ಲಿಮೆಂಟುಗಳು ಸುವ್ಯವಸ್ಥೆಯಿಂದ ನಡೆಯಬೇಕೆಂದೂ, ವಿರೋಧಪಕ್ಷಗಳು ಅದಕ್ಕೆ ನೆರವಾಗಬೇಕೆಂದೂ ಅಷ್ಟು ವರ್ಷಗಳಿಂದ ಹೇಳುತ್ತಾ ಬಂದಿದ್ದೇನೆ. ಯಾವುದಾದರೂ ಗಹನ ವಿಚಾರವನ್ನು ಅಸೆಂಬ್ಲಿಯಲ್ಲಿ ಚರ್ಚೆ ಮಾಡಲೇಬೇಕೆಂದು ವಿರೋಧ ಪಕ್ಷ ಬಯಸಿ, ಅದಕ್ಕೆ ಆಡಳಿತ ಪಕ್ಷ ಅವಕಾಶ ಕೊಡದಿದ್ದಾಗ, ಒಂದು ದಿನ ಪೂರ್ತಿ ಸರ್ಕಾರದ ವಿರುದ್ಧ ಅಸೆಂಬ್ಲಿಯಲ್ಲೇ ಹೋರಾಡಬೇಕು. ಸರ್ಕಾರ ಅದಕ್ಕೂ ಬಗ್ಗದಿದ್ದರೆ ಈ ಹೋರಾಟವನ್ನು ನಡುಬೀದಿಯಲ್ಲಿ ಮತದಾರರ ಬೆಂಬಲದೊಂದಿಗೆ ಮುಂದುವರೆಸಬೇಕು ಎಂಬುದು ನನ್ನ ಖಚಿತ ಅಭಿಪ್ರಾಯ. ಸಿದ್ದರಾಮಯ್ಯನವರೂ ಈ ನನ್ನ ನಿಲುವನ್ನು ಒಪ್ಪಬೇಕೆಂದು ಅವರಲ್ಲಿ ವಿನಂತಿಸಿಕೊಳ್ಳುತ್ತೇನೆ.

ಹತ್ತಾರು ವರ್ಷಗಳಿಂದ ಈ ವ್ಯಾಧಿ ಕಾಡುತ್ತಿದೆ. ಪ್ರತಿ ಅಧಿವೇಶನದಲ್ಲೂ ಹತ್ತಾರು ಮಸೂದೆಗಳು ಅಂಗೀಕಾರವಾಗುತ್ತವೆ. ವಿರೋಧ ಪಕ್ಷಗಳ ಸದಸ್ಯರು ಸಭಾತ್ಯಾಗ ಮಾಡುತ್ತಾರೆ. ಆಡಳಿತ ಪಕ್ಷದವರು ಕೈಎತ್ತಿ ಅವುಗಳನ್ನು ಅಂಗೀಕರಿಸುತ್ತಾರೆ. ಇದೆಂಥ ಪ್ರಜಾಪ್ರಭುತ್ವ? ಸದನದಲ್ಲಿ ಕೂಗಾಟವೇ ಮುಖ್ಯವಾಗಿದ್ದು ಜನಸಾಮಾನ್ಯರ ಸಮಸ್ಯೆಗಳಿಗೆ ಪರಿಹಾರ ಕಂಡುಹಿಡಿಯುವ ವಿಚಾರ ಗೌಣವೆನಿಸಿದೆ. ಈ ಪರಿಸ್ಥಿತಿ ಬದಲಾಗಬೇಕೆಂಬುದು ನನ್ನ ಅನಿಸಿಕೆ. ಆದ್ದರಿಂದ ಸಿದ್ದರಾಮಯ್ಯನವರು, ಎಚ್.ಡಿ ಕುಮಾರಸ್ವಾಮಿಯವರು ಈ ಹೊಸಪದ್ಧತಿಗೆ ನಾಂದಿ ಹಾಡಬೇಕೆಂದು ನನ್ನ ವಿನಂತಿ.

ಯತ್ನಾಳರ ಬೇಜವಾಬ್ದಾರಿ ಆಧಾರರಹಿತ ಮಾತುಗಳನ್ನು ಬಿಜೆಪಿ ಸರ್ಕಾರ ಮತ್ತು ಅವರ ಶಾಸಕರು ಅನುಮೋದಿಸುವ ರೀತಿ ಮಾತನಾಡುತ್ತಿರುವುದರಿಂದ ಅವರನ್ನೂ ಒಳಗೊಂಡಂತೆ ಎಲ್ಲರ ಮೇಲು ಕಾನೂನುಕ್ರಮ ಕೈಗೊಳ್ಳಲೂ ಒತ್ತಾಯ ಬರುತ್ತಿದೆ. ಇದು ನನ್ನೊಬ್ಬನ ಮಾನ, ಅಪಮಾನದ ಪ್ರಶ್ನೆಯಲ್ಲ. ನಮ್ಮ ಸಮಾಜದಲ್ಲಿ ಸುಳ್ಳು ಮತ್ತು ಸತ್ಯದ ನಡುವಿನ ಸಂಘರ್ಷ. ಸುಳ್ಳಿಗೆ ಸೋಲಾಗುತ್ತದೆ, ಆದರೆ ಆ ಸೋಲು ನಮ್ಮ ಘನತೆಯ ಗೆಲುವಿನ ಮುಂದೆ ಬಾಗಿರುವಂತದ್ದಾಗಿರಬೇಕು. ವಿರೋಧ ಪಕ್ಷದ ಮುಖ್ಯಸ್ಥರೂ ಆದ ನೀವಿಬ್ಬರು, ಸಮಾಜದಲ್ಲಿ ದ್ವೇಷದ ರಾಜಕೀಯ ಬಿತ್ತುವ ದುಷ್ಟಶಕ್ತಿಗಳ ವಿರುದ್ಧ ಜನರ ನಡುವೆ, ಬೀದಿಯಲ್ಲಿ ಹೋರಾಟ ಸಂಘಟಿಸಿ. ನಮ್ಮ ದೇಶದ ಇತಿಹಾಸವನ್ನು ಗಮನಿಸಿದರೆ, ಎಲ್ಲವೂ ಕೈಮೀರಿಹೋದಾಗ ಜನರ ನಡುವಿನಿಂದಲೇ `ನಾಯಕತ್ವ’ ಉದ್ಭವಿಸಬೇಕಾದ ಸಂದರ್ಭಗಳು ಸೃಷ್ಟಿಯಾಗುತ್ತಾ ಬಂದಿವೆ. ಈಗ ಅಂತಹ ಸಂದರ್ಭ ಮತ್ತೆ ಬಂದಿದೆ. ವೇದಿಕೆಯ ಭಾಷಣಗಳಿಗೆ ಕಿವಿಯಾಗಿ ಬೇಸತ್ತಿರುವ ನಮ್ಮ ಜನಕ್ಕೆ ಈಗ ಬೀದಿಬೀದಿಯಲ್ಲಿ ತಮ್ಮ ಹೆಜ್ಜೆಯ ಜೊತೆಗೆ ಹೆಜ್ಜೆಹಾಕುವ `ನಾಯಕ’ ಬೇಕಾಗಿದ್ದಾರೆ. ಅವರ ನಿರೀಕ್ಷೆಗಳನ್ನು ಅರ್ಥಮಾಡಿಕೊಂಡು ಸ್ಪಂದಿಸಿ ಎನ್ನುವುದು ನನ್ನ ಭಿನ್ನಹ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...